ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ AI ಕ್ಯಾಮೆರಾ: ಮಿತಿಗಿಂತ ಜಾಸ್ತಿ ವೇಗವಾಗಿ ವಾಹನ ಓಡಿಸಿದ್ರೆ ಬೀಳುತ್ತೆ ಫೈನ್..!

ಬೆಂಗಳೂರು-ಮೈಸೂರು ಎಕ್ಸಪ್ರೆಸ್ ​​ವೇಯಲ್ಲಿ ಅಪಘಾತ ಹೆಚ್ಚದಾ ಹಿನ್ನೆಲೆ ಇತ್ತೀಚಿಗೆ ಎಡಿಜಿಪಿ ಅಲೋಕ್​ ಕುಮಾರ್​ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಈ ವೇಳೆ ಅಪಘಾತ ಕಡಿಮೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದರು. ಅದರಂತೆ ಇದೀಗ ಎಕ್ಸಪ್ರೆಸ್​​ ವೇನಲ್ಲಿ ಎಎನ್​​ಪಿಆರ್ ಕ್ಯಾಮೆರಾ ಅಳವಡಿಸಲಾಗಿದೆ.

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ AI ಕ್ಯಾಮೆರಾ: ಮಿತಿಗಿಂತ ಜಾಸ್ತಿ ವೇಗವಾಗಿ ವಾಹನ ಓಡಿಸಿದ್ರೆ ಬೀಳುತ್ತೆ ಫೈನ್..!
AL ಕ್ಯಾಮೆರಾ
Follow us
| Updated By: ವಿವೇಕ ಬಿರಾದಾರ

Updated on: Jul 29, 2023 | 8:58 AM

ಮೈಸೂರು: ಬೆಂಗಳೂರು-ಮೈಸೂರು ಎಕ್ಸಪ್ರೆಸ್ ​​ವೇಯಲ್ಲಿ (Bengaluru-Mysuru Expressway) ಅಪಘಾತ ಹೆಚ್ಚದಾ ಹಿನ್ನೆಲೆ ಇತ್ತೀಚಿಗೆ ಎಡಿಜಿಪಿ ಅಲೋಕ್​ ಕುಮಾರ್ (Alok Kumar)​ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಈ ವೇಳೆ ಅಪಘಾತ ಕಡಿಮೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದರು. ಅದರಂತೆ ಇದೀಗ ಎಕ್ಸಪ್ರೆಸ್​​ ವೇನಲ್ಲಿ ಎಎನ್​​ಪಿಆರ್ ಕ್ಯಾಮೆರಾ ಅಳವಡಿಸಲಾಗಿದೆ. ರಾಜ್ಯ ರಸ್ತೆ ಸುರಕ್ಷತಾ ಎಡಿಜಿಪಿ ಅಲೋಕ್ ಕುಮಾರ್ ಆದೇಶದ ಮೇರೆಗೆ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಸ್ವಯಂಚಾಲಿತ ನಂಬರ್ ಪ್ಲೇಟ್ ಗುರುತಿಸುವ (Automatic Number Plate Recognition-ANPR) ಕ್ಯಾಮೆರಾ ಅಳವಡಿಕೆ ಮಾಡಲಾಗಿದೆ.

ಈ ಮೂಲಕ ಮಿತಿಗಿಂತ ಅತಿವೇಗದ ಚಾಲನೆ ಮತ್ತು ಒನ್​ವೇನಲ್ಲಿ ವಾಹನ ಚಾಲಯಿಸಿದರೇ ಬೆಂಗಳೂರು ಸಂಚಾರ ಪೊಲೀಸರು ದಂಡ ಹಾಕುತ್ತಾರೆ.  ಇನ್ನು ರಾಮನಗರ ಪೊಲೀಸರು ವಾಹನದ ವೇಗ ಕಂಡು ಹಿಡಿಯುವ ಇಂಟರ್ ಸೆಪ್ಟರ್ ಬಳಕೆಗೆ ಸಿದ್ದವಾಗಿದ್ದಾರೆ. ಇಂದಿ‌ನಿಂದ‌ ಹೈವೇ ಮೇಲೆ ಇಂಟರ್ ಸೆಪ್ಟರ್ (ಸ್ಪೀಡ್​ ರಾಡರ್ ಗನ್) ಬಳಸಲಾಗುತ್ತದೆ.

ಇದನ್ನೂ ಓದಿ: ಬೆಂಗಳೂರು ಮೈಸೂರು ಎಕ್ಸ್​​ಪ್ರೆಸ್ ವೇಯಲ್ಲಿ ಎಸ್​ಒಎಸ್ ಬಾಕ್ಸ್; ಏನಿದು, ಬಳಸುವುದು ಹೇಗೆ?

