AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ನಂಜನಗೂಡಿನ ಬಳ್ಳೂರ್ ಹುಂಡಿಯಲ್ಲಿ ಹುಲಿ ದಾಳಿಗೆ ಮಹಿಳೆ ಬಲಿ

ನಂಜನಗೂಡು ತಾಲೂಕಿನಲ್ಲಿ ಹುಲಿ ಕಾಣಿಸಿಕೊಳ್ಳುತ್ತಿದ್ದು, ಸಾಕು ಪ್ರಾಣಿಗಳ ಮೇಲೆ ದಾಳಿ ನಡೆಸಿ ಕೊಂದು ಹಾಕುತ್ತಿವೆ. 20 ದಿನಗಳ ಹಿಂದೆ ಜೇನುಕಟ್ಟೆ ಗ್ರಾಮದಲ್ಲಿ ಹುಲಿಯೊಂದು ಹಸುವನ್ನು ಕೊಂದು ಅದರ ಮಾಲೀಕ ಮೇಲೆ ದಾಳಿ ನಡೆಸಿತ್ತು. ಬಳಿಕ ಇದೇ ಪ್ರದೇಶದಲ್ಲಿ ಎತ್ತು ಬಲಿಯಾಗಿತ್ತು. ಇದೀಗ ಬಳ್ಳೂರ್ ಹುಂಡಿಯಲ್ಲಿ ಹುಲಿ ದಾಳಿಗೆ ಮಹಿಳೆಯೊಬ್ಬರು ಬಲಿಯಾಗಿದ್ದಾರೆ.

ಮೈಸೂರು: ನಂಜನಗೂಡಿನ ಬಳ್ಳೂರ್ ಹುಂಡಿಯಲ್ಲಿ ಹುಲಿ ದಾಳಿಗೆ ಮಹಿಳೆ ಬಲಿ
ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಬಳ್ಳೂರ್ ಹುಂಡಿಯಲ್ಲಿ ಹುಲಿ ದಾಳಿಗೆ ಮಹಿಳೆ ಬಲಿ (ಸಾಂದರ್ಭಿಕ ಚಿತ್ರ) Image Credit source: PTI
ದಿಲೀಪ್​, ಚೌಡಹಳ್ಳಿ
| Edited By: |

Updated on: Nov 24, 2023 | 6:00 PM

Share

ಮೈಸೂರು, ನ.24: ನಂಜನಗೂಡು ತಾಲೂಕಿನಲ್ಲಿ ಹುಲಿ ಕಾಣಿಸಿಕೊಳ್ಳುತ್ತಿದ್ದು, ಸಾಕು ಪ್ರಾಣಿಗಳನ್ನು ಕೊಂದು ಹಾಕುತ್ತಿವೆ. ಜನಸಾಮಾನ್ಯರು ಹೊರಗೆ ಓಡಾಡಲು ಭಯಪಡುವಂತಾಗಿದೆ. ಇದೀಗ ಹುಲಿ ದಾಳಿಗೆ (Tiger Attack) ಮಹಿಳೆಯೊಬ್ಬರು ಬಲಿಯಾದ ಘಟನೆ ಬಳ್ಳೂರ್ ಹುಂಡಿ ಗ್ರಾಮದಲ್ಲಿ ನಡೆದಿದೆ. ರತ್ನಮ್ಮ (55) ಮೃತಪಟ್ಟವರು.

