AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಣ್ಮುಚ್ಚಿ ಬಿಡುವಷ್ಟರಲ್ಲೇ ಕೊಚ್ವಿ ಕೊಲೆ: ಸತ್ತು ಬಿದ್ದವನ ಮುಂದೆ ಡಾನ್ಸ್ ಮಾಡಿ ವಿಕೃತಿ

ಆತ ಮೈಸೂರಿನ ಪಾಪುಲರ್ ಫಿಗರ್. ಹಲವರ ಪಾಲಿನ ಗಾಡ್ ಫಾದರ್. ಮೈಸೂರಿನ ಬಹುತೇಕ ಯುವಕರ ಪಾಲಿನ ಅಣ್ಣ. ಆತ ಬಂದ ಅಂದ್ರೆ ಅಲ್ಲಿ ಹಬ್ಬದ ವಾತಾವರಣವೇ ಸೃಷ್ಟಿಯಾಗುತ್ತಿತ್ತು. ಅಂತಹ ಪಾಪುಲರ್ ಫಿಗರ್ ಆಗಿದ್ದವನು ತಾನೇ ಬೆಳಸಿದ ಯುವಕರಿಂದ ಬರ್ಬರವಾಗಿ ಕೊಲೆಯಾಗಿದ್ದಾನೆ. ಬೆಳೆಸಿದವನನ್ನೇ ಹತ್ಯೆಗೈದು ಡಾನ್ಸ್​ ಮಾಡಿ ವಿಕೃತಿ ಮರೆದಿದ್ದಾರೆ. ಛೇ ಇವರದೆಂಥಾ ಮನಸ್ಥಿತಿ..

ಕಣ್ಮುಚ್ಚಿ ಬಿಡುವಷ್ಟರಲ್ಲೇ ಕೊಚ್ವಿ ಕೊಲೆ: ಸತ್ತು ಬಿದ್ದವನ ಮುಂದೆ ಡಾನ್ಸ್ ಮಾಡಿ ವಿಕೃತಿ
ಕಾರ್ತಿಕ್ (ಕೊಲೆಯಾದ ಯುವಕ)
ರಾಮ್​, ಮೈಸೂರು
| Edited By: |

Updated on: May 05, 2025 | 8:56 PM

Share

ಮೈಸೂರು, ಮೇ 05): ಯುವಕನನ್ನು ಐವರ ತಂಡ ಬರ್ಬರವಾಗಿ ಕೊಲೆಗೈದ (Murder) ಘಟನೆ ಮೈಸೂರು(Mysuru) ಹೊರವಲಯದ ವರುಣ ಗ್ರಾಮದ ಹೋಟೆಲ್‌ ಮುಂಭಾಗ ಕಳೆದ ರಾತ್ರಿ ನಡೆದಿದೆ. ಕೊಲೆಯಾದ ಯುವಕನನ್ನು ಮೈಸೂರು ನಗರದ ಕ್ಯಾತಮಾರನಹಳ್ಳಿ ನಿವಾಸಿ ಕಾರ್ತಿಕ್‌(33) ಎಂದು ಗುರುತಿಸಲಾಗಿದೆ. ಒಂದು ಕಾಲದಲ್ಲಿ ಕಾರ್ತಿಕ್ ಜೊತೆಗೆ ಇದ್ದ ಆತನ ಕುಚಿಕು ಗೆಳೆಯ ಪ್ರವೀಣ್ ಹಾಗೂ ಗ್ಯಾಂಗ್ ಈ ಕೊಲೆ ಮಾಡಿದೆ ಎಂದು ತಿಳಿದುಬಂದಿದೆ. ಇದಕ್ಕೆ ಕಾರಣ ಕಾರ್ತಿಕ್ ಪ್ರವೀಣ್ ನಡುವೆ ಕೆಲ ತಿಂಗಳ ಹಿಂದೆ ನಡೆಸಿದ್ದ ಗಲಾಟೆ. ಹಣಕಾಸಿನ ವಿಚಾರಕ್ಕೆ ಇಬ್ಬರ ನಡುವೆ ಗಲಾಟೆಯಾಗಿತ್ತು. ಗಲಾಟೆ ವೇಳೆ ಕಾರ್ತಿಕ್ ಪ್ರವೀಣ್ ಕೊಲೆ ಮಾಡುವ ಧಮ್ಕಿ ಹಾಕಿದ್ದನಂತೆ. ಕಾರ್ತಿಕ್ ತನ್ನನ್ನು ಕೊಲೆ ಮಾಡುತ್ತಾನೆ ಎನ್ನುವ ಭಯದಲ್ಲೇ ಹುಡುಗರ ಗ್ಯಾಂಗ್ ಕಟ್ಟಿಕೊಂಡು ಕಾರ್ತಿಕನನ್ನೇ ಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದೆ.

