AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysore News: ಕಬಿನಿ‌ ಪೊಲೀಸ್ ಭದ್ರತಾ‌ ಕೊಠಡಿಗೆ ಡಿಕ್ಕಿ ಹೊಡೆದ ಲಾರಿ

ಕಬಿನಿ‌ ಪೊಲೀಸ್ ಭದ್ರತಾ‌ ಕೊಠಡಿಗೆ ಲಾರಿ ಡಿಕ್ಕಿ ಹೊಡೆದಿರುವ ಘಟನೆ ಜಿಲ್ಲೆ ಹೆಚ್ ಡಿ ಕೋಟೆ ತಾಲ್ಲೂಕಿನ ಬೀಚನಹಳ್ಳಿ ಗ್ರಾಮದ ಕಬಿನಿ‌ ಜಲಾಶಯದ ಬಳಿ‌‌ ನಡೆದಿದೆ.

Mysore News: ಕಬಿನಿ‌ ಪೊಲೀಸ್ ಭದ್ರತಾ‌ ಕೊಠಡಿಗೆ ಡಿಕ್ಕಿ ಹೊಡೆದ ಲಾರಿ
ಪೊಲೀಸ್ ಭದ್ರತಾ‌ ಕೊಠಡಿಗೆ ಲಾರಿ ಡಿಕ್ಕಿ
ವಿವೇಕ ಬಿರಾದಾರ
|

Updated on: Jun 19, 2023 | 8:20 AM

Share

ಮೈಸೂರು: ಕಬಿನಿ (Kabini)‌ ಪೊಲೀಸ್ ಭದ್ರತಾ‌ ಕೊಠಡಿಗೆ (Police security room) ಲಾರಿ ಡಿಕ್ಕಿ ಹೊಡೆದಿರುವ ಘಟನೆ ಜಿಲ್ಲೆ ಹೆಚ್ ಡಿ ಕೋಟೆ (HD Kote) ತಾಲ್ಲೂಕಿನ ಬೀಚನಹಳ್ಳಿ ಗ್ರಾಮದ ಕಬಿನಿ‌ ಜಲಾಶಯದ (Kabini Dam) ಬಳಿ‌‌ ನಡೆದಿದೆ. ಅದೃಷ್ಟವಶಾತ್ ಅನಾಹುತ ತಪ್ಪಿದೆ. ಚಾಲಕ ಲಾರಿ ನಿಲ್ಲಿಸಿ ವಿಳಾಸ ಕೇಳಲೆಂದು ಕೆಳಗೆ ಇಳಿದ್ದಿದ್ದಾನೆ. ಈ ವೇಳೆ ಇಳಿಜಾರು ಇದ್ದ ಕಾರಣ ಲಾರಿ ತಾನೆ ಸಾಗಿದ್ದು ಪೊಲೀಸ್ ಭದ್ರತಾ ಕೊಠಡಿಗೆ ಡಿಕ್ಕಿ ಹೊಡೆದಿದೆ. ಪುಣ್ಯಕ್ಕೆ ಪೊಲೀಸ್ ಭದ್ರತಾ ಕೊಠಡಿಯಲ್ಲಿ ಯಾರು ಇಲ್ಲದ ಕಾರಣ ಅನಾಹುತ ತಪ್ಪಿದೆ. ಸ್ಥಳಕ್ಕೆ ಕಬಿನಿ ಜಲಾಶಯ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಶವ ಸಾಗಿಸುವ ವಾಹನ ಚಾಲಿಸಿದ ಪುರಸಭೆ ಸದಸ್ಯ

ಸರಿಯಾದ ಸಮಯಕ್ಕೆ ಶವ ಸಾಗಿಸುವ ವಾಹನ ಚಾಲಕ ಬಾರದ ಹಿನ್ನೆಲೆ ಪುರಸಭೆ ಸದಸ್ಯ ವೆಂಕಟೇಶ್ ತಾವೇ ವಾಹನ ಚಲಾಯಿಸಿ ಶವ ಸಾಗಿಸಿರುವ ಘಟನೆ ಮೈಸೂರು ಜಿಲ್ಲೆಯ ಹೆಚ್ ಡಿ ಕೋಟೆಯಲ್ಲಿ ನಡೆದಿದೆ. ವಿಶ್ವನಾಥ ಕಾಲೋನಿಯ ಸುಜಾತ ಎಂಬುವವರು ಸಾವನ್ನಪ್ಪಿದ್ದರು. ಈ ವೇಳೆ ಪುರಸಭೆಯ ಶವ ಸಾಗಿಸಲು ವಾಹನ ಚಾಲಕ ಇರದ ಹಿನ್ನೆಲೆ ವೆಂಕಟೇಶ್​​ ವಿಶ್ವನಾಥ ಕಾಲೋನಿಯಿಂದ ಕ್ರೈಸ್ತ ಸಮುದಾಯದ ರುದ್ರಭೂಮಿವರೆಗೂ ವಾಹನ ಚಾಲನೆ ಮಾಡಿದ್ದಾರೆ.

ಮನೆಯ ಫ್ರಿಡ್ಜ್‌ನಲ್ಲಿ ನಾಗರಹಾವಿನ ಮರಿ

ಮನೆಯ ಫ್ರಿಡ್ಜ್‌ನಲ್ಲಿ ನಾಗರಹಾವಿನ ಮರಿ ಸಿಕ್ಕಿರುವ ಘಟನೆ ಮೈಸೂರಿನ ರಾಜ್‌ಕುಮಾರ್ ರಸ್ತೆಯ ಮನೆಯೊಂದರಲ್ಲಿ ನಡೆದಿದೆ. ಕಿರಣ್ ಎಂಬುವವರ ಮ‌ನೆಯ ಫ್ರಿಡ್ಜ್‌ನಲ್ಲಿ ನಾಗರಹಾವಿನ ಮರಿ ಇತ್ತು. ಇದನ್ನು ಕಂಡ ಮನೆಯವರು ಸ್ನೇಕ್ ಶಿವು ಅವರಿಗೆ ವಿಷಯ ತಿಳಿಸಿದ್ದಾರೆ. ಸ್ಥಳಕ್ಕೆ ಬಂದ ಶಿವು ಅವರು ನಾಗರಹಾವಿನ ಮರಿಯನ್ನು ಹಿಡಿದು, ಸುರಕ್ಷಿತ ಸ್ಥಳಕ್ಕೆ ಬಿಟ್ಟಿದ್ದಾರೆ.

ಕಾರು ಬೈಕ್ ನಡುವೆ ಅಪಘಾತ ಬೈಕ್ ಸವಾರ ಸಾವು

ಕಾರು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ಟಿ. ನರಸೀಪುರ ಮುಖ್ಯರಸ್ತೆಯ ಇಂಡವಾಳು ಗ್ರಾಮದ ಬಳಿ ನಡೆದಿದೆ. ಕೊಳ್ಳೇಗಾಲದ ನಿವಾಸಿ ಲಲಿತ್ ಗುಜರ್ (22) ಮೃತ ದುರ್ದೈವಿ. ಹಿಂಬದಿ ಬೈಕ್ ಸವಾರ ಪಂಕಜ್ ಗುಜರ್​ಗೆ ಗಂಭೀರ ಗಾಯಗಳಾಗಿವೆ. ಬೈಕ್​​ ಸವಾರರು ಕೊಳ್ಳೇಗಾಲದಿಂದ ಮೈಸೂರಿಗೆ ಸಂಬಂಧಿಕರ ಮನೆಗೆ ಹೋಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಟಿ.ನರಸೀಪುರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೈಸೂರು ಜಿಲ್ಲೆಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು