AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಲಿಕೆ ಆಯುಕ್ತರು ಪಟ್ಟಿ ಕೊಟ್ಟ ಕೂಡಲೇ ವರ್ಗಾವಣೆಗೆ ಕ್ರಮ: ಸಚಿವ ಭೈರತಿ ಬಸವರಾಜು

ರಾಜ್ಯದಲ್ಲಿ ಮಳೆ ಹೆಚ್ಚಾಗುತ್ತಿದೆ. ಮಳೆಯ ಅವಾಂತರ ಸೃಷ್ಠಿಯಾದಾಗ ಜನರ ನೆರವಿಗೆ ಶೀಘ್ರ ಧಾವಿಸಲು ವಿಶೇಷ ಟಾಸ್ಕ್ ಪೋರ್ಸ್ ರಚಿಸಲು ಪಾಲಿಕೆ ಆಯುಕ್ತರುಗಳಿಗೆ ಸೂಚಿಸಲಾಗಿದೆ. ರಾತ್ರಿಯ ವೇಳೆಯೂ ಟಾಸ್ಕ್ ಪೋರ್ಸ್​​ಗಳು ಕೆಲಸ ಮಾಡಬೇಕು.

ಪಾಲಿಕೆ ಆಯುಕ್ತರು ಪಟ್ಟಿ ಕೊಟ್ಟ ಕೂಡಲೇ ವರ್ಗಾವಣೆಗೆ ಕ್ರಮ: ಸಚಿವ ಭೈರತಿ ಬಸವರಾಜು
ಸಚಿವ ಭೈರತಿ ಬಸವರಾಜು
TV9 Web
| Edited By: |

Updated on:Jul 08, 2022 | 2:59 PM

Share

ಮೈಸೂರು: ನಗರ ಪಾಲಿಕೆಗಳಲ್ಲಿ ಅನೇಕ ವರ್ಷಗಳಿಂದ ಒಂದೇ ಕಡೆ ಕೆಲಸ ಮಾಡುತ್ತಿರುವವರ ಪಟ್ಟಿಕೊಡಲು ಹೇಳಿದ್ದೇನೆ. ಪಾಲಿಕೆ ಆಯುಕ್ತರು ಆ ಪಟ್ಟಿ ಕೊಟ್ಟ ಕೂಡಲೇ ಅಂತಃವರ ವರ್ಗಾವಣೆಗೆ (Transfer) ಕ್ರಮ ಕೈಗೊಳ್ಳಲಾಗುವುದು ಎಂದು ನಗರದಲ್ಲಿ ಸಚಿವ ಭೈರತಿ ಬಸವರಾಜು ಹೇಳಿಕೆ ನೀಡಿದರು. ರಾಜ್ಯದಲ್ಲಿ ಮಳೆ ಹೆಚ್ಚಾಗುತ್ತಿದೆ. ಮಳೆಯ ಅವಾಂತರ ಸೃಷ್ಠಿಯಾದಾಗ ಜನರ ನೆರವಿಗೆ ಶೀಘ್ರ ಧಾವಿಸಲು ವಿಶೇಷ ಟಾಸ್ಕ್ ಪೋರ್ಸ್ ರಚಿಸಲು ಪಾಲಿಕೆ ಆಯುಕ್ತರುಗಳಿಗೆ ಸೂಚಿಸಲಾಗಿದೆ. ರಾತ್ರಿಯ ವೇಳೆಯೂ ಟಾಸ್ಕ್ ಪೋರ್ಸ್​​ಗಳು ಕೆಲಸ ಮಾಡಬೇಕು. ಜನರ ಸಮಸ್ಯೆಗಳ ಶೀಘ್ರ ಪರಿಹಾರಕ್ಕೆ ಸ್ಪಂದಿಸಲು ತಿಳಿಸಿದ್ದೇನೆ. ರಾಜ್ಯದ ಪೌರಕಾರ್ಮಿಕರ ಬಹುತೇಕ ಬೇಡಿಕೆಗಳನ್ನು ಈಡೇರಿಸಿದ್ದೇವೆ. ಸರ್ಕಾರಕ್ಕೆ ಇದರಿಂದ 555ಕೋಟಿ ರೂ ಹೊರೆಯಾಗಲಿದೆ. ಆದರೂ ಅವರ ಹಿತ ಕಾಯಲು ನಾವು ಬದ್ಧ. ಸರ್ಕಾರಗಳು ನೀಡುವ ಸವಲತ್ತುಗಳನ್ನು ಪೌರಕಾರ್ಮಿಕರು ಸರಿಯಾಗಿ ಬಳಸಿಕೊಳ್ಳುತ್ತಿಲ್ಲ ಎಂದು ಹೇಳಿದರು.

ಇದನ್ನೂ ಓದಿ: ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೆಸರು ಹಾಗೂ ಫೋಟೋ ದುರ್ಬಳಕೆ

ಸ್ವಚ್ಚತಾ ಕಾರ್ಯಕ್ಕೆ ನೀಡುವ ಹ್ಯಾಂಡ್ ಗ್ಲೌಸ್, ಶೂಗಳನ್ನು ಕೆಲವರು ಬಳಸುತ್ತಿಲ್ಲ. ಇದೂ ಕೂಡಾ ಒಂದು ಸಮಸ್ಯೆ. ಮೈಸೂರು ಹೊರವರ್ತುಲ ರಸ್ತೆಯ ವಿದ್ಯುತ್ ದೀಪ ನಿರ್ವಹಣೆ ಹೊಣೆ ಮೈಸೂರು ಮಹಾನಗರಪಾಲಿಕೆಗೆ ವಹಿಸಿದ್ದೇನೆ. ಮುಂದಿನ ತಿಂಗಳಿಂದ ಶಾಶ್ವತವಾಗಿ ಮೈಸೂರು ರಿಂಗ್ ರಸ್ತೆಯಲ್ಲಿ ವಿದ್ಯುತ್ ದೀಪಗಳ ಸಂಪರ್ಕ ಇರುತ್ತದೆ. ಮೈಸೂರು ದೇವರಾಜ ಮಾರುಕಟ್ಟೆಯ ಪುನರ್ ನಿರ್ಮಾಣದಲ್ಲಿ ನಾವು ರಾಜವಂಶಸ್ಥರ ಮನವೊಲಿಸುತ್ತೇವೆ. ಇದರ ನಡುವೆಯೇ ಟೆಂಡರ್ ಪ್ರಕ್ರಿಯೆಯನ್ನು ಆರಂಭಿಸಲಾಗುತ್ತಿದೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜು ಹೇಳಿಕೆ ನೀಡಿದರು.

Published On - 2:39 pm, Fri, 8 July 22

Follow Us
Web contact
Web contact

TV9 Kannada

Read More
‘ಸಿಂಪತಿ ಬೇಡ, ಸೋಲು ಪದ ಕೇಳಿದ್ರೆ ಸಿಟ್ಟು ಬರುತ್ತೆ’; ರವಿಚಂದ್ರನ್
‘ಸಿಂಪತಿ ಬೇಡ, ಸೋಲು ಪದ ಕೇಳಿದ್ರೆ ಸಿಟ್ಟು ಬರುತ್ತೆ’; ರವಿಚಂದ್ರನ್
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