AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysuru Road Accident: ಕಾರಿನ ಟೈರ್​ಗಳು ಸ್ಫೋಟ! ತಾಯಿ-ಮಗ ಸಾವು

ಕಾರಿನ ಮುಂಭಾಗದ ಟೈರ್​ಗಳು ಸ್ಫೋಟಗೊಂಡಿವೆ. ಟೈರ್​ಗಳು ಸ್ಫೋಟಗೊಂಡಾಗ ಕಾರು ಕಂಬಕ್ಕೆ ಗುದ್ದಿದೆ. ತಾಯಿ ಮಗ ಕಾರಿನಲ್ಲೆ ಸಾವು. ಈ ವೇಳೆ ತಾಯಿ ಮತ್ತು ಮಗ ಕಾರಿನಲ್ಲೇ ಸಾವನ್ನಪ್ಪಿದ್ದಾರೆ.

Mysuru Road Accident: ಕಾರಿನ ಟೈರ್​ಗಳು ಸ್ಫೋಟ! ತಾಯಿ-ಮಗ ಸಾವು
ಕಾರು ಕಂಬಕ್ಕೆ ಗುದ್ದಿದೆ
TV9 Web
| Updated By: sandhya thejappa|

Updated on: Oct 06, 2021 | 3:00 PM

Share

ಮೈಸೂರು: ಟೈರ್ ಸ್ಫೋಟಗೊಂಡು ಕಾರಿನಲ್ಲಿದ್ದ ತಾಯಿ ಮತ್ತು ಮಗ ಸಾವನ್ನಪ್ಪಿದ್ದಾರೆ. ಈ ಘಟನೆ ಮೈಸೂರಿನ ದಟ್ಟಗಳ್ಳಿ ರಿಂಗ್ ರಸ್ತೆಯಲ್ಲಿ ಸಂಭವಿಸಿದೆ. ದಟ್ಟಗಳ್ಳಿ ರಿಂಗ್ ರಸ್ತೆಯಲ್ಲಿ ಹೋಗುತ್ತಿದ್ದಾಗ ಕಾರಿನ ಟೈರ್​ಗಳು ಸ್ಫೋಟಗೊಂಡಿವೆ. ಈ ವೇಳೆ 12 ವರ್ಷದ ದೈವಿಕ್ ಮತ್ತು 35 ವರ್ಷದ ಗುಣಲಕ್ಷ್ಮೀ ಮೃತಪಟ್ಟಿದ್ದಾರೆ. ಕಾರು ಚಾಲನೆ ಮಾಡುತ್ತಿದ್ದ ಜಗದೀಶ್​ಗೆ ಸಣ್ಣಪುಟ್ಟ ಗಾಯಗಳಾಗಿವೆ. ಮೈಸೂರಿನ ಕುವೆಂಪು ನಗರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರಿನ ಮುಂಭಾಗದ ಟೈರ್​ಗಳು ಸ್ಫೋಟಗೊಂಡಿವೆ. ಟೈರ್​ಗಳು ಸ್ಫೋಟಗೊಂಡಾಗ ಕಾರು ಕಂಬಕ್ಕೆ ಗುದ್ದಿದೆ. ತಾಯಿ ಮಗ ಕಾರಿನಲ್ಲೆ ಸಾವು. ಈ ವೇಳೆ ತಾಯಿ ಮತ್ತು ಮಗ ಕಾರಿನಲ್ಲೇ ಸಾವನ್ನಪ್ಪಿದ್ದಾರೆ. ಕಾರು ಚಾಲನೆ ಮಾಡುತ್ತಿದ್ದ ಪತಿ ಜಗದೀಶ್ಗೆ ಸಣ್ಣಪುಟ್ಟ ಗಾಯಗಳಾಗಿವೆ. ಈ ಘಟನೆ ಇಂದು (ಅ.6) ಮುಂಜಾನೆ 4.30ಕ್ಕೆ ನಡೆದಿದೆ.

ಕುಟುಂಬ ಕುಶಾಲನಗರದಿಂದ ಮೈಸೂರಿಗೆ ವಾಪಸಾಗುತ್ತಿತ್ತು. ಪೂಜೆಗೆಂದು ಕುಶಾಲನಗರಕ್ಕೆ ತೆರಳಿದ್ದರು. ಪೂಜೆ ಮುಗಿಸಿ ವಾಪಸ್ಸು ಬರುವಾಗ ಕಾರಿನ ಟೈರ್​ಗಳು ಬ್ಲಾಸ್ಟ್ ಆಗಿವೆ. ಮನೆಗೆ ಒಂದು ಕಿ.ಮೀ ದೂರದಲ್ಲಿರುವಾಗ ಅಪಘಾತವಾಗಿದೆ. ಕಾರಿನ ಮುಂಭಾಗದ ಗಾಜಿಗೆ ಡಿಕ್ಕಿ ಹೊಡೆದು ಗುಣಲಕ್ಷ್ಮಿ ಸಾವನ್ನಪ್ಪಿದ್ದಾರೆ. ಹಿಂಬದಿ ಸೀಟ್​ನಲ್ಲಿ ಕುಳಿತಿದ್ದ ಪುತ್ರ ದೈವಿಕ್ ಮೃತಪಟ್ಟಿದ್ದಾನೆ. ಸೀಟ್ ಬೆಲ್ಟ್ ಕುತ್ತಿಗೆ ಸಿಕ್ಕಿ ಹಾಕಿಕೊಂಡು ದೈವಿಕ್ ಮೃತಪಟ್ಟಿದ್ದಾನೆ ಎಂದು ಹೇಳಲಾಗುತ್ತಿದೆ. ಜಗದೀಶ್ ಕೈ ಕಾಲಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಜೀವಾಪಾಯದಿಂದ ಪಾರಾಗಿದ್ದಾರೆ.

ಇದನ್ನೂ ಓದಿ

Crime News: ಬಟ್ಟೆಯೊಳಗೆ ಜಿಲೆಟಿನ್ ಇಟ್ಟುಕೊಂಡು ಹೆಂಡತಿಯನ್ನು ತಬ್ಬಿದ ಗಂಡ; ಬಾಂಬ್ ಸ್ಫೋಟಗೊಂಡು ಇಬ್ಬರೂ ಸಾವು!

ಟ್ವಿಟರ್​ನಲ್ಲಿ ಟ್ರೆಂಡ್ ಆಯ್ತು ಜಿಯೋ ನೆಟ್​ವರ್ಕ್​ ಡೌನ್; ನಿಮಗೂ ಎದುರಾಯ್ತಾ ಈ ಸಮಸ್ಯೆ?

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