Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯೋಧ್ಯೆಯ ಬಾಲರಾಮ ಮೂರ್ತಿ ಬಗ್ಗೆ ಇಂಟ್ರೆಸ್ಟಿಂಗ್ ಮಾಹಿತಿ ಬಿಚ್ಚಿಟ್ಟ ಮೈಸೂರಿನ ಹಿರಿಯ ಶಿಲ್ಪಿ

ರಾಮಲಲ್ಲಾ ಮೂರ್ತಿ ಕೆತ್ತನೆಗೆ ಬಳಸಿದ ಕಲ್ಲು ಮೈಸೂರು ಜಿಲ್ಲೆ ಎಚ್.ಡಿ ಕೋಟೆ ತಾಲೂಕಿನ ಬುಜ್ಜೆಗೌಡನಪುರ ಗ್ರಾಮದಿಂದ ತಂದದ್ದು. ಈ ಕಲ್ಲನ್ನು ಕೃಷ್ಣ ಶಿಲೆ ಎಂದು ಕರೆಯಲಾಗುತ್ತೆ. ಆ್ಯಸಿಡ್, ವಾಟರ್, ಫೈರ್, ರಸ್ಟ್ ಪ್ರೊಫ್ ನಿಂದ ಕೃಷ್ಣ ಶಿಲೆ ಕೂಡಿದೆ ಎಂದು ಬಾಲರಾಮ ಮೂರ್ತಿ ಕೆತ್ತನೆ ಸಂಬಂಧ ಮೈಸೂರಿನ ಹಿರಿಯ ಶಿಲ್ಪಿ ಸೂರ್ಯಪ್ರಕಾಶ್ ಅವರು ಕೆಲವು ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ.

ಅಯೋಧ್ಯೆಯ ಬಾಲರಾಮ ಮೂರ್ತಿ ಬಗ್ಗೆ ಇಂಟ್ರೆಸ್ಟಿಂಗ್ ಮಾಹಿತಿ ಬಿಚ್ಚಿಟ್ಟ ಮೈಸೂರಿನ ಹಿರಿಯ ಶಿಲ್ಪಿ
ಹಿರಿಯ ಶಿಲ್ಪಿ ಸೂರ್ಯಪ್ರಕಾಶ್
Follow us
ದಿಲೀಪ್​, ಚೌಡಹಳ್ಳಿ
| Updated By: ಆಯೇಷಾ ಬಾನು

