AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಲ್​ ಖೈದಾ ವಿಡಿಯೋ ತುಣುಕು: ನಿಖರತೆ ಪರಿಶೀಲಿಸಲು ಪೊಲೀಸರಿಗೆ ಸೂಚಿಸಿದ ಸಿಎಂ ಬಸವರಾಜ ಬೊಮ್ಮಾಯಿ

ಮೈಸೂರು: ಮೋಸ್ಟ್​ ವಾಂಟೆಡ್ ಉಗ್ರ ಸಂಘಟನೆ ಅಲ್​ ಖೈದಾ ನಾಯಕನೊಬ್ಬನ ವಿಡಿಯೋ ತುಣುಕಿನ ನಿಖರತೆ ಬಗ್ಗೆ ಪರಿಶೀಲಿಸಲು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಮೈಸೂರು ಭೇಟಿಗಾಗಿ ಇಲ್ಲಿನ ವಿಮಾನ ನಿಲ್ದಾಣದಲ್ಲಿ ಬಂದಿಳಿದಾಗ ಮಾಧ್ಯಮದವರಿಗೆ ಈ ಪ್ರತಿಕ್ರಿಯೆ ನೀಡಿದರು. ಹಿಜಾಬ್ ಪ್ರಕರಣದ ಬಗ್ಗೆ ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯಿಸಿ ದೇಶ, ರಾಜ್ಯದ ಕಾನೂನಿನ ವಿರುದ್ಧ ಅನವಶ್ಯಕವಾಗಿ ಹಲವಾರು ವಿಷಯಗಳನ್ನು ಪ್ರಾರಂಭ ಮಾಡಿ ಜನರಲ್ಲಿ ಆಶಾಂತಿ ಗೊಂದಲವನ್ನು ಮೂಡಿಸುವ ಶಕ್ತಿ ಹಿಂದಿನಿಂದಲೂ ಕೆಲಸ […]

ಅಲ್​ ಖೈದಾ ವಿಡಿಯೋ ತುಣುಕು: ನಿಖರತೆ ಪರಿಶೀಲಿಸಲು ಪೊಲೀಸರಿಗೆ ಸೂಚಿಸಿದ ಸಿಎಂ ಬಸವರಾಜ ಬೊಮ್ಮಾಯಿ
ಪಿಎಂ-ಕಿಸಾನ್ ಯೋಜನೆ: ಕರ್ನಾಟಕದ 47.86 ಲಕ್ಷ ರೈತರಿಗೆ ನೇರವಾಗಿ 956.71 ಕೋಟಿ ರೂ ಬಿಡುಗಡೆ ಮಾಡಿದ ಮುಖ್ಯಮಂತ್ರಿ ಬೊಮ್ಮಾಯಿ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Apr 07, 2022 | 7:47 PM

ಮೈಸೂರು: ಮೋಸ್ಟ್​ ವಾಂಟೆಡ್ ಉಗ್ರ ಸಂಘಟನೆ ಅಲ್​ ಖೈದಾ ನಾಯಕನೊಬ್ಬನ ವಿಡಿಯೋ ತುಣುಕಿನ ನಿಖರತೆ ಬಗ್ಗೆ ಪರಿಶೀಲಿಸಲು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಮೈಸೂರು ಭೇಟಿಗಾಗಿ ಇಲ್ಲಿನ ವಿಮಾನ ನಿಲ್ದಾಣದಲ್ಲಿ ಬಂದಿಳಿದಾಗ ಮಾಧ್ಯಮದವರಿಗೆ ಈ ಪ್ರತಿಕ್ರಿಯೆ ನೀಡಿದರು.

