AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಕಬಿನಿ ಹಿನ್ನೀರಿನಲ್ಲಿ ಮೀನು ಹಿಡಿಯಲು ಹೋಗಿದ್ದ ಆದಿವಾಸಿ ಸಾವು

ಹೆಚ್.ಡಿ ಕೋಟೆ ತಾಲೂಕಿನ ಕಬಿನಿ ಹಿನ್ನೀರಿನಲ್ಲಿ ಮೀನು ಹಿಡಿಯಲು ಹೋಗಿದ್ದಾಗ, ಕೆಸರಿನಲ್ಲಿ ಸಿಲುಕಿ ಬಳ್ಳೆ ಹಾಡಿಯ ನಿವಾಸಿ ಮಾಸ್ತಿ(30) ಎಂಬಾತ ಸಾವನ್ನಪ್ಪಿದ್ದಾನೆ.

ಮೈಸೂರು: ಕಬಿನಿ ಹಿನ್ನೀರಿನಲ್ಲಿ ಮೀನು ಹಿಡಿಯಲು ಹೋಗಿದ್ದ ಆದಿವಾಸಿ ಸಾವು
ಮೃತ ಯುವಕ
ಕಿರಣ್ ಹನುಮಂತ್​ ಮಾದಾರ್
|

Updated on:Apr 21, 2023 | 7:53 AM

Share

ಮೈಸೂರು: ಹೆಚ್.ಡಿ ಕೋಟೆ ತಾಲೂಕಿನ ಕಬಿನಿ(Kabini) ಹಿನ್ನೀರಿನಲ್ಲಿ ಮೀನು ಹಿಡಿಯಲು ಹೋಗಿದ್ದಾಗ, ಕೆಸರಿನಲ್ಲಿ ಸಿಲುಕಿ ಬಳ್ಳೆ ಹಾಡಿಯ ನಿವಾಸಿ ಮಾಸ್ತಿ(30) ಎಂಬಾತ ಸಾವನ್ನಪ್ಪಿದ್ದಾನೆ. ಐವರು ಸೇರಿ ಕಬಿನಿ ಹಿನ್ನೀರಿನಲ್ಲಿ ಮೀನು ಹಿಡಿಯಲು ಹೋಗಿದ್ದು, ಈ ವೇಳೆ ಅರಣ್ಯ ಇಲಾಖೆ ಸಿಬ್ಬಂದಿ ಬಂದಿದ್ದಾರೆ. ಅವರನ್ನ ಕಂಡು ಭಯದಿಂದ ಕಾಲ್ಕಿತ್ತಿದ್ದಾರೆ. ಹೀಗೆ ಓಡುತ್ತಿದ್ದಾಗ ಮಾಸ್ತಿ ಎಂಬಾತ ಹಿನ್ನೀರಿನ ಕೆಸರಿನಲ್ಲಿ ಸಿಲುಕಿ ಸಾವಿಗೀಡಾಗಿದ್ದಾನೆ. ನಾಗರಹೊಳೆ ಅರಣ್ಯ ವ್ಯಾಪ್ತಿಯ ಕಬಿನಿ ಹಿನ್ನೀರಿನ ಬಳಿ ಘಟನೆ ನಡೆದಿದ್ದು, ಅಂತರಸಂತೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಬೀದಿನಾಯಿಗಳಿಂದ 9 ವರ್ಷದ ಬಾಲಕನ ಮೇಲೆ ದಾಳಿ

