AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಯಮ ಪಾಲಿಸದ, ವೈದ್ಯಕೀಯ ಅನುಮತಿ ಪಡೆಯದವರ ವಿರುದ್ದ ನಿರ್ದಾಕ್ಷಿಣ್ಯ ಕ್ರಮ -ಮೈಸೂರು ಡಿಹೆಚ್​ಓ ಖಡಕ್ ವಾರ್ನಿಂಗ್

ನಿಯಮ ಪಾಲಿಸದ, ವೈದ್ಯಕೀಯ ಅನುಮತಿ ಪಡೆಯದವರ ವಿರುದ್ದ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಡಿಹೆಚ್‌ಓ ಡಾ. ಪಿ.ಸಿ. ಕುಮಾರಸ್ವಾಮಿ ಅವರು ಎಚ್ಚರಿಕೆ ನೀಡಿದ್ದಾರೆ. ಭ್ರೂಣ ಪತ್ತೆ ಹಾಗೂ ಹತ್ಯೆ ಪ್ರಕರಣ ಸಂಬಂಧ ಅಧಿಕಾರಿಗಳು ಕ್ಲಿನಿಕ್, ಸ್ಕ್ಯಾನಿಂಗ್ ಸೆಂಟರ್​ಗಳ ಮೇಲೆ ದಾಳಿ ಮಾಡಿ ಮಾಹಿತಿ ಕಲೆ ಹಾಕುತ್ತಿದ್ದು 20ಕ್ಕೂ ಹೆಚ್ಚು ಕ್ಲಿನಿಕ್‌, ನರ್ಸಿಂಗ್ ಹೋಮ್‌ಗೆ ಬೀಗ ಹಾಕಿದ್ದಾರೆ.

ನಿಯಮ ಪಾಲಿಸದ, ವೈದ್ಯಕೀಯ ಅನುಮತಿ ಪಡೆಯದವರ ವಿರುದ್ದ ನಿರ್ದಾಕ್ಷಿಣ್ಯ ಕ್ರಮ -ಮೈಸೂರು ಡಿಹೆಚ್​ಓ ಖಡಕ್ ವಾರ್ನಿಂಗ್
ಡಿಹೆಚ್‌ಓ ಡಾ. ಪಿ.ಸಿ. ಕುಮಾರಸ್ವಾಮಿ
ರಾಮ್​, ಮೈಸೂರು
| Edited By: |

Updated on: Dec 22, 2023 | 7:42 AM

Share

ಮೈಸೂರು, ಡಿ.22: ಭ್ರೂಣ ಪತ್ತೆ ಹಾಗೂ ಹತ್ಯೆ ಪ್ರಕರಣ ( Female Feticide)ಸಂಬಂಧ ಅಧಿಕಾರಿಗಳ ತನಿಖೆ ಮುಂದುವರೆದಿದೆ. ನಿಯಮ ಪಾಲಿಸದ, ವೈದ್ಯಕೀಯ ಅನುಮತಿ ಪಡೆಯದವರ ವಿರುದ್ದ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಡಿಹೆಚ್‌ಓ ಡಾ. ಪಿ.ಸಿ. ಕುಮಾರಸ್ವಾಮಿ (Dr P.C. Kumaraswamy) ಅವರು ಎಚ್ಚರಿಕೆ ನೀಡಿದ್ದಾರೆ. ಈಗಾಗಲೇ 20ಕ್ಕೂ ಹೆಚ್ಚು ಕ್ಲಿನಿಕ್‌, ನರ್ಸಿಂಗ್ ಹೋಮ್‌ಗೆ ಬೀಗ ಹಾಕಲಾಗಿದೆ. 20ಕ್ಕೂ‌ ಹೆಚ್ಚು ಸ್ಕ್ಯಾನಿಂಗ್ ಯಂತ್ರಗಳನ್ನು ಸೀಲ್ ಮಾಡಲಾಗಿದೆ. ಇನ್ನು 2 ರಿಂದ 3 ತಿಂಗಳು ನಿರಂತರ ಕಾರ್ಯಾಚರಣೆ ನಡೆಸಲಾಗುತ್ತೆ ಎಂದು ಡಿಹೆಚ್‌ಓ ಕುಮಾರಸ್ವಾಮಿ ತಿಳಿಸಿದರು.

