AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಪತ್ತೆಯಾದ ಬೆಕ್ಕು ಹುಡುಕಿಕೊಡುವಂತೆ ಜಾಹೀರಾತು; ಸಾಮಾಜಿಕ ಜಾಲತಾಣದಲ್ಲಿ ಫೋಟೋ ವೈರಲ್​

ನಾಪತ್ತೆಯಾದ ಬೆಕ್ಕು ಹುಡುಕಿಕೊಡುವಂತೆ ನೀಡಿರುವ ಜಾಹೀರಾತು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ನಾಪತ್ತೆಯಾದ ಬೆಕ್ಕು ಹುಡುಕಿಕೊಡುವಂತೆ ಜಾಹೀರಾತು; ಸಾಮಾಜಿಕ ಜಾಲತಾಣದಲ್ಲಿ ಫೋಟೋ ವೈರಲ್​
ಜಾಹೀರಾತು
TV9 Web
| Edited By: |

Updated on:Aug 05, 2022 | 3:03 PM

Share

ಮೈಸೂರು: ನಾಪತ್ತೆಯಾದ ಬೆಕ್ಕು ಹುಡುಕಿಕೊಡುವಂತೆ ನೀಡಿರುವ ಜಾಹೀರಾತು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಮೈಸೂರಿನ ನಾಚಪ್ಪ ಎಂಬುವರು ಸಾಕಿದ್ದ, ಸೃಷ್ಟಿ ಹೆಸರಿನ ಬೆಕ್ಕು ನಿನ್ನೆ (ಆಗಸ್ಟ 4) ರಾತ್ರಿಯಿಂದ ನಾಪತ್ತೆಯಾಗಿದೆ. ಮೈಸೂರಿನ ದೇವರಾಜ ಅರಸು ರಸ್ತೆಯ ಬಾಟ ಶೋರೂಂನಿಂದ ಬೆಕ್ಕು ನಾಪತ್ತೆಯಾಗಿದೆ. ಬೆಕ್ಕನ್ನು ಹುಡುಕಿ ಕೊಟ್ಟವರಿಗೆ 5 ಸಾವಿರ ಬಹುಮಾನ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಜಾಹಿರಾತಿನಲ್ಲಿ ಮೊಬೈಲ್ ನಂಬರ್ ನೀಡಿ ಮಾಹಿತಿ ನೀಡುವಂತೆ ಮನವಿ ಮಾಡಿದ್ದಾರೆ.

ಜಮೀನಿಗೆ ಹೋಗಿ ಭಯಗೊಂಡ ರೈತ

ರೈತರೊಬ್ಬರು ಮುಂಜಾನೆ ಎದ್ದು ಹೊಲಕ್ಕೆ ಹೋದಾಗ ಎದುರಾದ ದೈತ್ಯ ಕಪ್ಪಾದ ವಸ್ತುವನ್ನು ನೋಡಿ ಬೆಚ್ಚಿಬಿದ್ದಿದ್ದಾರೆ. ಅದಾಗ್ಯೂ ಅದೇನೆಂದು ನೋಡಲು ಗಾಬರಿಯಿಂದಲೇ ಹತ್ತಿರಕ್ಕೆ ಹೋದಾಗ ತುಣುಕು ವಸ್ತು ಎಂದು ಕಂಡುಕೊಂಡರು. ಆದರೆ ಏನು ಅದು ಎಂದು ಅರ್ಥವಾಗದೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾನೆ. ಅದರಂತೆ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ ಅಧಿಕಾರಿಗಳು, ಅದು  ‘ಸ್ಪೇಸ್‌ಎಕ್ಸ್‘ ಕ್ಯಾಪ್ಸೂಲ್‌ನ ತುಣುಕು ಎಂದು ದೃಢಪಡಿಸಿದ್ದಾರೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಇದರ ವಿಡಿಯೋ ವೈರಲ್ ಆಗುತ್ತಿದೆ.

ಆಸ್ಟ್ರೇಲಿಯಾದ ನ್ಯೂ ಸೌತ್ ವೇಲ್ಸ್ ಬಳಿಯ ಗ್ರಾಮೀಣ ಭಾಗದ ರೈತ ಮಿಕ್ ಮೈನರ್ಸ್ ಅವರ ಜಮೀನಿನಲ್ಲಿ ಈ ಸ್ಪೇಸ್‌ಎಕ್ಸ್ ಕ್ಯಾಪ್ಸೂಲ್‌ನ ತುಣುಕು ಪತ್ತೆಯಾಗಿದೆ. ಅಧಿಕಾರಿಗಳ ಪ್ರಕಾರ, ಈ ತುಣುಕು ಜು.9ರಂದು ಬಿದ್ದಿದ್ದು, ರೈತ ಇದನ್ನು ಕೆಲವು ದಿನಗಳ ನಂತರ ಗುರುತಿಸಿದ್ದಾರೆ. ಈ ತುಣುಕು ಸುಮಾರು 3 ಮೀಟರ್ ಉದ್ದ ಮತ್ತು 20 ರಿಂದ 30 ಕೆಜಿ ತೂಕವಿರುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಆಸ್ಟ್ರೇಲಿಯಾದ ಮೌಂಟ್ ಸ್ಟ್ರೋಮ್ಲೋ ಅಬ್ಸರ್ವೇಟರಿಯ ಖಗೋಳ ಭೌತಶಾಸ್ತ್ರಜ್ಞ ಡಾ.ಬ್ರಾಡ್ ಟಕರ್ ಅವಶೇಷಗಳನ್ನು ಪರೀಕ್ಷಿಸಿ ಇದೊಂದು ಅದ್ಭುತ ಆವಿಷ್ಕಾರ ಎಂದು ಹೇಳಿದ್ದಾರೆ.

ಸಾಮಾನ್ಯವಾಗಿ ಇಂತಹ ಅವಶೇಷಗಳು ಸಮುದ್ರದಲ್ಲಿ ಬೀಳುತ್ತವೆ, ಆದರೆ ಭೂಮಿಗೆ ಬೀಳುವುದು ತುಂಬಾ ವಿರಳವಾಗಿದೆ. ರೈತರ ಹೊಲದ ಬಳಿ ಶೋಧ ಕಾರ್ಯಾಚರಣೆ ನಡೆಸಿದಾಗ ಇನ್ನೂ 2 ಅವಶೇಷಗಳು ಪತ್ತೆಯಾಗಿವೆ. ಆಸ್ಟ್ರೇಲಿಯನ್ ಬಾಹ್ಯಾಕಾಶ ಸಂಸ್ಥೆ ಸಾರ್ವಜನಿಕರಿಗೆ ಅಂತಹ ಯಾವುದೇ ದೃಶ್ಯಗಳು ಕಂಡುಬಂದಲ್ಲಿ ತಕ್ಷಣವೇ ತಿಳಿಸುವಂತೆ ಮನವಿ ಮಾಡಿದೆ.

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:24 pm, Fri, 5 August 22

Follow Us
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