AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಖಾಸಗಿ ಮೆಡಿಕಲ್ ಸ್ಟೋರ್​​ನಿಂದ ಔಷಧಿ ತರುವಂತೆ ಚೀಟಿ ಬರೆದುಕೊಟ್ಟು ಸಿಕ್ಕಿ‌ ಬಿದ್ದ ಸರ್ಕಾರಿ ವೈದ್ಯ

ಚಿಕಿತ್ಸೆಗೆ ಆಸ್ಪತ್ರೆಯ ಎದುರಿನ ಖಾಸಗಿ, ಶಿವು ಮೆಡಿಕಲ್ಸ್​​ ಸ್ಟೋರ್​​ನಿಂದಲೇ ಇಂಜೆಕ್ಷನ್ ತರುವಂತೆ ಪಿರಿಯಾಪಟ್ಟಣ ಸಾರ್ವಜನಿಕ ಆಸ್ಪತ್ರೆಯ ವೈದ್ಯ ಡಾ.ಫೃಥ್ವಿ ಚೀಟಿ ಬರೆದುಕೊಟ್ಟಿದ್ದರು. ವೈದ್ಯರ ಸೂಚನೆ ಮೇರೆಗೆ ರೋಗಿಯ ಸಂಬಂಧಿಕರು ಇಂಜೆಕ್ಷನ್ ಖರೀದಿಸಲು ಮೆಡಿಕಲ್​ಸ್ಟೋರ್​ಗೆ ಹೋಗಿದ್ದರು. ಮುಂದೇನಾಯ್ತು ಈ ಸ್ಟೋರಿ ಓದಿ

ಮೈಸೂರು: ಖಾಸಗಿ ಮೆಡಿಕಲ್ ಸ್ಟೋರ್​​ನಿಂದ ಔಷಧಿ ತರುವಂತೆ ಚೀಟಿ ಬರೆದುಕೊಟ್ಟು ಸಿಕ್ಕಿ‌ ಬಿದ್ದ ಸರ್ಕಾರಿ ವೈದ್ಯ
ಖಾಸಗಿ ಮೆಡಿಕಲ್​ ಸ್ಟೋರ್​ ಸಿಬ್ಬಂದಿ
ದಿಲೀಪ್​, ಚೌಡಹಳ್ಳಿ
| Edited By: ವಿವೇಕ ಬಿರಾದಾರ|

Updated on: Nov 03, 2023 | 8:28 AM

Share

ಮೈಸೂರು ನ.03: ಔಷಧಿಗಳನ್ನು ಖಾಸಗಿ ಮೆಡಿಕಲ್​​​ ಸ್ಟೋರ್​ನಿಂದಲೇ (Medical Store) ತರುವಂತೆ ಚೀಟಿ ಬರೆದು ಕೊಡುವ ಮೂಲಕ ಸರ್ಕಾರಿ ವೈದ್ಯ (Government Doctor) ರೆಡ್​ ಹ್ಯಾಂಡ್​ ಆಗಿ ಸಿಕ್ಕಿಬಿದ್ದಿದ್ದಾರೆ. ಆಯುಷ್ಮಾನ್ ಭಾರತ್ ಯೋಜನೆಯಡಿ ಇಬ್ಬರು ರೋಗಿಗಳು ಮೂಲವ್ಯಾದಿ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಲು ಪಿರಿಯಾಪಟ್ಟಣದ (Periyapatna) ಸಾರ್ವಜನಿಕ ಆಸ್ಪತ್ರೆಗೆ ಆಸ್ಪತ್ರೆಗೆ ದಾಖಲಾಗಿದ್ದರು. ಶಸ್ತ್ರಚಿಕಿತ್ಸೆ ಮಾಡುವ ಸಲುವಾಗಿ ವೈದ್ಯರು ಒಳ ರೋಗಿಗಳಾಗಿ ದಾಖಲು ಮಾಡಿಕೊಂಡಿದ್ದರು. ಚಿಕಿತ್ಸೆಗೆ ಆಸ್ಪತ್ರೆಯ ಎದುರಿನ ಖಾಸಗಿ, ಶಿವು ಮೆಡಿಕಲ್ಸ್​​ ಸ್ಟೋರ್​​ನಿಂದಲೇ ಇಂಜೆಕ್ಷನ್ ತರುವಂತೆ ಸಾರ್ವಜನಿಕ ಆಸ್ಪತ್ರೆಯ ವೈದ್ಯ ಡಾ.ಫೃಥ್ವಿ ಚೀಟಿ ಬರೆದುಕೊಟ್ಟಿದ್ದರು.

