AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನಲ್ಲಿ ಹಾಡಹಗಲೇ ಚಿನ್ನದ ವ್ಯಾಪಾರಿ ಮೇಲೆ ಚಾಕು ಇರಿತ

ಹಾಡಹಗಲೇ ಚಿನ್ನದ ವ್ಯಾಪಾರಿ ಮೇಲೆ ಚಾಕು ಇರಿದ ಘಟನೆ ಮೈಸೂರು ನಗರದ ಹೂಟಗಳ್ಳಿಯ ಕೆಎಚ್​ಬಿ ಕಾಲೋನಿಯಲ್ಲಿ ನಡೆದಿದೆ. ಈ ವೇಳೆ ವ್ಯಾಪಾರಿ ಬಾಬುರಾವ್ ಪತ್ನಿ ಕಮಲಬಾಯಿ(52) ಅವರಿಗೆ ಗಾಯವಾಗಿದೆ. ಈ ಕುರಿತು ವಿಜಯನಗರ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ.

ಮೈಸೂರಿನಲ್ಲಿ ಹಾಡಹಗಲೇ ಚಿನ್ನದ ವ್ಯಾಪಾರಿ ಮೇಲೆ ಚಾಕು ಇರಿತ
ಪ್ರಾತಿನಿಧಿಕ ಚಿತ್ರ
ರಾಮ್​, ಮೈಸೂರು
| Updated By: ಕಿರಣ್ ಹನುಮಂತ್​ ಮಾದಾರ್|

Updated on:Aug 17, 2023 | 1:38 PM

Share

ಮೈಸೂರು, ಆ.17: ನಗರದ ಹೂಟಗಳ್ಳಿಯ (Hutagalli) ಕೆಎಚ್​ಬಿ ಕಾಲೋನಿಯಲ್ಲಿ ದುಷ್ಕರ್ಮಿಗಳು ಹಾಡಹಗಲೇ ಚಿನ್ನದ ವ್ಯಾಪಾರಿ ಮೇಲೆ ಚಾಕು ಇರಿದ ಘಟನೆ ನಡೆದಿದೆ. ಈ ವೇಳೆ ಬಾಬುರಾವ್ ಪತ್ನಿ ಕಮಲಬಾಯಿ(52) ಅವರಿಗೆ ಗಾಯವಾಗಿದೆ. ಗೃಹಪ್ರವೇಶಕ್ಕೆ ಆಹ್ವಾನ ಪತ್ರ ನೀಡುವ ನೆಪದಲ್ಲಿ ಬಂದ ಅಪರಿಚಿತರಿಬ್ಬರು. ಚಿನ್ನದ ವ್ಯಾಪಾರಿ ಬಾಬುರಾವ್​ರನ್ನು ನಿಮ್ಮ ಪುತ್ರ ಹರೀಶ್ ಎಲ್ಲಿ ಎಂದು ಕೇಳಿದ್ದಾರೆ. ಬಾಬುರಾವ್ ಹರೀಶ್ ಮನೇಲಿ ಇಲ್ಲ ಎಂದಿದ್ದಾರೆ. ಈ ವೇಳೆ ಕುಪಿತಗೊಂಡ ಅಪರಿಚಿತರಿಬ್ಬರು ಬಾಬುರಾವ್ ಮತ್ತು ಪತ್ನಿ ಕಮಲಬಾಯಿಗೆ ಚಾಕುವಿನಿಂದ ಇರಿದು, ಬಳಿಕ ಅಲ್ಲಿಂದ ಪರಾರಿಯಾಗಿದ್ದಾರೆ. ಸ್ಥಳಕ್ಕೆ ವಿಜಯನಗರ ಠಾಣೆ ಪೋಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಜೈಲಿನಲ್ಲಿ ಶಿಕ್ಷಣ ಪಡೆದು ಲೇಖಕನಾಗಿದ್ದ ವ್ಯಕ್ತಿ ಸಾವು

ಬೆಂಗಳೂರು ಗ್ರಾಮಾಂತರ: ಜೈಲಿನಲ್ಲಿ ಶಿಕ್ಷಣ ಪಡೆದು ಲೇಖಕನಾಗಿದ್ದ ವ್ಯಕ್ತಿ. ಇಂದು(ಆ.17) ರಸ್ತೆ ಬದಿಯ ಹಳ್ಳಕ್ಕೆ ಕಾರು ಉರುಳಿ ಬಿದ್ದು ಅಪಘಾತದಲ್ಲಿ ಸಾವನ್ನಪ್ಪಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಲಿಂಗನಹಳ್ಳಿ ಬಳಿ ನಡೆದಿದೆ. ಯಲ್ಲಪ್ಪ ಮೃತ ವ್ಯಕ್ತಿ. ಇತ ದೊಡ್ಡಬಳ್ಳಾಪುರ ನಗರ ನಿವಾಸಿಯಾಗಿದ್ದು, ಚಿಕ್ಕ ವಯಸ್ಸಿನಲ್ಲಿ ಅಪರಾಧ ಮಾಡಿ ಜೈಲು ಸೇರಿದ್ದ. ಬಳಿಕ ಜೈಲಿನಿಂದ ಬಿಡುಗಡೆಯಾದ ನಂತರ ಜೈಲು ಜೀವಗಳು ಎಂಬ ಪುಸ್ತಕ ಬರೆದಿದ್ದ. ಜೊತೆಗೆ ಸಮಾಜ ಸೇವೆಯಲ್ಲೂ ತೊಡಗಿದ್ದ. ಆದ್ರೆ, ಮುಂಜಾನೆ ಕಾರಿನಲ್ಲಿ ಬರುತ್ತಿದ್ದ ವೇಳೆ ಅಪಘಾತವಾಗಿ ಸಾವನ್ನಪ್ಪಿದ್ದಾನೆ. ಈ ಕುರಿತು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ:Mysore police: ಐಶಾರಾಮಿ ಕಾರು, ಶ್ರೀಮಂತರ ಮನೆಯೇ ಇವನ ಟಾರ್ಗೆಟ್: 56 ಕಳ್ಳತನ ಮಾಡಿದ್ದರೂ ಪೊಲೀಸರಿಗೆ ಮಾತ್ರ ಸಿಕ್ಕಿರಲಿಲ್ಲ- ಕೊನೆಗೂ ಅಂದರ್​

ಅಪರಿಚಿತ ವ್ಯಕ್ತಿಯಿಂದ ವೃದ್ದನ ಕೊಲೆ

ಕೋಲಾರ: ಅಪರಿಚಿತ ವ್ಯಕ್ತಿಯೋರ್ವ ವೃದ್ದನ ತಲೆಗೆ ಕಲ್ಲಿನಿಂದ ಹೊಡೆದು ಕೊಲೆ ಮಾಡಿದ ಕೋಲಾರ ಜಿಲ್ಲೆಯ ಕೆಜಿಎಫ್​ನ ಅಂಬೇಡ್ಕರ್ ನಗರದಲ್ಲಿ ನಡೆದಿದೆ. ಮೇಜರ್(65) ಕೊಲೆಯಾದ ವೃದ್ದ. ಇತ ಹಣ್ಣಿನ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ. ಈ ವೇಳೆ ಏಕಾಎಕಿ ಬಂದು, ತಲೆಗೆ ಕಲ್ಲಿನಿಂದ ಹೊಡೆದು ಭೀಕರವಾಗಿ ಕೊಲೆ ಮಾಡಿದ್ದಾನೆ. ಇನ್ನು ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಕುರಿತು ರಾಬರ್ಟ್ ಸನ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:37 pm, Thu, 17 August 23

