AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಕುಡಿದ ಅಮಲಿನಲ್ಲಿ ಕೊಲೆ; ಗರ್ಭಿಣಿ ಪತ್ನಿ ಸೇರಿ ಆರು ಜನರ ಮೇಲೆ ಮಾರಣಾಂತಿಕ ಹಲ್ಲೆ

ಈರಯ್ಯ ಅಲಿಯಾಸ್ ಕುಂಡ ಎಂಬುವವನು ಎದುರುಗಡೆ ಮನೆಯವನ ಮೇಲಿನ ಸಿಟ್ಟಿಗೆ ಆತನ ತಂದೆ, ತಾಯಿಯನ್ನು ಕೊಂದಿದ್ದಾನೆ. ಅಡ್ಡ ಬಂದ ಗರ್ಭಿಣಿ ಪತ್ನಿ ಹಾಗೂ ಅತ್ತೆ, ಮಾವನ ಮೇಲೂ ಹಲ್ಲೆ ನಡೆಸಿದ್ದಾನೆ.

ಮೈಸೂರು: ಕುಡಿದ ಅಮಲಿನಲ್ಲಿ ಕೊಲೆ; ಗರ್ಭಿಣಿ ಪತ್ನಿ ಸೇರಿ ಆರು ಜನರ ಮೇಲೆ ಮಾರಣಾಂತಿಕ ಹಲ್ಲೆ
ಸಾಂದರ್ಭಿಕ ಚಿತ್ರ
TV9 Web
| Updated By: sandhya thejappa|

Updated on:Dec 02, 2021 | 12:40 PM

Share

ಮೈಸೂರು: ಕುಡಿದ ಅಮಲಿನಲ್ಲಿ ವ್ಯಕ್ತಿಯೊಬ್ಬ ಓರ್ವ ಮಹಿಳೆ ಹತ್ಯೆಗೈದು, ಆರು ಜನರ ಮೇಲೆ ಹಲ್ಲೆ ನಡೆಸಿದ್ದಾನೆ. ಈರಯ್ಯ ಅಲಿಯಾಸ್ ಕುಂಡ ಎಂಬುವವನು ಎದುರುಗಡೆ ಮನೆಯವನ ಮೇಲಿನ ಸಿಟ್ಟಿಗೆ ಆತನ  ತಾಯಿಯನ್ನು ಕೊಂದಿದ್ದಾನೆ. ಅಡ್ಡ ಬಂದ ಗರ್ಭಿಣಿ ಪತ್ನಿ ಹಾಗೂ ಅತ್ತೆ, ಮಾವ ಸೇರಿ ಒಟ್ಟು ಆರು ಜನರ ಮೇಲೆ ಹಲ್ಲೆ ನಡೆಸಿದ್ದಾನೆ. ಈ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ನವಿಲೂರು ಎಂಬಲ್ಲಿ ನಡೆದಿದೆ.

ನವಿಲೂರಿನ ನಿಂಗಮ್ಮ(50) ಕೊಲೆಯಾದ ಮಹಿಳೆ. ಈರಯ್ಯ ತಡೆಯಲು ಹೋಗಿದ್ದ ಗರ್ಭಿಣಿ ಪತ್ನಿ ಮಹದೇವಮ್ಮ ಮೇಲೆ ಹಲ್ಲೆ ನಡೆಸಿದ್ದಾನೆ. ಇನ್ನು ಹಲ್ಲೆಗೊಳಗಾದ ಅತ್ತೆ ಗೌರಮ್ಮ ಮತ್ತು ಮಾವ ಸುರೇಶ್ ಅಲಿಯಾಸ್ ಕೂಸು ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳಿಗೆ ಸದ್ಯ ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹಂತಕ ಈರಯ್ಯನನ್ನು ನಂಜನಗೂಡು ಪೊಲೀಸರು ಬಂಧಿಸಿದ್ದಾರೆ.

ಈರಯ್ಯ ಮೊದಲ ಪತ್ನಿಯನ್ನು ಕೊಂದು ಜೈಲಿಗೆ ಹೋಗಿದ್ದ. ಜಾಮೀನಿನ ಮೇಲೆ ಬಿಡುಗಡೆಯಾಗಿ 2ನೇ ಮದುವೆಯಾಗಿದ್ದ. ಆದರೆ ಇದೀಗ ಮತ್ತೆ ಇಬ್ಬರ ಕೊಲೆ ಮಾಡಿದ್ದಾನೆ. ಸ್ಥಳಕ್ಕೆ ಎಸ್​ಪಿ ಆರ್.ಚೇತನ್, ಡಿವೈಎಎಸ್​ಪಿ ಗೋವಿಂದರಾಜ್, ಸರ್ಕಲ್ ಇನ್ಸ್​ಪೆಕ್ಟರ್ ಲಕ್ಷ್ಮಿಕಾಂತ ತಳವಾರ್, ಇನ್ಸ್​ಪೆಕ್ಟರ್ ಶಿವನಂಜಶೆಟ್ಟಿ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಪತ್ನಿ ಪ್ರಿಯಕರ ತಾಯಿ ಸಾವು ಪತ್ನಿ ಪ್ರಿಯಕರನ ಮೇಲಿನ ಕೋಪಕ್ಕೆ ಆರೋಪಿ 7 ಜನರ ಮೇಲೆ ಮಚ್ಚಿನಿಂದ ದಾಳಿ ಮಾಡಿದ್ದಾನೆ. ಪತ್ನಿ ಪ್ರಿಯಕರನ ತಾಯಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೊದಲಿಗೆ ಮನೆಯಲ್ಲಿ ಊಟ ಮಾಡುತ್ತಿದ್ದ ಪತ್ನಿ ಮೇಲೆ ಹಲ್ಲೆ ನಡೆಸಿದ್ದಾನೆ. ಅಡ್ಡ ಹೋಗಿದ್ದ ಅತ್ತೆ ಗೌರಮ್ಮ ಮೇಲೂ ಹಲ್ಲೆ ಮಾಡಿದ್ದಾನೆ. ಬಳಿಕ ಪತ್ನಿ ಪ್ರಿಯಕರ ರವಿಯನ್ನು ಹುಡುಕಾಡಿದ್ದ ಈರಯ್ಯ, ರವಿ ಸಿಗದ ಹಿನ್ನೆಲೆ ಪೋಷಕರ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ್ದಾನೆ. ಹಲ್ಲೆಯಿಂದಾಗಿ ನಿಂಗಮ್ಮ ಸ್ಥಳದಲ್ಲೇ ಕುಸಿದುಬಿದ್ದು ಮೃತಪಟ್ಟಿದ್ದಾರೆ.

ಇದನ್ನೂ ಓದಿ

ತುಮಕೂರಿನಲ್ಲಿ ಅಂಗನವಾಡಿ ಕಾರ್ಯಕರ್ತೆ ನೇಮಕ ವಿವಾದ; 22 ದಿನಗಳಿಂದ ಅಂಗನವಾಡಿ ಬಂದ್

India vs New Zealand Test: 2ನೇ ಟೆಸ್ಟ್​ಗೆ ಟೀಮ್ ಇಂಡಿಯಾದಲ್ಲಿ ಎರಡು ಮಹತ್ವದ ಬದಲಾವಣೆ: ಭಾರತದ ಸಂಭಾವ್ಯ ಪ್ಲೇಯಿಂಗ್ XI ಇಲ್ಲಿದೆ

Published On - 12:19 pm, Thu, 2 December 21

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