ಆಷಾಢ ಮಾಸದ ವಿಶೇಷ ಪೂಜೆಗೆ ಚಾಮುಂಡಿ ಬೆಟ್ಟದಲ್ಲಿ ಸಿದ್ದತೆ, ತಯಾರಾಗಿವೆ 25 ಸಾವಿರ ಮೈಸೂರು ಪಾಕ್​

ಆಷಾಢ ಮಾಸ ಆರಂಭವಾಗಿದ್ದು ಪ್ರತಿ ವರ್ಷದಂತೆ ಈ ವರ್ಷವೂ ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಿಗೆ ಶುಕ್ರವಾರ ವಿಶೇಷ ಪೂಜೆ ನೆರವೇರಿಸಲಾಗುತ್ತದೆ. ಪೂಜೆಗೆ ಈಗಾಗಲೆ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ. ಪ್ರಸಾದಕ್ಕಾಗಿ 25 ಸಾವಿರ ಮೈಸೂರು ಪಾಕ್​ ನಿರ್ಮಿಸಲಾಗಿದೆ.

ಆಷಾಢ ಮಾಸದ ವಿಶೇಷ ಪೂಜೆಗೆ ಚಾಮುಂಡಿ ಬೆಟ್ಟದಲ್ಲಿ ಸಿದ್ದತೆ, ತಯಾರಾಗಿವೆ 25 ಸಾವಿರ ಮೈಸೂರು ಪಾಕ್​
ಚಾಮುಂಡಿ ಬೆಟ್ಟ
Follow us
| Updated By: ವಿವೇಕ ಬಿರಾದಾರ

Updated on: Jul 11, 2024 | 9:47 AM

ಮೈಸೂರು, ಜುಲೈ 11: ಪ್ರತಿ ವರ್ಷದಂತೆ ಈ ವರ್ಷವೂ ಆಷಾಢ ಮಾಸದ (Ashadha Masa) ಶುಕ್ರವಾರದಂದು ಚಾಮುಂಡಿ ಬೆಟ್ಟದಲ್ಲಿ (Chamundi Betta) ಚಾಮುಂಡೇಶ್ವರಿ (Chamundeshwari) ದೇವಿಗೆ ವಿಶೇಷ ಪೂಜೆ ನೆರವೇರಲಿದೆ. ಪ್ರತಿ ವರ್ಷ ಸಾವಿರಾರು ಭಕ್ತರು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡಿಗೆ ವಿಶೇಷ ಪೂಜೆ ಸಲ್ಲಿಸಿ ದರ್ಶನ ಪಡೆದು ಪುನೀತರಾಗುತ್ತಾರೆ. ಆಷಾಢ ಶುಕ್ರವಾರದ ವಿಶೇಷ ಪೂಜೆಗೆ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ. ವಿಶೇಷ ಪೂಜೆಗಾಗಿ ಚಾಮುಂಡೇಶ್ವರಿ ಸೇವಾ ಸಮಿತಿ ವತಿಯಿಂದ 25 ಸಾವಿರ ಮೈಸೂರು ಪಾಕ್ (Mysore Pak) ಸಿದ್ದಪಡಿಸಿದೆ.

ಶುಕ್ರವಾರ (ಜು.12) ರಂದು ಬೆಳಗ್ಗೆ 6 ಗಂಟೆಯಿಂದ ಸಾಯಂಕಾಲ 4 ಗಂಟೆಯವರೆಗೂ ಪ್ರಸಾದ ವಿನಿಯೋಗ ಮಾಡಲಾಗುತ್ತದೆ. ಮೈಸೂರು ಪಾಕ್​ಗೆ 200 ಕೆಜಿ ಕಡಲೆ‌ಹಿಟ್ಟು, 500 ಕೆಜಿ ಸಕ್ಕರೆ, 30 ಲೀಟರ್ ಎಣ್ಣೆ, 100 ಕೆಜಿ ತುಪ್ಪ 100 ಕೆಜಿ ಬೆಣ್ಣೆ ಕಾಯಿಸಿದ ತುಪ್ಪ, 3 ಕೆಜಿ ಏಲಕ್ಕಿ 2 ಕೆಜಿ ಅಡುಗೆ ಅರಿಶಿನ ಬಳಸಲಾಗುತ್ತಿದೆ. 40 ಜನ‌ ಬಾಣಸಿಗರು ಮೈಸೂರು ಪಾಕ್ ತಯಾರಿಸುತ್ತಿದ್ದಾರೆ.