Updated on: Dec 29, 2023 | 9:46 AM

ಮೈಸೂರು, ಡಿ.29: ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೆ ಕೆಲವೇ ದಿನಗಳು ಬಾಕಿ ಉಳಿದಿವೆ. ಅಯೋಧ್ಯೆಯಲ್ಲಿ ಹಬ್ಬದ ಸಂಭ್ರಮ ಮನೆ ಮಾಡಿದೆ (Ayodhya Ram Mandir Opening Ceremony). ಅಯೋಧ್ಯೆಯ ಕಣ ಕಣವೂ ರಾಮ ನಾಮದಲ್ಲಿ ಮಿಂದೇಳುತ್ತಿದೆ.‌ ತೇತ್ರಾಯುಗವನ್ನೆ ಅಯೋಧ್ಯೆಯಲ್ಲಿ ಮರುಸೃಷ್ಟಿಸಲು ಭರ್ಜರಿ ತಯಾರಿ ನಡೆಯುತ್ತಿದೆ. ಇನ್ನು ಜನವರಿ 22 ರಂದು ಅಯೋಧ್ಯೆ ರಾಮಮಂದಿರದಲ್ಲಿ ರಾಮನ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆಗೆ ಸಿದ್ಧತೆ ಜೋರಾಗಿದೆ. ಇದೆಲ್ಲದರ ನಡುವೆ ಬಾಲರಾಮ ಮೂರ್ತಿ (Ram Lalla idol) ಕೆತ್ತನೆ ಮಾಡಿರುವ ಶಿಲ್ಪಿ ಅರುಣ್ ಯೋಗಿರಾಜ್ ಅವರ ಹಿರಿಯ ಸಹೋದರ ಸೂರ್ಯಪ್ರಕಾಶ್ ಅವರು ಕೆಲವು ಇಂಟ್ರೆಸ್ಟಿಂಗ್ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ಅಯೋಧ್ಯೆಯಲ್ಲಿ ಬಾಲರಾಮ ಪ್ರತಿಷ್ಠಾಪನೆಗೆ ದಿನಗಣನೆ ಶುರುವಾಗಿದೆ. ಪ್ರತಿಯೊಬ್ಬರ ಚಿತ್ತ ಅಯೋಧ್ಯೆಯತ್ತ ನೆಟ್ಟಿದೆ. ಮತ್ತೊಂದೆಡೆ ರಾಮಲಲ್ಲಾ ಮೂರ್ತಿ ಕೆತ್ತನೆಗೆ ಬಳಸಿದ ಕಲ್ಲು ಮೈಸೂರು ಜಿಲ್ಲೆ ಎಚ್.ಡಿ ಕೋಟೆ ತಾಲೂಕಿನ ಬುಜ್ಜೆಗೌಡನಪುರ ಗ್ರಾಮದಿಂದ ತಂದದ್ದು. ಈ ಕಲ್ಲನ್ನು ಕೃಷ್ಣ ಶಿಲೆ ಎಂದು ಕರೆಯಲಾಗುತ್ತೆ. ಆ್ಯಸಿಡ್, ವಾಟರ್, ಫೈರ್, ರಸ್ಟ್ ಪ್ರೊಫ್ ನಿಂದ ಕೃಷ್ಣ ಶಿಲೆ ಕೂಡಿದೆ ಎಂದು ಬಾಲರಾಮ ಮೂರ್ತಿ ಕೆತ್ತನೆ ಸಂಬಂಧ ಮೈಸೂರಿನ ಹಿರಿಯ ಶಿಲ್ಪಿ ಸೂರ್ಯಪ್ರಕಾಶ್ ಅವರು ಕೆಲವು ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ.

ಹೆಚ್.ಡಿ.ಕೋಟೆಯಲ್ಲಿ ಸಿಗುವ ಕೃಷ್ಣ ಶೀಲೆ ಬೇರೆಲ್ಲೂ ಸಿಗಲ್ಲ

ಕಬ್ಬಿಣ 850 ಡಿಗ್ರಿಯಲ್ಲಿ ಕಾಯಿಸಿದರೆ ಕರಗಿ ಹೋಗುತ್ತೆ. ಆದರೆ ಕೃಷ್ಣ ಶಿಲೆ ಕರಗಲ್ಲ, ಸಿಡಿಯಲ್ಲ, ಆ್ಯಸಿಡ್ ಹಾಕಿದ್ರು ಏನೂ ಆಗಲ್ಲ. ಮಳೆ, ಗಾಳಿ, ಬಿಸಿಲಿಗೂ ಕೃಷ್ಣ ಶಿಲೆ ಏನು ಆಗಲ್ಲ. ಮೈಸೂರು ಅರಮನೆಯಲ್ಲಿರುವ ಮೂರ್ತಿಗಳು ಕೃಷ್ಣ ಶಿಲೆಯಲ್ಲೇ ಮಾಡಿರುವುದು. ಮೈಸೂರಿನ ಹೆಚ್.ಡಿ ಕೋಟೆ ಹಾಗೂ ಹಾಸನದಲ್ಲಿ ಮಾತ್ರ ಕೃಷ್ಣ ಶಿಲೆ ಕಲ್ಲುಗಳು ಸಿಗುತ್ತದೆ. ಹಾಸನದಲ್ಲಿ ಸಿಗುವ ಕಲ್ಲು, ಹೆಚ್.ಡಿ.ಕೋಟೆಯಲ್ಲಿ ಸಿಗುವ ಕಲ್ಲಿನಷ್ಟು ಚೆನ್ನಾಗಿಲ್ಲ‌. ಶಂಕರಾಚಾರ್ಯರ ಮೂರ್ತಿಯನ್ನು ಮಾಡಿದ್ದು ಹೆಚ್.ಡಿ.ಕೋಟೆಯ ಕೃಷ್ಣ ಶಿಲೆಯಲ್ಲೇ. ಸರ್ಕಾರ ಕೃಷ್ಣ ಶಿಲೆ ಸಿಗುತ್ತಿರುವ ಜಾಗವನ್ನ ಸಂರಕ್ಷಣೆ ಮಾಡಬೇಕು. ಕೃಷ್ಣ ಶಿಲೆ ಸಾಕಷ್ಟು ಗಟ್ಟಿಯಾದ ಕಲ್ಲು. ಕಲ್ಲಿನಲ್ಲಿ ನೀರಿನ ಅಂಶ ಇರುತ್ತೆ. ನೀರಿನ ಅಂಶ ಹಾನಿಯಾಗಿರುವ ಕಲ್ಲಿನಿಂದ ಕೆತ್ತನೆ ಮಾಡಲಾಗಿದೆ.

