AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮ ಲಲ್ಲಾ ನೋಡುವ ಆಸೆಯಿದೆ, ಅಯೋಧ್ಯೆಗೆ ಹೋಗುತ್ತೇವೆ: ಅರುಣ್ ಯೋಗಿರಾಜ್ ಪತ್ನಿ, ತಾಯಿ ಹೇಳಿಕೆ

ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆ, ಪ್ರಾಣ ಪ್ರತಿಷ್ಠೆ ಕಾರ್ಯಕ್ರಮಗಳು ಮುಗಿದ ನಂತರ ಒಂದು ದಿನ ಅಲ್ಲಿಗೆ ತೆರಳುತ್ತೇವೆ. ಖುದ್ದು ಅರುಣ್ ಯೋಗಿರಾಜ್ ನಮ್ಮನ್ನು ಕರೆದುಕೊಂಡು ಹೋಗುತ್ತಾರೆ. ಆಗ ಹೋಗಿ ರಾಮ ಲಲ್ಲಾನ ದರ್ಶನ ಪಡೆದು ಬರುತ್ತೇವೆ ಎಂದು ಅರುಣ್ ಯೋಗಿರಾಜ್ ಕುಟುಂಬದವರು ಹೇಳಿದ್ದಾರೆ.

ರಾಮ ಲಲ್ಲಾ ನೋಡುವ ಆಸೆಯಿದೆ, ಅಯೋಧ್ಯೆಗೆ ಹೋಗುತ್ತೇವೆ: ಅರುಣ್ ಯೋಗಿರಾಜ್ ಪತ್ನಿ, ತಾಯಿ ಹೇಳಿಕೆ
ಅರುಣ್ ಯೋಗಿರಾಜ್
ರಾಮ್​, ಮೈಸೂರು
| Updated By: Ganapathi Sharma|

Updated on: Jan 19, 2024 | 1:49 PM

Share

ಮೈಸೂರು, ಜನವರಿ 19: ನಮಗೂ ರಾಮ ಲಲ್ಲಾನನ್ನು (Ram Lalla) ನೋಡುವ ಆಸೆ ಇದೆ. ಅರುಣ್ ಯೋಗಿರಾಜ್ (Arun Yogiraj) ಖುದ್ದಾಗಿ ಕರೆದುಕೊಂಡು ಹೋಗುವುದಾಗಿ ಹೇಳಿದ್ದಾರೆ. ಅವರ ಜೊತೆಯೇ ಅಯೋಧ್ಯೆಯ ರಾಮ ಮಂದಿರಕ್ಕೆ ತೆರಳಿ ರಾಮ ಲಲ್ಲಾನನ್ನು ನೋಡುತ್ತೇವೆ ಎಂದು ಶಿಲ್ಪಿ ಅರುಣ್ ಯೋಗಿರಾಜ್ ಪತ್ನಿ ವಿಜೇತ ಹಾಗೂ ತಾಯಿ ಹೇಳಿದರು. ‘ಟಿವಿ9’ ಜತೆ ಮಾತನಾಡಿದ ಅರುಣ್ ಯೋಗಿರಾಜ್ ತಾಯಿ, ಪತ್ನಿ ಹಾಗೂ ಸಹೋದರಿ ‘ನಾವು ಇದುವರೆಗೂ ರಾಮ ಲಲ್ಲಾನನ್ನು ನೋಡಿಲ್ಲ. ನಮಗೂ ನೋಡಬೇಕು ಎಂಬ ಆಸೆ ಇದೆ. ಆದರೆ ಈಗ ಅದು ಸಾಧ್ಯವಿಲ್ಲ’ ಎಂದರು.

ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆ, ಪ್ರಾಣ ಪ್ರತಿಷ್ಠೆ ಕಾರ್ಯಕ್ರಮಗಳು ಮುಗಿದ ನಂತರ ಒಂದು ದಿನ ಅಲ್ಲಿಗೆ ತೆರಳುತ್ತೇವೆ. ಖುದ್ದು ಅರುಣ್ ಯೋಗಿರಾಜ್ ನಮ್ಮನ್ನು ಕರೆದುಕೊಂಡು ಹೋಗುತ್ತಾರೆ. ಆಗ ಹೋಗಿ ರಾಮ ಲಲ್ಲಾನ ದರ್ಶನ ಪಡೆದು ಬರುತ್ತೇವೆ ಎಂದು ಅವರು ಹೇಳಿದ್ದಾರೆ.

ಈ ಮಧ್ಯೆ ಅಯೋಧ್ಯೆಯ ರಾಮ ಮಂದಿರದಲ್ಲಿ ರಾಮ ಲಲ್ಲಾ ಪ್ರಾಣ ಪ್ರತಿಷ್ಠಾಪನೆಗೆ ಕ್ಷಣಗಣನೆ ಆರಂಭವಾಗಿದೆ. ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಪ್ರಧಾನಿ ನರೇಂದ್ರ ಮೋದಿ ಇಂದಿನಿಂದ ಕಠಿಣ ವ್ರತ ಆಚರಿಸಲಿದ್ದಾರೆ.

