AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನಲ್ಲಿ ಹುಲಿ ದಾಳಿಗೆ ಮತ್ತೊಂದು ಬಲಿ: ವ್ಯಾಘ್ರನ ಬಂಧನಕ್ಕೆ ಮುಂದುವರೆದ ಶೋಧ ಕಾರ್ಯ

ಮೈಸೂರಿನಲ್ಲಿ ಹುಲಿ ದಾಳಿ ಕಾಟ ಹೆಚ್ಚಾಗಿದೆ. ನಿನ್ನೆ ಹುಲಿ ದಾಳಿಗೆ ಮತ್ತೋರ್ವ ರೈತ ಬಲಿಯಾಗಿದ್ದಾನೆ. ಅರಣ್ಯ ಇಲಾಖೆ ಸಿಬ್ಬಂದಿ ಆದಷ್ಟು ಬೇಗ ಹುಲಿ ಹಿಡಿಯುವಂತೆ ಗ್ರಾಮಸ್ಥರು ಒತ್ತಡ ಹಾಕುತ್ತಿದ್ದು ಶೋಧ ಕಾರ್ಯ ಮುಂದುವರೆದಿದೆ. ಹುಲಿ ಒಂದು ದಿನ ಬಂಡೀಪುರ ಕಾಡಿನಲ್ಲಿದ್ರೆ‌ ಮತ್ತೊಂದು ದಿನ ಕಾಡಂಚಿನ ಪ್ರದೇಶದ ಜಮೀನಲ್ಲಿ ಕಾಣಿಸಿಕೊಳ್ಳುತ್ತಿದೆ. ಸದ್ಯ ಇದಕ್ಕಾಗಿ ಇಲಾಖೆ ಸಿಬ್ಬಂದಿಗಳು 30 ಕ್ಕು ಹೆಚ್ಚು ಕ್ಯಾಮರಾ ಟ್ರಾಪ್ ಗಳನ್ಜು ಅಳವಡಿಸಿ ಹುಲಿ ಜಾಡು ಹಿಡಿಯಲು ಮುಂದಾಗಿದ್ದಾರೆ.

ಮೈಸೂರಿನಲ್ಲಿ ಹುಲಿ ದಾಳಿಗೆ ಮತ್ತೊಂದು ಬಲಿ: ವ್ಯಾಘ್ರನ ಬಂಧನಕ್ಕೆ ಮುಂದುವರೆದ ಶೋಧ ಕಾರ್ಯ
ಬಾಲಾಜಿ ನಾಯಕ್
ರಾಮ್​, ಮೈಸೂರು
| Edited By: ಆಯೇಷಾ ಬಾನು|

Updated on: Nov 07, 2023 | 10:17 AM

Share

ಮೈಸೂರು, ನ.07: ಮೈಸೂರಿನ್ಲಲಿ ಮಾನವ ಪ್ರಾಣಿ ಸಂಘರ್ಷ ಮುಂದುವರೆದಿದೆ. ಇತ್ತೀಚೆಗೆ ಜಿಲ್ಲೆಯ ನಂಜನಗೂಡು ತಾಲೂಕಿನ‌ ಮಹದೇವನಗರದಲ್ಲಿ ಜಾನುವಾರು ಮೇಲೆ ದಾಳಿ ಮಾಡಿ ರಕ್ಷಣೆಗೆ ಹೋದ ವೀರಭದ್ರ ಬೋವಿ ಎಂಬ ರೈತನ ಮೇಲೆ ಹುಲಿ ದಾಳಿ (Tiger Attack) ನಡೆಸಿತ್ತು. ಈಗ ಇದೇ ರೀತಿಯ ಘಟನೆ ಮರುಕಳಿಸಿದೆ. ಮತ್ತೊಂದೆಡೆ ನಿನ್ನೆ ಮೈಸೂರು ಜಿಲ್ಲೆಯಲ್ಲಿ ಹುಲಿ ದಾಳಿಯಿಂದ ಮತ್ತೋರ್ವ ರೈತ ಪ್ರಾಣ (Death) ಕಳೆದುಕೊಂಡಿದ್ದಾನೆ. ರೈತ ಬಾಲಾಜಿ ನಾಯಕ್ (42) ಹುಲಿ ದಾಳಿಗೆ ಬಲಿಯಾಗಿದ್ದು ಹುಲಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.

ಬಿ.ಮಟಕೆರೆ-ಹೊಸಕೋಟೆ ರಸ್ತೆಯಲ್ಲಿ ನಿನ್ನೆ ದನ ಮೇಯಿಸುವಾಗ ಹುಲಿ ದನಗಳ ಮೇಲೆ ದಾಳಿ ಮಾಡಿತ್ತು. ಆಗ ದನಗಳು ಹುಲಿಗೆ ಸಿಗದೆ ಚೆಲ್ಲಾ ಪಿಲ್ಲಿಯಾಗಿ ಓಡಿದವು. ದನಗಳು ಸಿಗದ ಹಿನ್ನೆಲೆ ಬಾಲಾಜಿ ಮೇಲೆ ಹುಲಿ ದಾಳಿ ನಡೆಸಿತ್ತು. ಬಳಿಕ ಮೃತದೇಹ ಕಾಡಿಗೆ ಎಳೆದುಕೊಂಡು ಹೋಗಿತ್ತು. ಇದನ್ನು ಗಮನಿಸಿದ ಅಕ್ಕ ಪಕ್ಕದ ಜಮೀನಿನವರು ಕೂಗಾಡಿದ್ದು ಶಬ್ದ ಕೇಳಿ ಮೃತದೇಹ ಬಿಟ್ಟು ಹುಲಿ ಓಡಿ ಹೋಗಿತ್ತು. ಹುಲಿಯು ರೈತನ ಒಂದು ಕಾಲು, ದೇಹದ ಕೆಲ ಭಾಗ ತಿಂದು ಹಾಕಿದೆ. ಮತ್ತೆ ಅದೇ ಸ್ಥಳಕ್ಕೆ ಹುಲಿ ಬರುವ ಸಾಧ್ಯತೆ ಹಿನ್ನೆಲೆ ಅರಣ್ಯ ಇಲಾಖೆ ಅಲರ್ಟ್ ಆಗಿದೆ. ಹುಲಿ ಸೆರೆಗೆ ಕಾರ್ಯಾಚರಣೆ ನಡೆಸುತ್ತಿದೆ.

