AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಖಾಸಗಿ ಮೆಡಿಕಲ್ ಸ್ಟೋರ್​​ನಿಂದ ಔಷಧಿ ತರುವಂತೆ ಚೀಟಿ ಬರೆದುಕೊಟ್ಟು ಸಿಕ್ಕಿ‌ ಬಿದ್ದ ಸರ್ಕಾರಿ ವೈದ್ಯ

ಚಿಕಿತ್ಸೆಗೆ ಆಸ್ಪತ್ರೆಯ ಎದುರಿನ ಖಾಸಗಿ, ಶಿವು ಮೆಡಿಕಲ್ಸ್​​ ಸ್ಟೋರ್​​ನಿಂದಲೇ ಇಂಜೆಕ್ಷನ್ ತರುವಂತೆ ಪಿರಿಯಾಪಟ್ಟಣ ಸಾರ್ವಜನಿಕ ಆಸ್ಪತ್ರೆಯ ವೈದ್ಯ ಡಾ.ಫೃಥ್ವಿ ಚೀಟಿ ಬರೆದುಕೊಟ್ಟಿದ್ದರು. ವೈದ್ಯರ ಸೂಚನೆ ಮೇರೆಗೆ ರೋಗಿಯ ಸಂಬಂಧಿಕರು ಇಂಜೆಕ್ಷನ್ ಖರೀದಿಸಲು ಮೆಡಿಕಲ್​ಸ್ಟೋರ್​ಗೆ ಹೋಗಿದ್ದರು. ಮುಂದೇನಾಯ್ತು ಈ ಸ್ಟೋರಿ ಓದಿ

ಮೈಸೂರು: ಖಾಸಗಿ ಮೆಡಿಕಲ್ ಸ್ಟೋರ್​​ನಿಂದ ಔಷಧಿ ತರುವಂತೆ ಚೀಟಿ ಬರೆದುಕೊಟ್ಟು ಸಿಕ್ಕಿ‌ ಬಿದ್ದ ಸರ್ಕಾರಿ ವೈದ್ಯ
ಖಾಸಗಿ ಮೆಡಿಕಲ್​ ಸ್ಟೋರ್​ ಸಿಬ್ಬಂದಿ
ದಿಲೀಪ್​, ಚೌಡಹಳ್ಳಿ
| Edited By: |

Updated on: Nov 03, 2023 | 8:28 AM

Share

ಮೈಸೂರು ನ.03: ಔಷಧಿಗಳನ್ನು ಖಾಸಗಿ ಮೆಡಿಕಲ್​​​ ಸ್ಟೋರ್​ನಿಂದಲೇ (Medical Store) ತರುವಂತೆ ಚೀಟಿ ಬರೆದು ಕೊಡುವ ಮೂಲಕ ಸರ್ಕಾರಿ ವೈದ್ಯ (Government Doctor) ರೆಡ್​ ಹ್ಯಾಂಡ್​ ಆಗಿ ಸಿಕ್ಕಿಬಿದ್ದಿದ್ದಾರೆ. ಆಯುಷ್ಮಾನ್ ಭಾರತ್ ಯೋಜನೆಯಡಿ ಇಬ್ಬರು ರೋಗಿಗಳು ಮೂಲವ್ಯಾದಿ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಲು ಪಿರಿಯಾಪಟ್ಟಣದ (Periyapatna) ಸಾರ್ವಜನಿಕ ಆಸ್ಪತ್ರೆಗೆ ಆಸ್ಪತ್ರೆಗೆ ದಾಖಲಾಗಿದ್ದರು. ಶಸ್ತ್ರಚಿಕಿತ್ಸೆ ಮಾಡುವ ಸಲುವಾಗಿ ವೈದ್ಯರು ಒಳ ರೋಗಿಗಳಾಗಿ ದಾಖಲು ಮಾಡಿಕೊಂಡಿದ್ದರು. ಚಿಕಿತ್ಸೆಗೆ ಆಸ್ಪತ್ರೆಯ ಎದುರಿನ ಖಾಸಗಿ, ಶಿವು ಮೆಡಿಕಲ್ಸ್​​ ಸ್ಟೋರ್​​ನಿಂದಲೇ ಇಂಜೆಕ್ಷನ್ ತರುವಂತೆ ಸಾರ್ವಜನಿಕ ಆಸ್ಪತ್ರೆಯ ವೈದ್ಯ ಡಾ.ಫೃಥ್ವಿ ಚೀಟಿ ಬರೆದುಕೊಟ್ಟಿದ್ದರು.

