AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಟ್ಟಾಡಿಸಿ ಯುವಕನ ಬರ್ಬರ ಹತ್ಯೆ: ಅನ್ಯಾಯದ ವಿರುದ್ಧ ಧ್ವನಿ ಎತ್ತಿದ್ದವ ಬೀದಿ ಹೆಣವಾದ

ಆತ ಅನ್ಯಾಯದ ವಿರುದ್ದ ನಿಂತಿದ್ದ. ಮೀಟರ್ ಬಡ್ಡಿ ದಂಧೆ, ಅಕ್ರಮ ಹಣ ವಸೂಲಿ ದಂಧೆ ನಿಲ್ಲಿಸಲು ಪಣ ತೊಟ್ಟಿದ್ದು. ಆತನ ಈ‌ ನಿಲುವು ಆತನಿಗೆ ಮುಳುವಾಗಿದೆ. ಅನ್ಯಾಯ ತಡೆಯಲು ಪೊಲೀಸರ ಮೊರೆ ಹೋದವನು ಇದೀಗ ನಡು ಬೀದಿಯಲ್ಲಿ‌ ಕೊಲೆಯಾಗಿದ್ದಾನೆ. ಇದರಿಂದ ಅನ್ಯಾಯದ ವಿರುದ್ಧ ಧ್ವನಿ ಎತ್ತಿದ್ದಕ್ಕೆ ಮಗನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಅಟ್ಟಾಡಿಸಿ ಯುವಕನ ಬರ್ಬರ ಹತ್ಯೆ: ಅನ್ಯಾಯದ ವಿರುದ್ಧ ಧ್ವನಿ ಎತ್ತಿದ್ದವ  ಬೀದಿ ಹೆಣವಾದ
Shahbaz
ರಾಮ್​, ಮೈಸೂರು
| Edited By: |

Updated on: Jan 20, 2026 | 8:33 PM

Share

ಬೆಂಗಳೂರು, ಜನವರಿ 20): ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ (Mysuru) ನಿನ್ನೆ(ಜನವರಿ 19) ಮಧ್ಯರಾತ್ರಿ ಮತ್ತೊಂದು ಕೊಲೆಯಾಗಿದೆ (Murder). ಅಂಗಡಿ ಮುಂದೆ ಕುಳಿತಿದ್ದ ಯುವಕನನ್ನು ಚಾಕು, ಲಾಂಗುಗಳನ್ನು ಹಿಡಿದು ಅಟ್ಟಾಡಿಸಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಮೈಸೂರು ಉದಯಗಿರಿ ಬೀಡಿ ಕಾಲೋನಿ ಬಳಿ 26 ವರ್ಷದ ಶಹಬಾಜ ಎಂಬ ಯುವಕನನ್ನು ಅದೇ ಏರಿಯಾದ ಜುಬೇರ್ ಎಂಬಾತ ತನ್ನ ಸ್ನೇಹಿತರ ಜೊತೆ ಸೇರಿ ಕೊಲೆ ಮಾಡಿದ್ದಾನೆ ಎಂದು ತಿಳಿದುಬಂದಿದೆ. ಫೈನಾನ್ಸ್ ಹಾವಳಿ ತಡೆಯಲು ಮುಂದಾಗಿದ್ದೆ ಶಹಬಾಜ್ ಕೊಲೆ ಕಾರಣ ಎನ್ನಲಾಗಿದೆ.

ರಾತ್ರಿ‌1 ಗಂಟೆ ವೇಳೆ ಅಂಗಡಿ ಮುಚ್ಚಿ ಕುಳಿತಿದ್ದ ಶಹಬಾಜ್ ಮೇಲೆ ಏಕಾಏಕಿ ದಾಳಿ ಮಾಡಿ ತಲೆ, ಎದೆ, ಕತ್ತು, ಹೊಟ್ಟೆಗೆ ಹೀಗೆ ಸಿಕ್ಕ ಸಿಕ್ಕ ಕಡೆ ಚುಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಹಳೆ ವೈಷಮ್ಯದಿಂದ ಅಟ್ಯಾಕ್ ಮಾಡಿ ಕೊಲೆ ಮಾಡಿದ್ದಾರೆ ಎಂದು ಮೇಲ್ನೋಟಕ್ಕೆ ಗೊತ್ತಾಗಿದೆ.

