AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಖಾಸಗಿ ಮೆಡಿಕಲ್ ಸ್ಟೋರ್​​ನಿಂದ ಔಷಧಿ ತರುವಂತೆ ಚೀಟಿ ಬರೆದುಕೊಟ್ಟು ಸಿಕ್ಕಿ‌ ಬಿದ್ದ ಸರ್ಕಾರಿ ವೈದ್ಯ

ಚಿಕಿತ್ಸೆಗೆ ಆಸ್ಪತ್ರೆಯ ಎದುರಿನ ಖಾಸಗಿ, ಶಿವು ಮೆಡಿಕಲ್ಸ್​​ ಸ್ಟೋರ್​​ನಿಂದಲೇ ಇಂಜೆಕ್ಷನ್ ತರುವಂತೆ ಪಿರಿಯಾಪಟ್ಟಣ ಸಾರ್ವಜನಿಕ ಆಸ್ಪತ್ರೆಯ ವೈದ್ಯ ಡಾ.ಫೃಥ್ವಿ ಚೀಟಿ ಬರೆದುಕೊಟ್ಟಿದ್ದರು. ವೈದ್ಯರ ಸೂಚನೆ ಮೇರೆಗೆ ರೋಗಿಯ ಸಂಬಂಧಿಕರು ಇಂಜೆಕ್ಷನ್ ಖರೀದಿಸಲು ಮೆಡಿಕಲ್​ಸ್ಟೋರ್​ಗೆ ಹೋಗಿದ್ದರು. ಮುಂದೇನಾಯ್ತು ಈ ಸ್ಟೋರಿ ಓದಿ

ಮೈಸೂರು: ಖಾಸಗಿ ಮೆಡಿಕಲ್ ಸ್ಟೋರ್​​ನಿಂದ ಔಷಧಿ ತರುವಂತೆ ಚೀಟಿ ಬರೆದುಕೊಟ್ಟು ಸಿಕ್ಕಿ‌ ಬಿದ್ದ ಸರ್ಕಾರಿ ವೈದ್ಯ
ಖಾಸಗಿ ಮೆಡಿಕಲ್​ ಸ್ಟೋರ್​ ಸಿಬ್ಬಂದಿ
ದಿಲೀಪ್​, ಚೌಡಹಳ್ಳಿ
| Edited By: |

Updated on: Nov 03, 2023 | 8:28 AM

Share

ಮೈಸೂರು ನ.03: ಔಷಧಿಗಳನ್ನು ಖಾಸಗಿ ಮೆಡಿಕಲ್​​​ ಸ್ಟೋರ್​ನಿಂದಲೇ (Medical Store) ತರುವಂತೆ ಚೀಟಿ ಬರೆದು ಕೊಡುವ ಮೂಲಕ ಸರ್ಕಾರಿ ವೈದ್ಯ (Government Doctor) ರೆಡ್​ ಹ್ಯಾಂಡ್​ ಆಗಿ ಸಿಕ್ಕಿಬಿದ್ದಿದ್ದಾರೆ. ಆಯುಷ್ಮಾನ್ ಭಾರತ್ ಯೋಜನೆಯಡಿ ಇಬ್ಬರು ರೋಗಿಗಳು ಮೂಲವ್ಯಾದಿ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಲು ಪಿರಿಯಾಪಟ್ಟಣದ (Periyapatna) ಸಾರ್ವಜನಿಕ ಆಸ್ಪತ್ರೆಗೆ ಆಸ್ಪತ್ರೆಗೆ ದಾಖಲಾಗಿದ್ದರು. ಶಸ್ತ್ರಚಿಕಿತ್ಸೆ ಮಾಡುವ ಸಲುವಾಗಿ ವೈದ್ಯರು ಒಳ ರೋಗಿಗಳಾಗಿ ದಾಖಲು ಮಾಡಿಕೊಂಡಿದ್ದರು. ಚಿಕಿತ್ಸೆಗೆ ಆಸ್ಪತ್ರೆಯ ಎದುರಿನ ಖಾಸಗಿ, ಶಿವು ಮೆಡಿಕಲ್ಸ್​​ ಸ್ಟೋರ್​​ನಿಂದಲೇ ಇಂಜೆಕ್ಷನ್ ತರುವಂತೆ ಸಾರ್ವಜನಿಕ ಆಸ್ಪತ್ರೆಯ ವೈದ್ಯ ಡಾ.ಫೃಥ್ವಿ ಚೀಟಿ ಬರೆದುಕೊಟ್ಟಿದ್ದರು.

