AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚರ್ಚೆಗೆ ಕಾರಣವಾದ ಸಿಎಂ ಪದಕ ಘೋಷಣೆ; ಅಮಾನತುಗೊಂಡ ಹೆಡ್​​ ಕಾನ್ಸ್​ಟೇಬಲ್​ಗೆ ಮುಖ್ಯಮಂತ್ರಿ ಪದಕ

ಕಳುವು ಹಾಗೂ ಗಾಂಜಾ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಸಂಬಂಧಿಕರ ಜೊತೆ ಸಂಪರ್ಕ ಇಟ್ಟುಕೊಂಡಿದ್ದ ಆರೋಪ ಸಾಭೀತಾದ ಹಿನ್ನೆಲೆ ಕಳೆದ ತಿಂಗಳಷ್ಟೇ ಹೆಡ್​​ ಕಾನ್ಸ್​ಟೇಬಲ್ ಸಲೀಂ ಪಾಷಾ ಎಂಬುವವರನ್ನು ಅಮಾನತುಗೊಳಿಸಲಾಗಿತ್ತು. ಇದೀಗ 2024ರಲ್ಲಿ ಅಮಾನತುಗೊಳಿಸಿ, 2023ರ ಕರ್ತವ್ಯ ನಿರ್ವಹಣೆಗೆ ಪದಕ ನೀಡಲಾಗಿದ್ದು, ಸಿಎಂ ಪದಕ ಘೋಷಣೆ ಚರ್ಚೆಗೆ ಗ್ರಾಸವಾಗಿದೆ.

ಚರ್ಚೆಗೆ ಕಾರಣವಾದ ಸಿಎಂ ಪದಕ ಘೋಷಣೆ; ಅಮಾನತುಗೊಂಡ ಹೆಡ್​​ ಕಾನ್ಸ್​ಟೇಬಲ್​ಗೆ ಮುಖ್ಯಮಂತ್ರಿ ಪದಕ
ಅಮಾನತುಗೊಂಡ ಹೆಡ್​​ ಕಾನ್ಸ್​ಟೇಬಲ್​ಗೆ ಮುಖ್ಯಮಂತ್ರಿ ಪದಕ
ರಾಮ್​, ಮೈಸೂರು
| Edited By: |

Updated on: Aug 15, 2024 | 3:53 PM

Share

ಮೈಸೂರು, ಆ.15: ಇಂದು 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ದೇಶದೆಲ್ಲೆಡೆ ಅದ್ದೂರಿಯಾಗಿ ಆಚರಿಸಲಾಗುತ್ತಿದೆ. ಅದರಂತೆ ಉತ್ತಮ ಕರ್ತವ್ಯ ನಿರ್ವಹಣೆ ಮಾಡಿದ ರಾಜ್ಯದ 126 ಪೊಲೀಸ್​ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ 2023ನೇ ಸಾಲಿನ ಮುಖ್ಯಮಂತ್ರಿ ಪದಕ (chief minister medal) ನೀಡಲಾಗಿದೆ. ಆದರೆ, ಇದರಲ್ಲಿ ಅಮಾನತುಗೊಂಡಿರುವ ಮೈಸೂರು ಸಿಸಿಬಿ ಘಟಕದ ಹೆಡ್ ಕಾನ್ಸಟೇಬಲ್ ಸಲೀಂ ಪಾಷಾಗೆ ಸಿಎಂ ಪದಕ ನೀಡಿದ್ದು, ಇದೀಗ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

