AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಮೊಬೈಲ್ ಬಳಸುವ ವಿಚಾರಕ್ಕೆ ಗಲಾಟೆ: ಮಗನನ್ನೇ ಕೊಂದ ಅಪ್ಪ!

ಮೊಬೈಲ್ ಬಳಸುವ ವಿಚಾರಕ್ಕೆ ತಂದೆ ಮಗನ ನಡುವೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಗಲಾಟೆಯಲ್ಲಿ ತಂದೆಯೇ ಮಗನನ್ನು ಚಾಕುವಿನಿಂದ ಇರಿದು ಕೊಂದಿದ್ದಾನೆ. ಮತ್ತೊಂದೆಡೆ ಆಸ್ತಿ ವಿಚಾರಕ್ಕೆ ಯುವಕನೋರ್ವ ತನ್ನ ಚಿಕ್ಕಪ್ಪನ ಮೇಲೆಯೇ ಹಲ್ಲೆ ಮಾಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಈ ಎರಡೂ ಸುದ್ದಿಗಳ ವಿವರ ಈ ಕೆಳಗಿನಂತಿದೆ.

ಮೈಸೂರು: ಮೊಬೈಲ್ ಬಳಸುವ ವಿಚಾರಕ್ಕೆ ಗಲಾಟೆ: ಮಗನನ್ನೇ ಕೊಂದ ಅಪ್ಪ!
ಪ್ರಾತಿನಿಧಿಕ ಚಿತ್ರ
ರಾಮ್​, ಮೈಸೂರು
| Edited By: |

Updated on: Nov 30, 2023 | 7:54 AM

Share

ಮೈಸೂರು, (ನವೆಂಬರ್ 30): ಮಕ್ಕಳಿಗೆ ಮೊಬೈಲ್‌ (Mobile) ಕೊಟ್ಟರೆ ಊಟ, ಮೊಬೈಲ್‌ ಕೊಟ್ಟರೆ ಸುಮನ್ನಿರುವ ಪರಿಸ್ಥಿತಿ ಬಂದೊದಗಿದೆ. ಕಣ್ಣು ಬಿಟ್ಟು ಸರಿಯಾಗಿ ಜಗತ್ತು ನೋಡದ ಒಂದು ವರ್ಷದ ಮಗುವಿನಿಂದ ಹಿಡಿದು ದೊಡ್ಡವರ ವರೆಗೂ ಮೊಬೈಲ್​ಗೆ ಅಡಿಕ್ಟ್ ಆಗ್ಬಿಟ್ಟಿದ್ದಾರೆ. ಅದರಂತೆ ಮೊಬೈಲ್ ಬಳಸುವ ವಿಚಾರದಲ್ಲಿ ತಂದೆ-ಮಗನ ನಡುವೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಹೌದು…ಮೊಬೈಲ್ ಬಳಸುವ ವಿಚಾರಕ್ಕೆ ಶುರುವಾದ ಜಗಳ ಕೊನೆಗೆ ತಂದೆಯೇ ಮಗನನ್ನು ಕೊಲೆ ಮಾಡಿರುವ ಘಟನೆ ಮೈಸೂರಿನ (Mysuru) ಬನ್ನಿಮಂಟಪದಲ್ಲಿ ನಡೆದಿದೆ.

ಮೊಬೈಲ್ ಬಳಸುವ ವಿಚಾರದಲ್ಲಿ ತಂದೆ ಮಗನ ನಡುವೆ ಗಲಾಟೆ ನಡೆದಿದೆ. ಜಗಳ ವಿಕೋಪಕ್ಕೆ ತಿರುಗಿದ್ದು, ಸಿಟ್ಟಿನಿಂದ ತಂದೆ ಅಸ್ಲಂಪಾಷ, ತನ್ನ ಮಗ ಉಮೇಜ್‌ಗೆ ಚಾಕುವಿನಿಂದ ಇರಿದಿದ್ದಾಣೆ. ಪರಿಣಾಮ ಉಮೇಜ್‌ ಮೃತಪಟ್ಟಿದ್ದಾನೆ. ಈ ಬಗ್ಗೆ ಎನ್.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಅಸ್ಲಂಪಾಷನನ್ನು ಬಂಧಿಸಿದ್ದಾರೆ.

ಅಣ್ಣನ ಮಗನಿಂದ ಚಿಕ್ಕಪ್ಪನ ಮೇಲೆ ಹಲ್ಲೆ

ಮೈಸೂರು: ಜಮೀನಿನ ವಿಚಾರವಾಗಿ ಯುವಕನೋರ್ವ ತನ್ನ ಚಿಕ್ಕಪ್ಪನ ಮೇಲೆ ಹಲ್ಲೆ ಮಾಡಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಮರಳ್ಳಿಪುರ ಗ್ರಾಮದಲ್ಲಿ ನಡೆದಿದೆ. ಪರಶಿವಪ್ಪ ಹಲ್ಲೆಗೊಳಗಾದ ವ್ಯಕ್ತಿ. ಪರಶಿವಪ್ಪರ ಅಣ್ಣನ ಮಗ ಆದೀಶ್ ಎನ್ನುವಾತ ಹಲ್ಲೆ ಮಾಡಿದ್ದಾನೆ. ಸದ್ಯ ಹಲ್ಲೆಗೊಳಗಾಗಿರುವ ಪರಶಿವಪ್ಪನನ್ನು ಮೈಸೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