AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಸಿದ್ದರಾಮಯ್ಯ ಕ್ಷೇತ್ರದಲ್ಲಿ ಮೈಸೂರಿನ ರೈತ 19 ಲಕ್ಷದ ಸಾಲ ತೀರಿಸಿದ್ದರೂ ಮನೆ ಹರಾಜಿಗೆ ಹಾಕಿದ ಗ್ರಾಮೀಣ ಬ್ಯಾಂಕ್‌?

ಮೈಸೂರಿನ ರೈತ ದೊರೆಸ್ವಾಮಿ ಹೇಳುವಂತೆ ಇದುವರೆಗೂ ಬಡ್ಡಿ ಸೇರಿ 18, 98,000 ರೂಪಾಯಿ ಸಾಲ ಮರು ಪಾವತಿ ಮಾಡಿದರಂತೆ. ಆದರೂ ಬ್ಯಾಂಕ್‌ನವರು ದೊರೆಸ್ವಾಮಿ ಅವರ ಮನೆಯನ್ನು ಏಕ ವ್ಯಕ್ತಿಗೆ ಹರಾಜು ಹಾಕಿದ್ದಾರಂತೆ.

ಸಿಎಂ ಸಿದ್ದರಾಮಯ್ಯ ಕ್ಷೇತ್ರದಲ್ಲಿ ಮೈಸೂರಿನ ರೈತ 19 ಲಕ್ಷದ ಸಾಲ ತೀರಿಸಿದ್ದರೂ ಮನೆ ಹರಾಜಿಗೆ ಹಾಕಿದ ಗ್ರಾಮೀಣ ಬ್ಯಾಂಕ್‌?
ಮೈಸೂರಿನ ರೈತ ಸಾಲ ತೀರಿಸಿದ್ದರೂ ಮನೆ ಹರಾಜಿಗೆ ಹಾಕಿದ ಗ್ರಾಮೀಣ ಬ್ಯಾಂಕ್‌?
ರಾಮ್​, ಮೈಸೂರು
| Edited By: |

Updated on: Jan 17, 2024 | 2:13 PM

Share

ರೈತ ದೇಶದ ಬೆನ್ನೆಲುಬು, ಅನ್ನದಾತ ಅನ್ನೋದು ಕೇವಲ ಘೋಷಣೆಗಷ್ಟೇ ಸೀಮಿತವಾಗಿದೆ. ಇದಕ್ಕೆ ಸಾಕ್ಷಿ ರೈತರಿಗೆ ಆಗುತ್ತಿರುವ ಮೋಸ. ಮೈಸೂರಿನಲ್ಲಿ ಬ್ಯಾಂಕೊಂದು ಸಾಲ ಪಡೆದ ರೈತ ಸಾಲ ತೀರಿಸಿದ್ದರೂ ಸಹ ಮನೆ ಹರಾಜು ಹಾಕಿದ ಆರೋಪ ಕೇಳಿ ಬಂದಿದೆ. ಬ್ಯಾಂಕ್ ಒಳಗೆ ರೈತರ ಮಾತಿನ ಚಕಮಕಿ. ಹಸಿರು ಶಾಲು ಹಿಡಿದು ಕುಳಿತ ಅನ್ನದಾತರು. ಅಂದ್ಹಾಗೆ ಇದು ಮೈಸೂರಿನ ವಿಜಯನಗರ ಬಡಾವಣೆಯ ಕರ್ನಾಟಕ ಗ್ರಾಮೀಣ ಬ್ಯಾಂಕ್‌ನ ಮುಖ್ಯ ಕಚೇರಿಯಲ್ಲಿ ನಿನ್ನೆ ನಡೆದಿರುವ ಘಟನೆ. ಇದಕ್ಕೆ ಕಾರಣ ಬ್ಯಾಂಕ್‌ನ ಸಿಬ್ಬಂದಿ. ಹೌದು ರೈತ ದೊರೆಸ್ವಾಮಿ ಎಂಬುವವರು ಕಾವೇರಿ ಗ್ರಾಮೀಣ ಬ್ಯಾಂಕ್‌ನಿಂದ ತಮ್ಮ ಮನೆ ಪತ್ರ ನೀಡಿ 15 ಲಕ್ಷ ಸಾಲ ಪಡೆದಿದ್ರು. ಸಾಲ ಪಡೆದ ನಂತರ ಪ್ರತಿ ತಿಂಗಳು ತಮ್ಮ ಕೈಲಾದಷ್ಟು ಬಡ್ಡಿ ಅಸಲು ಕಟ್ಟುತ್ತಿದ್ದರು. ಹೀಗಿದ್ದರೂ ಬ್ಯಾಂಕ್‌ನವರು ದೊರೆಸ್ವಾಮಿ ಅವರ ಮನೆಯನ್ನು ಹರಾಜು ಹಾಕಿದ್ದಾರಂತೆ.

Also Read: ಧಾರವಾಡ ಕರ್ನಾಟಕ ವಿವಿಯಲ್ಲಿ 10 ವರ್ಷ ಹಿಂದಿನ ಅಕ್ರಮಗಳ ತನಿಖೆಗೆ ಮರುಜೀವ ನೀಡಿದ ರಾಜ್ಯಪಾಲ, ಆರೋಪಿಗಳ ಎದೆಯಲ್ಲಿ ಢವಢವ

ದೊರೆಸ್ವಾಮಿ ಪ್ರಕಾರ ಇದುವರೆಗೂ ಬಡ್ಡಿ ಸೇರಿ 18, 98,000 ರೂಪಾಯಿ ಸಾಲ ಮರು ಪಾವತಿ ಮಾಡಿದ್ದಾರಂತೆ. ಆದರೂ ಬ್ಯಾಂಕ್‌ನವರು ದೊರೆಸ್ವಾಮಿ ಅವರ ಮನೆಯನ್ನು ಏಕ ವ್ಯಕ್ತಿಗೆ ಹರಾಜು ಹಾಕಿದ್ದಾರಂತೆ. ಈ ಕಾರಣಕ್ಕೆ ನಿನ್ನೆ ಮಂಗಳವಾರ 50 ಕ್ಕೂ ಹೆಚ್ಚು ರೈತರು ಕರ್ನಾಟಕ ಗ್ರಾಮೀಣ ಬ್ಯಾಂಕ್‌ಗೆ ಮುತ್ತಿಗೆ ಹಾಕಿದ್ರು. ಇನ್ನು ಬ್ಯಾಂಕ್‌ನವರು ದೊರೆಸ್ವಾಮಿ ಅವರ ಆಸ್ತಿ ಕಬಳಿಸಲು ಈ ರೀತಿ ಮಾಡಿದ್ದಾರೆ ಅನ್ನೋದು ರೈತರ ಆರೋಪ.

ಇನ್ನು ಈ ಬಗ್ಗೆ ಬ್ಯಾಂಕ್‌ನವರು ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ‌. ಆದರೆ ರೈತರಿಗೆ ಈ ಬಗ್ಗೆ ಪರಿಶೀಲನೆ ಮಾಡಿ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಇದೆಲ್ಲಾ ಏನೇ ಇರಲಿ. ಮೊದಲೇ ಸಂಕಷ್ಟದಲ್ಲಿರುವ ಅನ್ನದಾತರಿಗೆ ಇದು ಒಂದು ರೀತಿ ಗಾಯದ ಮೇಲೆ ಬರೆ ಎಳೆದಂತಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