AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysuru Road Accident: ಕಾರಿನ ಟೈರ್​ಗಳು ಸ್ಫೋಟ! ತಾಯಿ-ಮಗ ಸಾವು

ಕಾರಿನ ಮುಂಭಾಗದ ಟೈರ್​ಗಳು ಸ್ಫೋಟಗೊಂಡಿವೆ. ಟೈರ್​ಗಳು ಸ್ಫೋಟಗೊಂಡಾಗ ಕಾರು ಕಂಬಕ್ಕೆ ಗುದ್ದಿದೆ. ತಾಯಿ ಮಗ ಕಾರಿನಲ್ಲೆ ಸಾವು. ಈ ವೇಳೆ ತಾಯಿ ಮತ್ತು ಮಗ ಕಾರಿನಲ್ಲೇ ಸಾವನ್ನಪ್ಪಿದ್ದಾರೆ.

Mysuru Road Accident: ಕಾರಿನ ಟೈರ್​ಗಳು ಸ್ಫೋಟ! ತಾಯಿ-ಮಗ ಸಾವು
ಕಾರು ಕಂಬಕ್ಕೆ ಗುದ್ದಿದೆ
TV9 Web
| Edited By: |

Updated on: Oct 06, 2021 | 3:00 PM

Share

ಮೈಸೂರು: ಟೈರ್ ಸ್ಫೋಟಗೊಂಡು ಕಾರಿನಲ್ಲಿದ್ದ ತಾಯಿ ಮತ್ತು ಮಗ ಸಾವನ್ನಪ್ಪಿದ್ದಾರೆ. ಈ ಘಟನೆ ಮೈಸೂರಿನ ದಟ್ಟಗಳ್ಳಿ ರಿಂಗ್ ರಸ್ತೆಯಲ್ಲಿ ಸಂಭವಿಸಿದೆ. ದಟ್ಟಗಳ್ಳಿ ರಿಂಗ್ ರಸ್ತೆಯಲ್ಲಿ ಹೋಗುತ್ತಿದ್ದಾಗ ಕಾರಿನ ಟೈರ್​ಗಳು ಸ್ಫೋಟಗೊಂಡಿವೆ. ಈ ವೇಳೆ 12 ವರ್ಷದ ದೈವಿಕ್ ಮತ್ತು 35 ವರ್ಷದ ಗುಣಲಕ್ಷ್ಮೀ ಮೃತಪಟ್ಟಿದ್ದಾರೆ. ಕಾರು ಚಾಲನೆ ಮಾಡುತ್ತಿದ್ದ ಜಗದೀಶ್​ಗೆ ಸಣ್ಣಪುಟ್ಟ ಗಾಯಗಳಾಗಿವೆ. ಮೈಸೂರಿನ ಕುವೆಂಪು ನಗರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರಿನ ಮುಂಭಾಗದ ಟೈರ್​ಗಳು ಸ್ಫೋಟಗೊಂಡಿವೆ. ಟೈರ್​ಗಳು ಸ್ಫೋಟಗೊಂಡಾಗ ಕಾರು ಕಂಬಕ್ಕೆ ಗುದ್ದಿದೆ. ತಾಯಿ ಮಗ ಕಾರಿನಲ್ಲೆ ಸಾವು. ಈ ವೇಳೆ ತಾಯಿ ಮತ್ತು ಮಗ ಕಾರಿನಲ್ಲೇ ಸಾವನ್ನಪ್ಪಿದ್ದಾರೆ. ಕಾರು ಚಾಲನೆ ಮಾಡುತ್ತಿದ್ದ ಪತಿ ಜಗದೀಶ್ಗೆ ಸಣ್ಣಪುಟ್ಟ ಗಾಯಗಳಾಗಿವೆ. ಈ ಘಟನೆ ಇಂದು (ಅ.6) ಮುಂಜಾನೆ 4.30ಕ್ಕೆ ನಡೆದಿದೆ.

ಕುಟುಂಬ ಕುಶಾಲನಗರದಿಂದ ಮೈಸೂರಿಗೆ ವಾಪಸಾಗುತ್ತಿತ್ತು. ಪೂಜೆಗೆಂದು ಕುಶಾಲನಗರಕ್ಕೆ ತೆರಳಿದ್ದರು. ಪೂಜೆ ಮುಗಿಸಿ ವಾಪಸ್ಸು ಬರುವಾಗ ಕಾರಿನ ಟೈರ್​ಗಳು ಬ್ಲಾಸ್ಟ್ ಆಗಿವೆ. ಮನೆಗೆ ಒಂದು ಕಿ.ಮೀ ದೂರದಲ್ಲಿರುವಾಗ ಅಪಘಾತವಾಗಿದೆ. ಕಾರಿನ ಮುಂಭಾಗದ ಗಾಜಿಗೆ ಡಿಕ್ಕಿ ಹೊಡೆದು ಗುಣಲಕ್ಷ್ಮಿ ಸಾವನ್ನಪ್ಪಿದ್ದಾರೆ. ಹಿಂಬದಿ ಸೀಟ್​ನಲ್ಲಿ ಕುಳಿತಿದ್ದ ಪುತ್ರ ದೈವಿಕ್ ಮೃತಪಟ್ಟಿದ್ದಾನೆ. ಸೀಟ್ ಬೆಲ್ಟ್ ಕುತ್ತಿಗೆ ಸಿಕ್ಕಿ ಹಾಕಿಕೊಂಡು ದೈವಿಕ್ ಮೃತಪಟ್ಟಿದ್ದಾನೆ ಎಂದು ಹೇಳಲಾಗುತ್ತಿದೆ. ಜಗದೀಶ್ ಕೈ ಕಾಲಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಜೀವಾಪಾಯದಿಂದ ಪಾರಾಗಿದ್ದಾರೆ.

ಇದನ್ನೂ ಓದಿ

Crime News: ಬಟ್ಟೆಯೊಳಗೆ ಜಿಲೆಟಿನ್ ಇಟ್ಟುಕೊಂಡು ಹೆಂಡತಿಯನ್ನು ತಬ್ಬಿದ ಗಂಡ; ಬಾಂಬ್ ಸ್ಫೋಟಗೊಂಡು ಇಬ್ಬರೂ ಸಾವು!

ಟ್ವಿಟರ್​ನಲ್ಲಿ ಟ್ರೆಂಡ್ ಆಯ್ತು ಜಿಯೋ ನೆಟ್​ವರ್ಕ್​ ಡೌನ್; ನಿಮಗೂ ಎದುರಾಯ್ತಾ ಈ ಸಮಸ್ಯೆ?

ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್