ಕೊಲೆಯಾದ ಕಾರ್ತಿಕ್ ಸ್ನೇಹಿತರು ಹೇಳೋ ಪ್ರಕಾರ, ಕಾರ್ತಿಕ್ ಒಳ್ಳೆ ಮನುಷ್ಯ ಅಂತೆ. ಯಾರಿಗೂ ಕೆಟ್ಟದ್ದು ಬಯಸುತ್ತಿರಲಿಲ್ಲವಂತೆ. ಕಾರ್ತಿಕ್ ಜೊತೆಯಲ್ಲಿ ಇದ್ದೋರೋ ಆತನ ಹೆಸರು ಹೇಳಿ ದುಡ್ಡು ಮಾಡಿಕೊಂಡಿದ್ದರಂತೆ. ಈ ವಿಚಾರ ಗೊತ್ತಾಗಿ ಕಾರ್ತಿಕ್ ಅವರಿಗೆ ಬೈದು ಬುದ್ಧಿ ಹೇಳಿದ್ದನಂತೆ. ಅದೇ ದ್ವೇಷಕ್ಕೆ ನಿನ್ನೆ ಕೊಲೆ ಮಾಡಿದ್ದಾರೆ ಅನ್ನೋದು ಅವರ ಅಭಿಪ್ರಾಯ.

ಇದನ್ನೂ ಓದಿ: ಬೆಂಗಳೂರು: ತಂದೆಯ ಕೊಲೆ ಪ್ರತೀಕಾರಕ್ಕಾಗಿ ಮಾವನನ್ನು ಕೊಂದ ಪುತ್ರ

ಇನ್ನು ಕಾರ್ತಿಕ್ ಚಿಕ್ಕಹಳ್ಳಿಯಲ್ಲಿ ನಡೆದ ಕೊಲೆ ಯತ್ನ ಪ್ರಕರಣದಲ್ಲಿ ಜೈಲು ಸೇರಿ ಜಾಮೀನಿನ ಮೇಲೆ ಹೊರಬಂದಿದ್ದ. ಜೊತೆಗೆ ಕಾರ್ತಿಕ್ ರೌಡಿಶೀಟರ್ ಆಗಿದ್ದ. ರೌಡಿ ಶೀಟರ್ ಆಗಿರುವುದರಿಂದ ಆತನನ್ನು ಗಡಿಪಾರು ಮಾಡಲಾಗಿತ್ತು. ಹೀಗಾಗಿ ಆತ ತನ್ನ ಮನೆಗೆ ಹೋಗದೆ ವರುಣ ಹತ್ತಿರ ಇರುವ ಹೋಟೆಲ್‌ನಲ್ಲಿದ್ದ.

ಇದನ್ನೂ ಓದಿ
Image
ತನಗಿಂತ 2 ವರ್ಷ ದೊಡ್ಡವಳೊಂದಿಗೆ ಲವ್​: ಯುವತಿ ಹಿಂದೆ ಬಿದ್ದ ಯುವಕನ ಹತ್ಯೆ
Image
ಲವ್ವರ್​ ಜತೆ ಪತ್ನಿ ಚಕ್ಕಂದ; ಕಣ್ಣಾರೆ ಕಂಡ ಪತಿ ಮಾಡಿದ್ದೇನು ಗೊತ್ತಾ?
Image
ಪಲ್ಯ‌, ಸಾಂಬಾರ್ ಸರಿ ಮಾಡಲ್ಲ ಎಂದು ಹೆಂಡ್ತಿಯನ್ನೇ ಕೊಂದ ಪತಿ
Image
ಸುಹಾಸ್​ ಶೆಟ್ಟಿ ಕೊಲೆ: ಮಂಗಳೂರು ಸುತ್ತಮುತ್ತ 3 ಮಂದಿಗೆ ಚಾಕು ಇರಿತ