ಅಪರಾಧ ಪ್ರಕರಣಗಳಲ್ಲಿ ಆರೋಪಿಗಳ ಜೊತೆ ಸಂಪರ್ಕ ಆರೋಪ

ಒಂದು ತಿಂಗಳ ಹಿಂದೆ ಅಮಾನತು ಆಗಿದ್ದ ಸಲೀಂ‌ ಪಾಷಾ, ಅಪರಾಧ ಪ್ರಕರಣಗಳಲ್ಲಿ ಆರೋಪಿಗಳ ಜೊತೆ ಸಂಪರ್ಕ, ಸಾರ್ವಜನಿಕರ ಆಸ್ತಿ ಕಳುವಿಗೆ ಪರೋಕ್ಷ ಸಹಾಯದ ಜೊತೆಗೆ ದಾಖಲೆಗಳ ಸೋರಿಕೆ ಮಾಡಿರುವ ಶಂಕೆಯ ಆರೋಪಗಳ ಹಿನ್ನೆಲೆ ಅಮಾನತುಗೊಳಿಸಲಾಗಿತ್ತು. ಹೀಗಿರುವಾಗ 2024ನೇ ಸಾಲಿನ ಸಿಎಂ ಪದಕ ಪಟ್ಟಿಯಲ್ಲಿ ಸಲೀಂ ಪಾಷಾ ಅವರ ಹೆಸರು ಬಂದಿದ್ದು, ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

ಇದನ್ನೂ ಓದಿ:ವಿವಿಧ ಕ್ರೀಡಾಕೂಟಗಳಲ್ಲಿ ಪದಕ ಗೆದ್ದ ರಾಜ್ಯದ 12 ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗ

2024ರಲ್ಲಿ ಅಮಾನತು, 2023ರ ಕರ್ತವ್ಯ ನಿರ್ವಹಣೆಗೆ ಪದಕ

ಮೇಟಗಳ್ಳಿ ಹಾಗೂ ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕಳುವು ಹಾಗೂ ಗಾಂಜಾ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಸಂಬಂಧಿಕರ ಜೊತೆ ಸಂಪರ್ಕ ಇಟ್ಟುಕೊಂಡಿದ್ದ ಆರೋಪ ಕೇಳಿಬಂದಿತ್ತು. ಜೊತೆಗೆ ಮೊಬೈಲ್ ಕಾಲ್ ಡಿಟೈಲ್ಸ್​ ಸಂಗ್ರಹ ವೇಳೆ ಮೇಲ್ನೋಟಕ್ಕೆ ಆರೋಪ ಸಾಬೀತು ಕೂಡ ಆಗಿತ್ತು. ಆರೋಪ ಸಾಭೀತಾದ ಹಿನ್ನೆಲೆ ಕಳೆದ ತಿಂಗಳಷ್ಟೇ ಅಮಾನತುಗೊಳಿಸಲಾಗಿತ್ತು. ಇದೀಗ 2024ರಲ್ಲಿ ಅಮಾನತುಗೊಳಿಸಿ, 2023ರ ಕರ್ತವ್ಯ ನಿರ್ವಹಣೆಗೆ ಪದಕ ನೀಡಲಾಗಿದೆ. ಈ ಮೂಲಕ ಸಿಎಂ ಪದಕ ಘೋಷಣೆ ಚರ್ಚೆಗೆ ಗ್ರಾಸವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್  ಮಾಡಿ

Follow Us
Ram
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More
ಇಂದು ಈ ರಾಶಿಯವರಿಗೆ ವಾಹನ ಖರೀದಿ ಯೋಗ!
ಇಂದು ಈ ರಾಶಿಯವರಿಗೆ ವಾಹನ ಖರೀದಿ ಯೋಗ!
ಎಂಎಲ್​ಸಿಗಳ ಪ್ರಮಾಣವಚನಕ್ಕೆ ಬೈಕ್​ನಲ್ಲೇ ಆಗಮಿಸಿದ ಮಹಾರಾಷ್ಟ್ರ ಸಿಎಂ
ಎಂಎಲ್​ಸಿಗಳ ಪ್ರಮಾಣವಚನಕ್ಕೆ ಬೈಕ್​ನಲ್ಲೇ ಆಗಮಿಸಿದ ಮಹಾರಾಷ್ಟ್ರ ಸಿಎಂ
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