AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ವರದಕ್ಷಿಣೆ ಆಸೆಗೆ ಪತ್ನಿಯನ್ನೇ ಕೊಲೆ ಮಾಡಿದ್ನಾ ಪೊಲೀಸ್ ಪೇದೆ?

ಮೈಸೂರು: ಆತ ಪೊಲೀಸ್ ಪೇದೆ ಕಾನೂನು ಎಲ್ಲಾ ಗೊತ್ತಿದ್ದವನು. ವರದಕ್ಷಿಣೆ ತೆಗೆದುಕೊಳ್ಳುವುದು ಕಾನೂನು ಬಾಹಿರ ಎಂದು ತಿಳಿದಿದ್ದವನು. ಇಷ್ಟಾದರೂ ವರದಕ್ಷಿಣೆ ಆಸೆಗೆ ಪತ್ನಿಯನ್ನೇ ಬಲಿ ಕೊಟ್ಟಿದ್ದಾನೆ. ಈ ಫೋಟೋದಲ್ಲಿರುವ ಈ ಜೋಡಿಯನ್ನ ನೋಡಿದ್ರೆ ಆಹಾ.. ಎಂತಾ ಅದ್ಬುತ ಜೋಡಿ ಅನಿಸದೇ ಇರಲಾರದು. ಜೊತೆಗೆ ಒಂದು ಮಗು. ಸುಖಿ ಸಂಸಾರಕ್ಕೆ ಮತ್ತಿನ್ನೇನು ಬೇಕು ಹೇಳಿ. ಆದ್ರೆ ಕೆಲವರಿಗೆ ದುರಾಸೆಯ ಪೆಡಂಭೂತ ತಲೆ ಹೊಕ್ಕಿರುತ್ತದೆ. ಆಗಲೇ ಆಗಬಾರದು ಆಗಿ ಹೋಗುತ್ತವೆ. ಅಂದ್ಹಾಗೆ ಇವರು ಶ್ರೀಧರ್-ಭಾರತಿ ದಂಪತಿ. ಮೈಸೂರು ಜಿಲ್ಲೆ ಕೆ.ಆರ್.ನಗರದ […]

ಮೈಸೂರು: ವರದಕ್ಷಿಣೆ ಆಸೆಗೆ ಪತ್ನಿಯನ್ನೇ ಕೊಲೆ ಮಾಡಿದ್ನಾ ಪೊಲೀಸ್ ಪೇದೆ?
ಸಾಧು ಶ್ರೀನಾಥ್​
| Edited By: |

Updated on: May 31, 2020 | 8:00 PM

Share

ಮೈಸೂರು: ಆತ ಪೊಲೀಸ್ ಪೇದೆ ಕಾನೂನು ಎಲ್ಲಾ ಗೊತ್ತಿದ್ದವನು. ವರದಕ್ಷಿಣೆ ತೆಗೆದುಕೊಳ್ಳುವುದು ಕಾನೂನು ಬಾಹಿರ ಎಂದು ತಿಳಿದಿದ್ದವನು. ಇಷ್ಟಾದರೂ ವರದಕ್ಷಿಣೆ ಆಸೆಗೆ ಪತ್ನಿಯನ್ನೇ ಬಲಿ ಕೊಟ್ಟಿದ್ದಾನೆ.

ಈ ಫೋಟೋದಲ್ಲಿರುವ ಈ ಜೋಡಿಯನ್ನ ನೋಡಿದ್ರೆ ಆಹಾ.. ಎಂತಾ ಅದ್ಬುತ ಜೋಡಿ ಅನಿಸದೇ ಇರಲಾರದು. ಜೊತೆಗೆ ಒಂದು ಮಗು. ಸುಖಿ ಸಂಸಾರಕ್ಕೆ ಮತ್ತಿನ್ನೇನು ಬೇಕು ಹೇಳಿ. ಆದ್ರೆ ಕೆಲವರಿಗೆ ದುರಾಸೆಯ ಪೆಡಂಭೂತ ತಲೆ ಹೊಕ್ಕಿರುತ್ತದೆ. ಆಗಲೇ ಆಗಬಾರದು ಆಗಿ ಹೋಗುತ್ತವೆ. ಅಂದ್ಹಾಗೆ ಇವರು ಶ್ರೀಧರ್-ಭಾರತಿ ದಂಪತಿ. ಮೈಸೂರು ಜಿಲ್ಲೆ ಕೆ.ಆರ್.ನಗರದ ನಿವಾಸಿಗಳು. ಶ್ರೀಧರ್, ಡಿಎಆರ್ ಪೊಲೀಸ್. ಇನ್ನು ಆತನ‌ ಪತ್ನಿ ಭಾರತಿ‌ ಈಗ ನೆನಪು ಮಾತ್ರ. ಪತ್ನಿ ಭಾರತಿಯನ್ನು ಶ್ರೀಧರ್ ಕೊಲೆ ಮಾಡಿರುವ ಆರೋಪ ಕೇಳಿ ಬಂದಿದೆ.