ಇದನ್ನೂ ಓದಿ: ಅಯೋಧ್ಯೆ: ಸರಯೂ ನದಿತಟದಲ್ಲಿ ಭಕ್ತರ ದಂಡು, ಊರಿಗೆ ಕೊಂಡೊಯ್ಯಲು ಬಾಟಲಿಗಳಲ್ಲಿ ಪವಿತ್ರ ನೀರಿನ ಸಂಗ್ರಹ

ಕಾರ್ಯಕ್ರಮಕ್ಕೂ ಮುನ್ನ ಪ್ರಧಾನಿ ಮೋದಿ ಅಯೋಧ್ಯೆಯ ಪವಿತ್ರ ಸರಯೂ ನದಿ ನೀರಿನಲ್ಲಿ ಸ್ನಾನ ಮಾಡಲಿದ್ದಾರೆ ಎಂದು ವರದಿಯಾಗಿದೆ. ಸರಯೂ ನದಿಯಲ್ಲಿ ಸ್ನಾನ ಮಾಡಿದ ನಂತರ, ಕಲಶದಲ್ಲಿ ಸರಯೂವಿನ ಪವಿತ್ರ ಜಲವನ್ನು ತೆಗೆದುಕೊಂಡು ರಾಮಮಂದಿರದವರೆಗೆ ತೆರಳಲಾಗುತ್ತದೆ. ಪ್ರಾಣ ಪ್ರತಿಷ್ಠಾ ಸಮಾರಂಭಕ್ಕೆ ಒಂದು ದಿನ ಮುಂಚಿತವಾಗಿ, ಅಂದರೆ, ಜನವರಿ 21 ರಂದೇ ಪ್ರಧಾನಿ ಅಯೋಧ್ಯೆಗೆ ತೆರಳುವ ಸಾಧ್ಯತೆಯಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ ಎಂದ ಸಿದ್ದರಾಮಯ್ಯಗೆ ಈಗ ಅದರ ಮೇಲೆಯೇ ಶಂಕೆ
ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ ಎಂದ ಸಿದ್ದರಾಮಯ್ಯಗೆ ಈಗ ಅದರ ಮೇಲೆಯೇ ಶಂಕೆ
ಬಿಜೆಪಿಯಲ್ಲಿ ಮೊದಲ ಹಂತದ ಶುದ್ಧೀಕರಣ ಕಾರ್ಯ ಮುಗಿದಿದೆ: ಸದಾನಂದಗೌಡ
ಬಿಜೆಪಿಯಲ್ಲಿ ಮೊದಲ ಹಂತದ ಶುದ್ಧೀಕರಣ ಕಾರ್ಯ ಮುಗಿದಿದೆ: ಸದಾನಂದಗೌಡ
ಜಿಮ್​ನಲ್ಲಿ ವರ್ಕೌಟ್​ ಮಾಡುತ್ತಿರುವಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು
ಜಿಮ್​ನಲ್ಲಿ ವರ್ಕೌಟ್​ ಮಾಡುತ್ತಿರುವಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು
ಶಾಸಕರ ಆಹ್ವಾನ ಬೇಕಿಲ್ಲ, ಮಂಡ್ಯ ಜನ ಜವಾಬ್ದಾರಿ ನೀಡಿದ್ದಾರೆ: ಹೆಚ್​ಡಿಕೆ
ಶಾಸಕರ ಆಹ್ವಾನ ಬೇಕಿಲ್ಲ, ಮಂಡ್ಯ ಜನ ಜವಾಬ್ದಾರಿ ನೀಡಿದ್ದಾರೆ: ಹೆಚ್​ಡಿಕೆ
ಡಿಕೆಶಿ ಪರವೋ, ಸಿದ್ದರಾಮಯ್ಯ ಪರವೋ? ಲಕ್ಷ್ಮೀ ಹೆಬ್ಬಾಳ್ಕರ್ ಏನಂದರು ನೋಡಿ!
ಡಿಕೆಶಿ ಪರವೋ, ಸಿದ್ದರಾಮಯ್ಯ ಪರವೋ? ಲಕ್ಷ್ಮೀ ಹೆಬ್ಬಾಳ್ಕರ್ ಏನಂದರು ನೋಡಿ!
ಪ್ರಯತ್ನಗಳಿಗಿಂತ ಪ್ರಾರ್ಥನೆ ಫಲ ನೀಡುತ್ತದೆ ಎಂದು ನಂಬಿದ್ದೇನೆ: ಶಿವಕುಮಾರ್
ಪ್ರಯತ್ನಗಳಿಗಿಂತ ಪ್ರಾರ್ಥನೆ ಫಲ ನೀಡುತ್ತದೆ ಎಂದು ನಂಬಿದ್ದೇನೆ: ಶಿವಕುಮಾರ್