ಹಿಜಾಬ್ ಪ್ರಕರಣದ ಬಗ್ಗೆ ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯಿಸಿ ದೇಶ, ರಾಜ್ಯದ ಕಾನೂನಿನ ವಿರುದ್ಧ ಅನವಶ್ಯಕವಾಗಿ ಹಲವಾರು ವಿಷಯಗಳನ್ನು ಪ್ರಾರಂಭ ಮಾಡಿ ಜನರಲ್ಲಿ ಆಶಾಂತಿ ಗೊಂದಲವನ್ನು ಮೂಡಿಸುವ ಶಕ್ತಿ ಹಿಂದಿನಿಂದಲೂ ಕೆಲಸ ಮಾಡುತ್ತಾ ಬಂದಿದೆ. ಅದರ ಭಾಗವಾಗಿ ಅಲ್ ಖೈದಾ ಸಂಘಟನೆಯಿಂದ ಎಂದು ಹೇಳಿಕೊಂಡು ವಿಡಿಯೋ ತುಣುಕಿನಲ್ಲಿ ಅಭಿಪ್ರಾಯವೊಂದನ್ನು ಸ್ಪಷ್ಟವಾಗಿ ವ್ಯಕ್ತಪಡಿಸಿದ್ದಾರೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.

ಸಿದ್ಧರಾಮಯ್ಯ ಗಲಿಬಿಲಿ ಆಗುವುದೇಕೆ: ಸಿಎಂ ಬೊಮ್ಮಾಯಿ ಮಾರ್ಮಿಕ ಪ್ರಶ್ನೆ ಅಲ್ ಖೈದಾ ಹೇಳಿಕೆ ಹಿಂದೆ ಆರ್ ಎಸ್ ಎಸ್ ಕೈವಾಡವಿದೆ ಎಂದು ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಹೇಳಿರುವ ಬಗ್ಗೆ ಪ್ರತಿಕ್ರಿಯಿಸಿ, ಅವರ ಮಾತಿಗೆ ಯಾವುದೇ ತರ್ಕ ಹಾಗೂ ಆಧಾರ ಇಲ್ಲ. ಅಲ್ ಖೈದಾ ಹೇಳಿಕೆ ಬಹಿರಂಗವಾದರೆ ಸಿದ್ಧರಾಮಯ್ಯ ಅವರು ಗಲಿಬಿಲಿ ಆಗುತ್ತಿರುವುದೇಕೆ ಎನ್ನುವ ಮೂಲಭೂತ ಪ್ರಶ್ನೆ ಉದ್ಭವಿಸುತ್ತಿದೆ ಎಂದು ಅವರು ಹೇಳಿದರು.

Also Read: ಮಂಡ್ಯ ವಿದ್ಯಾರ್ಥಿನಿಗೆ ಶಹಬಾಸ್ ಎಂದ ಅಲ್​ ಖೈದಾ ನಾಯಕನನ್ನು ಎಲ್ರೂ ತರಾಟೆಗೆ ತೆಗೆದುಕೊಂಡಿರುವಾಗ ಸಿದ್ದರಾಮಯ್ಯ ಏನಂದರು ನೋಡಿ!?

Also Read: ಮೈಸೂರು ಕೋರ್ಟ್‌ನಲ್ಲಿ ಬಾಂಬ್ ಸ್ಫೋಟ ಪ್ರಕರಣ; ಮೂವರು ಅಲ್‌ಖೈದಾ ಉಗ್ರರಿಗೆ ಶಿಕ್ಷೆ ಪ್ರಮಾಣ ಪ್ರಕಟ