ವೈದ್ಯರ ಸೂಚನೆ ಮೇರೆಗೆ ರೋಗಿಯ ಸಂಬಂಧಿಕರು ಇಂಜೆಕ್ಷನ್ ಖರೀದಿಸಲು ಮೆಡಿಕಲ್​ಸ್ಟೋರ್​ಗೆ ಹೋಗಿದ್ದರು. ಮೆಡಿಕಲ್ ಸ್ಟೋರ್​ನಲ್ಲಿ ಸಿಬ್ಬಂದಿ, ಒಬ್ಬರಿಗೆ 5,500 ರೂ. ಮತ್ತೊಬ್ಬರಿಗೆ 5 ಸಾವಿರ ರೂ. ಹಣ ಪಡೆದನು. ಅನುಮಾನಗೊಂಡ ರೋಗಿಯ ಸಂಬಂಧಿಕರು ಒಂದೇ ಇಂಜೆಕ್ಷನ್​ಗೇ ಹೀಗೇಕೆ ಬೇರೆ ಬೇರೆ ದರ ಎಂದು ಪ್ರಶ್ನೆ ಮಾಡಿದರು.

ಇದನ್ನೂ ಓದಿ: HIV ಸೋಂಕಿತ ಎಂದು ಹೇಳದೇ ಇದ್ದುದಕ್ಕೆ ರೋಗಿಗೆ ಥಳಿಸಿದ ವೈದ್ಯ ಅಮಾನತು

ಆಯುಷ್ಮಾನ್ ಭಾರತ್ ಯೋಜನೆಯಲ್ಲಿ ಈ ಔಷಧಿಯನ್ನು ಆಸ್ಪತ್ರೆಯಲ್ಲಿಯೇ ಕೊಡಬೇಕು ಎಂಬ ನಿಯಮವಿದೆ ಆದರೂ ಹೊರಗಡೆಯಿಂದ ತರಸಲಾಗುತ್ತಿದೆ. ನೀವು ಅಕ್ರಮವಾಗಿ ಇಂಜೆಕ್ಷನ್ ಮಾರಾಟ ಮಾಡುತ್ತಿದ್ದೀರಿ, ಇದಕ್ಕೆ ರಸೀದಿ ನೀಡಿ ಎಂದು ಪಟ್ಟು ಹಿಡಿದಿದ್ದಾರೆ. ಇದರಿಂದ ತಬ್ಬಿಬ್ಬುಗೊಂಡ ಮೆಡಿಕಲ್ ಸ್ಟೋರ್ ಸಿಬ್ಬಂದಿ ವೈದ್ಯರು ಹೇಳಿದ್ದರಿಂದ ಈ ಇಂಜೆಕ್ಷನ್ ಕೊಡುತ್ತಿದ್ದೇವೆ ಎಂದು ಹೇಳಿದ್ದಾರೆ.

ವೈದ್ಯರ ಶಿಫಾರಸು ಚೀಟಿ ಇಲ್ಲದೆ ಮತ್ತು ಔಷಧಿ ನೀಡಿರುವುದಕ್ಕೆ ರಸೀದಿ ನೀಡದೆ ಹಣ ಪಡೆಯುತ್ತಿರುವುದು ಅಕ್ರಮ ಎಂದು ರೋಗಿಯ ಕಡೆಯವರು ತರಾಟೆಗೆ ತೆಗೆದುಕೊಂಡಿದ್ದಾರೆ. ತಕ್ಷಣ ಮೆಡಿಕಲ್ ಸ್ಟೋರ್​ನ ಸಿಬ್ಬಂದಿಗಳು ಇಬ್ಬರಿಗೂ ಹಣ ವಾಪಸ್ ನೀಡಿದ್ದಾರೆ. ಇದು ನಮ್ಮ ತಪ್ಪಲ್ಲವೆಂದು ವೈದ್ಯರ ಬಳಿ ಕರೆದುಕೊಂಡು ಹೋಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!