ಮಧ್ಯಾಹ್ನದ ವೇಳೆ ದನ ಮೇಯಿಸಲು ಕಾಡಂಚಿಗೆ ತೆರಳಿದ್ದಾಗ ರತ್ನಮ್ಮ ಅವರ ಮೇಲೆ ಹುಲಿ ದಾಳಿ ನಡೆಸಿದೆ. ಅಲ್ಲದೆ, ರತ್ನಮ್ಮ ಅವರನ್ನು ಕೊಂದು ಎಡಭಾಗದ ದೇಹವನ್ನು ತಿಂದುಹಾಕಿ ಹೋಗಿದೆ. ಇದು ಸಹಜವಾಗಿ ಅಲ್ಲಿನ ಜನರನ್ನು ಭೀತಿಗೊಳಿಸಿದೆ. ಇನ್ನು, ಹುಲಿ ದಾಳಿಗೆ ಮಹಿಳೆ ಬಲಿಯಾದ ಹಿನ್ನೆಲೆ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ಮೈಸೂರು ಜಿಲ್ಲೆಯಲ್ಲಿ ವ್ಯಾಘ್ರನ ಕಾಟ: ಹೊಲ, ತೋಟ, ರಸ್ತೆಯಲ್ಲೆಲ್ಲ ಹುಲಿ ಹೆಜ್ಜೆ ಗುರುತು ಪತ್ತೆ

ನಂಜನಗೂಡು ತಾಲೂಕಿನಲ್ಲಿ ವ್ಯಾಘ್ರನ ಅಟ್ಟಹಾಸ ಮುಂದುವರೆದಿದೆ. 20 ದಿನಗಳ ಹಿಂದೆ ಜೇನುಕಟ್ಟೆ ಗ್ರಾಮದಲ್ಲಿ ಹುಲಿಯೊಂದು ಹಸುವನ್ನು ಕೊಂದು ಅದರ ಮಾಲೀಕ ಮೇಲೆ ದಾಳಿ ನಡೆಸಿತ್ತು. ಬಳಿಕ ಇದೇ ಪ್ರದೇಶದಲ್ಲಿ ಹುಲಿ ದಾಳಿಗೆ ಎತ್ತು ಬಲಿಯಾಗಿತ್ತು. ಇದೀಗ ಮಹಿಳೆಯೊಬ್ಬರು ಬಲಿಯಾಗಿದ್ದು, ಸಹಜವಾಗಿ ಕೃಷಿ ಚಟುವಟಿಕೆ, ಹಸು ಮೇಯಿಸಲು ತೆರಳಲು ಗ್ರಾಮಸ್ಥರು ಆತಂಕಪಡುತ್ತಿದ್ದಾರೆ.

ಯಾವಾಗ ತಮ್ಮ ಮೇಲೆ ಹುಲಿ, ಚಿರತೆ ದಾಳಿ ನಡೆಸುತ್ತೋ ಎಂಬ ಆತಂಕದಿಂದ ಜನರು ಜಾನುವಾರುಗಳಿಗೆ ಹುಲ್ಲು ತರಲು ಹಿಂದೇಟು ಹಾಕುತ್ತಿದ್ದಾರೆ. ಬಂಡೀಪುರ ರಾಷ್ಟ್ರೀಯ ಅಭಯಾರಣ್ಯ ಹೊರವಲಯದ ಮಹದೇವನಗರ, ಒಡೆಯನಪುರದ ಸಮೀಪದ ಜೇನುಕಟ್ಟೆ ಬಳಿ ಹುಲಿ ಪದೇ ಪದೇ ಕಾಣಿಸಿಕೊಳ್ಳುತ್ತಿದೆ.

ಹೆಚ್​ಡಿ ಕೋಟೆ ತಾಲೂಕಿನ ದೇವರಾಜನಗರ ಗ್ರಾಮದ ಸುತ್ತಮುತ್ತ ಚಿರತೆ ಹಾವಳಿ ಹೆಚ್ಚಾಗಿತ್ತು. ಇತ್ತೀಚೆಗೆ, ಸಾಕು ಪ್ರಾಣಿಗಳ ಮೇಲೆ ನಿರಂತರ ದಾಳಿ ಮಾಡುತ್ತಿದ್ದ ಚಿರತೆಯೊಂದು ಸೆರೆಯಾಗಿತ್ತು. ಬೋನು ಇಟ್ಟ ಒಂದು ದಿನದಲ್ಲೇ ಚಿರತೆ ಸೆರೆಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Dileep CP
Dileep CP

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಅದನ್ನು ಹೊರತು ಪಡಿಸಿದರೆ ಒಂದಷ್ಟು ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್