AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯೋಧ್ಯೆಯ ರಾಮಲಲ್ಲನಿಗಿದೆ ಮೈಸೂರಿನ ಶಿಲೆ, ಶಿಲ್ಪಿಯ ಸ್ಪರ್ಶ; ರಾಮದಾಸನ ಜಮೀನಿನಲ್ಲಿ ಕೃಷ್ಣ ಶಿಲೆ ಸಿಕ್ಕಿದ್ದೇ ರೋಚಕ

ಕೃಷ್ಣ ಶಿಲೆ ಮೂರ್ತಿ ಕೆತ್ತನೆಗೆ ಪ್ರಾಶಸ್ತ್ಯವಾಗಿರುವ ಕಲ್ಲು. ಮೈಸೂರು ತಾಲೂಕಿನ ಹಾರೋಹಳ್ಳಿ ಗ್ರಾಮದ ರಾಮ್‌ ದಾಸ್ ಎಂಬುವರ ಜಮೀನಿನಲ್ಲಿ ಈ ಕೃಷ್ಣ ಶಿಲೆ ಕಲ್ಲು ಸಿಕ್ಕಿತ್ತು.ಅಯೋಧ್ಯೆಗೆ ಸುಮಾರು 40 ಟನ್ ತೂಕದಷ್ಟು ಕಲ್ಲು ಕಳುಹಿಸಿಕೊಡಲಾಗಿದೆ. ಕಲ್ಲನ್ನು ಕಳುಹಿಸುವಾಗ ಗ್ರಾಮಸ್ಥರು ಪೂಜೆ ಸಲ್ಲಿಸಿ ಭಕ್ತಿ, ಗೌರವದಿಂದ ಕಲ್ಲನ್ನು ಕಳುಹಿಸಿಕೊಟ್ಟಿದ್ದಾರೆ.

ಅಯೋಧ್ಯೆಯ ರಾಮಲಲ್ಲನಿಗಿದೆ ಮೈಸೂರಿನ ಶಿಲೆ, ಶಿಲ್ಪಿಯ ಸ್ಪರ್ಶ; ರಾಮದಾಸನ ಜಮೀನಿನಲ್ಲಿ ಕೃಷ್ಣ ಶಿಲೆ ಸಿಕ್ಕಿದ್ದೇ ರೋಚಕ
ಕೃಷ್ಣ ಶಿಲೆ ಸಿಕ್ಕ ಜಾಗ
ದಿಲೀಪ್​, ಚೌಡಹಳ್ಳಿ
| Edited By: ಆಯೇಷಾ ಬಾನು|

Updated on:Dec 29, 2023 | 12:55 PM

Share

ಮೈಸೂರು, ಡಿ.29: ದೇಶದೆಲ್ಲೆಡೆ ರಾಮ ನಾಮ ಸ್ಮರಣೆ ಜೋರಾಗಿದೆ. ಅಯೋಧ್ಯೆಯಲ್ಲಿ ನಿರ್ಮಾಣಗೊಳ್ಳುತ್ತಿರುವ ರಾಮ ಮಂದಿರ (Ayodhya Ram Mandir) ಜನವರಿ 22ರಂದು ಉದ್ಘಾಟನೆಯಾಗಲಿದೆ. ಇನ್ನು ರಾಮಮಂದಿರದಲ್ಲಿ ಪ್ರತಿಷ್ಠಾಪನೆಗೊಳ್ಳಲಿರುವ ಬಾಲ ರಾಮನ ಮೂರ್ತಿಯನ್ನು ಮೈಸೂರು ಮೂಲದ ಶಿಲ್ಪಿ ಅರುಣ್ ಯೋಗಿರಾಜ್ (Arun Yogiraj) ಅವರು ಕೆತ್ತನೆ ಮಾಡಿದ್ದಾರೆ ಎಂಬುವುದು ಒಂದು ವಿಶೇಷವಾದರೆ, ಮೂರ್ತಿಗೆ ಬಳಸಲಾದ ಶಿಲೆ ಕೂಡ ಮೈಸೂರಿನದ್ದೇ ಎಂಬುವುದು ಮತ್ತೊಂದು ವಿಶೇಷವಾದ ಸಂಗತಿ. ಅಯೋಧ್ಯೆಗೆ ಮೈಸೂರಿನ ಶಿಲೆ, ಹಾಗೂ ಶಿಲ್ಪಿಯ ಸ್ಪರ್ಶ ಸಿಕ್ಕಿರೋದು ಹೆಮ್ಮೆ ತಂದಿದೆ. ಅಯೋಧ್ಯೆಯ ಬಾಲ ರಾಮನ ಮೂರ್ತಿಗೆ ಮೈಸೂರಿನ ಶಿಲೆಯನ್ನು ಬಳಸಲಾಗಿದೆ. ಶಿಲೆಯನ್ನು ಹೇಗೆ ಗುರುತಿಸಲಾಯಿತು? ಇದೇ ಶಿಲೆ ಬಳಸಬೇಕೆಂದುಗೊಂಡದ್ದು ಏಕೆ? ಎಂಬ ನಾನಾ ವಿಚಾರಗಳ ಬಗ್ಗೆ ಮಾಹಿತಿ ಇಲ್ಲಿದೆ.