Published On - 7:40 pm, Thu, 7 April 22

ದೃಷ್ಟಿಹೀನ ಮಕ್ಕಳು ಹುಟ್ಟುಹಬ್ಬದ ಶುಭಾಶಯ ಕೋರಿದಾಗ ಕಣ್ಣೀರಿಟ್ಟ ರಾಷ್ಟ್ರಪತಿ
ದೃಷ್ಟಿಹೀನ ಮಕ್ಕಳು ಹುಟ್ಟುಹಬ್ಬದ ಶುಭಾಶಯ ಕೋರಿದಾಗ ಕಣ್ಣೀರಿಟ್ಟ ರಾಷ್ಟ್ರಪತಿ
‘ಪಪ್ಪಿ’ ಸಿನಿಮಾಗೆ 50 ದಿನದ ಸಂಭ್ರಮ; ವೇದಿಕೆಯಲ್ಲಿ ಬಾಲ ನಟರ ಡೈಲಾಗ್
‘ಪಪ್ಪಿ’ ಸಿನಿಮಾಗೆ 50 ದಿನದ ಸಂಭ್ರಮ; ವೇದಿಕೆಯಲ್ಲಿ ಬಾಲ ನಟರ ಡೈಲಾಗ್
ಸಿಎಂ ಮತ್ತು ಡಿಸಿಎಂ ಜೊತೆ ಹಲವಾರು ಸಚಿವರು ನಾಳೆ ತುಮಕೂರು ಆಗಮನ
ಸಿಎಂ ಮತ್ತು ಡಿಸಿಎಂ ಜೊತೆ ಹಲವಾರು ಸಚಿವರು ನಾಳೆ ತುಮಕೂರು ಆಗಮನ
ಬೆನ್ನು ನೋವಿಗೆ ಕಾರಣವೇನು? ಯೋಗದ ಮೂಲಕ ಪರಿಹರಿಸಿಕೊಳ್ಳುವುದು ಹೇಗೆ?
ಬೆನ್ನು ನೋವಿಗೆ ಕಾರಣವೇನು? ಯೋಗದ ಮೂಲಕ ಪರಿಹರಿಸಿಕೊಳ್ಳುವುದು ಹೇಗೆ?
ಐದು ದಿನಗಳ ಕಾಲ ಸುಟ್ಟ ಗಾಯಗಳೊಂದಿಗೆ ಜೀವನ್ಮರಣ ಹೋರಾಟ ನಡೆಸಿದ ಬಾಲಕ
ಐದು ದಿನಗಳ ಕಾಲ ಸುಟ್ಟ ಗಾಯಗಳೊಂದಿಗೆ ಜೀವನ್ಮರಣ ಹೋರಾಟ ನಡೆಸಿದ ಬಾಲಕ
ವಿದ್ಯುತ್ ಚಿತಾಗಾರದ ಕರೆಂಟ್ ಬಿಲ್ ಬಾಕಿ: ಬಡವಾಯ್ತೇ ಬಿಟಿಡಿಎ
ವಿದ್ಯುತ್ ಚಿತಾಗಾರದ ಕರೆಂಟ್ ಬಿಲ್ ಬಾಕಿ: ಬಡವಾಯ್ತೇ ಬಿಟಿಡಿಎ
ದಿನಕ್ಕೆ 10 ಗಂಟೆ ಕೆಲಸದ ಅವಧಿ ಬಗ್ಗೆ ಸಚಿವ ಸಂತೋಷ್ ಲಾಡ್ ಹೇಳಿದ್ದಿಷ್ಟು!
ದಿನಕ್ಕೆ 10 ಗಂಟೆ ಕೆಲಸದ ಅವಧಿ ಬಗ್ಗೆ ಸಚಿವ ಸಂತೋಷ್ ಲಾಡ್ ಹೇಳಿದ್ದಿಷ್ಟು!
ತನ್ನ ಸಿಗ್ನೇಚರ್ ಸ್ಟೆಪ್​ ಹಾಕುತ್ತಾ ಕುಣಿದು ರಂಜಿಸಿದ ಲೆಜೆಂಡರಿ ಸ್ಟಾರ್
ತನ್ನ ಸಿಗ್ನೇಚರ್ ಸ್ಟೆಪ್​ ಹಾಕುತ್ತಾ ಕುಣಿದು ರಂಜಿಸಿದ ಲೆಜೆಂಡರಿ ಸ್ಟಾರ್
ಇಲ್ಲಿಂದ ಮೇಲೆತ್ತಿ ಎಂಬಂತೆ ಅಸಾಹಯಕತೆಯಿಂದ ಜನರತ್ತ ನೋಡುತ್ತಿರುವ ನಾಯಿ
ಇಲ್ಲಿಂದ ಮೇಲೆತ್ತಿ ಎಂಬಂತೆ ಅಸಾಹಯಕತೆಯಿಂದ ಜನರತ್ತ ನೋಡುತ್ತಿರುವ ನಾಯಿ
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಭೂಕುಸಿತ; ಹಲವು ರಸ್ತೆಗಳು ಬಂದ್
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಭೂಕುಸಿತ; ಹಲವು ರಸ್ತೆಗಳು ಬಂದ್