AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನಲ್ಲಿ ಹುಲಿ ದಾಳಿಗೆ ಮತ್ತೊಂದು ಬಲಿ: ವ್ಯಾಘ್ರನ ಬಂಧನಕ್ಕೆ ಮುಂದುವರೆದ ಶೋಧ ಕಾರ್ಯ

ಮೈಸೂರಿನಲ್ಲಿ ಹುಲಿ ದಾಳಿ ಕಾಟ ಹೆಚ್ಚಾಗಿದೆ. ನಿನ್ನೆ ಹುಲಿ ದಾಳಿಗೆ ಮತ್ತೋರ್ವ ರೈತ ಬಲಿಯಾಗಿದ್ದಾನೆ. ಅರಣ್ಯ ಇಲಾಖೆ ಸಿಬ್ಬಂದಿ ಆದಷ್ಟು ಬೇಗ ಹುಲಿ ಹಿಡಿಯುವಂತೆ ಗ್ರಾಮಸ್ಥರು ಒತ್ತಡ ಹಾಕುತ್ತಿದ್ದು ಶೋಧ ಕಾರ್ಯ ಮುಂದುವರೆದಿದೆ. ಹುಲಿ ಒಂದು ದಿನ ಬಂಡೀಪುರ ಕಾಡಿನಲ್ಲಿದ್ರೆ‌ ಮತ್ತೊಂದು ದಿನ ಕಾಡಂಚಿನ ಪ್ರದೇಶದ ಜಮೀನಲ್ಲಿ ಕಾಣಿಸಿಕೊಳ್ಳುತ್ತಿದೆ. ಸದ್ಯ ಇದಕ್ಕಾಗಿ ಇಲಾಖೆ ಸಿಬ್ಬಂದಿಗಳು 30 ಕ್ಕು ಹೆಚ್ಚು ಕ್ಯಾಮರಾ ಟ್ರಾಪ್ ಗಳನ್ಜು ಅಳವಡಿಸಿ ಹುಲಿ ಜಾಡು ಹಿಡಿಯಲು ಮುಂದಾಗಿದ್ದಾರೆ.

ಮೈಸೂರಿನಲ್ಲಿ ಹುಲಿ ದಾಳಿಗೆ ಮತ್ತೊಂದು ಬಲಿ: ವ್ಯಾಘ್ರನ ಬಂಧನಕ್ಕೆ ಮುಂದುವರೆದ ಶೋಧ ಕಾರ್ಯ
ಬಾಲಾಜಿ ನಾಯಕ್
ರಾಮ್​, ಮೈಸೂರು
| Edited By: |

Updated on: Nov 07, 2023 | 10:17 AM

Share

ಮೈಸೂರು, ನ.07: ಮೈಸೂರಿನ್ಲಲಿ ಮಾನವ ಪ್ರಾಣಿ ಸಂಘರ್ಷ ಮುಂದುವರೆದಿದೆ. ಇತ್ತೀಚೆಗೆ ಜಿಲ್ಲೆಯ ನಂಜನಗೂಡು ತಾಲೂಕಿನ‌ ಮಹದೇವನಗರದಲ್ಲಿ ಜಾನುವಾರು ಮೇಲೆ ದಾಳಿ ಮಾಡಿ ರಕ್ಷಣೆಗೆ ಹೋದ ವೀರಭದ್ರ ಬೋವಿ ಎಂಬ ರೈತನ ಮೇಲೆ ಹುಲಿ ದಾಳಿ (Tiger Attack) ನಡೆಸಿತ್ತು. ಈಗ ಇದೇ ರೀತಿಯ ಘಟನೆ ಮರುಕಳಿಸಿದೆ. ಮತ್ತೊಂದೆಡೆ ನಿನ್ನೆ ಮೈಸೂರು ಜಿಲ್ಲೆಯಲ್ಲಿ ಹುಲಿ ದಾಳಿಯಿಂದ ಮತ್ತೋರ್ವ ರೈತ ಪ್ರಾಣ (Death) ಕಳೆದುಕೊಂಡಿದ್ದಾನೆ. ರೈತ ಬಾಲಾಜಿ ನಾಯಕ್ (42) ಹುಲಿ ದಾಳಿಗೆ ಬಲಿಯಾಗಿದ್ದು ಹುಲಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.

ಬಿ.ಮಟಕೆರೆ-ಹೊಸಕೋಟೆ ರಸ್ತೆಯಲ್ಲಿ ನಿನ್ನೆ ದನ ಮೇಯಿಸುವಾಗ ಹುಲಿ ದನಗಳ ಮೇಲೆ ದಾಳಿ ಮಾಡಿತ್ತು. ಆಗ ದನಗಳು ಹುಲಿಗೆ ಸಿಗದೆ ಚೆಲ್ಲಾ ಪಿಲ್ಲಿಯಾಗಿ ಓಡಿದವು. ದನಗಳು ಸಿಗದ ಹಿನ್ನೆಲೆ ಬಾಲಾಜಿ ಮೇಲೆ ಹುಲಿ ದಾಳಿ ನಡೆಸಿತ್ತು. ಬಳಿಕ ಮೃತದೇಹ ಕಾಡಿಗೆ ಎಳೆದುಕೊಂಡು ಹೋಗಿತ್ತು. ಇದನ್ನು ಗಮನಿಸಿದ ಅಕ್ಕ ಪಕ್ಕದ ಜಮೀನಿನವರು ಕೂಗಾಡಿದ್ದು ಶಬ್ದ ಕೇಳಿ ಮೃತದೇಹ ಬಿಟ್ಟು ಹುಲಿ ಓಡಿ ಹೋಗಿತ್ತು. ಹುಲಿಯು ರೈತನ ಒಂದು ಕಾಲು, ದೇಹದ ಕೆಲ ಭಾಗ ತಿಂದು ಹಾಕಿದೆ. ಮತ್ತೆ ಅದೇ ಸ್ಥಳಕ್ಕೆ ಹುಲಿ ಬರುವ ಸಾಧ್ಯತೆ ಹಿನ್ನೆಲೆ ಅರಣ್ಯ ಇಲಾಖೆ ಅಲರ್ಟ್ ಆಗಿದೆ. ಹುಲಿ ಸೆರೆಗೆ ಕಾರ್ಯಾಚರಣೆ ನಡೆಸುತ್ತಿದೆ.

