AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ನಂ.1 ಸ್ಥಾನ, ದೇಶಕ್ಕೆ 4ನೆಯ ಸ್ಥಾನ ಪಡೆದಿರುವ ಮೈಸೂರಿನ ಪೊಲೀಸ್ ಶ್ವಾನ ಅರ್ಜುನನ ಸಾಧನೆ ನೋಡುವ ಬನ್ನೀ

Karnataka Police Dog Squad Arjuna: ರಾಜ್ಯದಲ್ಲಿ ನಾರ್ಕೊಟಿಕ್ಸ್ ವಿಭಾಗದಲ್ಲಿ ಮಾದಕ ವಸ್ತುಗಳನ್ನು ಭೇದಿಸುವಲ್ಲಿ ನಂ.1 ಸ್ಥಾನ ಪಡೆದಿದ್ದಾನೆ‌. ಮೈಸೂರಿನ ಪೊಲೀಸ್ ಇಲಾಖೆಯ ಶ್ವಾನದಳದ ಈ ಅರ್ಜುನ, ಲಕ್ನೋದಲ್ಲಿ ನಡೆದ ಆಲ್ ಇಂಡಿಯಾ ಡ್ಯೂಟಿ ಮೀಟ್ ನಲ್ಲಿ ನಾಲ್ಕನೇ ಸ್ಥಾನ ಗೆದ್ದು ಕರುನಾಡಿಗೆ ಕೀರ್ತಿ ತಂದಿದ್ದಾನೆ ಎಂದು ಎದೆಯುಬ್ಬಿಸಿ ಹೇಳಿದವರು ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್.

ಕರ್ನಾಟಕದಲ್ಲಿ ನಂ.1 ಸ್ಥಾನ, ದೇಶಕ್ಕೆ 4ನೆಯ ಸ್ಥಾನ ಪಡೆದಿರುವ ಮೈಸೂರಿನ ಪೊಲೀಸ್ ಶ್ವಾನ ಅರ್ಜುನನ ಸಾಧನೆ ನೋಡುವ ಬನ್ನೀ
ಕರ್ನಾಟಕದಲ್ಲಿ ನಂ.1 ಸ್ಥಾನ, ದೇಶಕ್ಕೆ 4ನೆಯ ಸ್ಥಾನ ಪಡೆದ ಪೊಲೀಸ್ ಶ್ವಾನ
ದಿಲೀಪ್​, ಚೌಡಹಳ್ಳಿ
| Updated By: ಸಾಧು ಶ್ರೀನಾಥ್​|

Updated on:Mar 06, 2024 | 4:39 PM

Share

ಆತ ನೋಡೋಕೆ ಫುಲ್ ಸಾಫ್ಟ್, ಸಕತ್ ಫ್ರೆಂಡ್ಲಿ, ಆದ್ರೆ ಡ್ಯೂಟಿ ವಿಚಾರದಲ್ಲಿ ಮಾತ್ರ ರಫ್​​ ಅಂಡ್ ಟಫ್​. ಅಖಾಡಕ್ಕೆ ಇಳಿದ್ರೆ ಪ್ರಕರಣವನ್ನ ಭೇದಿಸದೆ ಇರೋದಿಲ್ಲ. ಇದೀಗಾ ಆತನ ಚಾಣಾಕ್ಷತನಕ್ಕೆ ರಾಜ್ಯಕ್ಕೆ ಪ್ರಥಮ ಎನಿಸಿಕೊಂಡು ಗೋಲ್ಡ್ ಮೆಡಲ್ ಪಡೆದ್ರೆ, ಆಲ್ ಇಂಡಿಯಾ ರೇಂಜ್ ನಲ್ಲಿ ಪದಕಗಳಿಸಿ ಮೈಸೂರಿಗಷ್ಟೆ ಅಲ್ಲದೆ ರಾಜ್ಯಕ್ಕೆ ಹೆಮ್ಮೆ ತಂದಿದ್ದಾನೆ (Police Dog). ಅಷ್ಟಕ್ಕೂ ಯಾರೀತ ಅನ್ನೋ ಕುತೂಹಲ ನಿಮಗಿದ್ಯಾ? ಹಾಗಿದ್ರೆ ಈ ಸ್ಟೋರಿ ನೋಡಿ. ಕುತ್ತಿಗೆಯಲ್ಲಿ ಗೋಲ್ಡ್ ಮೆಡಲ್.. ವರ್ಕ್ ಮೂಡ್ ಬಂದಾಗ ಫುಲ್ ಎಪಿಷಿಯಂಟ್… ಅಂದಹಾಗೆ ನಾವು ಹೇಳ್ತಾ ಇರೋದು ಇವನ ಬಗ್ಗೆಯೇ.‌ ಯಸ್ ಈತನೇ ಅರ್ಜುನ, ಮಾದಕ ವಸ್ತುಗಳನ್ನ ಭೇದಿಸೋ ರಣಬೇಟೆಗಾರ. ಅಂಬಾರಿ ಹೊತ್ತ ಅರ್ಜುನನ ನೆನಪು ಮಾಸುವ ಮುನ್ನವೇ ಈ ಅರ್ಜುನ ಹೆಸರಿನ ಪೊಲೀಸ್ ಶ್ವಾನ (Karnataka Police Dog Squad) ಇದೀಗ ಮೈಸೂರು ಪೊಲೀಸ್ ಇಲಾಖೆಗೆ ಹೆಮ್ಮೆ ತಂದಿದ್ದಾನೆ.

