AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಅಪಘಾತದಲ್ಲಿ ಮೃತರಾಗಿದ್ದವರ ಅಂಗಾಂಗ ದಾನ ಮಾಡಿ ಮಾನವೀಯತೆ ಮೆರೆದ ಕುಟುಂಬ

ಅದು ಸಂಪ್ರದಾಯಸ್ಥ ಕುಟುಂಬ. ಆ ಕುಟುಂಬಕ್ಕೆ ಬರ ಸಿಡಿಲಿನಂತೆ ಬಂದೆರಗಿತ್ತು ಕುಟುಂಬದ ಹಿರಿಯರ ಅಪಘಾತದ ಸುದ್ದಿ. ತಲೆಗೆ ಪೆಟ್ಟು ಬಿದ್ದು ಬದುಕುಳಿಯುವುದಿಲ್ಲ ಎಂಬ ಆಘಾತದ ನಡುವೆಯೂ ಆ ಕುಟುಂಬ ಸಾರ್ಥಕತೆ ಮೆರೆದಿದೆ. ಮಣ್ಣಲ್ಲಿ ಮಣ್ಣಾಗುತ್ತಿದ್ದ ದೇಹದಿಂದ ನಾಲ್ವರ ಬಾಳಿಗೆ ಬೆಳಕಾಗುವ ನಿರ್ಧಾರ‌ ಮಾಡಿ ಮಾದರಿಯಾಗಿದ್ದಾರೆ.

ಮೈಸೂರು: ಅಪಘಾತದಲ್ಲಿ ಮೃತರಾಗಿದ್ದವರ ಅಂಗಾಂಗ ದಾನ ಮಾಡಿ ಮಾನವೀಯತೆ ಮೆರೆದ ಕುಟುಂಬ
ಮೃತ ವ್ಯಕ್ತಿ
ರಾಮ್​, ಮೈಸೂರು
| Edited By: |

Updated on:Sep 14, 2023 | 3:35 PM

Share

ಮೈಸೂರು, ಸೆ.14: ಮೃತದೇಹಕ್ಕೆ ಕೈ ಮುಗಿದು ಗೌರವ, ಮತ್ತೊಂದು ಕಡೆ ಸೆಲ್ಯೂಟ್ ಮಾಡಿದ ಆಸ್ಪತ್ರೆ‌ ಸಿಬ್ಬಂದಿ. ಮೈಸೂರಿನ ಅಪೋಲೋ‌ ಆಸ್ಪತ್ರೆ (Apollo Hospital)ಭಾವನಾತ್ಮಕ ಕ್ಷಣಕ್ಕೆ‌ ಸಾಕ್ಷಿಯಾಯಿತು. ಇದಕ್ಕೆ ಕಾರಣ ಸಯ್ಯದ್ ಪರ್ವೇಜ್ ಹಾಗೂ ಅವರ ಕುಟುಂಬ. ಹೌದು, ಮೆದುಳು ನಿಷ್ಕ್ರಿಯವಾದ ಹಿನ್ನೆಲೆ 52 ವರ್ಷದ ಪರ್ವೇಜ್ ಅವರ ಅಂಗಾಂಗಳನ್ನು ಅವರ ಕುಟುಂಬಸ್ಥರು ದಾನ‌ ಮಾಡಿದ್ದಾರೆ.

ಸಯ್ಯದ ಪರ್ವೇಜ್ ಮೈಸೂರಿನ ಮಂಡಿ ಮೊಹಲ್ಲಾದ ನಿವಾಸಿ. ಪರ್ವೇಜ್ ಸೆಪ್ಟೆಂಬರ್ 8 ರಂದು ಮೈಸೂರು ಕೆ ಆರ್ ಎಸ್ ರಸ್ತೆಯಲ್ಲಿ ಹೋಗುವಾಗ ಮತ್ತೊಂದು ಬೈಕ್​ ನಡುವೆ ಅಪಘಾತವಾಗಿದೆ. ಈ ವೇಳೆ ಪರ್ವೇಜ್ ತಲೆಗೆ ಗಂಭೀರ ಪೆಟ್ಟು ಬಿದ್ದಿತ್ತು. ನಂತರ ತಕ್ಷಣ ಅವರನ್ನು ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. 4 ದಿನ ಪರ್ವೇಜ್‌ಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗಿಲ್ಲ. ಪರ್ವೇಜ್ ಮಿದುಳು ನಿಷ್ಕ್ರಿಯವಾಗಿದ್ದು, ಮತ್ತೆ ಅವರು ಮೊದಲಿನಂತೆ ಆಗಲು ಸಾಧ್ಯವಾಗದ ಸ್ಥಿತಿ ತಲುಪಿದ್ದರು. ಈ ಹಿನ್ನೆಲೆಯಲ್ಲಿ ಪರ್ವೇಜ್ ಕುಟುಂಬದವರು ಪರ್ವೇಜ್ ಅವರ ಅಂಗಾಂಗ ದಾನ ಮಾಡಲು ನಿರ್ಧರಿಸಿದ್ದಾರೆ.

ಇದನ್ನೂ ಓದಿ:ಇಂಜೆಕ್ಷನ್‌ ರಿಯಾಕ್ಷನ್​ನಿಂದ 7 ವರ್ಷದ ಬಾಲಕ ಸಾವು ಆರೋಪ, ಅಂಬ್ಯುಲೆನ್ಸ್ ನಲ್ಲಿಯೇ ಹೆರಿಗೆ ತಾಯಿ ಮಗು ಸೇಫ್

ಅದರಂತೆ ಪರ್ವೇಜ್ ಅವರ ಲಿವರ್, ಕಿಡ್ನಿ, ಹೃದಯದ ಕವಾಟಗಳ ದಾನ ಮಾಡಲಾಗಿದೆ. ಈ ಮೂಲಕ ಪರ್ವೇಜ್ ಅವರ ಅಂಗಾಂಗ ನಾಲ್ಕು ಜನರ ಬಾಳಿಗೆ ಬೆಳಕಾಗಿದೆ. ಮಣ್ಣಲ್ಲಿ ಮಣ್ಣಾಗಬೇಕಿದ್ದ ಪರ್ವೇಜ್ ಮೃತದೇಹ ಹಲವರ ಬಾಳಿಗೆ ಬೆಳಕಾಗಿದೆ. ಪರ್ವೇಜ್ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಸಾವಿನ ನೋವಿನಲ್ಲೂ ಪರ್ವೇಜ್ ಮನೆಯವರ ಈ ನಿರ್ಧಾರ ಎಲ್ಲರಿಗೂ ಮಾದರಿಯಾಗಲಿ ಎನ್ನುವುದೇ ನಮ್ಮ ಆಶಯ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:32 pm, Thu, 14 September 23

Follow Us
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