ಮೈಸೂರಿನಲ್ಲಿ ಹಾಡಹಗಲೇ ಚಿನ್ನದ ವ್ಯಾಪಾರಿ ಮೇಲೆ ಚಾಕು ಇರಿತ

ಹಾಡಹಗಲೇ ಚಿನ್ನದ ವ್ಯಾಪಾರಿ ಮೇಲೆ ಚಾಕು ಇರಿದ ಘಟನೆ ಮೈಸೂರು ನಗರದ ಹೂಟಗಳ್ಳಿಯ ಕೆಎಚ್​ಬಿ ಕಾಲೋನಿಯಲ್ಲಿ ನಡೆದಿದೆ. ಈ ವೇಳೆ ವ್ಯಾಪಾರಿ ಬಾಬುರಾವ್ ಪತ್ನಿ ಕಮಲಬಾಯಿ(52) ಅವರಿಗೆ ಗಾಯವಾಗಿದೆ. ಈ ಕುರಿತು ವಿಜಯನಗರ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ.

ಮೈಸೂರಿನಲ್ಲಿ ಹಾಡಹಗಲೇ ಚಿನ್ನದ ವ್ಯಾಪಾರಿ ಮೇಲೆ ಚಾಕು ಇರಿತ
ಪ್ರಾತಿನಿಧಿಕ ಚಿತ್ರ
Edited By: ಕಿರಣ್ ಹನುಮಂತ್​ ಮಾದಾರ್

Updated on: Aug 17, 2023 | 1:38 PM

ಮೈಸೂರು, ಆ.17: ನಗರದ ಹೂಟಗಳ್ಳಿಯ (Hutagalli) ಕೆಎಚ್​ಬಿ ಕಾಲೋನಿಯಲ್ಲಿ ದುಷ್ಕರ್ಮಿಗಳು ಹಾಡಹಗಲೇ ಚಿನ್ನದ ವ್ಯಾಪಾರಿ ಮೇಲೆ ಚಾಕು ಇರಿದ ಘಟನೆ ನಡೆದಿದೆ. ಈ ವೇಳೆ ಬಾಬುರಾವ್ ಪತ್ನಿ ಕಮಲಬಾಯಿ(52) ಅವರಿಗೆ ಗಾಯವಾಗಿದೆ. ಗೃಹಪ್ರವೇಶಕ್ಕೆ ಆಹ್ವಾನ ಪತ್ರ ನೀಡುವ ನೆಪದಲ್ಲಿ ಬಂದ ಅಪರಿಚಿತರಿಬ್ಬರು. ಚಿನ್ನದ ವ್ಯಾಪಾರಿ ಬಾಬುರಾವ್​ರನ್ನು ನಿಮ್ಮ ಪುತ್ರ ಹರೀಶ್ ಎಲ್ಲಿ ಎಂದು ಕೇಳಿದ್ದಾರೆ. ಬಾಬುರಾವ್ ಹರೀಶ್ ಮನೇಲಿ ಇಲ್ಲ ಎಂದಿದ್ದಾರೆ. ಈ ವೇಳೆ ಕುಪಿತಗೊಂಡ ಅಪರಿಚಿತರಿಬ್ಬರು ಬಾಬುರಾವ್ ಮತ್ತು ಪತ್ನಿ ಕಮಲಬಾಯಿಗೆ ಚಾಕುವಿನಿಂದ ಇರಿದು, ಬಳಿಕ ಅಲ್ಲಿಂದ ಪರಾರಿಯಾಗಿದ್ದಾರೆ. ಸ್ಥಳಕ್ಕೆ ವಿಜಯನಗರ ಠಾಣೆ ಪೋಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಜೈಲಿನಲ್ಲಿ ಶಿಕ್ಷಣ ಪಡೆದು ಲೇಖಕನಾಗಿದ್ದ ವ್ಯಕ್ತಿ ಸಾವು

ಬೆಂಗಳೂರು ಗ್ರಾಮಾಂತರ: ಜೈಲಿನಲ್ಲಿ ಶಿಕ್ಷಣ ಪಡೆದು ಲೇಖಕನಾಗಿದ್ದ ವ್ಯಕ್ತಿ. ಇಂದು(ಆ.17) ರಸ್ತೆ ಬದಿಯ ಹಳ್ಳಕ್ಕೆ ಕಾರು ಉರುಳಿ ಬಿದ್ದು ಅಪಘಾತದಲ್ಲಿ ಸಾವನ್ನಪ್ಪಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಲಿಂಗನಹಳ್ಳಿ ಬಳಿ ನಡೆದಿದೆ. ಯಲ್ಲಪ್ಪ ಮೃತ ವ್ಯಕ್ತಿ. ಇತ ದೊಡ್ಡಬಳ್ಳಾಪುರ ನಗರ ನಿವಾಸಿಯಾಗಿದ್ದು, ಚಿಕ್ಕ ವಯಸ್ಸಿನಲ್ಲಿ ಅಪರಾಧ ಮಾಡಿ ಜೈಲು ಸೇರಿದ್ದ. ಬಳಿಕ ಜೈಲಿನಿಂದ ಬಿಡುಗಡೆಯಾದ ನಂತರ ಜೈಲು ಜೀವಗಳು ಎಂಬ ಪುಸ್ತಕ ಬರೆದಿದ್ದ. ಜೊತೆಗೆ ಸಮಾಜ ಸೇವೆಯಲ್ಲೂ ತೊಡಗಿದ್ದ. ಆದ್ರೆ, ಮುಂಜಾನೆ ಕಾರಿನಲ್ಲಿ ಬರುತ್ತಿದ್ದ ವೇಳೆ ಅಪಘಾತವಾಗಿ ಸಾವನ್ನಪ್ಪಿದ್ದಾನೆ. ಈ ಕುರಿತು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ:Mysore police: ಐಶಾರಾಮಿ ಕಾರು, ಶ್ರೀಮಂತರ ಮನೆಯೇ ಇವನ ಟಾರ್ಗೆಟ್: 56 ಕಳ್ಳತನ ಮಾಡಿದ್ದರೂ ಪೊಲೀಸರಿಗೆ ಮಾತ್ರ ಸಿಕ್ಕಿರಲಿಲ್ಲ- ಕೊನೆಗೂ ಅಂದರ್​

ಅಪರಿಚಿತ ವ್ಯಕ್ತಿಯಿಂದ ವೃದ್ದನ ಕೊಲೆ

ಕೋಲಾರ: ಅಪರಿಚಿತ ವ್ಯಕ್ತಿಯೋರ್ವ ವೃದ್ದನ ತಲೆಗೆ ಕಲ್ಲಿನಿಂದ ಹೊಡೆದು ಕೊಲೆ ಮಾಡಿದ ಕೋಲಾರ ಜಿಲ್ಲೆಯ ಕೆಜಿಎಫ್​ನ ಅಂಬೇಡ್ಕರ್ ನಗರದಲ್ಲಿ ನಡೆದಿದೆ. ಮೇಜರ್(65) ಕೊಲೆಯಾದ ವೃದ್ದ. ಇತ ಹಣ್ಣಿನ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ. ಈ ವೇಳೆ ಏಕಾಎಕಿ ಬಂದು, ತಲೆಗೆ ಕಲ್ಲಿನಿಂದ ಹೊಡೆದು ಭೀಕರವಾಗಿ ಕೊಲೆ ಮಾಡಿದ್ದಾನೆ. ಇನ್ನು ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಕುರಿತು ರಾಬರ್ಟ್ ಸನ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:37 pm, Thu, 17 August 23

Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More
Follow Us