AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನಲ್ಲಿ ಮಾರ್ಚ್ 11ರಿಂದ 10 ದಿನಗಳ ಕಾಲ ಬಹುರೂಪಿ ರಾಷ್ಟ್ರೀಯ ರಂಗೋತ್ಸವ

ಮೈಸೂರಿನ ರಂಗಾಯಣದಲ್ಲಿ ಇದೇ ಮಾರ್ಚ್ 11ರಿಂದ 20ರ ವರೆಗೆ ಅಂದ್ರೆ 10 ದಿನಗಳ ಕಾಲ ಬಹುರೂಪಿ ರಾಷ್ಟ್ರೀಯ ರಂಗೋತ್ಸವ ನಡೆಯಲಿದೆ ಎಂದು ರಂಗಾಯಣದ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ತಿಳಿಸಿದ್ದಾರೆ.

ಮೈಸೂರಿನಲ್ಲಿ ಮಾರ್ಚ್ 11ರಿಂದ 10 ದಿನಗಳ ಕಾಲ ಬಹುರೂಪಿ ರಾಷ್ಟ್ರೀಯ ರಂಗೋತ್ಸವ
ಬಹುರೂಪಿ‌ ರಾಷ್ಟ್ರೀಯ ನಾಟಕೋತ್ಸವ
TV9 Web
| Edited By: |

Updated on: Feb 13, 2022 | 9:29 AM

Share

ಮೈಸೂರು: ಮಾರ್ಚ್ 11ರಿಂದ ಬಹುರೂಪಿ ರಾಷ್ಟ್ರೀಯ ರಂಗೋತ್ಸವ ನಡೆಯಲಿದೆ. ಮೈಸೂರಿನ ರಂಗಾಯಣದಲ್ಲಿ ಇದೇ ಮಾರ್ಚ್ 11ರಿಂದ 20ರ ವರೆಗೆ ಅಂದ್ರೆ 10 ದಿನಗಳ ಕಾಲ ಬಹುರೂಪಿ ರಾಷ್ಟ್ರೀಯ ರಂಗೋತ್ಸವ ನಡೆಯಲಿದೆ ಎಂದು ರಂಗಾಯಣದ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ತಿಳಿಸಿದ್ದಾರೆ.

ಮಹಾಮಾರಿ ಕೊರೊನಾದಿಂದ ಮುಂದೂಡಲ್ಪಟ್ಟ ಬಹುರೂಪಿ ರಂಗೋತ್ಸವ ಮಾರ್ಚ್ 11ರಿಂದ ನಡೆಯಲಿದೆ. ಮುಖ್ಯ ಅತಿಥಿಗಳ ವಿಚಾರ ವಿವಾದಕ್ಕೆ ಕಾರಣವಾಗಿದ್ದ ರಂಗಾಯಣ ಬಲಪಂಥೀಯ ಹೇರಿಕೆ ಆರೋಪ ಹಿನ್ನೆಲೆ ಪ್ರತಿಭಟನೆ‌ಗಳು ನಡೆದಿತ್ತು. ಸದ್ಯ ಇದೀಗ ತಾಯಿ ಶೀರ್ಷಿಕೆ ಅಡಿಯಲ್ಲಿ ಬಹುರೂಪಿ ರಾಷ್ಟ್ರೀಯ ರಂಗೋತ್ಸವ ನಡೆಯಲಿದೆ. ತಾಯಿ ಬಗ್ಗೆ ವಿಸ್ತೃತ ಚರ್ಚೆಯನ್ನೊಳಗೊಂಡ ವಿಚಾರ ಸಂಕಿರಣ ಆಯೋಜನೆ ಮಾಡಲಾಗಿದೆ. ಜಮೀನು, ಜಲ, ಜಾನುವಾರು, ಜಂಗಲ್, ಜನ ಎಂಬ ಪಂಚಸೂತ್ರದಲ್ಲಿ ತಾಯಿ ಮತ್ತು ತಾಯ್ತನ ನೋಡುವ ಪ್ರಯತ್ನ ಮಾಡಲಾಗಿದೆ.

ವಿಧ ರಾಜ್ಯದ ಶ್ರೇಷ್ಠ ನಾಟಕಗಳ ಪ್ರದರ್ಶನಕ್ಕೆ ಸಿದ್ಧತೆ ಕೈಗೊಳ್ಳಲಾಗಿದೆ. ಜಾನಪದ ಕಲಾಪ್ರದರ್ಶನ, ಚಲನಚಿತ್ರೋತ್ಸವ, ಪುಸ್ತಕ ಪ್ರದರ್ಶನ, ಕರಕುಶಲ ಪ್ರದರ್ಶನ, ಪ್ರಾತ್ಯಕ್ಷಿಕೆ, ಆಹಾರ ಮೇಳ ಸೇರಿ ಹಲವು ಕಾರ್ಯಕ್ರಮ ಆಯೋಜನೆ ಮಾಡಲಾಗುತ್ತಿದೆ. ವಿವಿಧ ರಾಜ್ಯ ವಿವಿಧ ಭಾಷೆಗಳ ಒಟ್ಟು 35ನಾಟಕಗಳ ಪ್ರದರ್ಶನಕ್ಕೆ ಸಿದ್ಧತೆಗಳು ನಡೆಯುತ್ತಿವೆ. ಈ ಬಾರಿ ಮಹಿಳೆಯರಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಶಬಾನಾ ಆಜ್ಮಿ, ನಾಸಿರುದ್ದೀನ್ ಶಾ, ಅಮೋಲ್ ಪಾರೇಕರ್ ಶ್ರೀಲಂಕಾದ ಪರಾಕ್ರಮ ನಿರಿಯಲ್ಲ, ಪ್ರಸನ್ನ, ಅನಂತ್ ನಾಗ್ ಸೇರಿ ಇತರ ಹಿರಿಯ ರಂಗ ಕಲಾವಿದರು ಬಹುರೂಪಿಯಲ್ಲಿ ಭಾಗಿಯಾಗಲಿದ್ದಾರೆ.

ಇದನ್ನೂ ಓದಿ: ಒಮಿಕ್ರಾನ್ ಆತಂಕ: ಬಹುರೂಪಿ‌ ರಾಷ್ಟ್ರೀಯ ನಾಟಕೋತ್ಸವ ಮುಂದೂಡಿಕೆ

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