Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ನಂಜನಗೂಡಿನ ಬಳ್ಳೂರ್ ಹುಂಡಿಯಲ್ಲಿ ಹುಲಿ ದಾಳಿಗೆ ಮಹಿಳೆ ಬಲಿ

ನಂಜನಗೂಡು ತಾಲೂಕಿನಲ್ಲಿ ಹುಲಿ ಕಾಣಿಸಿಕೊಳ್ಳುತ್ತಿದ್ದು, ಸಾಕು ಪ್ರಾಣಿಗಳ ಮೇಲೆ ದಾಳಿ ನಡೆಸಿ ಕೊಂದು ಹಾಕುತ್ತಿವೆ. 20 ದಿನಗಳ ಹಿಂದೆ ಜೇನುಕಟ್ಟೆ ಗ್ರಾಮದಲ್ಲಿ ಹುಲಿಯೊಂದು ಹಸುವನ್ನು ಕೊಂದು ಅದರ ಮಾಲೀಕ ಮೇಲೆ ದಾಳಿ ನಡೆಸಿತ್ತು. ಬಳಿಕ ಇದೇ ಪ್ರದೇಶದಲ್ಲಿ ಎತ್ತು ಬಲಿಯಾಗಿತ್ತು. ಇದೀಗ ಬಳ್ಳೂರ್ ಹುಂಡಿಯಲ್ಲಿ ಹುಲಿ ದಾಳಿಗೆ ಮಹಿಳೆಯೊಬ್ಬರು ಬಲಿಯಾಗಿದ್ದಾರೆ.

ಮೈಸೂರು: ನಂಜನಗೂಡಿನ ಬಳ್ಳೂರ್ ಹುಂಡಿಯಲ್ಲಿ ಹುಲಿ ದಾಳಿಗೆ ಮಹಿಳೆ ಬಲಿ
ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಬಳ್ಳೂರ್ ಹುಂಡಿಯಲ್ಲಿ ಹುಲಿ ದಾಳಿಗೆ ಮಹಿಳೆ ಬಲಿ (ಸಾಂದರ್ಭಿಕ ಚಿತ್ರ) Image Credit source: PTI
Follow us
ದಿಲೀಪ್​, ಚೌಡಹಳ್ಳಿ
| Updated By: Rakesh Nayak Manchi

Updated on: Nov 24, 2023 | 6:00 PM

ಮೈಸೂರು, ನ.24: ನಂಜನಗೂಡು ತಾಲೂಕಿನಲ್ಲಿ ಹುಲಿ ಕಾಣಿಸಿಕೊಳ್ಳುತ್ತಿದ್ದು, ಸಾಕು ಪ್ರಾಣಿಗಳನ್ನು ಕೊಂದು ಹಾಕುತ್ತಿವೆ. ಜನಸಾಮಾನ್ಯರು ಹೊರಗೆ ಓಡಾಡಲು ಭಯಪಡುವಂತಾಗಿದೆ. ಇದೀಗ ಹುಲಿ ದಾಳಿಗೆ (Tiger Attack) ಮಹಿಳೆಯೊಬ್ಬರು ಬಲಿಯಾದ ಘಟನೆ ಬಳ್ಳೂರ್ ಹುಂಡಿ ಗ್ರಾಮದಲ್ಲಿ ನಡೆದಿದೆ. ರತ್ನಮ್ಮ (55) ಮೃತಪಟ್ಟವರು.

ಮಧ್ಯಾಹ್ನದ ವೇಳೆ ದನ ಮೇಯಿಸಲು ಕಾಡಂಚಿಗೆ ತೆರಳಿದ್ದಾಗ ರತ್ನಮ್ಮ ಅವರ ಮೇಲೆ ಹುಲಿ ದಾಳಿ ನಡೆಸಿದೆ. ಅಲ್ಲದೆ, ರತ್ನಮ್ಮ ಅವರನ್ನು ಕೊಂದು ಎಡಭಾಗದ ದೇಹವನ್ನು ತಿಂದುಹಾಕಿ ಹೋಗಿದೆ. ಇದು ಸಹಜವಾಗಿ ಅಲ್ಲಿನ ಜನರನ್ನು ಭೀತಿಗೊಳಿಸಿದೆ. ಇನ್ನು, ಹುಲಿ ದಾಳಿಗೆ ಮಹಿಳೆ ಬಲಿಯಾದ ಹಿನ್ನೆಲೆ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ಮೈಸೂರು ಜಿಲ್ಲೆಯಲ್ಲಿ ವ್ಯಾಘ್ರನ ಕಾಟ: ಹೊಲ, ತೋಟ, ರಸ್ತೆಯಲ್ಲೆಲ್ಲ ಹುಲಿ ಹೆಜ್ಜೆ ಗುರುತು ಪತ್ತೆ

