Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಂಜನಗೂಡು ತಾಲೂಕಿನ ಗ್ರಾಮಗಳಲ್ಲಿ ಚಿರತೆ ಹಾವಳಿ: ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ

ನಂಜನಗೂಡು ತಾಲೂಕಿನ ಸಿಂಧುವಳ್ಳಿ, ಕಳಲೆ ಗ್ರಾಮದ ಸುತ್ತಮುತ್ತ ಚಿರತೆ ಓಡಾಡುತ್ತಿದ್ದು, ಸಾಕು ಪ್ರಾಣಿಗಳ ಮೇಲೆ ದಾಳಿ ಮಾಡಿದೆ. ಚಿರತೆ ಸಿಂಧುವಳ್ಳಿ ಗ್ರಾಮದಲ್ಲಿ ಮೇಕೆಯನ್ನು ತಿಂದಿದೆ. ಚಿರತೆ ಹಾವಳಿಯಿಂದ ಗ್ರಾಮಸ್ಥರು ಆತಂಕಗೊಂಡಿದ್ದಾರೆ.

ನಂಜನಗೂಡು ತಾಲೂಕಿನ ಗ್ರಾಮಗಳಲ್ಲಿ ಚಿರತೆ ಹಾವಳಿ: ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ
ಚಿರತೆ ದಾಳಿ
Follow us
TV9 Web
| Updated By: ವಿವೇಕ ಬಿರಾದಾರ

Updated on:Dec 25, 2023 | 11:02 AM

ಮೈಸೂರು, ಡಿಸೆಂಬರ್​ 25: ರಾಜ್ಯದ ಕೆಲ ಜಿಲ್ಲೆಗಳಲ್ಲಿ ಕಾಡು ಪ್ರಾಣಿಗಳ ಆರ್ಭಟ ಹೆಚ್ಚಾಗಿದೆ. ಆಹಾರ ಅರಸಿಕೊಂಡು ನಾಡಿನತ್ತ ಬರುತ್ತಿರುವ ಆನೆ (Elephants), ಚಿರತೆ (Leopard), ಹುಲಿಗಳು (Tiger) ಜನರನ್ನು ಭಯ ಭೀತರನ್ನಾಗಿಸುತ್ತಿವೆ. ಹುಲಿ (Tiger Attack), ಚಿರತೆ ಕಾಟಕ್ಕೆ ಜನ ರೋಸಿ ಹೋಗಿದ್ದಾರೆ. ಹೌದು ನಂಜನಗೂಡು ತಾಲೂಕಿನ ಸಿಂಧುವಳ್ಳಿ, ಕಳಲೆ ಗ್ರಾಮದ ಸುತ್ತಮುತ್ತ ಚಿರತೆ ಓಡಾಡುತ್ತಿದ್ದು, ಸಾಕು ಪ್ರಾಣಿಗಳ ಮೇಲೆ ದಾಳಿ ಮಾಡಿದೆ.

ಚಿರತೆ ಸಿಂಧುವಳ್ಳಿ ಗ್ರಾಮದಲ್ಲಿ ಮೇಕೆಯನ್ನು ತಿಂದಿದೆ. ಚಿರತೆ ಹಾವಳಿಯಿಂದ ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಹೀಗಾಗಿ ಚಿರತೆಯನ್ನು ಸೆರೆ ಹಿಡಿಯುವಂತೆ ಗ್ರಾಮಸ್ಥರು ಅರಣ್ಯ ಇಲಾಖೆಗೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಮೈಸೂರು: ಪತ್ತೆಯಾದ ಮೂರು ಚಿರತೆ ಮರಿಗಳನ್ನು ತಾಯಿ ಜೊತೆ ಸೇರಿಸಿದ ಅರಣ್ಯ ಸಿಬ್ಬಂದಿ

ನೆಲಮಂಗಲ ತಾಲೂಕಿನ ಗೊಟ್ಟಿಗೆರೆಯಲ್ಲಿ ನಾಯಿ ಹೊತ್ತೊಯ್ದ ಚಿರತೆ; ಭರತ್​ ಎಂಬುವರ ತೋಟದಲ್ಲಿ ನಾಯಿಯನ್ನು ಹೊತ್ತೊಯ್ದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ; ದಾಬಸ್​ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ

ಸಾಕಿದ ನಾಯಿಯನ್ನು ಹೊತ್ತೋಯ್ಯದ ಚಿರತೆ

ನೆಲಮಂಗಲ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಘೊಟ್ಟಿಕೆರೆ ಭರತ್ ತೋಟದಲ್ಲಿ ಸಾಕಿದ ನಾಯಿಯನ್ನು ಚಿರತೆ ಹೊತ್ತೋಯ್ಯದಿದೆ. ನಾಯಿಯನ್ನು ಹೊತ್ತೋಯ್ಯದ ವಿಡಿಯೋ ಸಿಸಿಕ್ಯಾಮೆರಾದಲ್ಲಿ ಸೆರೆಯಾಗಿದೆ. ದಾಬಸ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕೊಪ್ಪಳ ಜಿಲ್ಲೆಯಲ್ಲಿ ಕರಡಿ ಹಾವಳಿ

ಕೊಪ್ಪಳ: ಜಿಲ್ಲೆಯಲ್ಲಿ ಕರಡಿ ಹಾವಳಿ ಹೆಚ್ಚಾಗಿದೆ. ಕೊಪ್ಪಳ ತಾಲೂಕಿನ ಗಂಗನಾಳ ಗ್ರಾಮದ ಜಮೀನಿಗೆ ನುಗ್ಗಿದ್ದ ಕರಡಿಯನ್ನು ಗ್ರಾಮಸ್ಥರು ಓಡಿಸಿದ್ದಾರೆ. ಜನರ ಸದ್ದು ಕೇಳ್ತಿದ್ದಂತೆ ಕರಡಿ ದಿಕ್ಕೆಟ್ಟು ಓಡಿದೆ. ಕರಡಿ ಹಾವಳಿಯಿಂದ ಗ್ರಾಮಸ್ಥರು ರೋಸಿ ಹೋಗಿದ್ದಾರೆ. ಕರಡಿಗಳು ಜಮೀನಿಗೆ ನುಗ್ಗಿ ಬೆಳೆ ಹಾಳು ಮಾಡುತ್ತಿವೆ.ಹೀಗಾಗಿ ಕರಡಿಗಳನ್ನು ಸೆರೆ ಹಿಡಿಯುವಂತೆ ರೈತರು ಹತ್ತಾರು ಬಾರಿ ಅರಣ್ಯಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಆದರೂ ಕೂಡ ಅಧಿಕಾರಿಗಳು ಸ್ಪಂದಿಸಿಲ್ಲ ಎಂದು ರೈತರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗ್ರಾಮಕ್ಕೆ ನುಗ್ಗಿದ್ದ ಚಿರತೆಯನ್ನು ಸೆರೆ ಹಿಡಿದ ಅರಣ್ಯ ಇಲಾಖೆ

ನವೆಂಬರ್​ 22 ರಂದು ಮೈಸೂರಿನ ಸಾಲಿಗ್ರಾಮ ತಾಲೂಕಿನ ಮೂಡಲಬೀಡು ಗ್ರಾಮಕ್ಕೆ ನುಗ್ಗಿದ್ದ ಚಿರತೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆಹಿಡಿದಿದ್ದರು. ಕಳೆದ ಒಂದು ತಿಂಗಳಿನಿಂದ ಸಾಕು ಪ್ರಾಣಿಗಳ ಮೇಲೆ ದಾಳಿ ಮಾಡುತ್ತಾ ಈ ಚಿರತೆ ಉಪಟಳ ಕೊಡ್ತಿತ್ತು. ಸಾಕುನಾಯಿ, ದನ, ಕರುಗಳನ್ನು ಕೊಂದು ಹಾಕಿದ್ದ ಚಿರತೆ ಸೆರೆಗೆ ರೈತ ಮಹೇಶ್ ಎಂಬುವವರ ಜಮೀನಿನಲ್ಲಿ ಬೋನು ಇಡಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:38 am, Mon, 25 December 23

