AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಟ್ಟ ಗಾಯವಾಗಿದ್ದ ಮಗುವಿಗೆ ಚಿಕಿತ್ಸೆ ನೀಡಲು ನಿರ್ಲಕ್ಷ್ಯ ಆರೋಪ; ಲೋಕಾಯುಕ್ತ DySP ತೆರಳಿದ ಬಳಿಕ ಚಿಕಿತ್ಸೆ

ಬಿಸಿ ಹಾಲು ಚೆಲ್ಲಿದ ಹಿನ್ನೆಲೆ ಮಗುವಿಗೆ ಸುಟ್ಟ ಗಾಯವಾಗಿತ್ತು. ಈ ಹಿನ್ನಲೆ ತಡಮಾಡದೇ ಕೆಂಪರಾಜು ಅಂಬಿಕಾ ದಂಪತಿ, ಮಗುವನ್ನು ಕೆ ಆರ್ ನಗರ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಆದರೆ, ವೈದ್ಯಾಧಿಕಾರಿಗಳು ಚಿಕಿತ್ಸೆ ನೀಡಲು ಹಿಂದೇಟು ಹಾಕಿದ ಘಟನೆ ನಡೆದಿದೆ.

ಸುಟ್ಟ ಗಾಯವಾಗಿದ್ದ ಮಗುವಿಗೆ ಚಿಕಿತ್ಸೆ ನೀಡಲು ನಿರ್ಲಕ್ಷ್ಯ ಆರೋಪ; ಲೋಕಾಯುಕ್ತ DySP ತೆರಳಿದ ಬಳಿಕ ಚಿಕಿತ್ಸೆ
ಮೈಸೂರಿನ ಆಸ್ಪತ್ರೆಯ ನಿರ್ಲಕ್ಷ್ಯ
ರಾಮ್​, ಮೈಸೂರು
| Edited By: |

Updated on:Nov 04, 2023 | 6:56 PM

Share

ಮೈಸೂರು, ನ.04: ಮೈಸೂ(Mysore)ರಿನ ಬಡವರ ಪಾಲಿನ ಕಾಮಧೇನುವಾಗಿರುವ ಕೆ.ಆರ್ ಆಸ್ಪತ್ರೆ ಹಾಗೂ ಚೆಲುವಾಂಬ ಮಕ್ಕಳ ಆಸ್ಪತ್ರೆ(Hospital)ಯಲ್ಲಿಯೂ ವೈದ್ಯರ ನಿರ್ಲಕ್ಷ್ಯಕ್ಕೆ  12 ವರ್ಷದ ವಿಶೇಷ ಚೇತನ ಮಗು ಕೊನೆಯುಸಿರೆಳೆದಿತ್ತು. ಈ ಘಟನೆ ಮಾಸುವೇ ಮುನ್ನವೇ ಇದೀಗ ಮತ್ತೊಂದು ಹೃದಯ ವಿದ್ರಾವಕ ಘಟನೆ ನಡೆದಿದೆ. ಹೌದು, ಬಿಸಿ ಹಾಲು ಚೆಲ್ಲಿದ ಹಿನ್ನೆಲೆ 2 ವರ್ಷದ ಹೇಮಂತ್‌ಗೆ ಎಂಬ ಬಾಲಕನಿಗೆ ಗಾಯವಾಗಿತ್ತು. ಈ ಹಿನ್ನಲೆ ಕೂಡಲೇ ಮಗುವನ್ನು ಕೆ.ಆರ್.ನಗರ ತಾಲೂಕು ಆಸ್ಪತ್ರೆಗೆ ಚಿಕಿತ್ಸೆಗೆ ಎಂದು ಕರೆದುಕೊಂಡು ಬರಲಾಗಿತ್ತು. ಆದರೆ, ವೈದ್ಯರು ಚಿಕಿತ್ಸೆ ನೀಡದೇ ಅಮಾನವಿಯತೆ ತೋರಿದ್ದರು.

ಲೋಕಾಯುಕ್ತ DySP ಮಾಲತೇಶ್ ತೆರಳಿದ ಬಳಿಕ ಚಿಕಿತ್ಸೆ ನೀಡಿದ ಸಿಬ್ಬಂದಿ

ಬಿಸಿ ಹಾಲು ಚೆಲ್ಲಿದ ಹಿನ್ನೆಲೆ ಮಗುವಿಗೆ ಸುಟ್ಟ ಗಾಯವಾಗಿತ್ತು. ಈ ಹಿನ್ನಲೆ ತಡಮಾಡದೇ ಕೆಂಪರಾಜು ಅಂಬಿಕಾ ದಂಪತಿ, ಮಗುವನ್ನು ಕೆ ಆರ್ ನಗರ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಆದರೆ, ವೈದ್ಯಾಧಿಕಾರಿಗಳು ಚಿಕಿತ್ಸೆ ನೀಡಲು ಹಿಂದೇಟು ಹಾಕಿದ್ದರು. ಈ ವೇಳೆ ಲೋಕಾಯುಕ್ತ ಡಿವೈಎಸ್​ಪಿ ಆಸ್ಪತ್ರೆಗೆ ತೆರಳಿದ ನಂತರ, ವೈದ್ಯರು ಸಿಬ್ಬಂದಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ. ಬಳಿಕ ಮಗುವಿಗೆ ಚಿಕಿತ್ಸೆ ನೀಡಿದ್ದಾರೆ.

ಇದನ್ನೂ ಓದಿ:ಸಿಬ್ಬಂದಿಗಳ ಕೊರತೆ: ಗದಗ ಜಿಮ್ಸ್ ಆಡಳಿತದ ನಿರ್ಲಕ್ಷ್ಯಕ್ಕೆ ರೋಗಿಗಳು ವಿಲವಿಲ

ವೈದ್ಯರ ನಿರ್ಲಕ್ಷ್ಯಕ್ಕೆ ಬಲಿಯಾಗಿದ್ದ ವಿಶೇಷಚೇತನ ಮಗು

ಹೌದು, ಕರ್ತವ್ಯನಿರತ ಮಹಿಳಾ ನ್ಯಾಯಾಧೀಶರೊಬ್ಬರು ರಾತ್ರಿ 9 ಗಂಟೆಯಿಂದ ಮಧ್ಯರಾತ್ರಿ 2 ಗಂಟೆಯವರೆಗೂ ಅಂದರೆ ಬರೋಬ್ಬರಿ 5 ಗಂಟೆಗಳ ಕಾಲ ಖುದ್ದು ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದರೂ ಅನಾರೋಗ್ಯದಿಂದ ಬಳಲುತ್ತಿದ್ದ ವಿಶೇಷ ಚೇತನ ಮಗುವನ್ನು ಆಸ್ಪತ್ರೆಗೆ ದಾಖಲಿಸಲು ಪರದಾಡಿದ್ದರು. ಕೊನೆಗೆ ಮಗುವನ್ನು ಆಸ್ಪತ್ರೆಗೆ ದಾಖಲಿಸಿದರಾದರೂ ಚಿಕಿತ್ಸೆ ಫಲಕಾರಿಯಾಗದೆ ಆ ವಿಶೇಷ ಚೇತನ ಮಗು ಕೊನೆಯುಸಿರಳೆದಿತ್ತು. ವೈದ್ಯರ ವರ್ತನೆ ಹಾಗೂ ಅವರು ನಡೆದುಕೊಂಡ ರೀತಿಯಿಂದ ಜಿಗುಪ್ಸೆಗೊಂಡ ನ್ಯಾಯಾಧೀಶರು, ಆ ವೈದ್ಯರ ವಿರುದ್ದ ಪೊಲೀಸರಿಗೆ ಹಾಗೂ ಲೋಕಾಯುಕ್ತರಿಗೆ ದೂರು ನೀಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:56 pm, Sat, 4 November 23

Follow Us
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!