ಇದನ್ನೂ ಓದಿ: ಮೈಸೂರು: ಹುಲಿ ಸೆರೆಗಾಗಿ ಕಾರ್ಯಾಚರಣೆಗಿಳಿದ ವಿಶೇಷ ತಂಡ: 6 ಸಿಸಿ ಕ್ಯಾಮರಾ ಅಳವಡಿಸಿದ ಅರಣ್ಯ ಇಲಾಖೆ

ಹುಲಿ ದಾಳಿಯ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ತಹಶೀಲ್ದಾರ್ ಪರಶಿವಮೂರ್ತಿ, ಪಿಎಸ್‌ಐ ನಂದೀಶ್‌ ಕುಮಾರ್ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ಪೊಲೀಸ್ ಸಿಬ್ಬಂದಿಗಳಾದ ನಾಗನಾಯಕ, ಇಮ್ರಾನ್ ಅಹಮದ್ಮ ಕೃಷ್ಣ, ಆನಂದ್, ಬಿ.ಮಟಕೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಎಚ್.ಜಿ.ಅಜಿತ್‌ಕುಮಾರ್, ಸದಸ್ಯರಾದ ದೇವದಾಸ್, ಕುರ್ಣೇಗಾಲ ಬೆಟ್ಟಸ್ವಾಮಿ, ಕೃಷ್ಣ, ಮುಖಂಡರಾದ ನಾರಾಯಣ ನಾಯ್ಕ, ಹೇಮಾಜಿನಾಯ್ಕ, ರಮೇಶ್, ರಾಮು, ಚಂದ್ರ, ಶಿವಾಜಿ ನಾಯ್ಕ, ಸುಂದರ, ಸುರೇಶ್, ಸಿದ್ದಯ್ಯ ಹಾಜರಿದ್ದರು. ಮೈಸೂರು ಅರಣ್ಯ ಅಧಿಕಾರಿಗಳಿಗೆ ಹುಲಿ ಹಿಡಿಯುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ರಾಂಪುರ ಕ್ಯಾಂಪ್ ನಿಂದ ಬಂದ ಪಾರ್ಥ ಹಾಗೂ ಧರ್ಮ ಆನೆಗಳ ಮೂಲಕ ಹುಲಿ ಕೂಂಬಿಂಗ್ ನಡೆಯುತ್ತಿದೆ. ಕಾಡಂಚಿನ ವಿವಿಧ ಗ್ರಾಮಗಳ ಜಮೀನಿನಲ್ಲಿ ಹುಲಿ ಓಡಾಟ ಶುರುಮಾಡಿದೆ ಎಂಬ ಮಾಹಿತಿ ಸಿಕ್ಕಿದ್ದು ಒಂದು ಕಡೆ ಹೆಜ್ಜೆ ಗುರುತು ಕಾಣಿಸಿದೆ ಅಂತ ಸಿಬ್ಬಂದಿಗಳು ಆ ಸ್ಥಳಕ್ಕೆ ಹೋದ್ರೆ ಮತ್ತೊಂದು ಸ್ಥಳದಲ್ಲಿ ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದೆ. ಹುಲಿ ಒಂದು ದಿನ ಬಂಡೀಪುರ ಕಾಡಿನಲ್ಲಿದ್ರೆ‌ ಮತ್ತೊಂದು ದಿನ ಕಾಡಂಚಿನ ಪ್ರದೇಶದ ಜಮೀನಲ್ಲಿ ಕಾಣಿಸಿಕೊಳ್ಳುತ್ತಿದೆ. ಸದ್ಯ ಇದಕ್ಕಾಗಿ ಇಲಾಖೆ ಸಿಬ್ಬಂದಿಗಳು 30 ಕ್ಕು ಹೆಚ್ಚು ಕ್ಯಾಮರಾ ಟ್ರಾಪ್ ಗಳನ್ಜು ಅಳವಡಿಸಿ ಹುಲಿ ಜಾಡು ಹಿಡಿಯಲು ಮುಂದಾಗಿದ್ದಾರೆ. ಮೈಸೂರಿನ ಜನರಿಗೆ ಹುಲಿ ಕಾಟ ಹೆಚ್ಚಾಗಿದ್ದು ಪ್ರತಿ ದಿನ ದನಮ ಮೇಕೆ, ಮನುಷ್ಯರ ಮೇಲೆ ಹುಲಿ ದಾಳಿ ನಡೆಸುತ್ತಿದೆ.

ಮೈಸೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್