ಇದನ್ನೂ ಓದಿ: ಅಯೋಧ್ಯೆಯ ರಾಮಮಂದಿರದಲ್ಲಿ ಸ್ಥಾಪನೆಯಾಗಲಿದೆ 600ಕೆಜಿ ತೂಕದ ಲೋಹದ ಗಂಟೆ

ಸರ್ಕಾರ ಕೃಷ್ಣ ಶಿಲೆ ಸಂರಕ್ಷಣೆ ಮಾಡುವ ಕೆಲಸ ಮಾಡಬೇಕು

ಗಟ್ಟಿ ಕಲ್ಲಿನಿಂದ ಕೆತ್ತನೆ ಮಾಡುವುದು ಬಹಳ ಕಷ್ಟದ ಕೆಲಸ‌. ಇದನ್ನ ಎಲ್ಲರು ಬಳಪದ ಕಲ್ಲು ಎನ್ನುತ್ತಾರೆ. ಆದರೆ ಇದು ಬಳಪದ ಕಲ್ಲಲ್ಲ. ಈ ಕಲ್ಲಿನ ವಿಶೇಷ ಅಂದ್ರೆ ಎಲ್ಲಾ ಕಾಲದಲ್ಲೂ ಒಂದೇ ಟೆಂಪರೇಚರ್ ಇರುತ್ತೆ. ಈ ಕಾರಣದಿಂದ ವಿದೇಶಗಳಲ್ಲಿ ಇದನ್ನ ಸೀಲಿಂಗ್​ಗೆ ಬಳಸುತ್ತಿದ್ದಾರೆ. ಇದರಿಂದ ಚಳಿ, ಮಳೆ, ಬೇಸಿಗೆ ಎಲ್ಲಾ ಸಂದರ್ಭದಲ್ಲೂ ಒಂದೇ ವಾತಾವರಣ ಇರುತ್ತೆ ಎಂಬ ಕಾರಣಕ್ಕೆ. ಸರ್ಕಾರ ಸಂರಕ್ಷಣೆ ಮಾಡುತ್ತೇವೆ ಎಂದು ಹೇಳಿದ್ದಾರೆ. ಆದಷ್ಟು ಬೇಗ ಸಂರಕ್ಷಣೆ ಮಾಡುವ ಕೆಲಸ ಮಾಡಬೇಕು ಎಂದು ಶಿಲ್ಪಿ ಸೂರ್ಯ ಪ್ರಕಾಶ್ ಅವರು ತಿಳಿಸಿದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ರಾಜಣ್ಣರೊಂದಿಗೆ ಮೊದ್ಲಿಂದ್ಲೂ ಸಲುಗೆಯಿಂದ ಇದ್ದೇನೆ: ಡಾ ರಂಗನಾಥ್
ರಾಜಣ್ಣರೊಂದಿಗೆ ಮೊದ್ಲಿಂದ್ಲೂ ಸಲುಗೆಯಿಂದ ಇದ್ದೇನೆ: ಡಾ ರಂಗನಾಥ್
ನಾಗ್ಪುರ ಹಿಂಸಾಚಾರದ ಪ್ರಮುಖ ಆರೋಪಿ ಫಾಹಿಂ ಖಾನ್ ಮನೆ ನೆಲಸಮ
ನಾಗ್ಪುರ ಹಿಂಸಾಚಾರದ ಪ್ರಮುಖ ಆರೋಪಿ ಫಾಹಿಂ ಖಾನ್ ಮನೆ ನೆಲಸಮ
ಬೆಳೆಸಿದ ವ್ಯಕ್ತಿಗಳ ಮೇಲೆ ಯಶ್​ಗೆ ಅದೆಂಥಾ ಗೌರವ; ಇಲ್ಲಿದೆ ಸಾಕ್ಷಿ
