AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mysuru Bengaluru Expressway: ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ ವೇಯಲ್ಲಿ ಸಣ್ಣ ವಾಹನಗಳ ನಿಷೇಧ ಸಮರ್ಥಿಸಿದ ಅಲೋಕ್ ಕುಮಾರ್

ಎತ್ತಿನಗಾಡಿ, ಕುದುರೆಗಾಡಿಯಂತಹ ಮೋಟಾರ್ ರಹಿತ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಡಲು ಸಾಧ್ಯವೇ ಇಲ್ಲ ಎಂದು ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ.

Mysuru Bengaluru Expressway: ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ ವೇಯಲ್ಲಿ ಸಣ್ಣ ವಾಹನಗಳ ನಿಷೇಧ ಸಮರ್ಥಿಸಿದ ಅಲೋಕ್ ಕುಮಾರ್
ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ ವೇ
Follow us
ರಾಮ್​, ಮೈಸೂರು
| Updated By: Ganapathi Sharma

Updated on: Jul 26, 2023 | 4:52 PM

ಮೈಸೂರು: ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ ಹೆದ್ದಾರಿಯಲ್ಲಿ (Mysuru Bengaluru Expressway) ದ್ವಿಚಕ್ರ, ತ್ರಿಚಕ್ರ ವಾಹನ ಹಾಗೂ ಇತರ ಸಣ್ಣ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಿರುವುದನ್ನು ಸಂಚಾರ ಮತ್ತು ರಸ್ತೆ ಸುರಕ್ಷತೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ (ADGP Alok Kumar) ಸಮರ್ಥಿಸಿಕೊಂಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಎಕ್ಸ್‌ಪ್ರೆಸ್‌ ಹೆದ್ದಾರಿಯ ಅಪಘಾತದಲ್ಲಿ ಮೃತಪಟ್ಟ ಬಹುತೇಕರು ಬೈಕ್ ಸವಾರರು. 150 ಸಿಸಿ ವಾಹನಗಳಲ್ಲಿ ಹೆಚ್ಚು ವೇಗದಲ್ಲಿ ಹೋಗಲು ಸಾಧ್ಯವಿಲ್ಲ. ಆಟೋ ರಿಕ್ಷಾದಂತಹ ವಾಹನಗಳ ವೇಗ ಇನ್ನೂ ಕಡಿಮೆ ಇರುತ್ತದೆ. ಎತ್ತಿನಗಾಡಿ, ಕುದುರೆಗಾಡಿಯಂತಹ ಮೋಟಾರ್ ರಹಿತ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಡಲು ಸಾಧ್ಯವೇ ಇಲ್ಲ ಎಂದು ಹೇಳಿದ್ದಾರೆ.

ನಿರ್ಬಂಧಕ್ಕೆ ಸಂಬಂಧಿಸಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ಹಿಂದೆಯೇ ಅವಕಾಶ ಮಾಡಿಕೊಂಡಿದೆ. ಈ ಸಂಬಂಧ ಜುಲೈ 12ರಂದು ಅಧಿಸೂಚನೆ ಕೂಡ ಹೊರಡಿಸಲಾಗಿದೆ. ಆಗಸ್ಟ್ 1ರಿಂದ ನಿಯಮ ಜಾರಿಗೆ ಬರಲಿದೆ ಎಂದು ಅವರು ತಿಳಿಸಿದ್ದಾರೆ.

ಹೆದ್ದಾರಿಯಲ್ಲಿ ಗ್ರಿಲ್, ವಿದ್ಯುತ್ ಕಂಬಗಳ ಕಳ್ಳತನ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈ ಕುರಿತು ಎನ್‌ಎಚ್‌ಎಐ ಅಧಿಕಾರಿಗಳು ಒಂದೇ ಒಂದು ದೂರು ಕೊಟ್ಟಿಲ್ಲ. ತಡೆಗೋಡೆ ಕಬ್ಬಿಣ ಕಳ್ಳತನದಿಂದ ಹಸು, ಪಾದಚಾರಿಗಳು ರಸ್ತೆಗೆ ಬರುತ್ತಿದ್ದಾರೆ. ಇದರಿಂದಾಗಿ ಅಪಘಾತ ಆಗುತ್ತಿವೆ ಅಂತ ಹೇಳುತ್ತಿದ್ದಾರೆ. ಆದರೆ ಪೊಲೀಸರಿಗೆ ದೂರು ಕೊಟ್ಟಿಲ್ಲ. ದರೋಡೆ ಪ್ರಕರಣಗಳ ವಿಚಾರವನ್ನೂ ನಮ್ಮ ಗಮನಕ್ಕೆ ತಂದಿಲ್ಲ. ದೂರು ನೀಡಿದರೆ ಕ್ರಮ ಕೈಗೊಳ್ಳುತ್ತೇವೆ ಎಂದು ಅಲೋಕ್ ಕುಮಾರ್ ಹೇಳಿದ್ದಾರೆ.