ಜವಾಬ್ದಾರಿಯುತ ಸ್ಥಾನದಲ್ಲಿರುವ ಶಿವಕುಮಾರ್ ವಿರುದ್ಧ ಆರೋಪ ಸರಿಯಲ್ಲ: ಶಾಸಕ
ಜವಾಬ್ದಾರಿಯುತ ಸ್ಥಾನದಲ್ಲಿರುವ ಶಿವಕುಮಾರ್ ವಿರುದ್ಧ ಆರೋಪ ಸರಿಯಲ್ಲ: ಶಾಸಕ
ವ್ಯಾಪಾರಿಗಳು ಹೆಸರು ನೋಂದಾಯಿಸಿಕೊಳ್ಳಲು ಏಪ್ರಿಲ್ 30 ಕಡೇದಿನ: ಶಿವಕುಮಾರ್
ವ್ಯಾಪಾರಿಗಳು ಹೆಸರು ನೋಂದಾಯಿಸಿಕೊಳ್ಳಲು ಏಪ್ರಿಲ್ 30 ಕಡೇದಿನ: ಶಿವಕುಮಾರ್
ಚೀಟಿಯಲ್ಲಿ ಏನು ಬರೆದಿತ್ತು ಅಂತ ಮುಂದಿನ ದಿನಗಳಲ್ಲಿ ಹೇಳ್ತೇನೆ: ಯತ್ನಾಳ್
ಚೀಟಿಯಲ್ಲಿ ಏನು ಬರೆದಿತ್ತು ಅಂತ ಮುಂದಿನ ದಿನಗಳಲ್ಲಿ ಹೇಳ್ತೇನೆ: ಯತ್ನಾಳ್
VIDEO: CSK ಮತ್ತೆ ಮೋಸದಾಟ? ಅನುಮಾನ ಹುಟ್ಟಿಸಿದ ವಿಡಿಯೋ
VIDEO: CSK ಮತ್ತೆ ಮೋಸದಾಟ? ಅನುಮಾನ ಹುಟ್ಟಿಸಿದ ವಿಡಿಯೋ
ರಾಜಣ್ಣ ಪರೋಕ್ಷವಾಗಿ ಮತ್ತೊಬ್ಬ ಸಚಿವನ ಕಡೆ ಬೊಟ್ಟು ಮಾಡುತ್ತಿದ್ದಾರೆ: ರವಿ
ರಾಜಣ್ಣ ಪರೋಕ್ಷವಾಗಿ ಮತ್ತೊಬ್ಬ ಸಚಿವನ ಕಡೆ ಬೊಟ್ಟು ಮಾಡುತ್ತಿದ್ದಾರೆ: ರವಿ
ರಾಜಣ್ಣ ದೂರು ದಾಖಲಿಸದ ಹೊರತು ನಾವೇನೂ ಮಾಡಲಾಗದು: ಪರಮೇಶ್ವರ್
ರಾಜಣ್ಣ ದೂರು ದಾಖಲಿಸದ ಹೊರತು ನಾವೇನೂ ಮಾಡಲಾಗದು: ಪರಮೇಶ್ವರ್
ರಾಜಣ್ಣರೊಂದಿಗೆ ಮೊದ್ಲಿಂದ್ಲೂ ಸಲುಗೆಯಿಂದ ಇದ್ದೇನೆ: ಡಾ ರಂಗನಾಥ್
ರಾಜಣ್ಣರೊಂದಿಗೆ ಮೊದ್ಲಿಂದ್ಲೂ ಸಲುಗೆಯಿಂದ ಇದ್ದೇನೆ: ಡಾ ರಂಗನಾಥ್
ನಾಗ್ಪುರ ಹಿಂಸಾಚಾರದ ಪ್ರಮುಖ ಆರೋಪಿ ಫಾಹಿಂ ಖಾನ್ ಮನೆ ನೆಲಸಮ
ನಾಗ್ಪುರ ಹಿಂಸಾಚಾರದ ಪ್ರಮುಖ ಆರೋಪಿ ಫಾಹಿಂ ಖಾನ್ ಮನೆ ನೆಲಸಮ
ಬೆಳೆಸಿದ ವ್ಯಕ್ತಿಗಳ ಮೇಲೆ ಯಶ್​ಗೆ ಅದೆಂಥಾ ಗೌರವ; ಇಲ್ಲಿದೆ ಸಾಕ್ಷಿ
ಬೆಳೆಸಿದ ವ್ಯಕ್ತಿಗಳ ಮೇಲೆ ಯಶ್​ಗೆ ಅದೆಂಥಾ ಗೌರವ; ಇಲ್ಲಿದೆ ಸಾಕ್ಷಿ
ಮುನಿರತ್ನ ಮಾಡಿರುವ ಆರೋಪಗಳ ಬಗ್ಗೆ ನನಗೆ ಗೊತ್ತಿಲ್ಲ: ರಾಜಣ್ಣ
ಮುನಿರತ್ನ ಮಾಡಿರುವ ಆರೋಪಗಳ ಬಗ್ಗೆ ನನಗೆ ಗೊತ್ತಿಲ್ಲ: ರಾಜಣ್ಣ