ಬೆಳೆಸಿದ ವ್ಯಕ್ತಿಗಳ ಮೇಲೆ ಯಶ್​ಗೆ ಅದೆಂಥಾ ಗೌರವ; ಇಲ್ಲಿದೆ ಸಾಕ್ಷಿ
ಮುನಿರತ್ನ ಮಾಡಿರುವ ಆರೋಪಗಳ ಬಗ್ಗೆ ನನಗೆ ಗೊತ್ತಿಲ್ಲ: ರಾಜಣ್ಣ
ಮುನಿರತ್ನ ಮಾಡಿರುವ ಆರೋಪಗಳ ಬಗ್ಗೆ ನನಗೆ ಗೊತ್ತಿಲ್ಲ: ರಾಜಣ್ಣ
VIDEO: ರವೀಂದ್ರ ಜಡೇಜಾ ಔಟ್ ಆಗಿದ್ದನ್ನು ಸಂಭ್ರಮಿಸಿದ CSK ಫ್ಯಾನ್ಸ್
VIDEO: ರವೀಂದ್ರ ಜಡೇಜಾ ಔಟ್ ಆಗಿದ್ದನ್ನು ಸಂಭ್ರಮಿಸಿದ CSK ಫ್ಯಾನ್ಸ್
ವೀಕೆಂಡ್​​ನಲ್ಲಿ ಮಾತ್ರ ಪ್ರವಾಸಿಗರಿಗೆ ನಂದಿಹಿಲ್ಸ್ ಓಪನ್
ವೀಕೆಂಡ್​​ನಲ್ಲಿ ಮಾತ್ರ ಪ್ರವಾಸಿಗರಿಗೆ ನಂದಿಹಿಲ್ಸ್ ಓಪನ್
ಚಿಕ್ಕಮಗಳೂರಿನಲ್ಲಿ ಮರುಕಳಿಸಿತು ಈಜುಕೊಳ ದುರಂತ: ಆಘಾತಕಾರಿ ವಿಡಿಯೋ ಇಲ್ಲಿದೆ
ಚಿಕ್ಕಮಗಳೂರಿನಲ್ಲಿ ಮರುಕಳಿಸಿತು ಈಜುಕೊಳ ದುರಂತ: ಆಘಾತಕಾರಿ ವಿಡಿಯೋ ಇಲ್ಲಿದೆ
ಬೆಂಗಳೂರು: ಎಸ್​ಎಸ್​ಎಲ್​ಸಿ ಓದುತ್ತಿರುವ ಇಬ್ಬರು ಬಾಲಕರ ಮೇಲೆ ಹಲ್ಲೆ
ಬೆಂಗಳೂರು: ಎಸ್​ಎಸ್​ಎಲ್​ಸಿ ಓದುತ್ತಿರುವ ಇಬ್ಬರು ಬಾಲಕರ ಮೇಲೆ ಹಲ್ಲೆ
ಮಂತ್ರಾಲಯ ಮಠದಲ್ಲಿ 30 ದಿನಗಳಲ್ಲಿ 3 ಕೋಟಿ ರೂ.ಗೂ ಹೆಚ್ಚು ಕಾಣಿಕೆ ಸಂಗ್ರಹ
ಮಂತ್ರಾಲಯ ಮಠದಲ್ಲಿ 30 ದಿನಗಳಲ್ಲಿ 3 ಕೋಟಿ ರೂ.ಗೂ ಹೆಚ್ಚು ಕಾಣಿಕೆ ಸಂಗ್ರಹ
ಏಕನಾಥ್​ ಶಿಂಧೆಯನ್ನು ಅಪಹಾಸ್ಯ ಮಾಡಿದ ಕುನಾಲ್ ಕಮ್ರಾ
ಏಕನಾಥ್​ ಶಿಂಧೆಯನ್ನು ಅಪಹಾಸ್ಯ ಮಾಡಿದ ಕುನಾಲ್ ಕಮ್ರಾ