ರಾಮ ದಾಸನ ಜಮೀನಿನಲ್ಲಿ ಸಿಕ್ತು ಬಾಲ ರಾಮನ ಕೆತ್ತನೆಗೆ ಶಿಲೆ

ಕೃಷ್ಣ ಶಿಲೆ ಮೂರ್ತಿ ಕೆತ್ತನೆಗೆ ಪ್ರಾಶಸ್ತ್ಯವಾಗಿರುವ ಕಲ್ಲು. ಮೈಸೂರು ತಾಲೂಕಿನ ಹಾರೋಹಳ್ಳಿ ಗ್ರಾಮದ ರಾಮ್‌ ದಾಸ್ ಎಂಬುವರ ಜಮೀನಿನಲ್ಲಿ ಈ ಕೃಷ್ಣ ಶಿಲೆ ಕಲ್ಲು ಸಿಕ್ಕಿತ್ತು. ಈ ವಿಷಯ ತಿಳಿಯುತ್ತಿದ್ದಂತೆ ರಾಮ್‌ ದಾಸ್ ಜಮೀನು ಗುತ್ತಿಗೆ ಪಡೆದಿದ್ದ ಗುಜ್ಜೇಗೌಡನಪುರದ ಶ್ರೀನಿವಾಸ್ ಅವರನ್ನು ಸುರೇಂದ್ರ ವಿಶ್ವಕರ್ಮ ಅವರು ಸಂಪರ್ಕ ಮಾಡಿದ್ದರು. ಬಳಿಕ ಮಾನಯ್ಯ ಬಡಿಗೇರ್ ಎಂಬುವರು ಕಲ್ಲು ಪರೀಕ್ಷೆ ಮಾಡಿದ್ದರು. ನಂತರ ಅಯೋಧ್ಯೆಯ ಗುರುಗಳ ಸಮ್ಮುಖದಲ್ಲಿ ಜಮೀನಿನಲ್ಲಿ ಸಿಕ್ಕ ಕಲ್ಲನ್ನು ಮೂರ್ತಿ ಕೆತ್ತನೆಗೆ ಹಂತಿಮಗೊಳಿಸಲಾಯಿತು. ಶುಭ ಕಾರ್ಯಗಳು ಆರಂಭವಾಗುತ್ತಿದ್ದಂತೆ ಒಂದಕ್ಕೆ ಒಂದರಂತೆ ಸಮಯ, ಸಂದರ್ಭಗಳ ಜೊತೆಗೆ ಎಲ್ಲಾ ಕಾರ್ಯಗಳು ತಾನಾಗೆ ಜರುಗುತ್ತವೆ ಎಂಬ ಮಾತಿನಂತೆ ಅಯೋಧ್ಯೆಯಲ್ಲಿ ನಿರ್ಮಾಣಗೊಳ್ಳುತ್ತಿರುವ ರಾಮ ಮಂದಿರದಲ್ಲಿ ಪ್ರತಿಷ್ಠಾಪನೆ ಮಾಡಲು ರಾಮಲಲ್ಲನ ಮೂರ್ತಿಗೆ ಕಲ್ಲು ಸಿಕ್ಕಿತ್ತು.

