AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime Updates: ಗೊಮ್ಮಟೇಶ್ವರ ಮೂರ್ತಿ ಬಗ್ಗೆ ಅವಹೇಳನಕಾರಿ ಹೇಳಿಕೆ; ಅಯೂಬ್ ಖಾನ್ ಜಾಮೀನು ಅರ್ಜಿ ವಜಾ

ನ್ಯೂಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಅಧ್ಯಕ್ಷ ಆಯೂಬ್ ಖಾನ್ ಗೊಮ್ಮಟೇಶ್ವರನ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಉದಯಗಿರಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಫೆಬ್ರವರಿ 25ರವರೆಗೂ ನ್ಯಾಯಾಂಗ ಬಂಧನಕ್ಕೆ ನೀಡಲಾಗಿತ್ತು. ಜಾಮೀನು ಅರ್ಜಿ ವಜಾ ಹಿನ್ನೆಲೆ ಅಯೂಬ್​ಗೆ ಜೈಲೇಗತಿ ಎಂಬಂತಾಗಿದೆ.

Crime Updates: ಗೊಮ್ಮಟೇಶ್ವರ ಮೂರ್ತಿ ಬಗ್ಗೆ ಅವಹೇಳನಕಾರಿ ಹೇಳಿಕೆ; ಅಯೂಬ್ ಖಾನ್ ಜಾಮೀನು ಅರ್ಜಿ ವಜಾ
ನ್ಯೂ ಇಂಡಿಯನ್ ಕಾಂಗ್ರೆಸ್ ಪಾರ್ಟಿ ಅಧ್ಯಕ್ಷ ಆಯೂಬ್ ಖಾನ್
TV9 Web
| Updated By: ganapathi bhat|

Updated on:Feb 17, 2022 | 7:49 PM

Share

ಮೈಸೂರು: ಗೊಮ್ಮಟೇಶ್ವರ ಮೂರ್ತಿ ಬಗ್ಗೆ ಅವಹೇಳನಕಾರಿ ಹೇಳಿಕೆ ವಿಚಾರವಾಗಿ ಆರೋಪಿ ಅಯೂಬ್ ಖಾನ್ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಂಡಿದೆ. ಜಾಮೀನು ಅರ್ಜಿ ವಜಾ ಹಿನ್ನೆಲೆ ಅಯೂಬ್​ಗೆ ಜೈಲೇಗತಿ ಎಂಬಂತಾಗಿದೆ. ಮೈಸೂರಿನ 2ನೇ ಜೆಎಂಎಫ್​ಸಿ ನ್ಯಾಯಾಲಯ ಇಂದು (ಫೆಬ್ರವರಿ 17) ಈ ಬಗ್ಗೆ ಆದೇಶ ನೀಡಿದೆ. ನ್ಯಾಯಾಧೀಶೆ ಶೈಲಶ್ರೀ ಜಾಮೀನು ಅರ್ಜಿ ವಜಾಗೊಳಿಸಿದ್ದಾರೆ. ನ್ಯೂಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಅಧ್ಯಕ್ಷ ಆಯೂಬ್ ಖಾನ್ ಗೊಮ್ಮಟೇಶ್ವರನ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಉದಯಗಿರಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಫೆಬ್ರವರಿ 25ರವರೆಗೂ ನ್ಯಾಯಾಂಗ ಬಂಧನಕ್ಕೆ ನೀಡಲಾಗಿತ್ತು. ಜಾಮೀನು ಅರ್ಜಿ ವಜಾ ಹಿನ್ನೆಲೆ ಅಯೂಬ್​ಗೆ ಜೈಲೇಗತಿ ಎಂಬಂತಾಗಿದೆ.