ವೈದ್ಯರ ಸೂಚನೆ ಮೇರೆಗೆ ರೋಗಿಯ ಸಂಬಂಧಿಕರು ಇಂಜೆಕ್ಷನ್ ಖರೀದಿಸಲು ಮೆಡಿಕಲ್​ಸ್ಟೋರ್​ಗೆ ಹೋಗಿದ್ದರು. ಮೆಡಿಕಲ್ ಸ್ಟೋರ್​ನಲ್ಲಿ ಸಿಬ್ಬಂದಿ, ಒಬ್ಬರಿಗೆ 5,500 ರೂ. ಮತ್ತೊಬ್ಬರಿಗೆ 5 ಸಾವಿರ ರೂ. ಹಣ ಪಡೆದನು. ಅನುಮಾನಗೊಂಡ ರೋಗಿಯ ಸಂಬಂಧಿಕರು ಒಂದೇ ಇಂಜೆಕ್ಷನ್​ಗೇ ಹೀಗೇಕೆ ಬೇರೆ ಬೇರೆ ದರ ಎಂದು ಪ್ರಶ್ನೆ ಮಾಡಿದರು.

ಇದನ್ನೂ ಓದಿ: HIV ಸೋಂಕಿತ ಎಂದು ಹೇಳದೇ ಇದ್ದುದಕ್ಕೆ ರೋಗಿಗೆ ಥಳಿಸಿದ ವೈದ್ಯ ಅಮಾನತು

ಆಯುಷ್ಮಾನ್ ಭಾರತ್ ಯೋಜನೆಯಲ್ಲಿ ಈ ಔಷಧಿಯನ್ನು ಆಸ್ಪತ್ರೆಯಲ್ಲಿಯೇ ಕೊಡಬೇಕು ಎಂಬ ನಿಯಮವಿದೆ ಆದರೂ ಹೊರಗಡೆಯಿಂದ ತರಸಲಾಗುತ್ತಿದೆ. ನೀವು ಅಕ್ರಮವಾಗಿ ಇಂಜೆಕ್ಷನ್ ಮಾರಾಟ ಮಾಡುತ್ತಿದ್ದೀರಿ, ಇದಕ್ಕೆ ರಸೀದಿ ನೀಡಿ ಎಂದು ಪಟ್ಟು ಹಿಡಿದಿದ್ದಾರೆ. ಇದರಿಂದ ತಬ್ಬಿಬ್ಬುಗೊಂಡ ಮೆಡಿಕಲ್ ಸ್ಟೋರ್ ಸಿಬ್ಬಂದಿ ವೈದ್ಯರು ಹೇಳಿದ್ದರಿಂದ ಈ ಇಂಜೆಕ್ಷನ್ ಕೊಡುತ್ತಿದ್ದೇವೆ ಎಂದು ಹೇಳಿದ್ದಾರೆ.

ವೈದ್ಯರ ಶಿಫಾರಸು ಚೀಟಿ ಇಲ್ಲದೆ ಮತ್ತು ಔಷಧಿ ನೀಡಿರುವುದಕ್ಕೆ ರಸೀದಿ ನೀಡದೆ ಹಣ ಪಡೆಯುತ್ತಿರುವುದು ಅಕ್ರಮ ಎಂದು ರೋಗಿಯ ಕಡೆಯವರು ತರಾಟೆಗೆ ತೆಗೆದುಕೊಂಡಿದ್ದಾರೆ. ತಕ್ಷಣ ಮೆಡಿಕಲ್ ಸ್ಟೋರ್​ನ ಸಿಬ್ಬಂದಿಗಳು ಇಬ್ಬರಿಗೂ ಹಣ ವಾಪಸ್ ನೀಡಿದ್ದಾರೆ. ಇದು ನಮ್ಮ ತಪ್ಪಲ್ಲವೆಂದು ವೈದ್ಯರ ಬಳಿ ಕರೆದುಕೊಂಡು ಹೋಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್