ಮೈಸೂರು: ಜಮೀನಿನಲ್ಲಿದ್ದ ಕೇರಳ ಮೂಲದ ರೈತನ ಕೈಕಾಲು ಕಟ್ಟಿ ಹಣ ಕಳ್ಳತನಕ್ಕೆ ಯತ್ನ

ಬಾಳೆ ಕಾಯಿಗಳನ್ನು ಕಟಿಂಗ್ ಮಾಡಲಾಗಿ, ಮಾರಾಟ ಮಾಡಿದ ಬಾಳೆ ಕಾಯಿಯ ಸುಮಾರು 1.75 ಲಕ್ಷ ರೂಪಾಯಿ ಹಣವನ್ನು ಮಾಲೀಕರಿಗೆ ನೀಡಿದ್ದ. ನಿರಂತರವಾಗಿ ಬಾಳೆ ಕಟಾವು ಮಾಡುತ್ತಿರುವುದನ್ನು ಅರಿತಿದ್ದ ಖದೀಮರು ಕಳ್ಳತನಕ್ಕೆ ಸ್ಕೆಚ್ ಹಾಕಿದ್ದು, ಮುಸುಕುದಾರಿಗಳು ತೋಟಕ್ಕೆ ನುಗ್ಗಿ ಕೇರಳದ ರೈತನಿಗೆ ಚಾಕು ಮತ್ತು ಗನ್ ತೋರಿಸಿ ಹಣವನ್ನು ನೀಡುವಂತೆ ಬೆದರಿಕೆ ಒಡ್ಡಿದ್ದಾರೆ.

ಮೈಸೂರು:  ಜಮೀನಿನಲ್ಲಿದ್ದ ಕೇರಳ ಮೂಲದ ರೈತನ ಕೈಕಾಲು ಕಟ್ಟಿ ಹಣ ಕಳ್ಳತನಕ್ಕೆ ಯತ್ನ
ರೈತನ ಬಳಿ ಕಳ್ಳತನಕ್ಕೆ ಯತ್ನ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Oct 20, 2023 | 8:11 AM

ಮೈಸೂರು, ಅ.20: ಹೆಚ್ಚುತ್ತಿರುವ ಕಳ್ಳತನವನ್ನು ತಡೆಯಲು ಪೊಲೀಸರು ಎಷ್ಟೇ ಪ್ರಯತ್ನಪಟ್ಟರೂ ಇದಕ್ಕೆ ಬ್ರೇಕ್​ ಹಾಕಲು ಆಗುತ್ತಿಲ್ಲ. ಹೌದು, ಅದರಂತೆ ಇದೀಗ ಕೇರಳ ಮೂಲದ ರೈತನ ಕೈಕಾಲು ಕಟ್ಟಿ ಲಾಂಗು ಮಚ್ಚು ತೋರಿಸಿ ಹಣ ಕಳ್ಳತನಕ್ಕೆ ಯತ್ನಿಸಿದ ಘಟನೆ ನಂಜನಗೂಡು(Nanjangud) ತಾಲೂಕಿನ ಯಡಹಳ್ಳಿ ಗ್ರಾಮದ ಜಮೀನಿನಲ್ಲಿ ನಡೆದಿದೆ. ಬಾಳೆ ತೋಟಕ್ಕೆ ನುಗ್ಗಿದ ಖದೀಮರು, ಜಮೀನಿನಲ್ಲಿದ್ದ ಕೇರಳ ಮೂಲದ ರೈತನನ್ನು ಬೆದರಿಸಿ ಆತನ ಕೈಕಾಲುಗಳನ್ನು ಕಟ್ಟಿ ಹಾಕಿ ಹಣಕ್ಕಾಗಿ ಪೀಡಿಸಿದ್ದಾರೆ. ಕೊನೆಗೆ ಏನೂ ಸಿಗದೆ ಬರಿಗೈಯಲ್ಲಿ ವಾಪಸ್ಸು ಹೋಗಿದ್ದಾರೆ.