ನಂಜನಗೂಡು ತಾಲೂಕಿನಲ್ಲಿ ವ್ಯಾಘ್ರನ ಅಟ್ಟಹಾಸ ಮುಂದುವರೆದಿದೆ. 20 ದಿನಗಳ ಹಿಂದೆ ಜೇನುಕಟ್ಟೆ ಗ್ರಾಮದಲ್ಲಿ ಹುಲಿಯೊಂದು ಹಸುವನ್ನು ಕೊಂದು ಅದರ ಮಾಲೀಕ ಮೇಲೆ ದಾಳಿ ನಡೆಸಿತ್ತು. ಬಳಿಕ ಇದೇ ಪ್ರದೇಶದಲ್ಲಿ ಹುಲಿ ದಾಳಿಗೆ ಎತ್ತು ಬಲಿಯಾಗಿತ್ತು. ಇದೀಗ ಮಹಿಳೆಯೊಬ್ಬರು ಬಲಿಯಾಗಿದ್ದು, ಸಹಜವಾಗಿ ಕೃಷಿ ಚಟುವಟಿಕೆ, ಹಸು ಮೇಯಿಸಲು ತೆರಳಲು ಗ್ರಾಮಸ್ಥರು ಆತಂಕಪಡುತ್ತಿದ್ದಾರೆ.

ಯಾವಾಗ ತಮ್ಮ ಮೇಲೆ ಹುಲಿ, ಚಿರತೆ ದಾಳಿ ನಡೆಸುತ್ತೋ ಎಂಬ ಆತಂಕದಿಂದ ಜನರು ಜಾನುವಾರುಗಳಿಗೆ ಹುಲ್ಲು ತರಲು ಹಿಂದೇಟು ಹಾಕುತ್ತಿದ್ದಾರೆ. ಬಂಡೀಪುರ ರಾಷ್ಟ್ರೀಯ ಅಭಯಾರಣ್ಯ ಹೊರವಲಯದ ಮಹದೇವನಗರ, ಒಡೆಯನಪುರದ ಸಮೀಪದ ಜೇನುಕಟ್ಟೆ ಬಳಿ ಹುಲಿ ಪದೇ ಪದೇ ಕಾಣಿಸಿಕೊಳ್ಳುತ್ತಿದೆ.

ಹೆಚ್​ಡಿ ಕೋಟೆ ತಾಲೂಕಿನ ದೇವರಾಜನಗರ ಗ್ರಾಮದ ಸುತ್ತಮುತ್ತ ಚಿರತೆ ಹಾವಳಿ ಹೆಚ್ಚಾಗಿತ್ತು. ಇತ್ತೀಚೆಗೆ, ಸಾಕು ಪ್ರಾಣಿಗಳ ಮೇಲೆ ನಿರಂತರ ದಾಳಿ ಮಾಡುತ್ತಿದ್ದ ಚಿರತೆಯೊಂದು ಸೆರೆಯಾಗಿತ್ತು. ಬೋನು ಇಟ್ಟ ಒಂದು ದಿನದಲ್ಲೇ ಚಿರತೆ ಸೆರೆಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ಕ್ರಿಕೆಟ್ ತಂಡದ ಜೊತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್
ಕ್ರಿಕೆಟ್ ತಂಡದ ಜೊತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್
2 ಕೋಟಿ ಹಣ ಬೇಕು ಶಿವ, ಹುಂಡಿಯಲ್ಲಿ ಸಿಕ್ತು ಬೇಡಿಕೆ ಪತ್ರ
2 ಕೋಟಿ ಹಣ ಬೇಕು ಶಿವ, ಹುಂಡಿಯಲ್ಲಿ ಸಿಕ್ತು ಬೇಡಿಕೆ ಪತ್ರ