ರಾಜ್ಯದಲ್ಲಿ ನಾರ್ಕೊಟಿಕ್ಸ್ ವಿಭಾಗದಲ್ಲಿ ಮಾದಕ ವಸ್ತುಗಳನ್ನು ಭೇದಿಸುವಲ್ಲಿ ನಂ.1 ಸ್ಥಾನ ಪಡೆದಿದ್ದಾನೆ‌. ಮೈಸೂರಿನ ಪೊಲೀಸ್ ಇಲಾಖೆ ಶ್ವಾನದಳದ ಈ ಅರ್ಜುನ, ಲಕ್ನೋದಲ್ಲಿ ನಡೆದ ಆಲ್ ಇಂಡಿಯಾ ಡ್ಯೂಟಿ ಮೀಟ್ ನಲ್ಲಿ ನಾಲ್ಕನೇ ಸ್ಥಾನ ಗೆದ್ದು ಕರುನಾಡಿಗೆ ಕೀರ್ತಿ ತಂದಿದ್ದಾನೆ ಎಂದು ಎದೆಯುಬ್ಬಿಸಿ ಹೇಳಿದವರು ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್.

ಇನ್ನು, ಈ ಅರ್ಜುನಿಗೆ ಈಗಿನ್ನೂ 3 ವರ್ಷ ವಯಸ್ಸು. ಕೇವಲ‌ 6 ತಿಂಗಳ ಮರಿ ಇದ್ದಾಗ ಪೊಲೀಸ್ ಇಲಾಖೆಯು ರಾಜ್ ಕುಮಲ್ ಕೆನಲ್ ಮೂಲಕ ಖರೀದಿ ಮಾಡಿತ್ತು. ಕಳೆದ 3 ವರ್ಷಗಳಿಂದಲೂ ನಾರ್ಕೋಟಿಕ್ ವಿಭಾಗದಲ್ಲಿ ಸಕ್ರಿಯನಾಗಿರೋ ಈ ಅರ್ಜುನನ ಮೇಲೆ ಪೊಲೀಸ್ ಇಲಾಖೆಗೆ ಹೆಚ್ಚು ಭರವಸೆ. ನಾರ್ಕೋಟಿಕ್ಸ್ ವಿಭಾಗದಲ್ಲಿ ಕಳೆದ 3 ವರ್ಷಗಳಿಂದಲೂ ಕೆಲಸ ನಿರ್ವಹಣೆ ಮಾಡ್ತಾ ಇರೋ ಈ ಅರ್ಜುನ ಹಲವು ಕೇಸ್ ಗಳನ್ನು ಭೇದಿಸಿದ್ದಾನೆ.

Also Read: ಚಿಕ್ಕಬಳ್ಳಾಪುರ -ಡೆಬಿಟ್ ಕಾರ್ಡ್ ಹಣದ ಲಿಮಿಟ್ ಹೆಚ್ಚಿಸುವುದಾಗಿ ನಂಬಿಸಿ ಉಪನ್ಯಾಸಕನಿಗೆ ಪಂಗನಾಮ

ಮಾದಕ ವಸ್ತುಗಳ ಜಾಲವನ್ನು ಬಗ್ಗು ಬಡಿಯೋದ್ರಲ್ಲಿ ಪೊಲೀಸ್ ಇಲಾಖೆಗೆ ಸಾಥ್ ಕೊಡ್ತೀರೋ ಈ ಅರ್ಜುನ ದಸರಾ ಅಂಬಾರಿ ಆನೆ ಅರ್ಜುನನಂತೆಯೇ ಚಾಣಕ್ಯ ಕೂಡ. ಒಟ್ಟಿನಲ್ಲಿ ತನ್ನ ಕಾರ್ಯಕ್ಷಮತೆ ಮೂಲಕ ಹೆಸರು ಪಡೆದಿರೋ ಈ ಅರ್ಜುನ, ಅಂಬಾರಿ ಆನೆ ಅರ್ಜುನನಂತೆ ನಾಡಿಗೆಲ್ಲ ತನ್ನ ಹೆಸರು ಪಸರಿಸಲಿ ಅನ್ನೋದು ಎಲ್ಲರ ಆಶಯ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:37 pm, Wed, 6 March 24

