ಮೈಸೂರು: ಅಪಘಾತದಲ್ಲಿ ಮೃತರಾಗಿದ್ದವರ ಅಂಗಾಂಗ ದಾನ ಮಾಡಿ ಮಾನವೀಯತೆ ಮೆರೆದ ಕುಟುಂಬ

ಅದು ಸಂಪ್ರದಾಯಸ್ಥ ಕುಟುಂಬ. ಆ ಕುಟುಂಬಕ್ಕೆ ಬರ ಸಿಡಿಲಿನಂತೆ ಬಂದೆರಗಿತ್ತು ಕುಟುಂಬದ ಹಿರಿಯರ ಅಪಘಾತದ ಸುದ್ದಿ. ತಲೆಗೆ ಪೆಟ್ಟು ಬಿದ್ದು ಬದುಕುಳಿಯುವುದಿಲ್ಲ ಎಂಬ ಆಘಾತದ ನಡುವೆಯೂ ಆ ಕುಟುಂಬ ಸಾರ್ಥಕತೆ ಮೆರೆದಿದೆ. ಮಣ್ಣಲ್ಲಿ ಮಣ್ಣಾಗುತ್ತಿದ್ದ ದೇಹದಿಂದ ನಾಲ್ವರ ಬಾಳಿಗೆ ಬೆಳಕಾಗುವ ನಿರ್ಧಾರ‌ ಮಾಡಿ ಮಾದರಿಯಾಗಿದ್ದಾರೆ.

ಮೈಸೂರು: ಅಪಘಾತದಲ್ಲಿ ಮೃತರಾಗಿದ್ದವರ ಅಂಗಾಂಗ ದಾನ ಮಾಡಿ ಮಾನವೀಯತೆ ಮೆರೆದ ಕುಟುಂಬ
ಮೃತ ವ್ಯಕ್ತಿ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on:Sep 14, 2023 | 3:35 PM

ಮೈಸೂರು, ಸೆ.14: ಮೃತದೇಹಕ್ಕೆ ಕೈ ಮುಗಿದು ಗೌರವ, ಮತ್ತೊಂದು ಕಡೆ ಸೆಲ್ಯೂಟ್ ಮಾಡಿದ ಆಸ್ಪತ್ರೆ‌ ಸಿಬ್ಬಂದಿ. ಮೈಸೂರಿನ ಅಪೋಲೋ‌ ಆಸ್ಪತ್ರೆ (Apollo Hospital)ಭಾವನಾತ್ಮಕ ಕ್ಷಣಕ್ಕೆ‌ ಸಾಕ್ಷಿಯಾಯಿತು. ಇದಕ್ಕೆ ಕಾರಣ ಸಯ್ಯದ್ ಪರ್ವೇಜ್ ಹಾಗೂ ಅವರ ಕುಟುಂಬ. ಹೌದು, ಮೆದುಳು ನಿಷ್ಕ್ರಿಯವಾದ ಹಿನ್ನೆಲೆ 52 ವರ್ಷದ ಪರ್ವೇಜ್ ಅವರ ಅಂಗಾಂಗಳನ್ನು ಅವರ ಕುಟುಂಬಸ್ಥರು ದಾನ‌ ಮಾಡಿದ್ದಾರೆ.

ಸಯ್ಯದ ಪರ್ವೇಜ್ ಮೈಸೂರಿನ ಮಂಡಿ ಮೊಹಲ್ಲಾದ ನಿವಾಸಿ. ಪರ್ವೇಜ್ ಸೆಪ್ಟೆಂಬರ್ 8 ರಂದು ಮೈಸೂರು ಕೆ ಆರ್ ಎಸ್ ರಸ್ತೆಯಲ್ಲಿ ಹೋಗುವಾಗ ಮತ್ತೊಂದು ಬೈಕ್​ ನಡುವೆ ಅಪಘಾತವಾಗಿದೆ. ಈ ವೇಳೆ ಪರ್ವೇಜ್ ತಲೆಗೆ ಗಂಭೀರ ಪೆಟ್ಟು ಬಿದ್ದಿತ್ತು. ನಂತರ ತಕ್ಷಣ ಅವರನ್ನು ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. 4 ದಿನ ಪರ್ವೇಜ್‌ಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗಿಲ್ಲ. ಪರ್ವೇಜ್ ಮಿದುಳು ನಿಷ್ಕ್ರಿಯವಾಗಿದ್ದು, ಮತ್ತೆ ಅವರು ಮೊದಲಿನಂತೆ ಆಗಲು ಸಾಧ್ಯವಾಗದ ಸ್ಥಿತಿ ತಲುಪಿದ್ದರು. ಈ ಹಿನ್ನೆಲೆಯಲ್ಲಿ ಪರ್ವೇಜ್ ಕುಟುಂಬದವರು ಪರ್ವೇಜ್ ಅವರ ಅಂಗಾಂಗ ದಾನ ಮಾಡಲು ನಿರ್ಧರಿಸಿದ್ದಾರೆ.

