AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಲ್ಲಿ ವಾಹನ ಡಿಕ್ಕಿಯಿಂದ ಗಾಯಗೊಂಡಿದ್ದ ಚಿರತೆ ಚಿಕಿತ್ಸೆ ಫಲಿಸದೆ ಸಾವು

ಮೈಸೂರು ಹೊರವಲಯದ ರಿಂಗ್‌ರಸ್ತೆಯ ಉತ್ತನಹಳ್ಳಿ ಪೊಲೀಸ್ ಬಡಾವಣೆ ಬಳಿ ನಿನ್ನೆ (ಜ.6) ಅಪರಿಚಿತ ವಾಹನವೊಂದು ಚಿರತೆಗೆ ಡಿಕ್ಕಿ ಹೊಡೆದಿದೆ.

ಮೈಸೂರಲ್ಲಿ ವಾಹನ ಡಿಕ್ಕಿಯಿಂದ ಗಾಯಗೊಂಡಿದ್ದ ಚಿರತೆ ಚಿಕಿತ್ಸೆ ಫಲಿಸದೆ ಸಾವು
ಅಪಘಾತದಲ್ಲಿ ಗಾಯಗೊಂಡಿರುವ ಚಿರತೆ
TV9 Web
| Edited By: |

Updated on: Jan 07, 2023 | 11:08 PM

Share

ಮೈಸೂರು: ಮೈಸೂರು ಹೊರವಲಯದ ರಿಂಗ್‌ರಸ್ತೆಯ ಉತ್ತನಹಳ್ಳಿ ಪೊಲೀಸ್ ಬಡಾವಣೆ ಬಳಿ ನಿನ್ನೆ (ಜ.6) ಅಪರಿಚಿತ ವಾಹನವೊಂದು ಚಿರತೆಗೆ (Lepord) ಡಿಕ್ಕಿ ಹೊಡೆದಿತ್ತು. ಚಿರತೆಯ ಸೊಂಟಕ್ಕೆ ಗಂಭೀರ ಗಾಯವಾಗಿತ್ತು. ಮೇಲೆ ಎದ್ದೇಳಲು ಆಗದೆ ಚಿರತೆ ನರಳಾಡುತ್ತಿತ್ತುದ್ದು, ಹತ್ತಿರ ಹೋದವರ ಮೇಲೆ‌ ಅಟ್ಯಾಕ್ ಮಾಡಲು ಯತ್ನಸುತ್ತಿತ್ತು. ನಂತರ ಸ್ಥಳಿಯರು ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಅರಣ್ಯ ಅಧಿಕಾರಿಗಳು ಚಿರತೆಯನ್ನು ಚಿಕಿತ್ಸೆ ತೆಗೆದುಕೊಂಡು ಹೋಗಿದ್ದರು. ಆದರೆ ಗಂಭೀರ ಗಾಯ ಗಾಯಗೊಂಡಿದ್ದ ಚಿರತೆಗೆ ಅರಣ್ಯ ಇಲಾಖೆ ಸಿಬ್ಬಂದಿ ಚಿಕಿತ್ಸೆ ನೀಡುತ್ತಿದ್ದರು. ಆದರೆ ಇಂದು (ಜ.7) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದೆ. ಗಾಯಗೊಂಡ ಚಿರತೆಯ ವಿಡಿಯೋ ವೈರಲ್ ಆಗಿದೆ.

ಮಹಿಳೆ ಮೇಲೆ ಚಿರತೆ ದಾಳಿ; ಸ್ವಲ್ಪದರಲ್ಲೇ ತಪ್ಪಿದ ಅನಾಹುತ

ಮಂಡ್ಯ: ತಾಲೂಕಿನ ಅವ್ವೇರಹಳ್ಳಿ ಗ್ರಾಮದಲ್ಲಿ ಕೊಟ್ಟಿಗೆಗೆ ಹೋದ ಬಸಮ್ಮಣ್ಣಿ ಎಂಬ ಗೃಹಿಣಿ ಮೇಲೆ ಏಕಾ ಏಕಿ ಚಿರತೆ ದಾಳಿ ಮಾಡಿದೆ. ಮಹಿಳೆಯು ಗಾಬರಿಯಿಂದ ಕಿರುಚಾಡುತ್ತಾ ಚಿರತೆಗೆ ಒದ್ದಿದ್ದು, ಚಿರತೆ ಗುಂಡಿಯೊಳಗೆ ಬಿದ್ದಿದೆ. ಮಹಿಳೆಯ ಕೂಗು ಕೇಳುತ್ತಿದ್ದಂತೆ ಅಕ್ಕ ಪಕ್ಕದ ಜನರು ಬಂದಿದ್ದಾರೆ. ತಕ್ಷಣವೇ ಚಿರತೆ ಅಲ್ಲಿಂದ ಓಡಿ ಹೋಗಿದೆ. ಮಹಿಳೆಯು ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳ ಬಂದಿದ್ದು ಚಿರತೆಗಾಗಿ ಶೋಧಕಾರ್ಯ ಆರಂಭಿಸಿದ್ದಾರೆ.

