AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಡಾದಲ್ಲಿ ಮತ್ತೊಂದು ಹಗರಣ: ಮಾಜಿ ಅಧ್ಯಕ್ಷನ ವಿರುದ್ಧ ಗಂಭೀರ ಆರೋಪ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಬದಲಿ ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾಗಿರುವ ಹಗರಣ ರಾಜ್ಯದಲ್ಲಿ ಸಾಕಷ್ಟು ಚರ್ಚೆಯಾಗುತ್ತಿದೆ. ಈ ಮಧ್ಯೆ, ಮುಡಾ ಮಾಜಿ ಅಧ್ಯಕ್ಷ ಹೆಚ್​.ವಿ.ರಾಜೀವ್ ಅವರು ನಡೆಸಿದ್ದಾರೆ ಎನ್ನಲಾಗಿರುವ​ ಅಕ್ರಮ ಬಯಲಾಗಿದೆ.

ಮುಡಾದಲ್ಲಿ ಮತ್ತೊಂದು ಹಗರಣ: ಮಾಜಿ ಅಧ್ಯಕ್ಷನ ವಿರುದ್ಧ ಗಂಭೀರ ಆರೋಪ
ಮುಡಾ
ದಿಲೀಪ್​, ಚೌಡಹಳ್ಳಿ
| Updated By: ವಿವೇಕ ಬಿರಾದಾರ|

Updated on: Sep 08, 2024 | 9:58 AM

Share

ಮೈಸೂರು, ಸೆಪ್ಟೆಂಬರ್​ 08: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (MUDA) ಬದಲಿ ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾಗಿರುವ ಹಗರಣ ರಾಜ್ಯದಲ್ಲಿ ಸಾಕಷ್ಟು ಚರ್ಚೆಯಾಗುತ್ತಿದೆ. ಈ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಭಾಗಿಯಾಗಿದ್ದಾರೆ ಎಂದು ವಿಪಕ್ಷಗಳು ಆರೋಪ ಮಾಡುತ್ತಿವೆ. ಈ ಮಧ್ಯೆ, ಮುಡಾ ಮಾಜಿ ಅಧ್ಯಕ್ಷ ಹೆಚ್​.ವಿ.ರಾಜೀವ್ ಅವರು ನಡೆಸಿದ್ದಾರೆ ಎನ್ನಲಾಗಿರುವ​ ಅಕ್ರಮ ಬಯಲಾಗಿದೆ. ಆಯುಕ್ತರ ಅನುಮತಿ ಇಲ್ಲದೇ ಹೆಚ್​.ವಿ.ರಾಜೀವ್ ಒಂದೇ ದಿನದಲ್ಲಿ 848 ನಿವೇಶನಗಳ ಖಾತೆ ಮಾಡಿಸಿಕೊಂಡಿದ್ದಾರೆ.

ಮೈಸೂರು ಜ್ಞಾನ ಗಂಗಾ ಗೃಹ ನಿರ್ಮಾಣ ಸಹಕಾರ ಸಂಘದಿಂದ ಕೇರ್ಗಳ್ಳಿ, ನಗರ್ತಳ್ಳಿ ಮತ್ತು ಬಲ್ಲಹಳ್ಳಿ ಗ್ರಾಮದ ಒಟ್ಟು 252 ಎಕರೆ 10 ಗುಂಟೆ ಪ್ರದೇಶದಲ್ಲಿ ಬಡವಾಣೆ ನಿರ್ಮಾಣ ಮಾಡಲಾಗಿದೆ. ನಗರಾಭಿವೃದ್ಧಿ ಪ್ರಾಧಿಕಾರದ 2018ರ ಆದೇಶದ ವಿರುದ್ಧವಾಗಿ ಬಡಾವಣೆ ನಿರ್ಮಾಣ ಮಾಡಲಾಗಿದೆ. ಜ್ಞಾನಗಂಗಾ ಗೃಹ ನಿರ್ಮಾಣ ಸಹಕಾರ ಸಂಘಕ್ಕೆ ಎಚ್.ವಿ ರಾಜೀವ್ ಅವರೇ ಅಧ್ಯಕ್ಷರಾಗಿದ್ದಾರೆ.