ರೋಗಿ ಬಳಿ ಲಂಚ ಕೇಳಿ ಎಸಿಬಿ ಬಲೆಗೆ ಬಿದ್ದಿದ್ದ ವೈದ್ಯ ಅಮಾನತು

ಮಡಿಕೇರಿ: ರೋಗಿ ಬಳಿ ಲಂಚ ಕೇಳಿ ಎಸಿಬಿ ಬಲೆಗೆ ಬಿದ್ದಿದ್ದ ವೈದ್ಯರನ್ನು ಅಮಾನತು ಮಾಡಿದ ಘಟನೆ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ. ಜನರಲ್ ಸರ್ಜನ್ ವಿಶ್ವನಾಥ ಶಿಂಪಿ ಸಸ್ಪೆಂಡ್ ಆಗಿದ್ದಾರೆ. ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕು ಸರ್ಕಾರಿ ಆಸ್ಪತ್ರೆ ಸರ್ಜನ್ ಸಸ್ಪೆಂಡ್​ ಮಾಡಿ ಸರ್ಕಾರ ಆದೇಶ ನೀಡಿದೆ.

ಬಂದೂಕಿನಿಂದ ಗುಂಡು ಹಾರಿಸಿಕೊಂಡು ಅನುಮಾನಾಸ್ಪದವಾಗಿ ಸೆಕ್ಯೂರಿಟಿ ಗಾರ್ಡ್ ಸಾವು

ಬೆಂಗಳೂರು ಗ್ರಾಮಾಂತರ: ನೆಲಮಂಗಲ ತಾಲೂಕಿನ ಹುಚ್ಚೇಗೌಡನಪಾಳ್ಯದಲ್ಲಿ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಅನುಮಾನಾಸ್ಪದವಾಗಿ ಮಡಿಕೇರಿ ಮೂಲದ ಸೆಕ್ಯೂರಿಟಿ ಗಾರ್ಡ್ ಭೀಮಯ್ಯ (65) ಸಾವನ್ನಪ್ಪಿದ್ದಾರೆ. ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ನೆಲಮಂಗಲದಲ್ಲಿ ಕಳೆದ ರಾತ್ರಿ 2 ಅಂಗಡಿಗಳಲ್ಲಿ ಕಳವು

ನೆಲಮಂಗಲ: ತಾಲೂಕಿನ ಬೂದಿಹಾಳ್ ಗ್ರಾಮದಲ್ಲಿ ಕಳೆದ ರಾತ್ರಿ 2 ಅಂಗಡಿಗಳಲ್ಲಿ ಕಳವು ಆದ ಘಟನೆ ನಡೆದಿದೆ. ಸೋಮಣ್ಣಗೆ ಸೇರಿದ ಅಂಗಡಿ ಶೆಟರ್ ಮುರಿದು 80 ಸಾವಿರ ನಗದು, 1 ಲಕ್ಷ ಮೌಲ್ಯದ ಸಿಗರೇಟ್‌ ಬಾಕ್ಸ್‌, 2 ಮೊಬೈಲ್‌ ಕಳವು ಮಾಡಲಾಗಿದೆ. ಮಧುಸೂದನ್‌ಗೆ ಸೇರಿದ ಅಂಗಡಿಯಲ್ಲಿ 500 ರೂ. ನಗದು, 2,500 ರೂ. ಮೌಲ್ಯದ ಚಾಕೊಲೇಟ್‌ ಬಾಕ್ಸ್‌ ಕಳವಾಗಿದೆ. ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ: Crime Updates: ಸೈನಿಕನ ತಾಯಿ ಕೊಲೆ ಪ್ರಕರಣದಲ್ಲಿ 18 ಜನರ ವಿರುದ್ಧ ಎಫ್​ಐಆರ್, ಬೆಂಗಳೂರಿನಲ್ಲಿ ಬ್ಯಾಟರಿ ಕದಿಯುತ್ತಿದ್ದ ದಂಪತಿ ಬಂಧನ

ಇದನ್ನೂ ಓದಿ: Crime Updates: ಬೆಂಗಳೂರಿನ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳ ಬಳಿ 1 ಕೆಜಿ ಗಾಂಜಾ ಪತ್ತೆ; ಆರೋಪಿಗಳ ಬಂಧನ

Published On - 7:08 pm, Thu, 17 February 22

ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​