6 ವರ್ಷಗಳ ಹಿಂದೆ ಶ್ರೀಧರ್ ಹಾಗೂ ಭಾರತಿ ನಡುವೆ ವಿವಾಹವಾಗಿತ್ತು.‌ ಮದುವೆ ಸಮಯದಲ್ಲಿ ಶ್ರೀಧರ್‌ಗೆ 200 ಗ್ರಾಂ ಚಿನ್ನ, 3 ಲಕ್ಷ ನಗದು ಹಾಗೂ ಒಂದು ಬೈಕ್ ವರದಕ್ಷಿಣೆಯಾಗಿ ನೀಡಲಾಗಿತ್ತು. ಪ್ರಾರಂಭದಲ್ಲಿ ಇಬ್ಬರು ಸಾಕಷ್ಟು ಅನ್ಯೋನ್ಯವಾಗಿದ್ದರು. ಎರಡು ವರ್ಷಗಳಿಂದ ಇಬ್ಬರ ನಡುವೆ ನಿವೇಶನಕ್ಕಾಗಿ ಗಲಾಟೆ ಆರಂಭವಾಗಿತ್ತು. ಶ್ರೀಧರ್ ಭಾರತಿ ಮನೆಯವರಿಗೆ ನಿವೆಶನ ನೀಡುವಂತೆ ಪೀಡಿಸುತ್ತಿದ್ದನಂತೆ.

ಸೈಟ್ ವಿಚಾರವಾಗಿ ದಂಪತಿ ನಡುವೆ ಆಗಾಗ ಗಲಾಟೆಯಾಗುತ್ತಿತ್ತಂತೆ. ಹೀಗಿರುವಾಗ ಮೇ 25 ರಂದು ಸುಟ್ಟ ಸ್ಥಿತಿಯಲ್ಲಿ ಭಾರತಿ ಪತ್ತೆಯಾಗಿದ್ದಾರೆ. ಭಾರತಿಯನ್ನು ಪತಿ ಶ್ರೀಧರ್, ಮಾವ ಶಂಕರ್, ಅತ್ತೆ ನಿಂಗಜ ಸುಟ್ಟಿ ಹಾಕಿದ್ದಾರೆ ಅನ್ನೋದು ಭಾರತಿ ಪೋಷಕರ ಆರೋಪ. ಗಾಯಗೊಂಡಿದ್ದ ಭಾರತಿಯನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಚಿಕಿತ್ಸೆ ಫಲಕಾರಿಯಾಗದೆ ಭಾರತಿ ಸಾವನ್ನಪ್ಪಿದ್ದಾರೆ

ಇನ್ನು ಘಟನೆ ಬಳಿಕ ಶ್ರೀಧರ್ ಹಾಗೂ ಅವರ ಮನೆಯವರು ಪರಾರಿಯಾಗಿದ್ದಾರೆ. ಈ ಸಂಬಂಧ ಕೆ.ಆರ್.ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಇದೆಲ್ಲಾ ಏನೇ ಇರಲಿ ಕಾನೂನು ಕಾಪಾಡಬೇಕಾದವರೇ ವರದಕ್ಷಿಣೆ ಆಸೆಗಾಗಿ ಈ ರೀತಿ ಮಾಡಿರೋದು ನಿಜಕ್ಕೂ ದುರಂತವೇ ಸರಿ.

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್