ಇದನ್ನೂ ಓದಿ:ಇಂಜೆಕ್ಷನ್‌ ರಿಯಾಕ್ಷನ್​ನಿಂದ 7 ವರ್ಷದ ಬಾಲಕ ಸಾವು ಆರೋಪ, ಅಂಬ್ಯುಲೆನ್ಸ್ ನಲ್ಲಿಯೇ ಹೆರಿಗೆ ತಾಯಿ ಮಗು ಸೇಫ್

ಅದರಂತೆ ಪರ್ವೇಜ್ ಅವರ ಲಿವರ್, ಕಿಡ್ನಿ, ಹೃದಯದ ಕವಾಟಗಳ ದಾನ ಮಾಡಲಾಗಿದೆ. ಈ ಮೂಲಕ ಪರ್ವೇಜ್ ಅವರ ಅಂಗಾಂಗ ನಾಲ್ಕು ಜನರ ಬಾಳಿಗೆ ಬೆಳಕಾಗಿದೆ. ಮಣ್ಣಲ್ಲಿ ಮಣ್ಣಾಗಬೇಕಿದ್ದ ಪರ್ವೇಜ್ ಮೃತದೇಹ ಹಲವರ ಬಾಳಿಗೆ ಬೆಳಕಾಗಿದೆ. ಪರ್ವೇಜ್ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಸಾವಿನ ನೋವಿನಲ್ಲೂ ಪರ್ವೇಜ್ ಮನೆಯವರ ಈ ನಿರ್ಧಾರ ಎಲ್ಲರಿಗೂ ಮಾದರಿಯಾಗಲಿ ಎನ್ನುವುದೇ ನಮ್ಮ ಆಶಯ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:32 pm, Thu, 14 September 23

ತಾಜಾ ಸುದ್ದಿ
ಕಿರಿದಾದ ಸೇತುವೆ ಮೇಲೆ ಹೆಣ ಹೊತ್ತು ಸಾಗಿದ ಗ್ರಾಮಸ್ಥರು, ವಿಡಿಯೋ ವೈರಲ್
ಕಿರಿದಾದ ಸೇತುವೆ ಮೇಲೆ ಹೆಣ ಹೊತ್ತು ಸಾಗಿದ ಗ್ರಾಮಸ್ಥರು, ವಿಡಿಯೋ ವೈರಲ್
ಧೋನಿ ಹುಟ್ದಬ್ಬ... ಬರೋಬ್ಬರಿ 100 ಅಡಿ ಕಟೌಟ್ ನಿಲ್ಲಿಸಿದ ಫ್ಯಾನ್ಸ್
ಧೋನಿ ಹುಟ್ದಬ್ಬ... ಬರೋಬ್ಬರಿ 100 ಅಡಿ ಕಟೌಟ್ ನಿಲ್ಲಿಸಿದ ಫ್ಯಾನ್ಸ್
ಅಕ್ಕಿ ಮೂಟೆ ಹೊತ್ತು ಗಂಗಾವತಿಯಿಂದ ಮಂತ್ರಾಲಯದವರೆಗೆ ಭಕ್ತನ ಪಾದಯಾತ್ರೆ
ಅಕ್ಕಿ ಮೂಟೆ ಹೊತ್ತು ಗಂಗಾವತಿಯಿಂದ ಮಂತ್ರಾಲಯದವರೆಗೆ ಭಕ್ತನ ಪಾದಯಾತ್ರೆ
ಧೋನಿಯ ಪಾದ ಮುಟ್ಟಿ ನಮಸ್ಕರಿಸಿದ ಸಾಕ್ಷಿ: ವಿಡಿಯೋ ನೋಡಿ
ಧೋನಿಯ ಪಾದ ಮುಟ್ಟಿ ನಮಸ್ಕರಿಸಿದ ಸಾಕ್ಷಿ: ವಿಡಿಯೋ ನೋಡಿ
ಎದುರಗಡೆ ಆನೆ​, ಪಕ್ಕದಲ್ಲಿ ಎರಡೆರಡು ಹುಲಿ: ಸಫಾರಿಗರ ಪಾಡು ಏನಾಯ್ತು ನೋಡಿ
ಎದುರಗಡೆ ಆನೆ​, ಪಕ್ಕದಲ್ಲಿ ಎರಡೆರಡು ಹುಲಿ: ಸಫಾರಿಗರ ಪಾಡು ಏನಾಯ್ತು ನೋಡಿ
ವಾರ ಭವಿಷ್ಯ, ಜುಲೈ 08ರಿಂದ 14ರ ತನಕದ ರಾಶಿ ಭವಿಷ್ಯ ಹೀಗಿದೆ
ವಾರ ಭವಿಷ್ಯ, ಜುಲೈ 08ರಿಂದ 14ರ ತನಕದ ರಾಶಿ ಭವಿಷ್ಯ ಹೀಗಿದೆ
ಬಂಧುಗಳ ಮನೆಗೆ ಬರಿಗೈಯಲ್ಲಿ ಏಕೆ ಹೋಗಬಾರದು ಈ ವಿಡಿಯೋ ನೋಡಿ
ಬಂಧುಗಳ ಮನೆಗೆ ಬರಿಗೈಯಲ್ಲಿ ಏಕೆ ಹೋಗಬಾರದು ಈ ವಿಡಿಯೋ ನೋಡಿ
ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿದುಕೊಳ್ಳಲು ಈ ವಿಡಿಯೋ ನೋಡಿ
ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿದುಕೊಳ್ಳಲು ಈ ವಿಡಿಯೋ ನೋಡಿ
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