AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಪ್ಪುವಿನ ಸತ್ಯ ವಿಚಾರಗಳ ತಿಳಿಸುವ ‘ಟಿಪ್ಪು ನಿಜ ಕನಸುಗಳು’ ನಾಟಕ: ಡಿಸೆಂಬರ್ 8 ರಿಂದ ಬಹುರೂಪಿ ರಾಷ್ಟ್ರೀಯ ರಂಗೋತ್ಸವ

ನವೆಂಬರ್​ 20ರಂದು ಟಿಪ್ಪು ನಿಜ ಕನಸುಗಳು ನಾಟಕ ಪ್ರದರ್ಶನ ಮಾಡಲಾಗುತ್ತೆ ಎಂದು ಮೈಸೂರು ರಂಗಾಯಣ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಮಾಹಿತಿ ನೀಡಿದ್ದಾರೆ.

ಟಿಪ್ಪುವಿನ ಸತ್ಯ ವಿಚಾರಗಳ ತಿಳಿಸುವ ‘ಟಿಪ್ಪು ನಿಜ ಕನಸುಗಳು’ ನಾಟಕ: ಡಿಸೆಂಬರ್ 8 ರಿಂದ ಬಹುರೂಪಿ ರಾಷ್ಟ್ರೀಯ ರಂಗೋತ್ಸವ
‘ಟಿಪ್ಪು ನಿಜ ಕನಸುಗಳು
TV9 Web
| Edited By: ಆಯೇಷಾ ಬಾನು|

Updated on:Nov 05, 2022 | 1:13 PM

Share

ಮೈಸೂರು: ನವೆಂಬರ್ 13ರಂದು ‘ಟಿಪ್ಪು ನಿಜ ಕನಸುಗಳು’ ಎಂಬ ಕೃತಿ ಬಿಡುಗಡೆ ಮಾಡುತ್ತೇವೆ. ನವೆಂಬರ್​ 20ರಂದು ಟಿಪ್ಪು ನಿಜ ಕನಸುಗಳು ನಾಟಕ ಪ್ರದರ್ಶನ ಮಾಡಲಾಗುತ್ತೆ ಎಂದು ಮೈಸೂರು ರಂಗಾಯಣ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಮಾಹಿತಿ ನೀಡಿದ್ದಾರೆ. ಟಿಪ್ಪುವಿನ ಸತ್ಯ ವಿಚಾರಗಳನ್ನು ತಿಳಿಸುವ ಉದ್ದೇಶದಿಂದ ಕೃತಿ ರಚನೆ ಮಾಡಲಾಗಿದ್ದು ಕೃತಿ ಬಿಡುಗಡೆ ಕಾರ್ಯಕ್ರಮದಲ್ಲಿ ಸಾಹಿತಿ ಎಸ್​.ಎಲ್.ಭೈರಪ್ಪ, ಸಂಸದ ಪ್ರತಾಪ್ ಸಿಂಹ, ರೋಹಿತ್​ ಚಕ್ರತೀರ್ಥ ಪಾಲ್ಗೊಳ್ಳುತ್ತಾರೆ. ನ.20ರಂದು 3 ಗಂಟೆ 20 ನಿಮಿಷದ ನಾಟಕ ಪ್ರದರ್ಶನ ಆಗಲಿದೆ ಎಂದು ಅಡ್ಡಂಡ ಕಾರ್ಯಪ್ಪ ತಿಳಿಸಿದ್ದಾರೆ.

‘ಟಿಪ್ಪು ನಿಜ ಕನಸುಗಳು’ ನಾಟಕವನ್ನು ಸುಮಾರು 30 ಕಲಾವಿದರ ತಂಡ ಒಟ್ಟು 100 ಪ್ರದರ್ಶನಗಳನ್ನು ಮಾಡುವ ಉದ್ದೇಶವನ್ನು ಹೊಂದಿದೆ. ಅಯೋಧ್ಯಾ ಪ್ರಕಾಶನದಿಂದ ಟಿಪ್ಪು ನಿಜ ಕನಸುಗಳು ಪುಸ್ತಕ ಪ್ರಕಟವಾಗಿದ್ದು ಎಸ್ ಎಲ್ ಭೈರಪ್ಪ ಮುನ್ನುಡಿ ಬರೆದಿದ್ದಾರೆ. ಹಾಗೂ ಚಕ್ರವರ್ತಿ ಸೂಲಿಬೆಲೆ ಹಿನ್ನುಡಿ ಬರೆದಿದ್ದಾರೆ.

ಡಿ.8ರಿಂದ 15ರವರೆಗೆ ಬಹುರೂಪಿ ರಾಷ್ಟ್ರೀಯ ರಂಗೋತ್ಸವ

ಮೈಸೂರಿನಲ್ಲಿ ಈ ಬಾರಿ ಡಿಸೆಂಬರ್ 08 ರಿಂದ ಡಿಸೆಂಬರ್ 15ರವರೆಗೆ ಬಹುರೂಪಿ ರಾಷ್ಟ್ರೀಯ ರಂಗೋತ್ಸವ ಕಾರ್ಯಕ್ರಮ ನಡೆಯಲಿದೆ. ಭಾರತೀಯತೆ ವಸ್ತು ವಿಷಯದೊಂದಿಗೆ ರಂಗೋತ್ಸವಕ್ಕೆ ಸಿದ್ಧತೆ ನಡೆದಿದೆ. ಭಾರತೀಯತೆಯ ಬಗ್ಗೆ ಸಾವಿರಾರು ವರ್ಷಗಳ ಇತಿಹಾಸವಿದೆ. ಮಹಾಪುರುಷರ ಪರಿಚಯ ಮಾಡಿಕೊಡುವುದು. ರಾಷ್ಟ್ರಪ್ರೇಮದ ಪಾಂಚಜನ್ಯ ಮೊಳಗಿಸುವುದು ಇದರ ಉದ್ದೇಶ ಎಂದು ಮೈಸೂರಿನಲ್ಲಿ ರಂಗಾಯಣ ನಿರ್ದೇಶಕ ಅಡ್ಡಂಡ ಸಿ ಕಾರ್ಯಪ್ಪ ಮಾಹಿತಿ ನೀಡಿದರು.

Published On - 1:13 pm, Sat, 5 November 22

Follow Us
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ
ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ; ಜನರಿಂದ ತುಂಬಿ ಹೋಯ್ತು ಕೆ.ಆರ್ ಮಾರ್ಕೆಟ್!
ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ; ಜನರಿಂದ ತುಂಬಿ ಹೋಯ್ತು ಕೆ.ಆರ್ ಮಾರ್ಕೆಟ್!
ಶಿಗ್ಗಾಂವಿ ದೇವಾಲಯದ ಆವರಣದಲ್ಲಿ ಮೂತ್ರ ವಿಸರ್ಜನೆ ಮಾಡಿದ ಯುವಕ
ಶಿಗ್ಗಾಂವಿ ದೇವಾಲಯದ ಆವರಣದಲ್ಲಿ ಮೂತ್ರ ವಿಸರ್ಜನೆ ಮಾಡಿದ ಯುವಕ