ಇದನ್ನೂ ಓದಿ: ಮೈಸೂರು: ಹುಲಿ ಸೆರೆಗಾಗಿ ಕಾರ್ಯಾಚರಣೆಗಿಳಿದ ವಿಶೇಷ ತಂಡ: 6 ಸಿಸಿ ಕ್ಯಾಮರಾ ಅಳವಡಿಸಿದ ಅರಣ್ಯ ಇಲಾಖೆ

ಹುಲಿ ದಾಳಿಯ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ತಹಶೀಲ್ದಾರ್ ಪರಶಿವಮೂರ್ತಿ, ಪಿಎಸ್‌ಐ ನಂದೀಶ್‌ ಕುಮಾರ್ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ಪೊಲೀಸ್ ಸಿಬ್ಬಂದಿಗಳಾದ ನಾಗನಾಯಕ, ಇಮ್ರಾನ್ ಅಹಮದ್ಮ ಕೃಷ್ಣ, ಆನಂದ್, ಬಿ.ಮಟಕೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಎಚ್.ಜಿ.ಅಜಿತ್‌ಕುಮಾರ್, ಸದಸ್ಯರಾದ ದೇವದಾಸ್, ಕುರ್ಣೇಗಾಲ ಬೆಟ್ಟಸ್ವಾಮಿ, ಕೃಷ್ಣ, ಮುಖಂಡರಾದ ನಾರಾಯಣ ನಾಯ್ಕ, ಹೇಮಾಜಿನಾಯ್ಕ, ರಮೇಶ್, ರಾಮು, ಚಂದ್ರ, ಶಿವಾಜಿ ನಾಯ್ಕ, ಸುಂದರ, ಸುರೇಶ್, ಸಿದ್ದಯ್ಯ ಹಾಜರಿದ್ದರು. ಮೈಸೂರು ಅರಣ್ಯ ಅಧಿಕಾರಿಗಳಿಗೆ ಹುಲಿ ಹಿಡಿಯುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ರಾಂಪುರ ಕ್ಯಾಂಪ್ ನಿಂದ ಬಂದ ಪಾರ್ಥ ಹಾಗೂ ಧರ್ಮ ಆನೆಗಳ ಮೂಲಕ ಹುಲಿ ಕೂಂಬಿಂಗ್ ನಡೆಯುತ್ತಿದೆ. ಕಾಡಂಚಿನ ವಿವಿಧ ಗ್ರಾಮಗಳ ಜಮೀನಿನಲ್ಲಿ ಹುಲಿ ಓಡಾಟ ಶುರುಮಾಡಿದೆ ಎಂಬ ಮಾಹಿತಿ ಸಿಕ್ಕಿದ್ದು ಒಂದು ಕಡೆ ಹೆಜ್ಜೆ ಗುರುತು ಕಾಣಿಸಿದೆ ಅಂತ ಸಿಬ್ಬಂದಿಗಳು ಆ ಸ್ಥಳಕ್ಕೆ ಹೋದ್ರೆ ಮತ್ತೊಂದು ಸ್ಥಳದಲ್ಲಿ ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದೆ. ಹುಲಿ ಒಂದು ದಿನ ಬಂಡೀಪುರ ಕಾಡಿನಲ್ಲಿದ್ರೆ‌ ಮತ್ತೊಂದು ದಿನ ಕಾಡಂಚಿನ ಪ್ರದೇಶದ ಜಮೀನಲ್ಲಿ ಕಾಣಿಸಿಕೊಳ್ಳುತ್ತಿದೆ. ಸದ್ಯ ಇದಕ್ಕಾಗಿ ಇಲಾಖೆ ಸಿಬ್ಬಂದಿಗಳು 30 ಕ್ಕು ಹೆಚ್ಚು ಕ್ಯಾಮರಾ ಟ್ರಾಪ್ ಗಳನ್ಜು ಅಳವಡಿಸಿ ಹುಲಿ ಜಾಡು ಹಿಡಿಯಲು ಮುಂದಾಗಿದ್ದಾರೆ. ಮೈಸೂರಿನ ಜನರಿಗೆ ಹುಲಿ ಕಾಟ ಹೆಚ್ಚಾಗಿದ್ದು ಪ್ರತಿ ದಿನ ದನಮ ಮೇಕೆ, ಮನುಷ್ಯರ ಮೇಲೆ ಹುಲಿ ದಾಳಿ ನಡೆಸುತ್ತಿದೆ.

ಮೈಸೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Ram
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?