AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಲಿಕೆ ಆಯುಕ್ತರು ಪಟ್ಟಿ ಕೊಟ್ಟ ಕೂಡಲೇ ವರ್ಗಾವಣೆಗೆ ಕ್ರಮ: ಸಚಿವ ಭೈರತಿ ಬಸವರಾಜು

ರಾಜ್ಯದಲ್ಲಿ ಮಳೆ ಹೆಚ್ಚಾಗುತ್ತಿದೆ. ಮಳೆಯ ಅವಾಂತರ ಸೃಷ್ಠಿಯಾದಾಗ ಜನರ ನೆರವಿಗೆ ಶೀಘ್ರ ಧಾವಿಸಲು ವಿಶೇಷ ಟಾಸ್ಕ್ ಪೋರ್ಸ್ ರಚಿಸಲು ಪಾಲಿಕೆ ಆಯುಕ್ತರುಗಳಿಗೆ ಸೂಚಿಸಲಾಗಿದೆ. ರಾತ್ರಿಯ ವೇಳೆಯೂ ಟಾಸ್ಕ್ ಪೋರ್ಸ್​​ಗಳು ಕೆಲಸ ಮಾಡಬೇಕು.

ಪಾಲಿಕೆ ಆಯುಕ್ತರು ಪಟ್ಟಿ ಕೊಟ್ಟ ಕೂಡಲೇ ವರ್ಗಾವಣೆಗೆ ಕ್ರಮ: ಸಚಿವ ಭೈರತಿ ಬಸವರಾಜು
ಸಚಿವ ಭೈರತಿ ಬಸವರಾಜು
TV9 Web
| Edited By: |

Updated on:Jul 08, 2022 | 2:59 PM

Share

ಮೈಸೂರು: ನಗರ ಪಾಲಿಕೆಗಳಲ್ಲಿ ಅನೇಕ ವರ್ಷಗಳಿಂದ ಒಂದೇ ಕಡೆ ಕೆಲಸ ಮಾಡುತ್ತಿರುವವರ ಪಟ್ಟಿಕೊಡಲು ಹೇಳಿದ್ದೇನೆ. ಪಾಲಿಕೆ ಆಯುಕ್ತರು ಆ ಪಟ್ಟಿ ಕೊಟ್ಟ ಕೂಡಲೇ ಅಂತಃವರ ವರ್ಗಾವಣೆಗೆ (Transfer) ಕ್ರಮ ಕೈಗೊಳ್ಳಲಾಗುವುದು ಎಂದು ನಗರದಲ್ಲಿ ಸಚಿವ ಭೈರತಿ ಬಸವರಾಜು ಹೇಳಿಕೆ ನೀಡಿದರು. ರಾಜ್ಯದಲ್ಲಿ ಮಳೆ ಹೆಚ್ಚಾಗುತ್ತಿದೆ. ಮಳೆಯ ಅವಾಂತರ ಸೃಷ್ಠಿಯಾದಾಗ ಜನರ ನೆರವಿಗೆ ಶೀಘ್ರ ಧಾವಿಸಲು ವಿಶೇಷ ಟಾಸ್ಕ್ ಪೋರ್ಸ್ ರಚಿಸಲು ಪಾಲಿಕೆ ಆಯುಕ್ತರುಗಳಿಗೆ ಸೂಚಿಸಲಾಗಿದೆ. ರಾತ್ರಿಯ ವೇಳೆಯೂ ಟಾಸ್ಕ್ ಪೋರ್ಸ್​​ಗಳು ಕೆಲಸ ಮಾಡಬೇಕು. ಜನರ ಸಮಸ್ಯೆಗಳ ಶೀಘ್ರ ಪರಿಹಾರಕ್ಕೆ ಸ್ಪಂದಿಸಲು ತಿಳಿಸಿದ್ದೇನೆ. ರಾಜ್ಯದ ಪೌರಕಾರ್ಮಿಕರ ಬಹುತೇಕ ಬೇಡಿಕೆಗಳನ್ನು ಈಡೇರಿಸಿದ್ದೇವೆ. ಸರ್ಕಾರಕ್ಕೆ ಇದರಿಂದ 555ಕೋಟಿ ರೂ ಹೊರೆಯಾಗಲಿದೆ. ಆದರೂ ಅವರ ಹಿತ ಕಾಯಲು ನಾವು ಬದ್ಧ. ಸರ್ಕಾರಗಳು ನೀಡುವ ಸವಲತ್ತುಗಳನ್ನು ಪೌರಕಾರ್ಮಿಕರು ಸರಿಯಾಗಿ ಬಳಸಿಕೊಳ್ಳುತ್ತಿಲ್ಲ ಎಂದು ಹೇಳಿದರು.

ಇದನ್ನೂ ಓದಿ: ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೆಸರು ಹಾಗೂ ಫೋಟೋ ದುರ್ಬಳಕೆ

ಸ್ವಚ್ಚತಾ ಕಾರ್ಯಕ್ಕೆ ನೀಡುವ ಹ್ಯಾಂಡ್ ಗ್ಲೌಸ್, ಶೂಗಳನ್ನು ಕೆಲವರು ಬಳಸುತ್ತಿಲ್ಲ. ಇದೂ ಕೂಡಾ ಒಂದು ಸಮಸ್ಯೆ. ಮೈಸೂರು ಹೊರವರ್ತುಲ ರಸ್ತೆಯ ವಿದ್ಯುತ್ ದೀಪ ನಿರ್ವಹಣೆ ಹೊಣೆ ಮೈಸೂರು ಮಹಾನಗರಪಾಲಿಕೆಗೆ ವಹಿಸಿದ್ದೇನೆ. ಮುಂದಿನ ತಿಂಗಳಿಂದ ಶಾಶ್ವತವಾಗಿ ಮೈಸೂರು ರಿಂಗ್ ರಸ್ತೆಯಲ್ಲಿ ವಿದ್ಯುತ್ ದೀಪಗಳ ಸಂಪರ್ಕ ಇರುತ್ತದೆ. ಮೈಸೂರು ದೇವರಾಜ ಮಾರುಕಟ್ಟೆಯ ಪುನರ್ ನಿರ್ಮಾಣದಲ್ಲಿ ನಾವು ರಾಜವಂಶಸ್ಥರ ಮನವೊಲಿಸುತ್ತೇವೆ. ಇದರ ನಡುವೆಯೇ ಟೆಂಡರ್ ಪ್ರಕ್ರಿಯೆಯನ್ನು ಆರಂಭಿಸಲಾಗುತ್ತಿದೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜು ಹೇಳಿಕೆ ನೀಡಿದರು.

Published On - 2:39 pm, Fri, 8 July 22

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು