AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನಲ್ಲಿ 4 ವರ್ಷದ ಹೆತ್ತ ಮಗನನ್ನೇ ಕೊಚ್ಚಿ ಕೊಲೆಗೈದ ತಾಯಿ!

ಬೂದನೂರಿನ ಶಂಕರ್ ಜೊತೆ 5 ವರ್ಷದ ಹಿಂದೆ ಭವಾನಿ ಮದುವೆ ಆಗಿತ್ತು. ಭವಾನಿ ಮೈ ಮೇಲೆ ದೇವರು ಬರುತ್ತೆ ಅನ್ನುತ್ತಿದ್ದಳು. ಇತ್ತೀಚೆಗೆ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಭವಾನಿ, ಗಂಡನೊಂದಿಗೆ ಗಲಾಟೆ ಮಾಡಿಕೊಂಡು ಮಗು ಸಹಿತ ತವರು ಮನೆ ಸೇರಿದ್ದಳು.

ಮೈಸೂರಿನಲ್ಲಿ 4 ವರ್ಷದ ಹೆತ್ತ ಮಗನನ್ನೇ ಕೊಚ್ಚಿ ಕೊಲೆಗೈದ ತಾಯಿ!
ಕೊಲೆಯಾದ ಮಗು
TV9 Web
| Edited By: |

Updated on:Jan 11, 2022 | 9:27 AM

Share

ಮೈಸೂರು: ತಾಯಿ ಹೆತ್ತ ಮಗನನ್ನೇ ಕೊಚ್ಚಿ ಕೊಲೆಗೈದ ಘಟನೆ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಬೂದನೂರು ಗ್ರಾಮದಲ್ಲಿ ನಡೆದಿದೆ. ತಾಯಿ ಭವಾನಿ ಮಾನಸಿಕ ಅಸ್ವಸ್ಥರಾಗಿದ್ದು, 4 ವರ್ಷದ ಶ್ರೀನಿವಾಸ್ ಎಂಬ ಮಗನನ್ನು ಮಚ್ಚಿನಿಂದ ಕೊಚ್ಚಿ ಹತ್ಯೆಗೈದಿದ್ದಾಳೆ. ಪತಿ ಶಂಕರ್ ಮನೆಯಲ್ಲಿ ಇಲ್ಲದಿದ್ದಾಗ ಭವಾನಿ ಈ ಕೃತ್ಯ ಎಸಗಿದ್ದಾಳೆ ಎಂದು ತಿಳಿದುಬಂದಿದೆ. ಸದ್ಯ ಎಚ್.ಡಿ.ಕೋಟೆ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.

ಬೂದನೂರಿನ ಶಂಕರ್ ಜೊತೆ 5 ವರ್ಷದ ಹಿಂದೆ ಭವಾನಿ ಮದುವೆ ಆಗಿತ್ತು. ಭವಾನಿ ಮೈ ಮೇಲೆ ದೇವರು ಬರುತ್ತೆ ಅನ್ನುತ್ತಿದ್ದಳು. ಇತ್ತೀಚೆಗೆ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಭವಾನಿ, ಗಂಡನೊಂದಿಗೆ ಗಲಾಟೆ ಮಾಡಿಕೊಂಡು ಮಗು ಸಹಿತ ತವರು ಮನೆ ಸೇರಿದ್ದಳು. ಪತಿ ಶಂಕರ್ ಸಮಾಧಾನಪಡಿಸಿ ವಾಪಸ್ಸು ಕರೆತಂದಿದ್ದರು.

ಕೆಲಸದ ನಿಮಿತ್ತ ಪತಿ ಹೊರಗಡೆ ಹೋಗಿದ್ದಾಗ ತನ್ನ ಮಗುವನ್ನ ತಾಯಿ ಭವಾನಿ ಕೊಲೆ ಮಾಡಿದ್ದಾಳೆ. ಮಚ್ಚಿನಿಂದ ತಲೆಗೆ ನಾಲ್ಕೈದು ಬಾರಿ ಹೊಡೆದಿದ್ದಾಳೆ. ವಿಷಯ ತಿಳಿಯುತ್ತಿದ್ದಂತೆ ಪತಿ ಶಂಕರ್ ಗ್ರಾಮಸ್ಥರ ನೆರವಿನಿಂದ ಎಚ್.ಡಿ.ಕೋಟೆಯ ತಾಲೂಕು ಆಸ್ಪತ್ರೆಗೆ ಮಗುವನ್ನು ಸೇರಿಸಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಗು ಶ್ರೀನಿವಾಸ್ ಮೃತಪಟ್ಟಿದೆ.

ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ!                                                                                                                                                              ಮೈಸೂರಿನ ಗನ್ ಹೌಸ್ ವೃತ್ತದ ಬಳಿ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ವೈದ್ಯ ತಕ್ಷಣ ಕಾರಿಂದ ಇಳಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬ್ಯಾಟರಿ ಶಾರ್ಟ್ ಸರ್ಕ್ಯೂಟ್ನಿಂದ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಕುವೆಂಪು ನಗರದ ವೈದ್ಯ ಭೂಷಣ್ ಅವರ ಐ20 ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ. ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ.

ಇದನ್ನೂ ಓದಿ

ಮಕ್ಕಳಲ್ಲಿ ಹೆಚ್ಚಾದ ಕೊರೊನಾ, ಶಾಲೆಗಳನ್ನು ಬಂದ್ ಮಾಡುವಂತೆ ಶಾಸಕ ಸುರೇಶ್ ಗೌಡ ಒತ್ತಾಯ

ಪಾದಯಾತ್ರೆಯಲ್ಲಿ ಇಂದಿನಿಂದ ಡಿಕೆ ಶಿವಕುಮಾರ್ 3 ದಿನ‌ ಮೌನ! ಸುಪ್ರೀಂಕೋರ್ಟ್​ನಲ್ಲಿಂದು ತಮಿಳುನಾಡು ಮೇಲ್ಮನವಿ ವಿಚಾರಣೆ

Published On - 9:25 am, Tue, 11 January 22

ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