ಕೋಲಾರ: ರಮಹತ್ ನಗರದ 9 ವರ್ಷದ ಜಾಫರ್ ಎಂಬ‌ ಬಾಲಕನ ಮೇಲೆ ಬೀದಿ ನಾಯಿಗಳು ದಾಳಿ ಮಾಡಿವೆ. ತಡರಾತ್ರಿ ಮನೆಯಿಂದ‌ ಹೊರಬಂದ ಜಾಫರ್ ಮೇಲೆ ನಾಯಿಗಳು ಮುಗ್ಗಿಬಿದ್ದಿದ್ದು, ದೇಹದ ಎಲ್ಲೆಡೆ ಕಚ್ಚಿ ಗಾಯಗೊಳಿಸಿವೆ. ಈ ವೇಳೆ ಪೊಲೀಸ್ ಪೇದೆಯೊಬ್ಬರು ನಾಯಿಗಳಿಂದ‌ ಬಾಲಕನನ್ನು ರಕ್ಷಣೆ ಮಾಡಿದ್ದಾರೆ. ಬಳಿಕ ಕೋಲಾರದ‌ ಖಾಸಗಿ ಆಸ್ಪತ್ರೆಗೆ ಬಾಲಕನನ್ನ ದಾಖಲು ಮಾಡಲಾಗಿದ್ದು, ಗಲ್ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ‌ಈ ಘಟನೆ ನಡೆದಿದೆ.

ಇದನ್ನೂ ಓದಿ:ಶ್ಯಾಮ್‌ ಪ್ರಸಾದ್‌ ಶಾಸ್ತ್ರಿ ಆತ್ಮಹತ್ಯೆಗೆ ಪ್ರಚೋದನೆ ಆರೋಪ: ರಾಘವೇಶ್ವರ ಶ್ರೀ, ಕಲ್ಲಡ್ಕ ಭಟ್ ವಿರುದ್ಧದ ಪ್ರಕರಣ ರದ್ದು

ಗಾಲ್ಫ್ ಬಾಲ್ ಬಿದ್ದು ಕಾರಿನ ಗಾಜು ಜಖಂ, ಚಾಲಕನಿಗೆ ಗಾಯ

ಬೆಂಗಳೂರು: ಚಲಿಸುತ್ತಿದ್ದ ಕಾರಿನ ಮುಂಭಾಗದ ಗ್ಲಾಸ್ ಮೇಲೆ ಗಾಲ್ಫ್ ಬಾಲ್ ಬಿದ್ದು ಕಾರಿನ ಗಾಜು ಜಖಂ ಆಗಿದ್ದು, ಚಾಲಕನಿಗೆ ಗಾಯವಾಗಿರುವಂತಹ ಘಟನೆ ನಿನ್ನೆ(ಏ.20) ಬೆಳಗ್ಗೆ 10:30ರ ವೇಳೆಗೆ ಓಲ್ಡ್ ಹೈಗ್ರೌಂಡ್ಸ್ ಜಂಕ್ಷನ್ ಬಳಿ ನಡೆದಿದೆ. ಕಾರಿನಲ್ಲಿ ತೆರಳುತ್ತಿದ್ದ ವಕೀಲ ಗಿರೀಶ್ ದೂರಿನ ಮೇರೆಗೆ ಗಾಲ್ಫ್ ಆಡಳಿತ ಮಂಡಳಿ ಹಾಗೂ ಆಟಗಾರರ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು ಮಾಡಲಾಗಿದೆ. ಮತ್ತೊಂದು ಪ್ರಕರಣದಲ್ಲಿ ಸೇಬಿಗಾಗಿ ಮುಗಿಬಿದ್ದ ಕಾಂಗ್ರೆಸ್ ಕಾರ್ಯಕರ್ತರಿಗೆ ಲಾಠಿಚಾರ್ಜ್​​ ಮಾಡಿರುವಂತಹ ಘಟನೆ ನೆಲಮಂಗಲದಲ್ಲಿ ನಡೆದಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ಮುಖಂಡರು ಆ್ಯಪಲ್​ ಹಾರ ಹಾಕಿದ್ದರು. ಈ ವೇಳೆ ಹಾರದಲ್ಲಿದ್ದ ಸೇಬು ಕಿತ್ತುಕೊಳ್ಳಲು ಕಾರ್ಯಕರ್ತರ ನಡುವೆ ತಳ್ಳಾಟ ಉಂಟಾಗಿದೆ. ಹಾಗಾಗಿ ಲಾಠಿ ಪ್ರಹಾರ ನಡೆಸಿ ಪೊಲೀಸರು ಕಾರ್ಯಕರ್ತರನ್ನು ಚದುರಿಸಿದ್ದರು.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:53 am, Fri, 21 April 23

Follow Us
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