ಸಾಲು ಸಾಲು ರಜೆ: ಊರಿಗೆ ತೆರಳುತ್ತಿರುವ ಜನ, ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್
ಸಾಲು ಸಾಲು ರಜೆ: ಊರಿಗೆ ತೆರಳುತ್ತಿರುವ ಜನ, ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್
‘ಖಂಡಿತವಾಗಿಯೂ ನ್ಯಾಯ ಗೆಲ್ಲುತ್ತದೆ’: ದರ್ಶನ್ ಕೇಸ್ ಬಗ್ಗೆ ರಾಗಿಣಿ ಮಾತು
‘ಖಂಡಿತವಾಗಿಯೂ ನ್ಯಾಯ ಗೆಲ್ಲುತ್ತದೆ’: ದರ್ಶನ್ ಕೇಸ್ ಬಗ್ಗೆ ರಾಗಿಣಿ ಮಾತು
ಕೊಲ್ಕತ್ತಾ ಮೆಟ್ರೋದಲ್ಲಿ ವಿದ್ಯಾರ್ಥಿಗಳು, ಕಾರ್ಮಿಕರ ಜೊತೆ ಮೋದಿ ಪ್ರಯಾಣ
ಕೊಲ್ಕತ್ತಾ ಮೆಟ್ರೋದಲ್ಲಿ ವಿದ್ಯಾರ್ಥಿಗಳು, ಕಾರ್ಮಿಕರ ಜೊತೆ ಮೋದಿ ಪ್ರಯಾಣ
ಶಾಸಕರ ಸಭೆ ಕರೆದು ಅನುದಾನ ಬಿಡುಗಡೆ ಮಾಡುವ ಭರವಸೆ ನೀಡಿದ ಸಿಎಂ
ಶಾಸಕರ ಸಭೆ ಕರೆದು ಅನುದಾನ ಬಿಡುಗಡೆ ಮಾಡುವ ಭರವಸೆ ನೀಡಿದ ಸಿಎಂ
ವೀರಶೈವ ಲಿಂಗಾಯತ ಶಾಸಕರ ಸಭೆ: ಜಾತಿ ಗಣತಿ ಬಗ್ಗೆ ಮಹತ್ವದ ನಿರ್ಣಯ
ವೀರಶೈವ ಲಿಂಗಾಯತ ಶಾಸಕರ ಸಭೆ: ಜಾತಿ ಗಣತಿ ಬಗ್ಗೆ ಮಹತ್ವದ ನಿರ್ಣಯ
ಮುಂದಿನ ಚುನಾವಣೆಯಲ್ಲಿ 175 ಸೀಟು ಗೆಲ್ಲುತ್ತೇವೆ, ಬರೆದಿಟ್ಟುಕೊಳ್ಳಿ: ಅಶೋಕ
ಮುಂದಿನ ಚುನಾವಣೆಯಲ್ಲಿ 175 ಸೀಟು ಗೆಲ್ಲುತ್ತೇವೆ, ಬರೆದಿಟ್ಟುಕೊಳ್ಳಿ: ಅಶೋಕ
ಕೊಲ್ಕತ್ತಾದಲ್ಲಿ ಹೊಸ ಮೆಟ್ರೋ ಮಾರ್ಗಗಳಿಗೆ ಪ್ರಧಾನಿ ಮೋದಿ ಚಾಲನೆ
ಕೊಲ್ಕತ್ತಾದಲ್ಲಿ ಹೊಸ ಮೆಟ್ರೋ ಮಾರ್ಗಗಳಿಗೆ ಪ್ರಧಾನಿ ಮೋದಿ ಚಾಲನೆ
ಧರ್ಮಸ್ಥಳ ಪ್ರಕರಣದ ಬಗ್ಗೆ ನಟಿ ರಮ್ಯಾ ಮಾತು
ಧರ್ಮಸ್ಥಳ ಪ್ರಕರಣದ ಬಗ್ಗೆ ನಟಿ ರಮ್ಯಾ ಮಾತು
ಚುನಾವಣಾ ಅಯೋಗದ ವಿರುದ್ಧ ಅಭಿಯಾನ ನಡೆಸುತ್ತಿರುವ ರಾಹುಲ್ ಗಾಂಧಿ
ಚುನಾವಣಾ ಅಯೋಗದ ವಿರುದ್ಧ ಅಭಿಯಾನ ನಡೆಸುತ್ತಿರುವ ರಾಹುಲ್ ಗಾಂಧಿ
ನಿಮ್ಮನ್ನೂ ದೇವೇಗೌಡ್ರು ಉಚ್ಛಾಟಿಸಿದ್ರು: ಸಿದ್ದರಾಮಯ್ಯಗೆ ಯತ್ನಾಳ್ ಚಮಕ್
ನಿಮ್ಮನ್ನೂ ದೇವೇಗೌಡ್ರು ಉಚ್ಛಾಟಿಸಿದ್ರು: ಸಿದ್ದರಾಮಯ್ಯಗೆ ಯತ್ನಾಳ್ ಚಮಕ್