ಇದನ್ನೂ ಓದಿ: ಭದ್ರಾವತಿಯಲ್ಲಿ ವೃದ್ಧ ದಂಪತಿ ಅನುಮಾನಸ್ಪದ ಸಾವು: ಸ್ಥಳಕ್ಕೆ ವಿಧಿವಿಜ್ಞಾನ ತಂಡ, ಶ್ವಾನ ದಳ ದೌಡು

ಕೊಲೆಯಾದ ಯುವಕ ಹಾಗೂ ಕೊಲೆ ಮಾಡಿದ ಆರೋಪಿಗಳು ಒಂದೇ ಏರಿಯಾದವರು. ಶಹಬಾಜ್ ಗೌಸಿಯಾ ನಗರದಲ್ಲಿ ವೆಲ್ಡಿಂಗ್ ಶಾಪ್ ಇಟ್ಟುಕೊಂಡಿದ್ದ. ಏರಿಯಾದಲ್ಲಿ ಫೈನಾನ್ಸ್ ಹಾವಳಿ ಜಾಸ್ತಿಯಾಗಿತ್ತು. ಜುಬೇರ್ ಹಾಗೂ ಅತನ ಸ್ಮೇಹಿತರು ಫೈನ್ಯಾನ್ಸ್ ಹೆಸರಿನಲ್ಲಿ ಮೀಟರ್ ಬಡ್ಡಿ ವಸೂಲಿ ಮಾಡುತ್ತಿದ್ದರಂತೆ. ಅವರ ವಿರುದ್ಧ ಶಹಬಾನ್‌ ನಿಂತಿದ್ದ. ಪೊಲೀಸರಿಗೆ ದೂರು ಸಹ ಕೊಡಿಸಿದ್ದನಂತೆ. ಇದೇ ಕಾರಣಕ್ಕೆ ನಾಲ್ಕು ತಿಂಗಳ ಹಿಂದೆ ಶಹಬಾಜ್ ಅಂಗಡಿ ಮುಂದೆ ಇವರು ಬಂದು ಗಲಾಟೆ ಮಾಡಿದ್ದರು.

ಇನ್ನು ಒದರ ಜೊತೆಗೆ ಶಹಬಾಜ್ ಮನೆ ಪಕ್ಕ ಖಾಲಿ ಜಾಗದಲ್ಲಿ ಆಟೋಗಳನ್ನು ನಿಲ್ಲಿಸುತ್ತಿದ್ದರು. ಒಂದು ಆಟೋಕ್ಕೆ ದಿನಕ್ಕೆ 20 ರೂಪಾಯಿ ಕಲೆಕ್ಟ್ ಮಾಡಲಾಗುತಿತ್ತು. ಈ ವಿಚಾರಕ್ಕೂ ಗಲಾಟೆ ಆಗಿತ್ತಂತೆ. ಈ ಹಿನ್ನೆಲೆಯಲ್ಲಿ ಕೊಲೆ ನಡೆದಿರಬಹುದು ಎಂಬ ಮಾಹಿತಿ ಲಭ್ಯವಾಗಿದೆ.