252 ಎಕರೆ ಜಾಗದ ಕೆಲವು ಸರ್ವೆ ನಂಬರ್​ಗಳು ವ್ಯಾಜ್ಯ ನ್ಯಾಯಾಲಯದಲ್ಲಿರುತ್ತೆ. ಹೀಗಾಗಿ ಸದರಿ ಬಡವಾಣೆಗಳ ನಿವೇಶನ ಹಕ್ಕುಗಳನ್ನ ಮುಡಾ ವರ್ಗಾವಣೆ ಮಾಡಬಾರದೆಂದು‌ ಆದೇಶವಿದೆ. ಹೀಗಿದ್ದರೂ ಹೆಚ್.ವಿ ರಾಜೀವ್ 848 ನಿವೇಶನಗಳನ್ನ ಒಂದೇ ದಿನದಲ್ಲಿ‌ ಮುಡಾದಿಂದ ಬಿಡುಗಡೆಗೊಳಿಸಿ ಖಾತೆ ಮಾಡಿಸಿಕೊಂಡಿದ್ದಾರೆ.

ಇದನ್ನೂ ಓದಿ: ಮುಡಾ ಹಗರಣ ಟೆನ್ಷನ್​ ನಡುವೆಯೂ ಕಾಂಗ್ರೆಸ್ ಪಾಳೆಯದಲ್ಲಿ ಅಸಮಾಧಾನ ಸ್ಫೋಟ!

ಅದಷ್ಟೇ ಅಲ್ಲದೆ ಆಯುಕ್ತರ ಅನುಮೊದನೆ ಇಲ್ಲದಿದ್ದರೂ ತಾಂತ್ರಿಕ ಶಾಖೆಯ ಅಧಿಕಾರಿಗಳ ಮೇಲೆ ಒತ್ತಡ ಹೇರಿ ನಿವೇಶನಗಳನ್ನ ಬಿಡುಗಡೆಗೊಳಿಸಿಕೊಂಡಿದ್ದಾರೆ. ಈ ಬಗ್ಗೆ ವಿವರಣೆ ನೀಡುವಂತೆ ಸರ್ಕಾರದ ನಗರಾಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಗೆ ಹಿಂದಿನ ಮುಡಾ ಆಯುಕ್ತ ನಟೇಶ್​​ ಪತ್ರ ಬರೆದಿರುವುದು ಟಿವಿ9 ಡಿಜಿಟಲ್​ಗೆ ಲಭ್ಯವಾಗಿದೆ.

ಮುಡಾ ಹಗರಣ: ಆಯುಕ್ತ ಅಮಾನತು

ಸೈಟ್​ ಹಂಚಿಕೆ ಹಗರಣ ಸಂಬಂಧ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹಿಂದಿನ ಆಯುಕ್ತ, ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವರಾಗಿ ನೇಮಕವಾಗಿದ್ದ ಜಿ.ಟಿ ದಿನೇಶ್‌ ಕುಮಾರ್‌ ಅವರನ್ನು ಅಮಾನತು ಮಾಡಲಾಗಿತ್ತು. ಮುಡಾ ಹಗರಣದ ಆರೋಪ ಹೊತ್ತಿರುವ ಮಧ್ಯ ಆಯುಕ್ತರಾಗಿದ್ದ ದಿನೇಶ್​ ಕುಮಾರ್​ ಅವರನ್ನು ರಾಜ್ಯ ಸರ್ಕಾರ, ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವರಾಗಿ ಸರ್ಕಾರ ವರ್ಗಾಯಿಸಿತ್ತು. ಆದರೆ, ಇದೀಗ ರಾಜ್ಯಪಾಲರ ಆದೇಶಾನುಸಾರವಾಗಿ ದಿನೇಶ್ ಕುಮಾರ್ ಅವರನ್ನು ಅಮಾನತುಗೊಳಿಸಲಾಗಿತ್ತು. ಸಸ್ಪೆಂಡ್ ಮಾಡಿ ಕಾರ್ಯದರ್ಶಿ ಉಮಾದೇವಿ ಅವರು ಇಂದು (ಸೆಪ್ಟೆಂಬರ್ 02) ಆದೇಶ ಹೊರಡಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