ಎಕ್ಸಪ್ರೆಸ್​ವೇನಲ್ಲಿ ಸಂಭವಿಸಿದ ಅಪಘಾತಗಳು

ರಾಮನಗರ ಜಿಲ್ಲೆಯಲ್ಲಿ 55 ಕಿಮೀ, ಮಂಡ್ಯದಲ್ಲಿ 58 ಕಿಮೀ ಹಾಗೂ ಮೈಸೂರಿನಲ್ಲಿ 5 ಕಿಮೀ ಸೇರಿ ಒಟ್ಟು 118 ಕಿಮೀ ದೂರದ ಧಶಪಥ ಇದಾಗಿದೆ. ಈ ಮೂರೂ ಜಿಲ್ಲೆಗಳ ವ್ಯಾಪ್ತಿಯಲ್ಲಿ ಕಳೆದ 9 ತಿಂಗಳಲ್ಲಿ (2022 ರ ಸೆಪ್ಟೆಂಬರ್ ನಿಂದ 2023 ರ ಜೂನ್ ವರೆಗೆ) 595 ಅಪಘಾತಗಳು ಸಂಭವಿಸಿವೆ. 158 ಜನ ಜೀವ ಕಳೆದುಕೊಂಡಿದ್ದಾರೆ.

ಕೇವಲ ಮಂಡ್ಯ ಜಿಲ್ಲೆಯ ವ್ಯಾಪ್ತಿಯಲ್ಲಿ‌ ಜನವರಿಯಿಂದ ಇಲ್ಲಿಯವರೆಗೆ 55 ಮಂದಿ‌ ಪ್ರಾಣ ಕಳೆದುಕೊಂಡಿದ್ದಾರೆ.‌ 52 ಮಂದಿ ತೀವ್ರ ಗಾಯಗೊಂಡಿದ್ದಾರೆ. ಇದೇ ಅವಧಿಯಲ್ಲಿ ‌ಹೊಸ ಬೈಪಾಸ್ ನಲ್ಲಿ 269 ಅಪಘಾತಗಳು ಸಂಭವಿಸಿ 92 ಜನ ಪ್ರಾಣ ಕಳೆದುಕೊಂಡಿದ್ದಾರೆ ಎಂಬುದು ಆಘಾತಕಾರಿ ಸಂಗತಿಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

‘ಹೊಸ ಜೀವನ ಸಿಕ್ಕಿದೆ’; ಅಪಘಾತದ ನಂತರ ಮುಶೀರ್ ಖಾನ್ ಮೊದಲ ಮಾತು
‘ಹೊಸ ಜೀವನ ಸಿಕ್ಕಿದೆ’; ಅಪಘಾತದ ನಂತರ ಮುಶೀರ್ ಖಾನ್ ಮೊದಲ ಮಾತು
ರಾಜೀನಾಮೆ ನೀಡದಂತೆ ಸಿಎಂ ಸಿದ್ದರಾಮಯ್ಯಗೆ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ
ರಾಜೀನಾಮೆ ನೀಡದಂತೆ ಸಿಎಂ ಸಿದ್ದರಾಮಯ್ಯಗೆ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ
ವಿಡಿಯೋ: ವೀಕೆಂಡ್​ನಲ್ಲಿ ಅಭಿಮಾನಿಗಳ ಭೇಟಿ ಮಾಡಿದ ಧ್ರುವ ಸರ್ಜಾ
ವಿಡಿಯೋ: ವೀಕೆಂಡ್​ನಲ್ಲಿ ಅಭಿಮಾನಿಗಳ ಭೇಟಿ ಮಾಡಿದ ಧ್ರುವ ಸರ್ಜಾ
ರೀಲ್ಸ್​ ಹುಚ್ಚು, 10ಮೀ. ಎತ್ತರದ ಸೈನ್‌ಬೋರ್ಡ್ ಮೇಲೆ ಯುವಕನ ಸಾಹಸ
ರೀಲ್ಸ್​ ಹುಚ್ಚು, 10ಮೀ. ಎತ್ತರದ ಸೈನ್‌ಬೋರ್ಡ್ ಮೇಲೆ ಯುವಕನ ಸಾಹಸ
ಬಿಜೆಪಿಯಲ್ಲಿ ತೀವ್ರಗೊಂಡ ವಿಜಯೇಂದ್ರ ಹಠಾವೋ ಹೋರಾಟ
ಬಿಜೆಪಿಯಲ್ಲಿ ತೀವ್ರಗೊಂಡ ವಿಜಯೇಂದ್ರ ಹಠಾವೋ ಹೋರಾಟ
CPL 2024: ಫಾಫ್ ಡುಪ್ಲೆಸಿಸ್ ಸ್ಪೋಟಕ ಬ್ಯಾಟಿಂಗ್: ಆದರೂ ಸೋತರು..!
CPL 2024: ಫಾಫ್ ಡುಪ್ಲೆಸಿಸ್ ಸ್ಪೋಟಕ ಬ್ಯಾಟಿಂಗ್: ಆದರೂ ಸೋತರು..!
ನೇರ ಪ್ರಸಾರದಲ್ಲಿ ಅಳುತ್ತಾ ಸುದ್ದಿ ಓದಿದ​​ ಆ್ಯಂಕರ್​; ಕಾರಣ ಏನು ಗೊತ್ತಾ?
ನೇರ ಪ್ರಸಾರದಲ್ಲಿ ಅಳುತ್ತಾ ಸುದ್ದಿ ಓದಿದ​​ ಆ್ಯಂಕರ್​; ಕಾರಣ ಏನು ಗೊತ್ತಾ?
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?