ಸದ್ಯ ಮೈಸೂರಿನ ಉದಯಗಿರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ತನಿಖೆ ನಂತರವಷ್ಟೇ ಕೊಲೆಗೆ ನಿಖರ ಕಾರಣ ತಿಳಿದು ಬರಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Ram
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More
ಕೇದಾರನಾಥ ಮಾರ್ಗದ ಸೋನ್‌ಪ್ರಯಾಗ್ ಬಳಿ ಪ್ರವಾಸಿಗರ ಮೇಲೆ ಉರುಳಿದ ಬಂಡೆಗಳು
ಕೇದಾರನಾಥ ಮಾರ್ಗದ ಸೋನ್‌ಪ್ರಯಾಗ್ ಬಳಿ ಪ್ರವಾಸಿಗರ ಮೇಲೆ ಉರುಳಿದ ಬಂಡೆಗಳು
3 ಜೀವದಾನಗಳ ಲಾಭ ಪಡೆದು ಅರ್ಧಶತಕ ಬಾರಿಸಿದ ಅಭಿಷೇಕ್
3 ಜೀವದಾನಗಳ ಲಾಭ ಪಡೆದು ಅರ್ಧಶತಕ ಬಾರಿಸಿದ ಅಭಿಷೇಕ್
4 ವರ್ಷಗಳ ಬಳಿಕ ಸಿಕ್ಕ ಮಗನನ್ನು ನೋಡಿ ಕಣ್ಣೀರು ಹಾಕಿದ ಅಮ್ಮ
4 ವರ್ಷಗಳ ಬಳಿಕ ಸಿಕ್ಕ ಮಗನನ್ನು ನೋಡಿ ಕಣ್ಣೀರು ಹಾಕಿದ ಅಮ್ಮ
ಹೊಸಕೋಟೆಯ ಟೋಲ್ ಪ್ಲಾಜಾ ಬಳಿ ಭಾರಿ ಗಾಳಿಗೆ ಮುರಿದು ಬಿದ್ದ ಬೃಹತ್ ಫಲಕ
ಹೊಸಕೋಟೆಯ ಟೋಲ್ ಪ್ಲಾಜಾ ಬಳಿ ಭಾರಿ ಗಾಳಿಗೆ ಮುರಿದು ಬಿದ್ದ ಬೃಹತ್ ಫಲಕ
ನೋರಾ ಫತೇಹಿ ಮ್ಯೂಸಿಕ್ ವಿಡಿಯೋ, ತೆರೆ ಹಿಂದಿನ ಶ್ರಮ ತೋರಿಸಿದ ನಟಿ
ನೋರಾ ಫತೇಹಿ ಮ್ಯೂಸಿಕ್ ವಿಡಿಯೋ, ತೆರೆ ಹಿಂದಿನ ಶ್ರಮ ತೋರಿಸಿದ ನಟಿ
ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ
ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ
ನಿಯಂತ್ರಣ ತಪ್ಪಿದ ಬೈಕ್‌ನ ಅಬ್ಬರ; ಕಬ್ಬಿಣದ ಗೇಟ್ ಪುಡಿ ಪುಡಿ, CCTVನಲ್ಲಿ ಸ
ನಿಯಂತ್ರಣ ತಪ್ಪಿದ ಬೈಕ್‌ನ ಅಬ್ಬರ; ಕಬ್ಬಿಣದ ಗೇಟ್ ಪುಡಿ ಪುಡಿ, CCTVನಲ್ಲಿ ಸ
ಬಿಜೆಪಿ ರಾಜ್ಯಾಧ್ಯಕ್ಷ ಬದಲಾಗ್ತಾರಾ?ಅಭಿಪ್ರಾಯ ಸಂಗ್ರಹದಲ್ಲಿ ಏನೆಲ್ಲಾ ಆಯ್ತು
ಬಿಜೆಪಿ ರಾಜ್ಯಾಧ್ಯಕ್ಷ ಬದಲಾಗ್ತಾರಾ?ಅಭಿಪ್ರಾಯ ಸಂಗ್ರಹದಲ್ಲಿ ಏನೆಲ್ಲಾ ಆಯ್ತು
ಆಗಸ್ಟ್‌ 31 ರೊಳಗೆ ಗ್ರೇಟರ್ ಬೆಂಗಳೂರು ಚುನಾವಣೆ ಅಸಾಧ್ಯ?
ಆಗಸ್ಟ್‌ 31 ರೊಳಗೆ ಗ್ರೇಟರ್ ಬೆಂಗಳೂರು ಚುನಾವಣೆ ಅಸಾಧ್ಯ?
ಲ್ಯಾಪ್ ಟಾಪ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ NWKRTC ಡ್ರೈವರ್
ಲ್ಯಾಪ್ ಟಾಪ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ NWKRTC ಡ್ರೈವರ್