ಇದನ್ನೂ ಓದಿ: Bengaluru Mysuru Expressway: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ದ್ವಿಚಕ್ರ, ಆಟೋಗಳಿಗೆ ನಿಷೇಧ, AI ಆಧಾರಿತ ಕ್ಯಾಮೆರಾ ಅಳವಡಿಕೆ

ಇದಕ್ಕೂ ಮುನ್ನ ಅವರು, ಎಕ್ಸ್​ಪ್ರೆಸ್ ವೇಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಇದು ಅವರು ನಡೆಸಿದ ಎರಡನೇ ಪರಿಶೀಲನೆ ಆಗಿದೆ. ನೂತನ ಹೆದ್ದಾರಿಯಲ್ಲಿ ಅಲ್ಲಲ್ಲಿ ಕೃತಕಬುದ್ಧಿಮತ್ತೆ ಆಧಾರಿತ ಕ್ಯಾಮರಾಗಳನ್ನು ಅಳವಡಿಸಲಾಗಿದೆ ಎಂದೂ ಅವರು ಮಾಹಿತಿ ನೀಡಿದ್ದಾರೆ.

ಇತ್ತೀಚೆಗಷ್ಟೇ ಹೆದ್ದಾರಿಯಲ್ಲಿ ಅಪಘಾತಗಳನ್ನು ತಡೆಯುವ ದೃಷ್ಟಿಯಿಂದ ವಾಹನಗಳಿಗೆ ವೇಗದ ಮಿತಿ ಹೇರಲಾಗಿತ್ತು. ಮಿತಿ ಮೀರಿದ ವೇಗದಲ್ಲಿ ಸಂಚರಿಸಿದ ವಾಹನಗಳಿಗೆ ದಂಡ ವಿಧಿಸಲೂ ಸೂಚಿಸಲಾಗಿತ್ತು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಹೋರಿಗೆ ಕೇಕ್ ತಿನ್ನಿಸಿ ತಾನೂ ತಿಂದ ಮಾಜಿ ಸಚಿವ ರೇಣುಕಾಚಾರ್ಯ
ಹೋರಿಗೆ ಕೇಕ್ ತಿನ್ನಿಸಿ ತಾನೂ ತಿಂದ ಮಾಜಿ ಸಚಿವ ರೇಣುಕಾಚಾರ್ಯ
ಚಾರ್ಮಾಡಿ ಘಾಟಿ ಡೇಂಜರ್ ಡೇಂಜರ್ ಮತ್ತಷ್ಟು ಕುಸಿಯುವ ಆತಂಕ
ಚಾರ್ಮಾಡಿ ಘಾಟಿ ಡೇಂಜರ್ ಡೇಂಜರ್ ಮತ್ತಷ್ಟು ಕುಸಿಯುವ ಆತಂಕ
ಯಾದಗಿರಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ; ವಾಹನ ಸಂಚಾರ, ಜನಜೀವನ ಅಸ್ತವ್ಯಸ್ತ
ಯಾದಗಿರಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ; ವಾಹನ ಸಂಚಾರ, ಜನಜೀವನ ಅಸ್ತವ್ಯಸ್ತ
ಸಚಿವರ ಬೇಜವಾಬ್ದಾರಿತನಕ್ಕೆ ಅಸಮಾಧಾನ ಹೊರಹಾಕಿದ ಸಿದ್ದರಾಮಯ್ಯ
ಸಚಿವರ ಬೇಜವಾಬ್ದಾರಿತನಕ್ಕೆ ಅಸಮಾಧಾನ ಹೊರಹಾಕಿದ ಸಿದ್ದರಾಮಯ್ಯ
ಪರಿಸರ ಮಾಲಿನ್ಯ ಹೆಚ್ಚುತ್ತಿರುವ ಬೆಂಗಳೂರಿಗೆ ಬೇಕು ಎಲೆಕ್ಟ್ರಿಕ್ ಬಸ್​ಗಳು
ಪರಿಸರ ಮಾಲಿನ್ಯ ಹೆಚ್ಚುತ್ತಿರುವ ಬೆಂಗಳೂರಿಗೆ ಬೇಕು ಎಲೆಕ್ಟ್ರಿಕ್ ಬಸ್​ಗಳು
ಕರಾವಳಿ ಪ್ರಾಂತ್ಯದ ಗಲಭೆಗಳಿಗೆ ಸಾಮಾಜಿಕ ಜಾಲತಾಣ ದೂರಿದ ಗುಂಡೂರಾವ್
ಕರಾವಳಿ ಪ್ರಾಂತ್ಯದ ಗಲಭೆಗಳಿಗೆ ಸಾಮಾಜಿಕ ಜಾಲತಾಣ ದೂರಿದ ಗುಂಡೂರಾವ್
ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಮೇಲೆ ಕುಳಿತು ವ್ಯಕ್ತಿಯ ಹುಚ್ಚಾಟ
ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಮೇಲೆ ಕುಳಿತು ವ್ಯಕ್ತಿಯ ಹುಚ್ಚಾಟ
‘ಸುಧಾರಾಣಿ ಕಣ್ಣಲ್ಲೇ ನಟಿಸ್ತಾರೆ’; ಬಾಯ್ತುಂಬ ಹೊಗಳಿದ ರವಿಚಂದ್ರನ್
‘ಸುಧಾರಾಣಿ ಕಣ್ಣಲ್ಲೇ ನಟಿಸ್ತಾರೆ’; ಬಾಯ್ತುಂಬ ಹೊಗಳಿದ ರವಿಚಂದ್ರನ್