ವೈದ್ಯರ ಸೂಚನೆ ಮೇರೆಗೆ ರೋಗಿಯ ಸಂಬಂಧಿಕರು ಇಂಜೆಕ್ಷನ್ ಖರೀದಿಸಲು ಮೆಡಿಕಲ್​ಸ್ಟೋರ್​ಗೆ ಹೋಗಿದ್ದರು. ಮೆಡಿಕಲ್ ಸ್ಟೋರ್​ನಲ್ಲಿ ಸಿಬ್ಬಂದಿ, ಒಬ್ಬರಿಗೆ 5,500 ರೂ. ಮತ್ತೊಬ್ಬರಿಗೆ 5 ಸಾವಿರ ರೂ. ಹಣ ಪಡೆದನು. ಅನುಮಾನಗೊಂಡ ರೋಗಿಯ ಸಂಬಂಧಿಕರು ಒಂದೇ ಇಂಜೆಕ್ಷನ್​ಗೇ ಹೀಗೇಕೆ ಬೇರೆ ಬೇರೆ ದರ ಎಂದು ಪ್ರಶ್ನೆ ಮಾಡಿದರು.

ಇದನ್ನೂ ಓದಿ: HIV ಸೋಂಕಿತ ಎಂದು ಹೇಳದೇ ಇದ್ದುದಕ್ಕೆ ರೋಗಿಗೆ ಥಳಿಸಿದ ವೈದ್ಯ ಅಮಾನತು

ಆಯುಷ್ಮಾನ್ ಭಾರತ್ ಯೋಜನೆಯಲ್ಲಿ ಈ ಔಷಧಿಯನ್ನು ಆಸ್ಪತ್ರೆಯಲ್ಲಿಯೇ ಕೊಡಬೇಕು ಎಂಬ ನಿಯಮವಿದೆ ಆದರೂ ಹೊರಗಡೆಯಿಂದ ತರಸಲಾಗುತ್ತಿದೆ. ನೀವು ಅಕ್ರಮವಾಗಿ ಇಂಜೆಕ್ಷನ್ ಮಾರಾಟ ಮಾಡುತ್ತಿದ್ದೀರಿ, ಇದಕ್ಕೆ ರಸೀದಿ ನೀಡಿ ಎಂದು ಪಟ್ಟು ಹಿಡಿದಿದ್ದಾರೆ. ಇದರಿಂದ ತಬ್ಬಿಬ್ಬುಗೊಂಡ ಮೆಡಿಕಲ್ ಸ್ಟೋರ್ ಸಿಬ್ಬಂದಿ ವೈದ್ಯರು ಹೇಳಿದ್ದರಿಂದ ಈ ಇಂಜೆಕ್ಷನ್ ಕೊಡುತ್ತಿದ್ದೇವೆ ಎಂದು ಹೇಳಿದ್ದಾರೆ.

ವೈದ್ಯರ ಶಿಫಾರಸು ಚೀಟಿ ಇಲ್ಲದೆ ಮತ್ತು ಔಷಧಿ ನೀಡಿರುವುದಕ್ಕೆ ರಸೀದಿ ನೀಡದೆ ಹಣ ಪಡೆಯುತ್ತಿರುವುದು ಅಕ್ರಮ ಎಂದು ರೋಗಿಯ ಕಡೆಯವರು ತರಾಟೆಗೆ ತೆಗೆದುಕೊಂಡಿದ್ದಾರೆ. ತಕ್ಷಣ ಮೆಡಿಕಲ್ ಸ್ಟೋರ್​ನ ಸಿಬ್ಬಂದಿಗಳು ಇಬ್ಬರಿಗೂ ಹಣ ವಾಪಸ್ ನೀಡಿದ್ದಾರೆ. ಇದು ನಮ್ಮ ತಪ್ಪಲ್ಲವೆಂದು ವೈದ್ಯರ ಬಳಿ ಕರೆದುಕೊಂಡು ಹೋಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Dileep CP
Dileep CP

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಅದನ್ನು ಹೊರತು ಪಡಿಸಿದರೆ ಒಂದಷ್ಟು ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ಗಂಡನ ಜೊತೆಗಿದ್ದರೂ ಬರ್ತೀಯಾ ಎಂದು ಕೇಳ್ತಾರೆ
ಗಂಡನ ಜೊತೆಗಿದ್ದರೂ ಬರ್ತೀಯಾ ಎಂದು ಕೇಳ್ತಾರೆ