ನಿರಂತರವಾಗಿ ಬಾಳೆ ಕಟಾವು ಮಾಡುತ್ತಿರುವುದನ್ನು ಅರಿತು ಕಳ್ಳತಕ್ಕೆ ಸ್ಕೆಚ್

ಇನ್ನು ಗ್ರಾಮದ ಅರುಣ್ ಎಂಬುವರಿಗೆ ಸೇರಿದ ಬಾಳೆ ತೋಟ ಇದಾಗಿದೆ. ಬಾಳೆ ಕಾಯಿಗಳನ್ನು ಕಟಿಂಗ್ ಮಾಡಲಾಗಿ, ಮಾರಾಟ ಮಾಡಿದ ಬಾಳೆ ಕಾಯಿಯ ಸುಮಾರು 1.75 ಲಕ್ಷ ರೂಪಾಯಿ ಹಣವನ್ನು ಮಾಲೀಕರಿಗೆ ನೀಡಿದ್ದ. ನಿರಂತರವಾಗಿ ಬಾಳೆ ಕಟಾವು ಮಾಡುತ್ತಿರುವುದನ್ನು ಅರಿತಿದ್ದ ಖದೀಮರು ಕಳ್ಳತನಕ್ಕೆ ಸ್ಕೆಚ್ ಹಾಕಿದ್ದು, ಮುಸುಕುದಾರಿಗಳು ತೋಟಕ್ಕೆ ನುಗ್ಗಿ ಕೇರಳದ ರೈತನಿಗೆ ಚಾಕು ಮತ್ತು ಗನ್ ತೋರಿಸಿ ಹಣವನ್ನು ನೀಡುವಂತೆ ಬೆದರಿಕೆ ಒಡ್ಡಿದ್ದಾರೆ. ಬಳಿಕ ಜಮೀನಿನಲ್ಲಿದ್ದ ರೈತ, ಹಣ ನನ್ನಲ್ಲಿಲ್ಲ, ಮಾಲೀಕರು ತೆಗೆದುಕೊಂಡು ಹೋಗಿದ್ದಾರೆ ಎಂದು ಹೇಳಿದ್ದಾರೆ. ಇದನ್ನು ನಂಬದ ಖದೀಮರು ಆತನ ಕೈಕಾಲುಗಳನ್ನು ಕಟ್ಟಿ ಹಾಕಿ, ಶೆಡ್ಡಿನಲ್ಲಿ ಎಲ್ಲಾ ಕಡೆ ಹಣಕ್ಕಾಗಿ ಹುಡುಕಾಟ ನಡೆಸಿ, ಕೊನೆಗೆ ಬರಿ ಕೈಯಲ್ಲಿ ವಾಪಸ್ ಆಗಿದ್ದಾರೆ. ಈ ಕುರಿತು ಹುಲ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಬೆಂಗಳೂರು ಏರ್ಪೋರ್ಟ್ ರಸ್ತೆಯಲ್ಲಿ ಮೂರು ಕಡೆ ಕಳ್ಳತನ, ಆನೇಕಲ್​ನಲ್ಲಿ ಕಾರಿನ ಗಾಜು ಒಡೆದು ಹಣ ಕದ್ದ ಖದೀಮರು

ಹೆಜ್ಜೇನು ದಾಳಿಗೆ ಅಸುನೀಗಿದ ರೈತ

ಹೆಜ್ಜೇನು ದಾಳಿಯಿಂದ ಆಸ್ಪತ್ರೆ ಸೇರಿದ್ದ ರೈತ ಸಾವನ್ನಪ್ಪಿದ ಘಟನೆ ಮೈಸೂರು‌ ಜಿಲ್ಲೆಯ ಹುಣಸೂರು ತಾಲ್ಲೂಕಿನ ತಟ್ಟೆಕೆರೆ ಗ್ರಾಮದಲ್ಲಿ ನಡೆದಿದೆ. ಲಕ್ಷ್ಮಣ್(58) ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ ರೈತ. ಇತ ಮೇಕೆಯ ಮೇವಿಗಾಗಿ ಮರದಲ್ಲಿ ಸೊಪ್ಪು ಕೀಳುತ್ತಿದ್ದಾಗ ಜೇನು ದಾಳಿ ಮಾಡಿತ್ತು. ಇದರಿಂದ ತೀವ್ರ ಅಸ್ವಸ್ಥಗೊಂಡು ಆಸ್ಪತ್ರೆ ಸೇರಿದ್ದ ರೈತ, ಇದೀಗ ಚಿಕಿತ್ಸೆ ಫಲಿಸಿದೇ ಕೊನೆಯುಸಿರೆಳೆದಿದ್ದಾನೆ. ಈ ಕುರಿತು ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