ಕೆಪಿಎಂಇ ಪ್ರಮಾಣ ಪತ್ರ ಪಡೆಯದ ನಿಯಮ ಪಾಲಿಸದಿದ್ದರೆ ಕ್ರಮ ಕೈಗೊಳ್ಳಲಾಗುತ್ತೆ. ಸ್ಕ್ಯಾನಿಂಗ್ ಸೆಂಟರ್‌ಗಳು ನಿಯಮ ಪಾಲಿಸಬೇಕು. ಸ್ಕ್ಯಾನಿಂಗ್ ಮಾಡಿರುವ ಸಂಪೂರ್ಣ ವಿವರ ನೀಡಬೇಕು. 5 ಟಾಸ್ಕ್ ಪೋರ್ಸ್ ಸಕ್ರಿಯವಾಗಿ ಕೆಲಸ ಮಾಡುತ್ತಿದೆ. ಅಕ್ರಮದ ಬಗ್ಗೆ ಸಾರ್ವಜನಿಕರು ಮಾಹಿತಿ ನೀಡುತ್ತಿದ್ದಾರೆ. ಅವರ ವಿವರ ಗೌಪ್ಯವಾಗಿ ಇಡಲಾಗುತ್ತಿದೆ. ನಿಖರ ಮಾಹಿತಿ ನೀಡಿದವರಿಗೆ 50 ಸಾವಿರ ಬಹುಮಾನ ಘೋಷಣೆ ಮಾಡಲಾಗಿದೆ. ಅದನ್ನು ಒಂದು ಲಕ್ಷಕ್ಕೆ ಹೆಚ್ಚಿಸುವ ಪ್ರಸ್ತಾವನೆ ಸಹ ಇದೆ ಎಂದು ಡಾ. ಪಿ.ಸಿ. ಕುಮಾರಸ್ವಾಮಿ ಹೇಳಿದರು.

ಭ್ರೂಣ ಪತ್ತೆ ಹಾಗೂ ಹತ್ಯೆ ಪ್ರಕರಣ ಸಂಬಂಧ ಅಧಿಕಾರಿಗಳು ಕ್ಲಿನಿಕ್, ಸ್ಕ್ಯಾನಿಂಗ್ ಸೆಂಟರ್​ಗಳ ಮೇಲೆ ದಾಳಿ ಮಾಡಿ ಮಾಹಿತಿ ಕಲೆ ಹಾಕುತ್ತಿದ್ದು 20ಕ್ಕೂ ಹೆಚ್ಚು ಕ್ಲಿನಿಕ್‌, ನರ್ಸಿಂಗ್ ಹೋಮ್‌ಗೆ ಬೀಗ ಹಾಕಿದ್ದಾರೆ.

ಇದನ್ನೂ ಓದಿ: ಕೋಮುಸೂಕ್ಷ್ಮ ಗಂಗಾವತಿ ಪಟ್ಟಣದಲ್ಲಿ ಸಂಕೀರ್ತನಾ ಯಾತ್ರೆ: ಸಿಸಿಟಿವಿ ಕಣ್ಗಾವಲು, ಬಿಗಿ ಪೊಲೀಸ್ ಬಂದೋಬಸ್ತ್

ಅರಮನೆ ಮೃಗಾಲಯದ‌ ಬಳಿ ವಿಶೇಷ ತಂಡ ನಿಯೋಜನೆ

ಇನ್ನು ಮತ್ತೊಂದೆಡೆ ಮೈಸೂರಿನಲ್ಲಿ ದಿನೇ ದಿನೇ ಕೊರೊನಾ ಪ್ರಕರಣಗಳು ಹೆಚ್ಚುತ್ತಿವೆ. ಈ ಹಿನ್ನೆಲೆ ಮೈಸೂರಿನ ಪ್ರವಾಸಿ ತಾಣಗಳ ಬಳಿ ವಿಶೇಷ ತಂಡ ನಿಯೋಜಿಸಿ ಜಾಗೃತಿ ಮೂಡಿಸುವ ಕಾರ್ಯ ನಡೆಯುತ್ತಿದೆ. ಈ ಬಗ್ಗೆ ಮಾತನಾಡಿದ ಮೈಸೂರು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಪಿ.ಸಿ. ಕುಮಾರಸ್ವಾಮಿ, ಅರಮನೆ ಮೃಗಾಲಯದ‌ ಬಳಿ ವಿಶೇಷ ತಂಡ ನಿಯೋಜನೆ ಮಾಡಲಾಗಿದೆ. ವಿಶೇಷ ತಂಡದಿಂದ ಕೊರೊನಾ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ಪ್ರವಾಸಿ ತಾಣಗಳಿಗೆ ಆಗಮಿಸುವವರಿಗೆ ಜಾಗೃತಿ ಮೂಡಿಸಲಾಗುತ್ತಿದೆ. ಸದ್ಯ ಪ್ರವಾಸಿ ತಾಣಗಳಲ್ಲಿ ಟೆಸ್ಟಿಂಗ್ ಅವಶ್ಯಕತೆ ಕಾಣುತ್ತಿಲ್ಲ. ಪ್ರವಾಸಿ ತಾಣಗಳ ಮುಖ್ಯಸ್ಥರ ಸಭೆ ನಡೆಸಲಾಗುವುದು. ಅವರಿಗೂ ಕೊರೊನಾ ನಿಯಮಗಳ ಬಗ್ಗೆ ಜಾಗೃತಿ ಮೂಡಿಸಲಾಗುವುದು ಎಂದು ತಿಳಿಸಿದರು.

ಮೈಸೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?