ಕಾರ್ತಿಕ್​ ಹತ್ಯೆ ಹಿಂದೆ ಮಹಿಳೆಯ ಕರಿನೆರಳು

ಕಾರ್ತಿಕ್ ತಾಯಿ ಪ್ರಕಾರ, ಈ‌ ಕೊಲೆಗೆ ಲಕ್ಷ್ಮೀ ಎನ್ನುವ ಮಹಿಳೆ ಕಾರಣವಂತೆ. ಆಕೆಯ ಕಾರಣವಾಗಿ ಈ ಕೊಲೆ ನಡೆದಿದೆಯಂತೆ. ನಿನ್ನೆ ರಾತ್ರಿ ಆಕೆ ಕಾರ್ತಿಕ್​ಗೆ ಕರೆ ಮಾಡಿ ಊಟಕ್ಕೆ ಬಾ ಎಂದು ಕರೆದಿದ್ದರಂತೆ. ಊಟ ಮುಗಿಸಿ ಹೋಗುವಾಗ ಲಕ್ಷ್ಮಿ ಎನ್ನುವ ಹುಡುಗಿ ಕರೆ ಮಾಡಿದ್ದಳಂತೆ. ಆಕೆ ಕರೆ ಬಳಿಕ ಕಾರ್ತಿಕ್ ಮನೆಯಿಂದ ತೆರಳಿದ್ದನಂತೆ. ಅಲ್ಲಿಂದ ನೇರವಾಗಿ ಕಾರ್ತಿಕ್ ಹೋಟೆಲ್ ‌ಗೆ ಹೋಗಿದ್ದಾನೆ . ಅಲ್ಲಿ ಪ್ರವೀಣ್ ಎಂಬಾತ ತನ್ನ ಗ್ಯಾಂಗ್ ಜೊತೆ ಸೇರಿ ಕಾರ್ತಿಕ್‌ಗೆ ಹೊಡೆದಿದ್ದಾನೆ.

ಸತ್ತು ಬಿದ್ದ ಕಾರ್ತಿಕ್​ ಮುಂದೆ ಡಾನ್ಸ್​

ಇನ್ನು ಪ್ರವೀಣ್ ಕಾರ್ತಿಕ್ ಜೊತೆಯೇ ಇದ್ದನಂತೆ. ಇದೇ ಲಕ್ಷ್ಮೀ ವಿಚಾರಕ್ಕೆ ಈ ಹಿಂದೆ ಕಾರ್ತಿಕ್ ಪ್ರವೀಣ್ ನಡುವೆ ಗಲಾಟೆಯಾಗಿತ್ತಂತೆ. ಕಾರ್ತಿಕ್ ಪ್ರವೀಣ್ ಗೆ ಬೈದು ಕಳುಹಿಸಿದ್ದನಂತೆ. ನಂತರ ಒಂದೂವರೆ ವರ್ಷದ ತನಕ ಆತ ಎಲ್ಲಿಯೂ ಕಾಣಿಸಿಕೊಂಡಿರಲಿಲ್ಲವಂತೆ. ಇದರ‌ ಜೊತೆಗೆ ಕಾರ್ತಿಕ್ ಬಡ್ಡಿ ವ್ಯವಹಾರ ಕೂಡ ನಡೆಸುತ್ತಿದ್ದನಂತೆ. ಹಣಕಾಸಿನ ವೈಷಮ್ಯಕ್ಕೂ ಕಾರ್ತಿಕ್ ಕೊಲೆ ಆಗಿರಬಹುದು ಎಂದು ಶಂಕಿಸಲಾಗ್ತಿದೆ. ಈ ನಡುವೆ ಕೊಲೆ ಮಾಡಿದ ಬಳಿಕ ಶವದ ವಿಡಿಯೋ ಮಾಡಿಕೊಂಡು,‌ ಡ್ಯಾನ್ಸ್ ಮಾಡಿರುವುದು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಈ ದೃಶ್ಯ ಪೊಲೀಸರನ್ನೇ ಬೆಚ್ಚಿ ಬೀಳಿಸಿದೆ.

ಈ ಸಂಬಂಧ ವರುಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಇನ್ನು ಕಾರ್ತಿಕ್ ಕೊಲೆಯಿಂದ‌ ಮೈಸೂರು ಬೆಚ್ಚಿ ಬಿದ್ದಿದೆ. ತಣ್ಣಗಿದ್ದ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮತ್ತೆ ಸೇಡಿನ ಕೊಲೆಗಳು ನಡೆಯುತ್ತಾ ಅನ್ನೋ ಅನುಮಾನ ಮೂಡಿಸಿದೆ. ಇದಕ್ಕೆ ಪೊಲೀಸರು ಯಾವ ರೀತಿ ಕಡಿವಾಣ ಹಾಕ್ತಾರೆ ಎನ್ನುವುದನ್ನು ಕಾದು ನೋಡಬೇಕಿದೆ.

ಒಟ್ಟಿನಲ್ಲಿ ಈ ಕೊಲೆಗೆ ಬೇರೆ ಬೇರೆ ರೀತಿಯಾದ ಕಾರಣಗಳು ಹುಟ್ಟಿಕೊಂಡಿದ್ದು, ಪೊಲೀಸರು ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸಬೇಕಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