ಮೈಸೂರು: ಅಪಘಾತದಲ್ಲಿ ಮೃತರಾಗಿದ್ದವರ ಅಂಗಾಂಗ ದಾನ ಮಾಡಿ ಮಾನವೀಯತೆ ಮೆರೆದ ಕುಟುಂಬ

ಅದು ಸಂಪ್ರದಾಯಸ್ಥ ಕುಟುಂಬ. ಆ ಕುಟುಂಬಕ್ಕೆ ಬರ ಸಿಡಿಲಿನಂತೆ ಬಂದೆರಗಿತ್ತು ಕುಟುಂಬದ ಹಿರಿಯರ ಅಪಘಾತದ ಸುದ್ದಿ. ತಲೆಗೆ ಪೆಟ್ಟು ಬಿದ್ದು ಬದುಕುಳಿಯುವುದಿಲ್ಲ ಎಂಬ ಆಘಾತದ ನಡುವೆಯೂ ಆ ಕುಟುಂಬ ಸಾರ್ಥಕತೆ ಮೆರೆದಿದೆ. ಮಣ್ಣಲ್ಲಿ ಮಣ್ಣಾಗುತ್ತಿದ್ದ ದೇಹದಿಂದ ನಾಲ್ವರ ಬಾಳಿಗೆ ಬೆಳಕಾಗುವ ನಿರ್ಧಾರ‌ ಮಾಡಿ ಮಾದರಿಯಾಗಿದ್ದಾರೆ.

ಮೈಸೂರು: ಅಪಘಾತದಲ್ಲಿ ಮೃತರಾಗಿದ್ದವರ ಅಂಗಾಂಗ ದಾನ ಮಾಡಿ ಮಾನವೀಯತೆ ಮೆರೆದ ಕುಟುಂಬ
ಮೃತ ವ್ಯಕ್ತಿ
Edited By: ಕಿರಣ್ ಹನುಮಂತ್​ ಮಾದಾರ್

Updated on: Sep 14, 2023 | 3:35 PM

ಮೈಸೂರು, ಸೆ.14: ಮೃತದೇಹಕ್ಕೆ ಕೈ ಮುಗಿದು ಗೌರವ, ಮತ್ತೊಂದು ಕಡೆ ಸೆಲ್ಯೂಟ್ ಮಾಡಿದ ಆಸ್ಪತ್ರೆ‌ ಸಿಬ್ಬಂದಿ. ಮೈಸೂರಿನ ಅಪೋಲೋ‌ ಆಸ್ಪತ್ರೆ (Apollo Hospital)ಭಾವನಾತ್ಮಕ ಕ್ಷಣಕ್ಕೆ‌ ಸಾಕ್ಷಿಯಾಯಿತು. ಇದಕ್ಕೆ ಕಾರಣ ಸಯ್ಯದ್ ಪರ್ವೇಜ್ ಹಾಗೂ ಅವರ ಕುಟುಂಬ. ಹೌದು, ಮೆದುಳು ನಿಷ್ಕ್ರಿಯವಾದ ಹಿನ್ನೆಲೆ 52 ವರ್ಷದ ಪರ್ವೇಜ್ ಅವರ ಅಂಗಾಂಗಳನ್ನು ಅವರ ಕುಟುಂಬಸ್ಥರು ದಾನ‌ ಮಾಡಿದ್ದಾರೆ.

ಸಯ್ಯದ ಪರ್ವೇಜ್ ಮೈಸೂರಿನ ಮಂಡಿ ಮೊಹಲ್ಲಾದ ನಿವಾಸಿ. ಪರ್ವೇಜ್ ಸೆಪ್ಟೆಂಬರ್ 8 ರಂದು ಮೈಸೂರು ಕೆ ಆರ್ ಎಸ್ ರಸ್ತೆಯಲ್ಲಿ ಹೋಗುವಾಗ ಮತ್ತೊಂದು ಬೈಕ್​ ನಡುವೆ ಅಪಘಾತವಾಗಿದೆ. ಈ ವೇಳೆ ಪರ್ವೇಜ್ ತಲೆಗೆ ಗಂಭೀರ ಪೆಟ್ಟು ಬಿದ್ದಿತ್ತು. ನಂತರ ತಕ್ಷಣ ಅವರನ್ನು ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. 4 ದಿನ ಪರ್ವೇಜ್‌ಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗಿಲ್ಲ. ಪರ್ವೇಜ್ ಮಿದುಳು ನಿಷ್ಕ್ರಿಯವಾಗಿದ್ದು, ಮತ್ತೆ ಅವರು ಮೊದಲಿನಂತೆ ಆಗಲು ಸಾಧ್ಯವಾಗದ ಸ್ಥಿತಿ ತಲುಪಿದ್ದರು. ಈ ಹಿನ್ನೆಲೆಯಲ್ಲಿ ಪರ್ವೇಜ್ ಕುಟುಂಬದವರು ಪರ್ವೇಜ್ ಅವರ ಅಂಗಾಂಗ ದಾನ ಮಾಡಲು ನಿರ್ಧರಿಸಿದ್ದಾರೆ.

ಇದನ್ನೂ ಓದಿ:ಇಂಜೆಕ್ಷನ್‌ ರಿಯಾಕ್ಷನ್​ನಿಂದ 7 ವರ್ಷದ ಬಾಲಕ ಸಾವು ಆರೋಪ, ಅಂಬ್ಯುಲೆನ್ಸ್ ನಲ್ಲಿಯೇ ಹೆರಿಗೆ ತಾಯಿ ಮಗು ಸೇಫ್

ಅದರಂತೆ ಪರ್ವೇಜ್ ಅವರ ಲಿವರ್, ಕಿಡ್ನಿ, ಹೃದಯದ ಕವಾಟಗಳ ದಾನ ಮಾಡಲಾಗಿದೆ. ಈ ಮೂಲಕ ಪರ್ವೇಜ್ ಅವರ ಅಂಗಾಂಗ ನಾಲ್ಕು ಜನರ ಬಾಳಿಗೆ ಬೆಳಕಾಗಿದೆ. ಮಣ್ಣಲ್ಲಿ ಮಣ್ಣಾಗಬೇಕಿದ್ದ ಪರ್ವೇಜ್ ಮೃತದೇಹ ಹಲವರ ಬಾಳಿಗೆ ಬೆಳಕಾಗಿದೆ. ಪರ್ವೇಜ್ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಸಾವಿನ ನೋವಿನಲ್ಲೂ ಪರ್ವೇಜ್ ಮನೆಯವರ ಈ ನಿರ್ಧಾರ ಎಲ್ಲರಿಗೂ ಮಾದರಿಯಾಗಲಿ ಎನ್ನುವುದೇ ನಮ್ಮ ಆಶಯ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:32 pm, Thu, 14 September 23

Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More
Follow Us