ಇದನ್ನೂ ಓದಿ: ಆಷಾಢ ಶುಕ್ರವಾರ ಚಾಮುಂಡಿ ಬೆಟ್ಟಕ್ಕೆ ಖಾಸಗಿ ವಾಹನ ನಿಷೇಧ; ಪಾರ್ಕಿಂಗ್ ಬಗ್ಗೆ ಇಲ್ಲಿದೆ ವಿವರ

ಚಾಮುಂಡಿ ಬೆಟ್ಟಕ್ಕೆ ಶನಿ, ಭಾನುವಾರವೂ ಖಾಸಗಿ ವಾಹನ ನಿಷೇಧ ಚಾಮುಂಡಿಬೆಟ್ಟದಲ್ಲಿ ಶುಕ್ರ, ಶನಿ, ಭಾನವಾರದಂದು ಆಷಾಢ ಮಾಸದ ವಿಶೇಷ ಪೂಜೆ ನೆರವೇರಲಿದೆ. ಹೀಗಾಗಿ, ಈ‌ ಬಾರಿ ಎಲ್ಲ ಆಷಾಢ ಶುಕ್ರವಾರ, ಶನಿವಾರ, ಭಾನುವಾರದಂದು ಖಾಸಗಿ ವಾಹನಗಳಿಗೆ ನಿರ್ಬಂಧಿಸಲಾಗಿದೆ. ಶುಕ್ರವಾರ ಮಾತ್ರ ಉಚಿತ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಶನಿವಾರ ಮತ್ತು ಭಾನುವಾರ ಉಚಿತ ಬಸ್ ವ್ಯವಸ್ಥೆ ಇರುವುದಿಲ್ಲ.

ಜು.12, 13, 14, 19, 20, 21, 26, 27, 28 ಮತ್ತು ಆಗಸ್ಟ್​​ 02, 03 ಮತ್ತು 04ನೇ ತಾರೀಖಿನಂದು ಬೆಟ್ಟಕ್ಕೆ ಖಾಸಗಿ ವಾಹನಗಳನ್ನು ನಿರ್ಬಂಧಿಸಲಾಗಿದೆ. ಗಣ್ಯರು, ಕರ್ತವ್ಯನಿರತ ಸಿಬ್ಬಂದಿ, ಮಾಧ್ಯಮ ಹಾಗೂ ಚಾಮುಂಡಿ ಬೆಟ್ಟದ ನಿವಾಸಿಗಳಿಗೆ ವಿನಾಯತಿ ನೀಡಲಾಗಿದೆ. ಪ್ರಸಾದ ಹಂಚಲು ಚಾಮುಂಡಿ ಬೆಟ್ಟದ ಬಸ್ ನಿಲ್ದಾಣದ ಬಳಿ ವ್ಯವಸ್ಥೆ ಮಾಡಲಾಗಿದೆ. ಈ ಬಾರಿ ಚಾಮುಂಡಿ ಬೆಟ್ಟದಲ್ಲಿ ನಡೆಯುವ ಆಷಾಢ ಶುಕ್ರವಾರದ ಪೂಜೆಗೆ ಯಾವುದೇ ವಿಶೇಷ ಪಾಸ್‌ ಇರುವುದಿಲ್ಲ ಎಂದು ಪ್ರಭಾರ ಪೊಲೀಸ್ ಕಮಿಷನರ್ ಡಾ‌. ಎಂಬಿ ಬೋರಲಿಂಗಯ್ಯ ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