AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮಿತ್ ಶಾ ಸ್ವಾಗತಕ್ಕೆ ರೆಡಿಸನ್ ಬ್ಲೂ ಹೋಟೆಲ್​ನಲ್ಲಿ ವಿಶೇಷ ಸಿದ್ದತೆ: ಮೆನು ಕಾರ್ಡ್​​ ಮೇಲೆ ಭಾವಚಿತ್ರ

ವಿಧಾನಸಭೆ ಸೋಲಿನ ಬಳಿಕ ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಭೇಟಿ ನೀಡಿಲಿದ್ದು, ರಾತ್ರಿ 10.50ಕ್ಕೆ ಮೈಸೂರು ಮಂಡಕಹಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದಾರೆ. ಬಳಿಕ ಅಮಿತ್ ಶಾ ಸ್ವಾಗತಕ್ಕೆ ರೆಡಿಸನ್ ಬ್ಲೂ ಹೋಟೆಲ್‌ನಲ್ಲಿ ವಿಶೇಷ ಸಿದ್ದತೆ ಮಾಡಿಕೊಳ್ಳಲಾಗಿದೆ. ಊಟ, ತಿಂಡಿ ಮೆನು ಕಾರ್ಡ್​ಗಳ ಮೇಲೆ ಅಮಿತ್ ಶಾ ಭಾವಚಿತ್ರವನ್ನು ಪ್ರಿಂಟ್​ ಮಾಡಲಾಗಿದೆ. ಇಂದು ವಾಸ್ತವ್ಯ ಹೂಡಲಿದ್ದಾರೆ.

ಅಮಿತ್ ಶಾ ಸ್ವಾಗತಕ್ಕೆ ರೆಡಿಸನ್ ಬ್ಲೂ ಹೋಟೆಲ್​ನಲ್ಲಿ ವಿಶೇಷ ಸಿದ್ದತೆ: ಮೆನು ಕಾರ್ಡ್​​ ಮೇಲೆ ಭಾವಚಿತ್ರ
ಮೆನು ಕಾರ್ಡ್ ಮೇಲೆ ಅಮಿತ್ ಶಾ ಭಾವಚಿತ್ರ
ರಾಮ್​, ಮೈಸೂರು
| Edited By: |

Updated on: Feb 10, 2024 | 6:57 PM

Share

ಮೈಸೂರು, ಫೆಬ್ರವರಿ 10: ಲೋಕಸಭೆ ಚುನಾವಣೆ ಗೆಲ್ಲಲು ಮೂರು ಪಕ್ಷಗಳು ಈಗಾಗಲೇ ರಂಗ ತಾಲಿಮೂ ಆರಂಭಿಸಿದ್ದಾರೆ. ಅದರಲ್ಲೂ ವಿಧಾನಸಭೆ ಸೋಲಿನ ಬಳಿಕ ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ರಾಜ್ಯಕ್ಕೆ ಭೇಟಿ ನೀಡಿಲಿದ್ದು, ಎರಡು ದಿನ ರಾಜ್ಯ ಪ್ರವಾಸ ಮಾಡಲಿದ್ದಾರೆ. ಇಂದು ರಾತ್ರಿ 10.50ಕ್ಕೆ ಮೈಸೂರು ಮಂಡಕಹಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿರುವ ಅಮಿತ್ ಶಾ, ನೇರವಾಗಿ ವಿಮಾನ ನಿಲ್ದಾಣದಿಂದ ರಸ್ತೆ ಮಾರ್ಗವಾಗಿ ರೆಡಿಸನ್ ಬ್ಲೂ ಹೋಟೆಲ್​ಗೆ ತೆರಳಿ ವಾಸ್ತವ್ಯ ಹೂಡಲಿದ್ದಾರೆ. ಈಗಾಗಲೇ ಹೋಟೆಲ್‌ನಲ್ಲಿ ವಿಶೇಷ ಸಿದ್ದತೆ ಮಾಡಲಾಗಿದೆ. ಅಮಿತ್ ಶಾ ಭಾವಚಿತ್ರದ ಊಟ, ತಿಂಡಿ ಮೆನು ಕಾರ್ಡ್ ಸಿದ್ಧಪಡಿಸಲಾಗಿದ್ದು, ಗುಡ್ ನೈಟ್, ಗುಡ್ ಮಾರ್ನಿಂಗ್ ಶುಭಾಶಯ ಹೊಂದಿರಲಿದೆ. ಅಮಿತ್ ಶಾ ಅವರ ಭಾವಚಿತ್ರವಿರುವ ಕರವಸ್ತ್ರ ಮತ್ತು ಟವೆಲ್‌ಗಳನ್ನು ಸಿದ್ದಪಡಿಸಲಾಗಿದೆ.

ಅಮಿತ್ ಶಾ ಸಂಚರಿಸುವ ಮಾರ್ಗದಲ್ಲಿ ಪೊಲೀಸ್ ಬಂದೋಬಸ್ತ್​​

ಅಮಿತ್ ಶಾ ಅವರು ಸಂಚರಿಸುವ ಮಾರ್ಗದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್​​ ಒದಗಿಸಲಾಗಿದೆ. ಅಮಿತ್ ಶಾ ಉಳಿದುಕೊಳ್ಳಲಿರುವ ಹೋಟೆಲ್ ಕೊಠಡಿಗಳು ಸೇರಿದಂತೆ ಸಂಪೂರ್ಣವಾಗಿ ಪೊಲೀಸರು ತಪಾಸಣೆ ಮಾಡಿದ್ದಾರೆ. ಖಾಸಗಿ ಹೋಟೆಲ್ ಸುತ್ತಮುತ್ತ ಪೊಲೀಸ್ ಕಣ್ಗಾವಲು ವಹಿಸಲಾಗಿದೆ.

ಇದನ್ನೂ ಓದಿ: ಇಂದು ಮೈಸೂರಿಗೆ ಅಮಿತ್ ಶಾ, ಮಂಡ್ಯ, ಕುಮಾರಸ್ವಾಮಿ ಸ್ಪರ್ಧೆ ಬಗ್ಗೆ ತೀರ್ಮಾನ?

ಅಮಿತ್ ಶಾ ಸಂಚರಿಸುವ ಮಾರ್ಗದಲ್ಲಿ ಪೊಲೀಸ್ ಇಲಾಖೆಯಿಂದ ಕಾನ್ವೇ ರಿಹರ್ಸಲ್​ ಮಾಡಲಾಗಿದ್ದು, ಹೋಟೆಲ್ ಮುಂಭಾಗದ ರಸ್ತೆಯಲ್ಲಿ ವಾಹನಗಳ ಸಂಚಾರಕ್ಕೆ ತಾತ್ಕಾಲಿಕ ನಿರ್ಬಂಧ ಹೇರಲಾಗಿದೆ.

ಬಿಜೆಪಿ ಮತ್ತು ಜೆಡಿಎಸ್​ ಕಾರ್ಯಕರ್ತರಿಗೆ ಅಮಿತ್ ಶಾ ಹೊಸ ಸಂದೇಶ

ಅಮಿತ್ ಶಾ, ರಾಜ್ಯದಲ್ಲಿ ಚುನಾವಣಾ ತಂತ್ರಗಾರಿಕೆ ರೂಪಿಸಲಿದ್ದಾರೆ ಎನ್ನಲಾಗುತ್ತಿದೆ. ಅಷ್ಟೇ ಅಲ್ಲದೆ ವಿಧಾನಸಭೆಯಲ್ಲಿ ಬಿಜೆಪಿ ಹೀನಾಯ ಸೋಲಿನ ಬಳಿಕ ಮೊದಲ ಭಾರಿಗೆ ರಾಜ್ಯ ಪ್ರವಾಸ ಮಾಡುತ್ತಿರುವ ಅಮಿತ್ ಶಾ ಬಿಜೆಪಿ-ಜೆಡಿಎಸ್ ನಾಯಕರಿಗೆ ಚುನಾವಣೆ ಗೆಲ್ಲಲು ಹೊಸ ಟಾಸ್ಕ್ ನೀಡುವ ಸಾಧ್ಯತೆ ಇದೆ. ಈ ಮೂಲಕ ಬಿಜೆಪಿ ಮತ್ತು ಜೆಡಿಎಸ್​ ಕಾರ್ಯಕರ್ತರಿಗೆ ಶಾ ಹೊಸ ಸಂದೇಶ ರವಾನೆ ಮಾಡುವ ಸಾಧ್ಯತೆ ಇದೆ.

ಇದನ್ನೂ ಓದಿ: ಕೇಂದ್ರ ಸಚಿವ ಅಮಿತ್ ಶಾ ಇಂದು ಮೈಸೂರಿಗೆ: ಇಲ್ಲಿದೆ ಪ್ರವಾಸದ ವೇಳಾಪಟ್ಟಿ

ಅಮಿತ್ ಶಾ ರಾಜ್ಯ ಪ್ರವಾಸದ ವೇಳೆ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ನಿವಾಸಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಈ ಹಿಂದೆ ಅಮಿತ್ ಶಾ ಜೊತೆ ಜೆಡಿಎಸ್ ನಾಯಕರ ಮೈತ್ರಿ ಮಾತುಕತೆ ವೇಳೆ ರಾಜ್ಯಕ್ಕೆ ಬಂದಾಗ ತಮ್ಮ ನಿವಾಸಕ್ಕೆ ಬರುವಂತೆ ಆಹ್ವಾನ ನೀಡಿದ್ದರಂತೆ. ಹೀಗಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ನಿವಾಸಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ. ಅಮಿತ್ ಶಾ, ಕುಮಾರಸ್ವಾಮಿ ನಿವಾಸದ ಭೇಟಿ ಹಿಂದೆ ಸಾಕಷ್ಟು ಲೆಕ್ಕಾಚಾರ ಕೂಡ ಅಡಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