ಜಿಲ್ಲೆಯಲ್ಲಿ ಬಿಟ್ಟು ಬಿಡದೆ ಕಾಡುತ್ತಿದೆ ಚಿರತೆ, ನಿನ್ನೆ ಮೊನ್ನೆ ಶ್ವಾನದ ಮೇಲೆ ದಾಳಿಯಾಗುತ್ತಿದ್ದು ಈಗ ಮನುಷ್ಯರ ಮೇಲೆ ದಾಳಿ ಮಾಡಲು ಆರಂಭಿಸಿದೆ. ಪದೇ ಪದೇ ಹೆಚ್ಚುತ್ತಿರುವ ಚಿರತೆ ದಾಳಿಗೆ ಗ್ರಾಮಸ್ಥರು ಭಯದಿಂದ ಹೊರ ಬರಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಕತ್ತಲಾಗುತ್ತಿದ್ದಂತೆ ಮನೆಯಿಂದ ಆಚೆ ಬರಲಾರದೆ ಗ್ರಾಮಸ್ಥರ ಪೀಕಲಾಟ ಹೇಳತೀರದು. ಕೂಡಲೇ ಚಿರತೆಯನ್ನ ಸೆರೆ ಹಿಡಿಯುವಂತೆ ಗ್ರಾಮಸ್ಥರ ಪಟ್ಟು ಹಿಡಿದಿದ್ದಾರೆ.

ಇದನ್ನೂ ಓದಿ:ಮಂಡ್ಯ; ಒಂದೇ ತಿಂಗಳಲ್ಲಿ ಬೋನಿಗೆ ಬಿದ್ದ 3 ಚಿರತೆಗಳು; ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ನಿನ್ನೆಯಷ್ಟೇ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಚಿಕ್ಕಕೊಪ್ಪಲಿನಲ್ಲಿರುವ ಶಿವರಾಮ್ ಎಂಬುವವರ ತೋಟದಲ್ಲಿ ಇರಿಸಿದ್ದ ಬೋನಿಗೆ ಚಿರತೆ ಬಿದ್ದಿತ್ತು. ಕಳೆದ 30 ದಿನಗಳಲ್ಲಿ ಬೋನಿಗೆ ಬಿದ್ದ ಮೂರನೇ ಚಿರತೆ ಇದಾಗಿದ್ದು, ಡಿಸೆಂಬರ್ 12 ಹಾಗೂ ಡಿಸೆಂಬರ್ 27 ರಂದು ಎರಡು ಚಿರತೆಗಳನ್ನ ಸೆರೆ ಹಿಡಿಯಲಾಗಿತ್ತು. ಇನ್ನೇನು ಚಿರತೆಯಿಂದ ಬಚಾವ್​ ಆದ್ವಿ ಅನ್ನುವಷ್ಟರಲ್ಲಿ ಜಿಲ್ಲೆಯಲ್ಲಿ ಮತ್ತೆ ಚಿರತೆ ಅಟ್ಟಹಾಸ ಶುರುವಾಗಿದೆ. ಆದಷ್ಟು ಬೇಗ ಚಿರತೆಯನ್ನ ಸೆರೆಹಿಡಿಯಬೇಕು ಎಂದು ಗ್ರಾಮಸ್ಥರು ತಮ್ಮ ಅಳಲನ್ನ ಅರಣ್ಯಾಧಿಕಾರಿಗಳ ಮುಂದೆ ತೋಡಿಕೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಚಲಿಸುತ್ತಿರುವ ರೈಲಿಂದ ಬಿದ್ದ ಮಹಿಳೆಯನ್ನು ದೇವರಂತೆ ಬಂದು ಕಾಪಾಡಿದ ಟಿಸಿ
ಚಲಿಸುತ್ತಿರುವ ರೈಲಿಂದ ಬಿದ್ದ ಮಹಿಳೆಯನ್ನು ದೇವರಂತೆ ಬಂದು ಕಾಪಾಡಿದ ಟಿಸಿ
ಆರಂಭ ಆಗಿದ್ದೇ ಒಂತರ, ಕೊನೆಯಾಗಿದ್ದೇ ಇನ್ನೊಂದು ತರ
ಆರಂಭ ಆಗಿದ್ದೇ ಒಂತರ, ಕೊನೆಯಾಗಿದ್ದೇ ಇನ್ನೊಂದು ತರ