AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನಲ್ಲಿ 4 ವರ್ಷದ ಹೆತ್ತ ಮಗನನ್ನೇ ಕೊಚ್ಚಿ ಕೊಲೆಗೈದ ತಾಯಿ!

ಬೂದನೂರಿನ ಶಂಕರ್ ಜೊತೆ 5 ವರ್ಷದ ಹಿಂದೆ ಭವಾನಿ ಮದುವೆ ಆಗಿತ್ತು. ಭವಾನಿ ಮೈ ಮೇಲೆ ದೇವರು ಬರುತ್ತೆ ಅನ್ನುತ್ತಿದ್ದಳು. ಇತ್ತೀಚೆಗೆ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಭವಾನಿ, ಗಂಡನೊಂದಿಗೆ ಗಲಾಟೆ ಮಾಡಿಕೊಂಡು ಮಗು ಸಹಿತ ತವರು ಮನೆ ಸೇರಿದ್ದಳು.

ಮೈಸೂರಿನಲ್ಲಿ 4 ವರ್ಷದ ಹೆತ್ತ ಮಗನನ್ನೇ ಕೊಚ್ಚಿ ಕೊಲೆಗೈದ ತಾಯಿ!
ಕೊಲೆಯಾದ ಮಗು
TV9 Web
| Edited By: sandhya thejappa|

Updated on:Jan 11, 2022 | 9:27 AM

Share

ಮೈಸೂರು: ತಾಯಿ ಹೆತ್ತ ಮಗನನ್ನೇ ಕೊಚ್ಚಿ ಕೊಲೆಗೈದ ಘಟನೆ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಬೂದನೂರು ಗ್ರಾಮದಲ್ಲಿ ನಡೆದಿದೆ. ತಾಯಿ ಭವಾನಿ ಮಾನಸಿಕ ಅಸ್ವಸ್ಥರಾಗಿದ್ದು, 4 ವರ್ಷದ ಶ್ರೀನಿವಾಸ್ ಎಂಬ ಮಗನನ್ನು ಮಚ್ಚಿನಿಂದ ಕೊಚ್ಚಿ ಹತ್ಯೆಗೈದಿದ್ದಾಳೆ. ಪತಿ ಶಂಕರ್ ಮನೆಯಲ್ಲಿ ಇಲ್ಲದಿದ್ದಾಗ ಭವಾನಿ ಈ ಕೃತ್ಯ ಎಸಗಿದ್ದಾಳೆ ಎಂದು ತಿಳಿದುಬಂದಿದೆ. ಸದ್ಯ ಎಚ್.ಡಿ.ಕೋಟೆ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.

ಬೂದನೂರಿನ ಶಂಕರ್ ಜೊತೆ 5 ವರ್ಷದ ಹಿಂದೆ ಭವಾನಿ ಮದುವೆ ಆಗಿತ್ತು. ಭವಾನಿ ಮೈ ಮೇಲೆ ದೇವರು ಬರುತ್ತೆ ಅನ್ನುತ್ತಿದ್ದಳು. ಇತ್ತೀಚೆಗೆ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಭವಾನಿ, ಗಂಡನೊಂದಿಗೆ ಗಲಾಟೆ ಮಾಡಿಕೊಂಡು ಮಗು ಸಹಿತ ತವರು ಮನೆ ಸೇರಿದ್ದಳು. ಪತಿ ಶಂಕರ್ ಸಮಾಧಾನಪಡಿಸಿ ವಾಪಸ್ಸು ಕರೆತಂದಿದ್ದರು.

ಕೆಲಸದ ನಿಮಿತ್ತ ಪತಿ ಹೊರಗಡೆ ಹೋಗಿದ್ದಾಗ ತನ್ನ ಮಗುವನ್ನ ತಾಯಿ ಭವಾನಿ ಕೊಲೆ ಮಾಡಿದ್ದಾಳೆ. ಮಚ್ಚಿನಿಂದ ತಲೆಗೆ ನಾಲ್ಕೈದು ಬಾರಿ ಹೊಡೆದಿದ್ದಾಳೆ. ವಿಷಯ ತಿಳಿಯುತ್ತಿದ್ದಂತೆ ಪತಿ ಶಂಕರ್ ಗ್ರಾಮಸ್ಥರ ನೆರವಿನಿಂದ ಎಚ್.ಡಿ.ಕೋಟೆಯ ತಾಲೂಕು ಆಸ್ಪತ್ರೆಗೆ ಮಗುವನ್ನು ಸೇರಿಸಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಗು ಶ್ರೀನಿವಾಸ್ ಮೃತಪಟ್ಟಿದೆ.

ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ!                                                                                                                                                              ಮೈಸೂರಿನ ಗನ್ ಹೌಸ್ ವೃತ್ತದ ಬಳಿ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ವೈದ್ಯ ತಕ್ಷಣ ಕಾರಿಂದ ಇಳಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬ್ಯಾಟರಿ ಶಾರ್ಟ್ ಸರ್ಕ್ಯೂಟ್ನಿಂದ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಕುವೆಂಪು ನಗರದ ವೈದ್ಯ ಭೂಷಣ್ ಅವರ ಐ20 ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ. ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ.

ಇದನ್ನೂ ಓದಿ

ಮಕ್ಕಳಲ್ಲಿ ಹೆಚ್ಚಾದ ಕೊರೊನಾ, ಶಾಲೆಗಳನ್ನು ಬಂದ್ ಮಾಡುವಂತೆ ಶಾಸಕ ಸುರೇಶ್ ಗೌಡ ಒತ್ತಾಯ

ಪಾದಯಾತ್ರೆಯಲ್ಲಿ ಇಂದಿನಿಂದ ಡಿಕೆ ಶಿವಕುಮಾರ್ 3 ದಿನ‌ ಮೌನ! ಸುಪ್ರೀಂಕೋರ್ಟ್​ನಲ್ಲಿಂದು ತಮಿಳುನಾಡು ಮೇಲ್ಮನವಿ ವಿಚಾರಣೆ

Published On - 9:25 am, Tue, 11 January 22

Follow Us
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು