Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ವಿವಿಯ ದೈಹಿಕ ಶಿಕ್ಷಣ ವಿಭಾಗದ ಮುಖ್ಯಸ್ಥರಿಂದ ಹಲ್ಲೆ ಆರೋಪ; ಕುಲಸಚಿವರ ಕಚೇರಿ ಎದುರೇ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನ

ಮೈಸೂರು ವಿಶ್ವ ವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ಮುಖ್ಯಸ್ಥ ಹಾಗೂ ಉಪನ್ಯಾಸಕರು ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ ವಿದ್ಯಾರ್ಥಿಯೋರ್ವ ಕುಲಸಚಿವರ ಎದುರೇ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಕೂಡಲೇ ಇತರ ವಿದ್ಯಾರ್ಥಿಗಳು ಆಸ್ಪತ್ರೆಗೆ ಸೇರಿಸಿದ್ದಾರೆ.

ಮೈಸೂರು ವಿವಿಯ ದೈಹಿಕ ಶಿಕ್ಷಣ ವಿಭಾಗದ ಮುಖ್ಯಸ್ಥರಿಂದ ಹಲ್ಲೆ ಆರೋಪ; ಕುಲಸಚಿವರ ಕಚೇರಿ ಎದುರೇ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನ
ಆತ್ಮಹತ್ಯೆಗೆ ಯತ್ನಿಸಿದ ಯುವಕ
Follow us
ದಿಲೀಪ್​, ಚೌಡಹಳ್ಳಿ
| Updated By: ಕಿರಣ್ ಹನುಮಂತ್​ ಮಾದಾರ್

Updated on: Sep 09, 2023 | 3:24 PM

ಮೈಸೂರು, ಸೆ.09: ಮೈಸೂರು ವಿಶ್ವ ವಿ‌ದ್ಯಾಲಯ (Mysore University)ದ ಕುಲಸಚಿವರ ಕಚೇರಿ ಎದುರೇ ವಿದ್ಯಾರ್ಥಿಯೋರ್ವ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ದೈಹಿಕ ಶಿಕ್ಷಣ ವಿಭಾಗದ ಗಗನ್ ಎಂಬಾತ ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿ. ಇತ ದೈಹಿಕ ಶಿಕ್ಷಣ ವಿಭಾಗದ ಮುಖ್ಯಸ್ಥ ವೆಂಕಟೇಶ್​ ಅವರು ನನ್ನ ಮೇಲೆ ಹಲ್ಲೆ ಮಾಡಿದ್ದು ಮತ್ತು ಉಪನ್ಯಾಸಕರ ಕಿರುಕುಳ ನೀಡುತ್ತಿದ್ದಾರೆಂದು ಪೊಲೀಸರಿಗೆ ದೂರು ಕೊಟ್ಟಿದ್ದ. ಆದರೆ, ಪೊಲೀಸ್​ ಅಧಿಕಾರಿಗಳು ಮಾತ್ರ ದೂರು ಕೊಟ್ಟರು ಕ್ರಮ ಕೈಗೊಳ್ಳದ ಹಿನ್ನಲೆ ವಿದ್ಯಾರ್ಥಿ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಮಾತ್ರೆ ಸೇವಿಸಿ ಸೆಲ್ಪಿ ವೀಡಿಯೋ ಮಾಡಲು ಮುಂದಾದ ವಿದ್ಯಾರ್ಥಿ

ಇನ್ನು ಗಗನ್ ಮಾತ್ರೆ ಸೇವಿಸಿ ಸೆಲ್ಪಿ ವೀಡಿಯೋ ಮಾಡಲು ಮುಂದಾಗಿದ್ದಾನೆ. ಕೂಡಲೇ ಆತ್ಮಹತ್ಯೆಗೆ ಯತ್ನಿಸಿದ ಗಗನ್​ನನ್ನು ವಿದ್ಯಾರ್ಥಿಗಳು ಆಸ್ಪತ್ರೆಗೆ ಸಾಗಿಸಿ, ರಕ್ಷಣೆ ಮಾಡಿದ್ದಾರೆ. ಇದೀಗ ಮೈಸೂರಿನ ಒಂಟಿಕೊಪ್ಪಲಿನಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಆಸ್ಪತ್ರೆಯಲ್ಲಿ ಸಾವು-ಬದುಕಿನ ಮಧ್ಯೆ ಗಗನ್ ಹೋರಾಟ ನಡೆಸುತ್ತಿದ್ದಾರೆ.

ಇದನ್ನೂ ಓದಿ:ಕುಡಿದು ಸತ್ತಿದ್ದರೂ ಪರಿಹಾರದ ಆಸೆಗೆ ಆತ್ಮಹತ್ಯೆ ಅಂತಾರೆ: ಅನ್ನದಾತನ ಬಗ್ಗೆ ಶಿವಾನಂದ ಪಾಟೀಲ್ ಅವಹೇಳನ ಹೇಳಿಕೆ

ದಶಪಥ ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು

ಮಂಡ್ಯ: ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯ ಗೌಡಹಳ್ಳಿ ಗೇಟ್ ಬಳಿ ಕಾರೊಂದು ಹೊತ್ತಿ ಉರಿದ ಘಟನೆ ನಡೆದಿದೆ. ತಮಿಳುನಾಡು ಮೂಲದ ಬಟ್ಟೆ ವ್ಯಾಪಾರಿಯೊಬ್ಬರಿಗೆ ಸೇರಿದ ಕಾರು ಇದಾಗಿದ್ದು, ಬೆಂಗಳೂರು ಕಡೆಯಿಂದ ಮೈಸೂರು ಕಡೆಗೆ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ. ಇಂಜಿನ್​ನಲ್ಲಿ ಹೊಗೆ ಕಾಣಿಸಿಕೊಂಡ ಕೂಡಲೇ ಚಾಲಕ ಕಾರು ನಿಲ್ಲಿಸಿದ್ದಾರೆ. ಕೂಡಲೇ ಕಾರಿನಿಂದ ಲಗ್ಗೆಜ್ ಕೆಳಗೆ ತೆಗದುಕೊಳ್ಳುವಷ್ಟರಲ್ಲಿ ಕಾರು ಸುಟ್ಟು ಭಸ್ಮವಾಗಿದ್ದು, ಈ ಕುರಿತು ಶ್ರೀರಂಗಪಟ್ಟಣ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್