AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ವೃತ್ತಿ‌ ವೈಷಮ್ಯದಿಂದ ದರೋಡೆಗೆ ಸುಪಾರಿ ನೀಡಿದ್ದ ಬೇರೊಂದು ಗೋಲ್ಡ್ ಅಂಗಡಿಯ ಮಾಲೀಕನ ಬಂಧನ

ನಾಲ್ವರು ದುಷ್ಕರ್ಮಿಗಳು ಒಳ ನುಗ್ಗಿ ಮಾಲೀಕನಿಗೆ ಥಳಿಸಿ, ಬಳಿಕ ಕೈ ಕಾಲು ಕಟ್ಟಿ ಚಿನ್ನಾಭರಣ ಲೂಟಿ ಮಾಡಿದ್ದರು. ನಂತರ ಅಂಗಡಿಯ ಬಾಗಿಲು ತೆಗೆದು ಓಡಿ ಹೋಗಿದ್ದರು.

ಮೈಸೂರು: ವೃತ್ತಿ‌ ವೈಷಮ್ಯದಿಂದ ದರೋಡೆಗೆ ಸುಪಾರಿ ನೀಡಿದ್ದ ಬೇರೊಂದು ಗೋಲ್ಡ್ ಅಂಗಡಿಯ ಮಾಲೀಕನ ಬಂಧನ
ಸಿಸಿಟಿವಿಯಲ್ಲಿ ಸೆರೆಯಾದ ದರೋಡೆ ದೃಶ್ಯ
TV9 Web
| Updated By: sandhya thejappa|

Updated on:Aug 31, 2021 | 10:19 AM

Share

ಮೈಸೂರು: ನಗರದಲ್ಲಿ ದರೋಡೆ, ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿ ಮತ್ತೊಂದು ಆಭರಣದಂಗಡಿ ಮಾಲೀಕನನ್ನು ಬಂಧಿಸಲಾಗಿದೆ. ಬಾಲಾಜಿ ಬ್ಯಾಂಕರ್ಸ್ ಮಾಲೀಕನನ್ನು ಪೊಲೀಸರು ಬಂಧಿಸಿದ್ದಾರೆ. ದರೋಡೆಗೆ ಸುಪಾರಿ ನೀಡಿದ್ದ ಎಂಬ ಆರೋಪದಲ್ಲಿ ಮಾಲೀಕ ಮಹೇಂದ್ರನನ್ನು ವಿದ್ಯಾರಣ್ಯಪುರಂ ಪೊಲೀಸರು ಬಂಧಿಸಿದ್ದಾರೆ. ಅಮೃತ್ ಗೋಲ್ಡ್ ಅಂಡ್ ಸಿಲ್ವರ್ ಪ್ಯಾಲೇಸ್​ನಲ್ಲಿ ಕಳ್ಳತನವಾಗಿತ್ತು. ಇದಕ್ಕೆ ಆರೋಪಿ ಮಹೇಂದ್ರ ಎಂಬುವವನು ಸುಪಾರಿ ನೀಡಿದ್ದ ಎಂದು ಹೇಳಲಾಗುತ್ತಿದೆ. ವೃತ್ತಿ ವೈಷಮ್ಯದಿಂದ ದರೋಡೆಗೆ ಸುಪಾರಿ ನೀಡಿದ್ದು, ಪ್ರಮುಖದ ಆರೋಪಿ ತಲೆ ಮರೆಸಿಕೊಂಡಿದ್ದಾನೆ. ಸದ್ಯ ಹೆಚ್ಚಿನ ವಿಚಾರಣೆಗಾಗಿ ಆರೋಪಿಗಳು ಪೊಲೀಸರ ವಶದಲ್ಲಿದ್ದಾರೆ.

ನಾಲ್ವರು ದುಷ್ಕರ್ಮಿಗಳು ಒಳ ನುಗ್ಗಿ ಮಾಲೀಕನಿಗೆ ಥಳಿಸಿ, ಬಳಿಕ ಕೈ ಕಾಲು ಕಟ್ಟಿ ಚಿನ್ನಾಭರಣ ಲೂಟಿ ಮಾಡಿದ್ದರು. ನಂತರ ಅಂಗಡಿಯ ಬಾಗಿಲು ತೆಗೆದು ಓಡಿ ಹೋಗಿದ್ದರು. ಈ ವೇಳೆ ಅಡ್ಡ ಬಂದವರ ಮೇಲೆ ಗುಂಡು ಹಾಯಿಸಿ, ಕಿವಿ ಓಲೆ ಖರೀದಿಸಲು ಬಂದಿದ್ದ ದಡದಹಳ್ಳಿ ಚಂದ್ರುಗೆ ಗುಂಡು ತಗಲಿ ಸಾವನ್ನಪ್ಪಿದ್ದರು. ಈ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ.

ಆಗಸ್ಟ್ 24ರಂದು ಸಾಂಸ್ಕೃತಿಕ ನಗರ ಮೈಸೂರಿನಲ್ಲಿ ಬೆಚ್ಚಿ ಬೀಳಿಸಿದ ದರೋಡೆ ಶೂಟೌಟ್ ಘಟನೆ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳ ಸುಳಿವು ನೀಡಿದವರಿಗೆ ₹5 ಲಕ್ಷ ಬಹುಮಾನ ನೀಡುವುದಾಗಿ ಮೈಸೂರು ಕಮಿಷನರ್ ಚಂದ್ರಗುಪ್ತ ಘೋಷಿಸಿದ್ದರು. ತನಿಖೆಗೆ 25 ಪೊಲೀಸ್ ಅಧಿಕಾರಿಗಳ ನಿಯೋಜನೆ ಮಾಡಲಾಗಿತ್ತು. 80 ಪೊಲೀಸರು ತನಿಖೆಯಲ್ಲಿ ಭಾಗಿಯಾಗಲಿದ್ದರು. ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ತಂಡಗಳ ರಚನೆ ಮಾಡಲಾಗಿತ್ತು. ಇದರ ಜೊತೆಗೆ ಸಾರ್ವಜನಿಕರ ಸಹಕಾರಕ್ಕೆ ಮನವಿ ಮಾಡಿ, ಇಲಾಖೆಯಿಂದ ರೂ. 5 ಲಕ್ಷ ನಗದು ಬಹುಮಾನವನ್ನು ಘೋಷಿಸಿದ್ದರು.

ಇದನ್ನೂ ಓದಿ

ಈ ಹಿಂದೆ ಮೈಸೂರು ಬೆಟ್ಟದ ಬಳಿ ಸುಮಾರು ದರೋಡೆ ಮಾಡಿದ್ವಿ, ಯಾರೂ ದೂರು ಕೊಡಲ್ಲ ಎಂಬ ಧೈರ್ಯವಿತ್ತು: ಆರೋಪಿಗಳು

ಮೈಸೂರಿನ ದರೋಡೆ, ಶೂಟೌಟ್ ಪ್ರಕರಣದ 6 ಆರೋಪಿಗಳ ಬಂಧನ; ಪ್ರವೀಣ್ ಸೂದ್ ಮಾಹಿತಿ

(A gold shop owner has been arrested by police on Supari of robbery in mysuru)

Published On - 9:59 am, Tue, 31 August 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