ಟೀಮ್ ಇಂಡಿಯಾ ಆಟಗಾರರ ಶತಕ ತಪ್ಪಿಸಲು ಮುಂದಾಗಿದ್ದ ಸ್ಟೋಕ್ಸ್
ಟೀಮ್ ಇಂಡಿಯಾ ಆಟಗಾರರ ಶತಕ ತಪ್ಪಿಸಲು ಮುಂದಾಗಿದ್ದ ಸ್ಟೋಕ್ಸ್
ವರಮಹಾಲಕ್ಷ್ಮೀ ಹಬ್ಬ ಆಚರಣೆ ದಿನಾಂಕ ಯಾವಾಗ? ಆಚರಣೆ ಹೇಗೆ , ಫಲಗಳೇನು?
ವರಮಹಾಲಕ್ಷ್ಮೀ ಹಬ್ಬ ಆಚರಣೆ ದಿನಾಂಕ ಯಾವಾಗ? ಆಚರಣೆ ಹೇಗೆ , ಫಲಗಳೇನು?
ಇಂದು ವಿನಾಯಕಿ ಚತುರ್ಥಿ: ದ್ವಾದಶ ರಾಶಿ ಭವಿಷ್ಯ ಹೇಗಿದೆ ನೋಡಿ
ಇಂದು ವಿನಾಯಕಿ ಚತುರ್ಥಿ: ದ್ವಾದಶ ರಾಶಿ ಭವಿಷ್ಯ ಹೇಗಿದೆ ನೋಡಿ
ಪ್ರಥಮ್​ ಮೇಲೆ ಅಟ್ಯಾಕ್: ಅಲ್ಲೇ ಇದ್ದರು ರಕ್ಷಕ್ ಸುಮ್ಮನಿದ್ದಿದ್ದು ಏಕೆ?
ಪ್ರಥಮ್​ ಮೇಲೆ ಅಟ್ಯಾಕ್: ಅಲ್ಲೇ ಇದ್ದರು ರಕ್ಷಕ್ ಸುಮ್ಮನಿದ್ದಿದ್ದು ಏಕೆ?
ರೌಡಿಗಳ ಜೊತೆಗೆ ರಕ್ಷಕ್​ಗೆ ಏನು ಕೆಲಸ: ಪ್ರಥಮ್ ಆಕ್ರೋಶ
ರೌಡಿಗಳ ಜೊತೆಗೆ ರಕ್ಷಕ್​ಗೆ ಏನು ಕೆಲಸ: ಪ್ರಥಮ್ ಆಕ್ರೋಶ
ಚಡ್ಡಿಯಲ್ಲಿ ಬಂದು ಒಣಗಲು ಹಾಕಿದ್ದ ಬಟ್ಟೆಗಳನ್ನು ಕದ್ದು ಓಡಿದ ಭೂಪ
ಚಡ್ಡಿಯಲ್ಲಿ ಬಂದು ಒಣಗಲು ಹಾಕಿದ್ದ ಬಟ್ಟೆಗಳನ್ನು ಕದ್ದು ಓಡಿದ ಭೂಪ
‘ಸು ಫ್ರಮ್ ಸೋ’ ನಿರ್ದೇಶಕರಿಗೆ ತಾಯಿಯಿಂದ ಸಿಕ್ತು ಬೆಸ್ಟ್ ಪ್ರತಿಕ್ರಿಯೆ
‘ಸು ಫ್ರಮ್ ಸೋ’ ನಿರ್ದೇಶಕರಿಗೆ ತಾಯಿಯಿಂದ ಸಿಕ್ತು ಬೆಸ್ಟ್ ಪ್ರತಿಕ್ರಿಯೆ
ಬಿಳಿ ಪಂಚೆ ಧರಿಸಿ ಚೋಳಪುರಂ ದೇವಸ್ಥಾನಕ್ಕೆ ಭೇಟಿ ಕೊಟ್ಟ ಪ್ರಧಾನಿ ಮೋದಿ
ಬಿಳಿ ಪಂಚೆ ಧರಿಸಿ ಚೋಳಪುರಂ ದೇವಸ್ಥಾನಕ್ಕೆ ಭೇಟಿ ಕೊಟ್ಟ ಪ್ರಧಾನಿ ಮೋದಿ
ಮೈಸೂರಿನಲ್ಲೇ ಡ್ರಗ್ಸ್​ ತಯಾರಿಕಾ ಘಟಕ: ಸ್ಫೋಟಕ ಅಂಶ ಬಾಯ್ಬಿಟ್ಟ ಪೆಡ್ಲರ್
ಮೈಸೂರಿನಲ್ಲೇ ಡ್ರಗ್ಸ್​ ತಯಾರಿಕಾ ಘಟಕ: ಸ್ಫೋಟಕ ಅಂಶ ಬಾಯ್ಬಿಟ್ಟ ಪೆಡ್ಲರ್
ಆರಂಭಿಕನಾಗಿ ಕಣಕ್ಕಿಳಿದು 6 ಸಿಕ್ಸ್ ಸಿಡಿಸಿದ ಗ್ಲೆನ್ ಮ್ಯಾಕ್ಸ್​ವೆಲ್
ಆರಂಭಿಕನಾಗಿ ಕಣಕ್ಕಿಳಿದು 6 ಸಿಕ್ಸ್ ಸಿಡಿಸಿದ ಗ್ಲೆನ್ ಮ್ಯಾಕ್ಸ್​ವೆಲ್