ಸ್ವಯಂ ಲಾಕ್ ಡೌನ್! ಚಾಮುಂಡೇಶ್ವರಿ ದರ್ಶನಕ್ಕೆ ಅವಕಾಶವಿದ್ರೂ ಜನ ಬರ್ತಿಲ್ಲ: ಪ್ರವಾಸಿ ಕೇಂದ್ರಗಳು ಬಿಕೋ ಅನ್ನುತ್ತಿವೆ!

Coronavirus in Mysuru: ಜಿಲ್ಲೆಯ ನಂಜುಡೇಶ್ವರನ ದರ್ಶನಕ್ಕೆ ಸ್ಥಳೀಯ ಆಡಳಿತ ಅವಕಾಶ ನೀಡಿಲ್ಲ. ಹಾಗಾಗಿ ಜನ ಅತ್ತ ಸುಳಿಯುತ್ತಿಲ್ಲ. ಇನ್ನು, ಇತ್ತ ಚಾಮುಂಡೇಶ್ವರಿ ದರ್ಶನಕ್ಕೆ ಅವಕಾಶವಿದ್ದರೂ ಸಹ‌ ಜನರು ಬರುತ್ತಿಲ್ಲ. ಇದಲ್ಲದೆ, ವೀಕೆಂಡ್ ಸಮಯದಲ್ಲಿ ಜನಜಂಗುಳಿ ಇರುತ್ತಿದ್ದ ಜಾಗಗಳಲ್ಲಿಯೂ ಜನ ಸೇರುತ್ತಿಲ್ಲ. ಎಲ್ಲಾ ಪ್ರವಾಸಿ ತಾಣಗಳಲ್ಲೂ ಖಾಲಿ ಖಾಲಿ ದೃಶ್ಯಗಳು ಕಾಣುತ್ತಿವೆ.

ಸ್ವಯಂ ಲಾಕ್ ಡೌನ್! ಚಾಮುಂಡೇಶ್ವರಿ ದರ್ಶನಕ್ಕೆ ಅವಕಾಶವಿದ್ರೂ ಜನ ಬರ್ತಿಲ್ಲ: ಪ್ರವಾಸಿ ಕೇಂದ್ರಗಳು ಬಿಕೋ ಅನ್ನುತ್ತಿವೆ!
ಇತ್ತ ಚಾಮುಂಡೇಶ್ವರಿ ದರ್ಶನಕ್ಕೆ ಬಂದ ಭಕ್ತರೊಬ್ಬರು ಕೈಯೆತ್ತಿ ಮುಗಿದರು.
Follow us
|

Updated on:Apr 17, 2021 | 11:43 AM

ಮೈಸೂರು: ಕೊರೊನಾ ಮಹಾಮಾರಿ ಮತ್ತೊಮ್ಮೆ ತನ್ನ ಆರ್ಭಟ ಮುಂದುವರಿಸಿದೆ. ಅದು ಸಾಂಸ್ಕೃತಿಕ ನಗರಿ ಮೈಸೂರನ್ನೂ ಬಿಟ್ಟಿಲ್ಲ. ವಾಸ್ತವವಾಗಿ ಮೈಸೂರು ಜಿಲ್ಲೆಯಲ್ಲಿ ಕೊರೊನಾ ಕಾಟ ತುಸು ಹೆಚ್ಚೇ ಎಂಬಂತಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಸಕಲ ಕಟ್ಟುನಿಟ್ಟಿನ ಕ್ರಮಗಳನ್ನೂ ಕೈಗೊಂಡಿದೆ. ಪ್ರವಾಸೀ ಕೇಂದ್ರಗಳಿಗೆ ಬೀಗ ಹಾಕಿರುವ ಜಿಲ್ಲಾಡಳಿತ, ಯಾವುದೇ ಜನಜಂಗುಳಿಗೂ ಅವಕಾಶ ನೀಡಿಲ್ಲ. ಆದರೆ ನಾಡಿನ ಅಧಿದೇವತೆ ಚಾಮುಂಡೇಶ್ವರಿ ದರ್ಶನಕ್ಕೆ ಅವಕಾಶ ನೀಡಿದೆ. ಆದರೆ ರಾಜ್ಯದ ಜನತೆ ಪರಿಸ್ಥಿತಿಯ ಗಂಭೀರತೆಯನ್ನು ಅರಿತು ಸ್ವಯಂ ನಿರ್ಬಂಧ ಹೇರಿಕೊಂಡು ಗುಂಪುಗೂಡುವ ಸ್ಥಳಗಳಿಂದ ದೂರವೇ ಉಳಿದಿದ್ದಾರೆ.

ಜಿಲ್ಲೆಯ ನಂಜುಡೇಶ್ವರನ ದರ್ಶನಕ್ಕೆ ಸ್ಥಳೀಯ ಆಡಳಿತ ಅವಕಾಶ ನೀಡಿಲ್ಲ. ಹಾಗಾಗಿ ಜನ ಅತ್ತ ಸುಳಿಯುತ್ತಿಲ್ಲ. ಇನ್ನು, ಇತ್ತ ಚಾಮುಂಡೇಶ್ವರಿ ದರ್ಶನಕ್ಕೆ ಅವಕಾಶವಿದ್ದರೂ ಸಹ‌ ಜನರು ಬರುತ್ತಿಲ್ಲ. ಚಾಮುಂಡೇಶ್ವರಿ ದರ್ಶನಕ್ಕೆ ಭಕ್ತರು ಸಾಲುಗಟ್ಟಿ ನಿಲ್ಲುತ್ತಿದ್ದರು. ಆದರೆ ಇಂದು ಬೆಟ್ಟದಲ್ಲಿ ಕೇವಲ ಬೆರಳೆಣಿಕೆಯಷ್ಟು ಜನ ಇದ್ದಾರೆ. ಜನರು ಸ್ವಯಂ ಲಾಕ್ ಡೌನ್ ಮಾಡಿಕೊಂಡಿದ್ದಾರೆ.

tourist spots go without tourists in Mysore district due to Coronavirus (3)

ಚಾಮುಂಡೇಶ್ವರಿ ಬೆಟ್ಟದಲ್ಲಿ ಇಂದು ಕೇವಲ ಬೆರಳೆಣಿಕೆಯಷ್ಟು ಜನ ಇದ್ದಾರೆ.

ಇದಲ್ಲದೆ, ವೀಕೆಂಡ್ ಸಮಯದಲ್ಲಿ ಜನಜಂಗುಳಿ ಇರುತ್ತಿದ್ದ ಜಾಗಗಳಲ್ಲಿಯೂ ಜನ ಸೇರುತ್ತಿಲ್ಲ. ಎಲ್ಲಾ ಪ್ರವಾಸಿ ತಾಣಗಳಲ್ಲೂ ಖಾಲಿ ಖಾಲಿ ದೃಶ್ಯಗಳು ಕಾಣುತ್ತಿವೆ.

ಕೊರೋನಾ ಎರಡನೇ ಅಲೆಯ ಭೀಕರತೆ ಹಿನ್ನೆಲೆ ನೆರೆಯ ಮಂಡ್ಯ‌ ಜಿಲ್ಲೆಯ ದೇವಸ್ಥಾನಗಳು ಒಂದು ತಿಂಗಳ ಕಾಲ ಬಂದ್ ಆಗಿವೆ‌. ಶ್ರೀರಂಗಪಟ್ಟಣದ ರಂಗನಾಥ ಸ್ವಾಮಿ, ನಿಮಿಷಾಂಭ ಹಾಗೂ ಮೇಲುಕೋಟೆ ಚೆಲುವನಾರಾಯಣಸ್ವಾಮಿ ಮತ್ತು ಇತರೆ ದೇವಸ್ಥಾನಗಳು ಮೇ 15 ರವರೆಗೆ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

tourist spots go without tourists in Mysore district due to Coronavirus (4)

ಚಾಮುಂಡೇಶ್ವರಿ ದರ್ಶನ ಮಾಡಿದ ಸಚಿವ ವಿ.ಸೋಮಣ್ಣಸಚಿವ ವಿ.ಸೋಮಣ್ಣ ಅವರು ಪತ್ನಿ ಜೊತೆ ತೆರಳಿ ಚಾಮುಂಡಿ ತಾಯಿಯ ದರ್ಶನ ಪಡೆದರು. ಚಾಮುಂಡೇಶ್ವರಿಗೆ ಸಚಿವ ಸೋಮಣ್ಣ ವಿಶೇಷ ಪೂಜೆ ಸಲ್ಲಿಸಿದರು.

tourist spots go without tourists in Mysore district due to Coronavirus (5)

ಸೋಮಣ್ಣ ಮತ್ತು ಪತ್ನಿ ಚಾಮುಂಡಿ ತಾಯಿಯ ದರ್ಶನ ಪಡೆದರು

ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಮೈಸೂರಿಗೆ ಆಗಮಿಸಿರುವ ಸಚಿವ ಸೋಮಣ್ಣ ಅವರು ನಾಡಿನ ಅಧಿದೇವತೆಯ ದರ್ಶನ ಪಡೆದರು.

tourist spots go without tourists in Mysore district due to Coronavirus (1)

ಸಚಿವ ಸೋಮಣ್ಣ ಚಾಮುಂಡೇಶ್ವರಿ ದೇಗುಲದ ಪ್ರಾಂಗಣದಲ್ಲಿ

Published On - 11:33 am, Sat, 17 April 21

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!