AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯೋಧ್ಯೆ ಬಾಲರಾಮನ ಮೂರ್ತಿ ಶಿಲೆಗೂ ದಂಡ: ಸ್ಪಷ್ಟನೆ ನೀಡಿದ ಶ್ರೀನಿವಾಸ್

ಸೋಮವಾರ ಜನವರಿ 22 ರಂದು ಅಯೋಧ್ಯೆಯಲ್ಲಿ ನಿರ್ಮಾಣವಾದ ಭವ್ಯ ರಾಮ ಮಂದಿರದಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ನೆರವೇರಿತು. ಬಾಲರಾಮನ ಮೂರ್ತಿ ಮೂಡಿ ಬಂದಿದ್ದು ಕೃಷ್ಣ ಶಿಲೆಯಲ್ಲಿ. ಈ ಕೃಷ್ಣ ಶಿಲೆಯನ್ನು ನೀಡಿದ ಶ್ರೀನಿವಾಸ್​ ಅವರಿಗೆ ರಾಜ್ಯ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು 80 ಸಾವಿರ ರೂ. ದಂಡ ವಿಧಸಿದ್ದಾರೆ ಎಂಬ ವಂದತಿಗಳು ಕೇಳಿಬಂದಿವೆ. ಆದರೆ ಇದಕ್ಕೆ ಶ್ರೀನಿವಾಸ್​ ಸ್ಪಷ್ಟನೆ ನೀಡಿದ್ದಾರೆ.

ಅಯೋಧ್ಯೆ ಬಾಲರಾಮನ ಮೂರ್ತಿ ಶಿಲೆಗೂ ದಂಡ: ಸ್ಪಷ್ಟನೆ ನೀಡಿದ ಶ್ರೀನಿವಾಸ್
ಶ್ರೀನಿವಾಸ್​ ನಟರಾಜ್​
ರಾಮ್​, ಮೈಸೂರು
| Edited By: |

Updated on: Jan 27, 2024 | 1:15 PM

Share

ಮೈಸೂರು, ಜನವರಿ 27: ಅಯೋಧ್ಯೆಯ (Ayodhya) ರಾಮ ಮಂದಿರದಲ್ಲಿ (Ram Mandir) ಬಾಲರಾಮನ (Ramlalla) ಪ್ರತಿಷ್ಠಾಪಿಸಲಾಗಿದೆ. ಈ ಬಾಲರಾಮನ ಮೂರ್ತಿ ಮೂಡಿ ಬಂದಿರುವ ಕೃಷ್ಣ ಶಿಲೆಗೆ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು 80 ಸಾವಿರ ರೂ. ದಂಡ ವಿಧಸಿದ್ದಾರೆ ಎಂಬ ವಂದತಿಗಳಿಗೆ ಗುತ್ತಿಗೆದಾರ ಶ್ರೀನಿವಾಸ್​​​​ ನಟರಾಜ್​ ಸ್ಪಷ್ಟನೆ ನೀಡಿದ್ದಾರೆ.

ಬಾಲರಾಮನ ಮೂರ್ತಿಗೆ ಕಲ್ಲು ಆಯ್ಕೆಯಾಗಿದ್ದು ಆರು ತಿಂಗಳ ಹಿಂದೆ. ಆದರೆ ನಾನು (ಶ್ರೀನಿವಾಸ್)​ ದಂಡ ಕಟ್ಟಿರುವುದು 2022ರ ಜುಲೈನಲ್ಲಿ. ಗಣಿ ಇಲಾಖೆಯಿಂದ ಅನುಮತಿ ಪಡೆಯದೆ ಗಣಿಗಾರಿಕೆ ಮಾಡಿದ ಹಿನ್ನೆಲೆಯಲ್ಲಿ ಒಂದೂವರೆ ವರ್ಷದ ಹಿಂದೆ ಅಂದರೆ 2022ರ ಜುಲೈನಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು 80 ಸಾವಿರ ರೂ. ದಂಡ ವಿಧಸಿದ್ದರು.

ಹೀಗಾಗಿ ನಾನು ದಂಡ ಪಾವತಿಸಿದೆ. ಬಾಲರಾಮನ ಮೂರ್ತಿ ತಯಾರಿಸಲು ಕಲ್ಲು ಆಯ್ಕೆಯಾಗಿರುವುದು ಆರು ತಿಂಗಳ ಹಿಂದೆ. ಈ ಕಲ್ಲಿನ ಸಂಬಂಧ ದಂಡ ಹಾಕಿಲ್ಲ. ಹೀಗಾಗಿ ತಪ್ಪು ಪ್ರಚಾರ ಮಾಡಬೇಡಿ ಎಂದು ಗುತ್ತಿಗೆದಾರ ಶ್ರೀನಿವಾಸ್ ಮನವಿ ಮಾಡಿದ್ದಾರೆ.

ಏನಿದು ಪ್ರಕರಣ

ಬಾಲರಾಮನ ಮೂರ್ತಿ ಮೂಡಿ ಬಂದಿರುವ ಕೃಷ್ಣ ಶಿಲೆಗೆ ರಾಜ್ಯ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು 80 ಸಾವಿರ ರೂ. ದಂಡ ವಿಧಸಿದ್ದರು. ಈ ದಂಡವನ್ನು ಗುತ್ತಿಗೆದಾರ ಶ್ರೀನಿವಾಸ್ ನಟರಾಜ್ ​​ಪಾವತಿಸಿದ್ದಾರೆ ಎಂಬ ವಂದತಿಗಳು ಕೇಳಿಬಂದಿದ್ದವು. ಹೀಗಾಗಿ ಶ್ರೀನಿವಾಸ್​ ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ: ಅಯೋಧ್ಯೆ ಬಾಲರಾಮನ ಮೂರ್ತಿ ಶಿಲೆಗೂ ದಂಡ: ಶ್ರೀನಿವಾಸ್ ಕಟ್ಟಿದ್ದ 80 ಸಾವಿರ ರೂ. ಬಿಜೆಪಿ ನೀಡಲಿದೆ- ಪ್ರತಾಪ್​ ಸಿಂಹ

ಕೃಷ್ಣ ಶಿಲೆ ದೊರೆತಿದ್ದು ಹೇಗೆ?

ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಹಾರೋಹಳ್ಳಿ ಗುಜೇಗೌಡನಪುರ ಗ್ರಾಮದಲ್ಲಿನ ಜಮೀನಿನ ಮಾಲೀಕರಾದ ರಾಮದಾಸ್ ಅವರು ನೆಲ ಸಮತಟ್ಟು ಮಾಡಲು ಗುತ್ತಿಗೆದಾರ ಶ್ರೀನಿವಾಸ್ ನಟರಾಜ್ ಅವರಿಗೆ ಗುತ್ತಿಗೆ ನೀಡಿದ್ದರು. ನೆಲ ಸಮತಟ್ಟು ಮಾಡುವ ವೇಳೆ ಜಮೀನಿನಲ್ಲಿ ಶಿಲ್ಪಕ್ಕೆ ಯೋಗ್ಯವಾದ ಕೃಷ್ಣಶಿಲೆ ದೊರೆಯುತ್ತಿದ್ದವು. ಈ ವಿಷಯ ತಿಳಿದ ಹಲವು ಶಿಲ್ಪಿಗಳು ಇಲ್ಲಿಗೆ ಬಂದು ಕೃಷ್ಣ ಶಿಲೆಯನ್ನು ತೆಗೆದುಕೊಂಡು ಹೋಗುತ್ತಿದ್ದರು. ಈಗ ಅಯೋಧ್ಯೆಯಲ್ಲಿ ಪ್ರತಿಷ್ಠಾಪಿಸಲಾಗಿರುವ ಬಾಲರಾಮನ ಮೂರ್ತಿ ಅರಳಿರುವ ಕೃಷ್ಣ ಶಿಲೆಯೂ ದೊರೆತಿತ್ತು.

ಜಮೀನಿನ 10 ಅಡಿ ಆಳದಲ್ಲಿ 2022ರಲ್ಲಿ ದೊರೆತ ಭಾರಿ ಗಾತ್ರವಿದ್ದ ಶಿಲೆಯನ್ನು ಮೂರು ಭಾಗವಾಗಿ ಮಾಡಿ ಮೇಲೆತ್ತಲಾಗಿತ್ತು. ನೆಲದಿಂದ ಹೊರ ತೆಗೆದು ಜಮೀನಿನಲ್ಲಿ ಇಟ್ಟಿದ್ದ ಕಲ್ಲುಗಳನ್ನು ಕಂಡ ಕೆಲವರು, ಜಮೀನಿನಲ್ಲಿ ಅನಧಿಕೃತ ಗಣಿಗಾರಿಕೆ ನಡೆಯುತ್ತಿದೆ ಎಂದು ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳಿಗೆ ದೂರು ನೀಡಿದ್ದರು.

ವಿಷಯ ತಿಳಿದು ಸ್ಥಳಕ್ಕೆ ಬಂದ ಅಧಿಕಾರಿಗಳು, ಭಾರಿ ಗಾತ್ರದ ಕಲ್ಲುಗಳನ್ನು ಹೊರ ತೆಗೆಯಬೇಕಾದರೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯಿಂದ ಅನುಮತಿ ಪಡೆದುಕೊಳ್ಳಬೇಕು. ಈಗ ಕಲ್ಲು ತೆಗೆದಿರುವುದು ಅನಧಿಕೃತ ಎಂದು ಹೇಳಿ ಕಲ್ಲುಗಳ ಗಾತ್ರದ ಆಧಾರದ ಮೇಲೆ ಒಟ್ಟು 80 ಸಾವಿರ ರೂ. ದಂಡ ವಿಧಿಸಿದ್ದರು.

ಕಲ್ಲು ತೆಗೆಯಲು ಅನುಮತಿ ಪಡೆಯಬೇಕು ಎನ್ನುವ ಅರಿವಿಲ್ಲದೆ ಗುತ್ತಿಗೆದಾರ ಶ್ರೀನಿವಾಸ್​ ನಟರಾಜನ್​​ ಅನ್ಯ ಮಾರ್ಗವಿಲ್ಲದೆ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು ವಿಧಿಸಿದ ದಂಡವನ್ನು ಆನ್‌ಲೈನ್ ಮೂಲಕವೇ ಪಾವತಿಸಿದ್ದರು. ಇನ್ನು ಬಾಲರಾಮನ ಮೂರ್ತಿ ಕೆತ್ತಲು ಆರು ತಿಂಗಳ ಹಿಂದೆ ಇಲ್ಲಿಯ ಕೃಷ್ಣ ಶಿಲೆಯನ್ನೇ ಆಯ್ಕೆ ಮಾಡಲಾಗಿತ್ತು. ಇಲ್ಲಿ ಸಿಕ್ಕ ಕಲ್ಲಿನಲ್ಲೇ ಬಾಲರಾಮ ಮೂಡಿ ಬಂದಿದ್ದಾನೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
Ram
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