ಇದನ್ನೂ ಓದಿ: ಅಯೋಧ್ಯೆಯ ಬಾಲರಾಮ ಮೂರ್ತಿ ಬಗ್ಗೆ ಇಂಟ್ರೆಸ್ಟಿಂಗ್ ಮಾಹಿತಿ ಬಿಚ್ಚಿಟ್ಟ ಮೈಸೂರಿನ ಹಿರಿಯ ಶಿಲ್ಪಿ

ಇನ್ನು ರಾಮ್‌ ದಾಸ್ ಜಮೀನಲ್ಲಿ‌ 10 ಅಡಿ ಆಳದಲ್ಲಿ ಅಗೆದು ಶಿಲೆಯನ್ನು ತೆಗೆಯಲಾಯಿತು. ರಾಮನ ಮೂರ್ತಿಗಾಗಿ 19 ಟನ್ ತೂಕದ ಸುಮಾರು 9 ಅಡಿ 8 ಇಂಚು ಉದ್ದದ ಶಿಲೆಯನ್ನು ಹೊರ ತೆಗೆದು ಅಯೋಧ್ಯೆಗೆ ರವಾನಿಸಲಾಯಿತು. ರಾಮನ ಜೊತೆಗೆ ಸೀತೆ, ಲಕ್ಷ್ಮಣ, ಭರತ, ಶತೃಜ್ಞ ಮೂರ್ತಿಗೂ ಇಲ್ಲಿಂದಲೇ ಶಿಲೆ ರವಾನಿಸಲಾಗಿದೆ. ಕಲ್ಲು ಕಳುಹಿಸಿ ಪ್ರಚಾರ ಮಾಡಬಾರದು ಎಂದು ಅಯೋಧ್ಯೆ ಗುರುಗಳು ಶರತ್ತು ಹಾಕ್ಕಿದ್ದಕ್ಕೆ ಕಲ್ಲು ತೆಗೆದ ನಂತರ ಮಣ್ಣು ಮುಚ್ಚಿ ಭೂಮಿ ಸಮತಟ್ಟು ಮಾಡಿ ಈ ವಿಚಾರವನ್ನು ಆಚೆ ಬಾರದಂತೆ ನೋಡಿಕೊಳ್ಳಲಾಗಿದೆ. ಅಲ್ಲದೆ ಅಯೋಧ್ಯೆ ಗುರುಗಳು ರಾಮ ಮಂದಿರಕ್ಕಾಗಿ ಕಲ್ಲಿನ ಜೊತೆಗೆ ಇಲ್ಲಿನ ಮಣ್ಣನ್ನೂ ತೆಗೆದುಕೊಂಡು ಹೋಗಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಅಯೋಧ್ಯೆಗೆ ಸುಮಾರು 40 ಟನ್ ತೂಕದಷ್ಟು ಕಲ್ಲು ಕಳುಹಿಸಿಕೊಡಲಾಗಿದೆ. ಕಲ್ಲನ್ನು ಕಳುಹಿಸುವಾಗ ಗ್ರಾಮಸ್ಥರು ಪೂಜೆ ಸಲ್ಲಿಸಿ ಭಕ್ತಿ, ಗೌರವದಿಂದ ಕಲ್ಲನ್ನು ಕಳುಹಿಸಿಕೊಟ್ಟಿದ್ದಾರೆ. ಮೈಸೂರು ಜನತೆಗೆ ರಾಮಲಲ್ಲನ ಮೂರ್ತಿಯ ಸ್ಪರ್ಶದ ಅವಕಾಶ ಸಿಕ್ಕಿದೆ.

ಮೈಸೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 12:13 pm, Fri, 29 December 23

Follow Us
Dileep CP
Dileep CP

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಅದನ್ನು ಹೊರತು ಪಡಿಸಿದರೆ ಒಂದಷ್ಟು ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು